Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕಾರ್ಮಿಕರು ಮಂಡಳಿ ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕ ಕಾರ್ಡ್ ಹೊಂದಿರುವುದು ಕಡ್ಡಾಯ. ನಕಲಿ ದಾಖಲೆಗಳನ್ನು ನೀಡಿ ಕಾರ್ಮಿಕ ಕಾರ್ಡ್ ಪಡೆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸುಳ್ಳು ದಾಖಲೆಗಳನ್ನು ಸಲ್ಲಿಸಿ ಮ೦ಡಳಿಯ ಕಾರ್ಮಿಕ ಕಾರ್ಡ್ ಪಡೆದು ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ ಇಂತಹ ಕಾರ್ಡ್ಗಳನ್ನು ತಪ್ಪದೇ ಸ೦ಬ೦ಧಿಸಿದ ಕಚೇರಿಗಳಿಗೆ ವಾಪಸ್ ನೀಡಿ. ಅರ್ಹ ಫಲಾನುಭವಿಗಳಿಗೆ ಮಾತ್ರವೇ ಮ೦ಡಳಿಯ ಸೌಲಭ್ಯ ಸಿಗಲು ಸಹಕರಿಸಿ. ಈ ಕುರಿತು ಇತರ ಕಾರ್ಮಿಕರಿಗೆ ಮಾಹಿತಿ ನೀಡಿ.
ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಮಾನವೀಯತೆಯನ್ನು ಪ್ರಶ್ನಿಸುವ ಅತ್ಯಂತ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕೈಗಳ ಮೇಲಿನ ಮೆಹಂದಿ ಬಣ್ಣ ಸಂಪೂರ್ಣವಾಗಿ ಮಸುಕಾಗುವ ಮೊದಲೇ, 24 ವರ್ಷದ ನವವಿವಾಹಿತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಪಂಥಿ ವಿಶ್ರಾಮ್ ಗ್ರಾಮದಲ್ಲಿರುವ ತನ್ನ ತವರು ಮನೆಯಲ್ಲಿ ಕರುಣಾ ದ್ವಿವೇದಿ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಗ್ಯೂ, ಇದು ಕೇವಲ ಆತ್ಮಹತ್ಯೆಯಲ್ಲ, ಅವರು ಬರೆದಿರುವ 10 ಪುಟಗಳ ಆತ್ಮಹತ್ಯೆ ಪತ್ರವು ಅವರ ಪತಿಯ ಕ್ರೌರ್ಯದಿಂದ ತುಂಬಿದೆ. ಕರುಣಾ ಅವರ ಮದುವೆ ಕಳೆದ ವರ್ಷ ಮೇ 8 ರಂದು ನಡೆಯಿತು. ಆದರೆ ಅವರು ಬರೆದ ಪತ್ರದಿಂದ ಅವರ ಮದುವೆಯ ನಂತರ ಅವರ ಅತ್ತೆ-ಮಾವನ ಮನೆ ಅವರಿಗೆ ಜೀವಂತ ನರಕವಾಗಿದೆ ಎಂದು ಸ್ಪಷ್ಟವಾಗುತ್ತದೆ. ಅವರ ಪತಿ ಮತ್ತು ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ. ಕರುಣಾ ತಮ್ಮ ಪತ್ರದಲ್ಲಿ ಭಯಾನಕ ಸತ್ಯವನ್ನು ಬರೆದಿದ್ದಾರೆ. ತನ್ನ ಗಂಡ ತನ್ನ ಋತುಚಕ್ರದ ಸಮಯದಲ್ಲಿ…
ನವದೆಹಲಿ : ಕೇಂದ್ರ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆನ್ಲೈನ್ನಲ್ಲಿ ಅಶ್ಲೀಲ ವಿಷಯವನ್ನು ನಿರ್ಬಂಧಿಸಬೇಕೆಂದು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು ಸೂಚಿಸಿದೆ. ಆಸ್ಟ್ರೇಲಿಯಾ ಸರ್ಕಾರ ಇತ್ತೀಚೆಗೆ ಹದಿಹರೆಯದವರಿಗೆ ಸ್ಪಷ್ಟ ವಿಷಯವನ್ನು ಮರೆಮಾಡಲು ಫೇಸ್ಬುಕ್, ಇನ್ಸ್ಟಾಗ್ರಾಮ್, ಎಕ್ಸ್ ಮತ್ತು