Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಗ್ರಾಮಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ನೌಕರರಿಗೂ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ವೇತನ ನೀಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ. ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ ಮತ್ತು ವೇತನ ಪಾವತಿ ಮಾಡದೇ ಇರುವ ಕುರಿತಾಗಿ ಸರ್ಕಾರದಲ್ಲಿ ಹಲವಾರು ದೂರುಗಳು ಸ್ವೀಕೃತಗೊಳ್ಳುತ್ತಿವೆ. ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ಸಹ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳ ವೇತನ ಪಾವತಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಪ್ರಸ್ತುತ ಅವಧಿಯವರೆಗೆ ವೇತನ ಪಾವತಿಗೆ ಬಾಕಿಯಿರುವ…
ನವದೆಹಲಿ : ಉಸಿರಾಟವೇ ಒಂದು ರೋಗವಾಗಿ ಮಾರ್ಪಟ್ಟಿರುವ ಬಿಕ್ಕಟ್ಟಿನತ್ತ ಜಗತ್ತು ನಿಧಾನವಾಗಿ ಸಾಗುತ್ತಿದೆ. ಇತ್ತೀಚಿನ ಸ್ಟೇಟ್ ಆಫ್ ಗ್ಲೋಬಲ್ ಏರ್ 2024 ವರದಿಯು ಈಗ ಜಾಗತಿಕವಾಗಿ ಪ್ರತಿ ಎಂಟನೇ ಸಾವಿಗೆ ವಾಯು ಮಾಲಿನ್ಯವೇ ಕಾರಣ ಎಂದು ಬಹಿರಂಗಪಡಿಸುತ್ತದೆ. 2021 ರಲ್ಲಿ, ವಿಷಕಾರಿ ಗಾಳಿಯೇ 8.1 ಮಿಲಿಯನ್ ಜನರನ್ನು ಬಲಿ ತೆಗೆದುಕೊಂಡಿತು. ಇದರರ್ಥ ಗಾಳಿಯು ತಂಬಾಕಿಗಿಂತ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ. ಅದೇ ವರ್ಷದಲ್ಲಿ, ತಂಬಾಕು 7.5 ರಿಂದ 7.6 ಮಿಲಿಯನ್ ಸಾವುಗಳಿಗೆ ಕಾರಣವಾಗಿದೆ. ಇದರರ್ಥ ನಾವು ಪ್ರತಿ ಕ್ಷಣ ಉಸಿರಾಡುವ ಗಾಳಿಯು ಈಗ ಸಾವಿನ ಅತ್ಯಂತ ಅಪಾಯಕಾರಿ ಮೂಲವಾಗಿದೆ. ವಿಶ್ವಾದ್ಯಂತದ ಎಲ್ಲಾ ಸಾವುಗಳಲ್ಲಿ 12% ಕಳಪೆ ಗಾಳಿಯ ಗುಣಮಟ್ಟದಿಂದಲೇ ಉಂಟಾಗುತ್ತವೆ ಎಂದು ವರದಿ ಹೇಳುತ್ತದೆ. ಹೋಲಿಸಿದರೆ, ಅಧಿಕ ರಕ್ತದೊತ್ತಡವು ಪ್ರತಿ ವರ್ಷ ಸುಮಾರು 10 ಮಿಲಿಯನ್ ಜನರನ್ನು ಕೊಲ್ಲುತ್ತದೆ, ಅಂದರೆ ವಾಯು ಮಾಲಿನ್ಯವು ಈಗ ಆ ಮಟ್ಟವನ್ನು ತಲುಪಿದೆ. ರಾಜಧಾನಿ ದೆಹಲಿಯಂತಹ ನಗರಗಳಲ್ಲಿ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ವಾಯು ಗುಣಮಟ್ಟ ಸೂಚ್ಯಂಕ (AQI)…
ಬೆಂಗಳೂರು : ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು. ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ನಿಮಗಿದು ತಿಳಿದಿರಲಿ ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಇಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ. ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ವಾಹನ ಚಾಲನಾ ಪರವಾನಗಿ ಚುನಾವಣಾ ಗುರುತಿನ ಚೀಟಿ ಪಾಸ್ ಪೋರ್ಟ್ ಜನನ ಪ್ರಮಾಣ ಪತ್ರ SSLC, PUC ಅಂಕಪಟ್ಟಿ ವಿದ್ಯಾರ್ಥಿ ಗುರುತಿನ ಚೀಟಿ
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) ಅಕ್ಟೋಬರ್ 21 ರಿಂದ ತಾಂತ್ರಿಕೇತರ ಜನಪ್ರಿಯ ವರ್ಗದ (ಪದವಿ/ಸಿಇಎನ್ ಸಂಖ್ಯೆ 06/2025) ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವ ಮತ್ತು ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು RRB ಯ ಅಧಿಕೃತ ವೆಬ್ಸೈಟ್ rrbapply.