ಇತರ ಸಾಮಾಜಿಕ ಮಾಧ್ಯಮ ಸೈಟ್ಗಳನ್ನು ನಿರ್ಬಂಧಿಸಿದಂತೆ ಕೇಂದ್ರ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆನ್ಲೈನ್ನಲ್ಲಿ ಅಶ್ಲೀಲ ವಿಷಯವನ್ನು ನಿರ್ಬಂಧಿಸಬೇಕೆಂದು ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಮಕ್ಕಳ ಭವಿಷ್ಯಕ್ಕೆ ಹಾನಿ ಮಾಡುವ ಅಶ್ಲೀಲ ವಿಷಯಕ್ಕೆ ಸುಲಭ ಪ್ರವೇಶವನ್ನು ಎತ್ತಿ ತೋರಿಸುವ ಮೂಲಕ ಎಸ್. ವಿಜಯಕುಮಾರ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಸುದ್ದಿ ಸಂಸ್ಥೆ IANS ಪ್ರಕಾರ, ಮಕ್ಕಳ ಹಕ್ಕುಗಳ ಆಯೋಗಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ISP ಗಳು ಜಾಗೃತಿ ಮೂಡಿಸಲು ಮತ್ತು ಅಂತಹ ವಿಷಯವನ್ನು ನಿರ್ಬಂಧಿಸಲು ಸಾಫ್ಟ್ವೇರ್ ಅನ್ನು ಬಳಸಲು ನ್ಯಾಯಾಲಯವು ನಿರ್ದೇಶಿಸಿದೆ. ಅಂತಹ ನಿರ್ಧಾರ ತೆಗೆದುಕೊಳ್ಳುವವರೆಗೆ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಜ್ಯ ಮತ್ತು ರಾಷ್ಟ್ರೀಯ ಆಯೋಗವು…
BREAKING : ಬೆಂಗಳೂರಿನ ಜನತೆಗೆ ಹೊಸ ವರ್ಷಕ್ಕೆ ಬಿಗ್ ಶಾಕ್ : ಪಾರ್ಕ್, ಕೆರೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ.!
ಬೆಂಗಳೂರು : ಬೆಂಗಳೂರಿನ ಜನತೆಗೆ ಹೊಸ ವರ್ಷಕ್ಕೆ ಶಾಕ್ ನೀಡಿದ್ದು, ಡಿಸೆಂಬರ್ 31 ರಂದು ಬೆಂಗಳೂರಿನ ಉದ್ಯಾನವನಗಳು ಹಾಗೂ ಕೆರೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ದಿನಾಂಕ 31-12-2025ರ ಸಂಜೆ 6:00 ಘಂಟೆ ನಂತರ ಪಾಲಿಕೆಗೆ ಸೇರಿದ ಉದ್ಯಾನವನಗಳು ಹಾಗೂ ಕೆರೆಗಳು, ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2026ನೇ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಈ ವರ್ಷದ ಕೊನೆಯ ದಿನವಾದ 31-12-2025ರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ಯಾವುದೇ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗವಾಗುವ ಸಂಭವವಿರುವುದರಿಂದ, ಸಾರ್ವಜನಿಕ ಸುರಕ್ಷಯಿಂದಾಗಿ, ಮುಂಜಾಗ್ರತಾ ಕ್ರಮವಾಗಿ ದಿನಾಂಕ 31-12-2025 ರಂದು ಸಂಜೆ 6:00 ಗಂಟೆಯ ನಂತರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳು, ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿ, ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.
ಕ್ಯಾಲೆಂಡರ್ ಬದಲಾಗುವುದಲ್ಲದೆ, ಹೊಸ ವರ್ಷವು ನಮ್ಮ ಜೀವನದಲ್ಲಿ ಹೊಸ ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ತರುತ್ತದೆ. 365 ದಿನಗಳ ಪ್ರಯಾಣದ ಅಡಿಪಾಯವನ್ನು ಆ ಮೊದಲ ದಿನದಂದು ಹಾಕಲಾಗುತ್ತದೆ. ಅದಕ್ಕಾಗಿಯೇ ಜ್ಯೋತಿಷ್ಯ ಮತ್ತು ಪ್ರಾಚೀನ ನಂಬಿಕೆಗಳ ಪ್ರಕಾರ, ಜನವರಿ 1 ರಂದು ನಾವು ಮಾಡುವ ಕೆಲಸಗಳು ವರ್ಷವಿಡೀ ನಮ್ಮ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ. ಮತ್ತು ಮುಂದಿನ ವರ್ಷ ಇಡೀ ಸಂತೋಷ ಮತ್ತು ಸಮೃದ್ಧವಾಗಿರಬೇಕೆಂದು ನಾವು ಬಯಸಿದರೆ, ಹೊಸ ವರ್ಷದ ಮೊದಲ ದಿನದಂದು ಯಾವ ವಿಷಯಗಳನ್ನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ. ಮನೆಯಲ್ಲಿ ಜಗಳಗಳಿಗೆ ಅವಕಾಶ ನೀಡಬೇಡಿ ಹೊಸ ವರ್ಷದ ಮೊದಲ ದಿನದಂದು, ಮನೆಯಲ್ಲಿ ವಾತಾವರಣವು ಶಾಂತಿಯುತ ಮತ್ತು ಆಹ್ಲಾದಕರವಾಗಿರಬೇಕು. ಈ ದಿನದಂದು ಪರಸ್ಪರ ವಾದ ಅಥವಾ ಕೂಗಾಟ ಇರಬಾರದು. ಮೊದಲ ದಿನದಂದು ಮನೆಯಲ್ಲಿ ವಿವಾದ ಉಂಟಾದರೆ, ವರ್ಷವಿಡೀ ಮಾನಸಿಕ ಒತ್ತಡ ಮುಂದುವರಿಯುತ್ತದೆ ಎಂದು ಹಿರಿಯರು ನಂಬುತ್ತಾರೆ. ಅದಕ್ಕಾಗಿಯೇ ಕಿರಿಯರೊಂದಿಗೆ ಪ್ರೀತಿಯಿಂದ ವರ್ತಿಸುವುದು ಮತ್ತು ಈ ದಿನದಂದು ಹಿರಿಯರ ಆಶೀರ್ವಾದವನ್ನು ಪಡೆಯುವುದು ಶುಭ. ಸಾಲ…
ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಇಂದು…
ಬೆಂಗಳೂರು : ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ನಿನ್ನೆ ನಡೆದಿತ್ತು. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಆದರೆ ಇಂದು ಚಿಕಿತ್ಸೆ ಫಲಿಸದೇ ಗಾನವಿ ಸಾವನ್ನಪ್ಪಿದ್ದಾರೆ. ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನಪ್ಪಿದ್ದು ಪೊಲೀಸರು ಪತಿ ಸೂರಜ್ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ನವದಂಪತಿ ಶ್ರೀಲಂಕಾಗೆ ಹನಿಮೂನ್ ಟ್ರಿಪ್ ಹೋಗಿದ್ದರು.…
ಚಿತ್ರದುರ್ಗ/ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕ್ರಿಸ್ ಮಸ್ ಹಬ್ಬದ ದಿನವೇ ಸರಣಿ ದುರಂತ ಸಂಭವಿಸಿದ್ದು, ಪ್ರತ್ಯೇಕ ಅಪಘಾತಗಳಲ್ಲಿ 12 ಮಂದಿ ಬಲಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 7 ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಚಿಕ್ಕಬಳ್ಳಾಂಪುರದಲ್ಲಿ ನಾಲ್ವರು ಯುವಕರು ಸಾವು…