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಫಾರ್ಮ್ ಅನ್ನು ಭರ್ತಿ ಮಾಡಲು ಕೊನೆಯ ದಿನಾಂಕ ನವೆಂಬರ್ 21 ಮತ್ತು ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 22, 2025. ಅರ್ಹತೆ ಮತ್ತು ಮಾನದಂಡಗಳು RRB NTPC ಗ್ರಾಜುಯೇಟ್ ಲೆವೆಲ್ ನೇಮಕಾತಿಯಲ್ಲಿ ಭಾಗವಹಿಸಲು, ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಪದವಿ ಅಗತ್ಯವಿದೆ. ಕೆಲವು ಹುದ್ದೆಗಳಿಗೆ, ಅಭ್ಯರ್ಥಿಗಳು ಪದವಿಯ ಜೊತೆಗೆ ಕಂಪ್ಯೂಟರ್ ಪ್ರಾವೀಣ್ಯತೆ/ಟೈಪಿಂಗ್ ಕೌಶಲ್ಯವನ್ನು ಹೊಂದಿರಬೇಕು. ಶೈಕ್ಷಣಿಕ ಅರ್ಹತೆಗಳ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು ಹುದ್ದೆಯನ್ನು ಅವಲಂಬಿಸಿ ಗರಿಷ್ಠ ವಯಸ್ಸು 33 ವರ್ಷಗಳಿಗಿಂತ ಹೆಚ್ಚಿರಬಾರದು. ಮೀಸಲು…
ತುಮಕೂರು : ರಾಜ್ಯದಲ್ಲಿ ದೀಪಾವಳಿ ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಅಂದನಕೆರೆ ಬಳಿಯ ಎರೆಕಟ್ಟೆ ಕೆರೆಯಲ್ಲಿ ನಡೆದಿದೆ. ಇಬ್ಬರು ಸ್ನೇಹಿತೆಯರು ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಬಾಲಕಿ ತಂದೆ ಕೂಡ ಸಾವನ್ನಪ್ಪಿದ್ದಾರೆ.ವೆಂಕಟೇಶ್(48), ಪುತ್ರಿ ಶ್ರಾವ್ಯ(12) ಆಕೆಯ ಸ್ನೇಹಿತೆ ಪುಣ್ಯ(11) ಮೃತಪಟ್ಟವರು. ಕೆರೆಯ ಕಡೆಗೆ ವಿಹಾರಕ್ಕೆ ತೆರಳಿದ್ದ ಶ್ರಾವ್ಯ ಮತ್ತು ಸ್ನೇಹಿತೆ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರು ಬಾಲಕಿಯರ ರಕ್ಷಣೆಗೆ ಬಂದಿದ್ದ ತಂದೆ ವೆಂಕಟೇಶ್ ಕೂಡ ಸಾವನ್ನಪ್ಪಿದ್ದಾರೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಅಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಈ ವರ್ಷ ಭಾರತದಲ್ಲಿ ದೀಪಾವಳಿ ಹಬ್ಬದಂದು ದಾಖಲೆಯ ಮಾರಾಟವಾಗಿದ್ದು, ಒಟ್ಟು ಹಬ್ಬದ ವ್ಯಾಪಾರವು ರೂ. 6.05 ಲಕ್ಷ ಕೋಟಿ ತಲುಪಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT) ತಿಳಿಸಿದೆ. ಒಟ್ಟು ಹಬ್ಬದ ವ್ಯಾಪಾರವು ರೂ. 5.40 ಲಕ್ಷ ಕೋಟಿ ಸರಕುಗಳು ಮತ್ತು ರೂ. 65,000 ಕೋಟಿ ಸೇವೆಗಳನ್ನು ಒಳಗೊಂಡಿದೆ. “ದೀಪಾವಳಿ ಹಬ್ಬದ ಮಾರಾಟ 2025 ರ ಸಂಶೋಧನಾ ವರದಿ”ಯಲ್ಲಿ ಬಿಡುಗಡೆಯಾದ ಈ ದತ್ತಾಂಶವು, ರಾಜ್ಯ ರಾಜಧಾನಿಗಳು ಮತ್ತು ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳು ಸೇರಿದಂತೆ 60 ಪ್ರಮುಖ ವಿತರಣಾ ಕೇಂದ್ರಗಳಲ್ಲಿ CAIT ಸಂಶೋಧನೆ ಮತ್ತು ವ್ಯಾಪಾರ ಅಭಿವೃದ್ಧಿ ಸೊಸೈಟಿ ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯನ್ನು ಆಧರಿಸಿದೆ. ದೆಹಲಿಯ ಚಾಂದನಿ ಚೌಕ್ ಸಂಸದ ಮತ್ತು CAIT ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಅವರು, GST ತರ್ಕಬದ್ಧಗೊಳಿಸುವಿಕೆ ಮತ್ತು ಸ್ವದೇಶಿ ಅಳವಡಿಕೆಯು ವ್ಯಾಪಾರ ಸಮುದಾಯ ಮತ್ತು ಗ್ರಾಹಕರಿಬ್ಬರಿಗೂ ಸ್ಫೂರ್ತಿ ನೀಡಿದೆ ಎಂದು ಮಾರಾಟವು ಎತ್ತಿ ತೋರಿಸುತ್ತದೆ ಎಂದು ಹೇಳಿದರು.…
ಹಾವೇರಿ: ಆಟವಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ತರುಣ ಸಿದ್ದನಗೌಡ ಮರಿಪರಪ್ಪನವರ (9)ಮೃತನು. ಗ್ರಾಮದಲ್ಲಿ ಇರುವ ನೀರಿನ ಹೊಂಡದ ಬಳಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಲ್ಲಿಬಿದ್ದು ಮುಳುಗಿದ್ದಾನೆ ಎಂದು ಮೃತ ಬಾಲಕನ ತಂದೆ ಸಿದ್ದನಗೌಡ ಮರಿಪರಪ್ಪನವರ ಪೊಲೀಸರಿಗೆ ನೀಡಿದ ದೂರಿನಲ್ಲಿತಿಳಿಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು. ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ…
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ಇಂದು ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ. ಅವರ ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ…