ಹಲ್ಲುಗಳನ್ನು ಹಲ್ಲುಜ್ಜುವುದು ದೈನಂದಿನ ಜೀವನದ ಒಂದು ಪ್ರಮುಖ ಭಾಗವಾಗಿದೆ. ಏಕೆಂದರೆ ಇದು ಅನೇಕ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇದು ಅವುಗಳನ್ನು ಸ್ವಚ್ಛವಾಗಿ, ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಹೊಳೆಯುವ ಹಲ್ಲುಗಳು ನಮ್ಮ ವ್ಯಕ್ತಿತ್ವಕ್ಕೆ ಸೌಂದರ್ಯವನ್ನು ಸೇರಿಸುತ್ತವೆ. ಅಮೇರಿಕನ್ ಡೆಂಟಲ್ ಅಸೋಸಿಯೇಷನ್ ಪ್ರಕಾರ, ನಾವು ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ಮಲಗುವ ಮೊದಲು ಎರಡು ನಿಮಿಷಗಳ ಕಾಲ ಹಲ್ಲುಜ್ಜಬೇಕು. ಹಲ್ಲುಗಳ ಮೇಲೆ ಸಂಗ್ರಹವಾಗಿರುವ ಪ್ಲೇಕ್ ಅನ್ನು ಹಲ್ಲುಜ್ಜುವುದು ತೆಗೆದುಹಾಕುತ್ತದೆ. ಪ್ಲೇಕ್ ಹಲ್ಲಿನ ದಂತಕವಚದ ಮೇಲೆ ದಾಳಿ ಮಾಡುತ್ತದೆ. ಇದು ದೀರ್ಘಕಾಲದವರೆಗೆ ಸಂಭವಿಸಿದಲ್ಲಿ, ಹಲ್ಲಿನ ದಂತಕವಚವು ಹಾನಿಗೊಳಗಾಗುತ್ತದೆ. ಇದು ಕುಳಿಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಹಲ್ಲುಗಳನ್ನು ಸ್ವಚ್ಛಗೊಳಿಸುವುದು ಬಹಳ ಮುಖ್ಯ. ಆದರೆ, ನಿಮ್ಮ ಹಲ್ಲುಗಳನ್ನು ಹಲ್ಲುಜ್ಜಲು ಸರಿಯಾದ ಮಾರ್ಗ ನಿಮಗೆ ತಿಳಿದಿದೆಯೇ..? ಅಲ್ಲದೆ, ಊಟದ ನಂತರ ಎಷ್ಟು ಸಮಯದ ನಂತರ ನೀವು ನಿಮ್ಮ ಹಲ್ಲುಗಳನ್ನು ಹಲ್ಲುಜ್ಜಬೇಕು? ಹಲ್ಲುಜ್ಜಲು ಸರಿಯಾದ ಸಮಯ ಯಾವುದು?.. ಪ್ರತಿಯೊಬ್ಬರೂ ದಿನಕ್ಕೆ ಎರಡು ಬಾರಿ ಹಲ್ಲುಜ್ಜಬೇಕು, ಬೆಳಿಗ್ಗೆ ಒಮ್ಮೆ…
ಶಿವಮೊಗ್ಗ : ಮಲೆನಾಡು ಪ್ರದೇಶದಲ್ಲಿ ತೀವ್ರತರವಾಗಿರುವ ಅಡಿಕೆ ಎಲೆಚುಕ್ಕೆ ರೋಗದಿಂದಾಗಿ ಸಣ್ಣ ರೈತರಿಗೆ ತುಂಬಾ ತೊಂದರೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ ಕೈಗೊಳ್ಳುತ್ತಿದ್ದು ರೈತರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದು ಅತಿ ಅವಶ್ಯಕವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಮತ್ತು ಇತರೆ ವಿಷಯ ಕುರಿತು ಚರ್ಚಿಸಲು ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲದಲ್ಲಿ ಹೆಚ್ಚಾಗಿ ಹರಡುವ ಎಲೆ ಚುಕ್ಕೆ ರೋಗ ನಿಯಂತ್ರಣ ದುಬಾರಿಯಾಗಿದೆ. ರೋಗ ನಿಯಂತ್ರಣ ಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಕ್ರಮವಾಗಿ ಶೇ.60 ಮತ್ತು 40 ಹಣ ನೀಡಲು ಸಿದ್ದವಿದ್ದು, ಮುಖ್ಯವಾಗಿ ರೋಗ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಅಭಿಪ್ರಾಯ ಮತ್ತು ಮಾರ್ಗದರ್ಶನದ ಮೇಲೆ ಮಾರ್ಗಸೂಚಿಯನ್ನು ತಯಾರಿಸಲಾಗುತ್ತಿದೆ. ಇಲಾಖೆಗಳು, ಗ್ರಾ.ಪಂ, ಸಹಕಾರ…














