Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಲ್ಲಿ ಬಿಜಿಲಿ ಪಟಾಕಿ ಸಿಡಿದು 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಮತ್ತೊಬ್ಬನಿಗೆ ಗಾಯವಾಗಿದೆ. ಆಟಂ ಬಾಂಬ್ ಪಟಾಕಿ ಸಿಡಿದು 48 ವರ್ಷದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ. ಅದೇ ರೀತಿಯಾಗಿ ಇನ್ನು 6 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 20 ಜನರು ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ಪಟಾಕಿ ಸಿಡಿಸಲು ಹೋಗಿ ಮಕ್ಕಳು ಗಾಯಗೊಂಡಿದ್ದಾರೆ. ಪಟಾಕಿಯಿಂದ ಅನಾಹುತ ಸಂಭವಿಸಿದ ಪರಿಣಾಮ ಮಿಂಟೋ ಆಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಹುಟ್ಟಿದಿಂದಲೂ ನಮ್ಮ ದೇಹದ ಮೇಲೆ ನಮಗೆ ಇಷ್ಟವಿಲ್ಲದ ಕೆಲವು ಕಲೆಗಳು, ಗುರುತುಗಳು ಇರುತ್ತವೆ. ಅವುಗಳಲ್ಲಿ ಒಂದು ನರುಳ್ಳೆಗಳು. ಅನೇಕ ಜನರಲ್ಲಿ ಬಾಲ್ಯದಲ್ಲಿ ಅಥವಾ ವಯಸ್ಸಾದಂತೆ ದೇಹದ ಮೇಲೆ ನರುಳ್ಳೆಗಳು ಬೆಳೆಯುತ್ತವೆ. ಈ ನರುಳ್ಳೆಗಳು ದೇಹದ ಯಾವುದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು, ಆಗಾಗ್ಗೆ ಅವು ಮುಖದ ಮೇಲೂ ಕಾಣಿಸಿಕೊಳ್ಳುತ್ತವೆ, ಇದು ನಮ್ಮ ಮುಖದ ನೋಟವನ್ನು ಸಂಪೂರ್ಣವಾಗಿ ಹಾಳು ಮಾಡುತ್ತದೆ. ಅನೇಕ ಜನರು ಅವುಗಳನ್ನು ಮುಖದಿಂದ ತೆಗೆದುಹಾಕಲು ಲೇಸರ್ ಅನ್ನು ಬಳಸುತ್ತಾರೆ, ಇದು ತುಂಬಾ ನೋವಿನಿಂದ ಕೂಡಿದೆ. ಮತ್ತು ದುಬಾರಿಯಾಗಿದೆ. ಆದರೆ, ಇಂದು ನಾವು ನಿಮಗೆ ದೇಹದಿಂದ ನರುಳ್ಳೆಗಳನ್ನು ತೆಗೆದುಹಾಕಲು ಸುಲಭ, ಸರಳ, ಅಗ್ಗದ ಮತ್ತು ಕಡಿಮೆ ನೋವಿನ ಮಾರ್ಗವನ್ನು ಹೇಳಲಿದ್ದೇವೆ, ಅದು ಖಂಡಿತವಾಗಿಯೂ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಈ ಪ್ರಕ್ರಿಯೆಯನ್ನು ಮನೆಯಲ್ಲಿ ನೈಸರ್ಗಿಕವಾಗಿ ಕಂಡುಬರುವ ಪದಾರ್ಥಗಳನ್ನು ಬಳಸಿ ಮಾಡಬಹುದು. ನಿಮ್ಮ ದೇಹದ ಮೇಲಿನ ನರುಳ್ಳೆಗಳು ಯಾವುದೇ ನೋವು ಇಲ್ಲದೆ ಉದುರಿಹೋಗುವುದನ್ನು ನೀವು ಗಮನಿಸಬಹುದು. ಈ ಸಲಹೆಯನ್ನು ಹೇಗೆ ಬಳಸುವುದು ಎಂದು ವಿವರವಾಗಿ ತಿಳಿಯಿರಿ. ಪದಾರ್ಥಗಳು…
ಬೆಂಗಳೂರು : ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪದೇ ಪದೇ ಕುಡಿದು ಬಂದು ರಾಕೇಶ್ ಪಾತ್ರ ಜಗಳ ಮಾಡುತ್ತಿದ್ದ ಭಾನುವಾರವೂ ಜಗಳ ಮಾಡಿದ್ದ. ಅಂದು ಬೆಳಗ್ಗೆ ಎದ್ದಾಗ ರಾಕೇಶ್ ಪಾತ್ರ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 20 ಜನರು ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಲ್ಲಿ ಬಿಜಿಲಿ ಪಟಾಕಿ ಸಿಡಿದು 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಮತ್ತೊಬ್ಬನಿಗೆ ಗಾಯವಾಗಿದೆ. ಆಟಂ ಬಾಂಬ್ ಪಟಾಕಿ ಸಿಡಿದು 48 ವರ್ಷದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ. ಅದೇ ರೀತಿಯಾಗಿ ಇನ್ನು 6 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಟಾಕಿ ಸಿಡಿಸಲು ಹೋಗಿ ಮಕ್ಕಳು ಗಾಯಗೊಂಡಿದ್ದಾರೆ. ಪಟಾಕಿಯಿಂದ ಅನಾಹುತ ಸಂಭವಿಸಿದ ಪರಿಣಾಮ ಮಿಂಟೋ ಆಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಬೆಂಗಳೂರು : ರಾಜ್ಯದ ಯಜಮಾನಿಯರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೌದು ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಸಂಘಗಳ ಅಪರ ನಿಬಂಧಕರು ಹಸಿರು ನಿಶಾನೆ ತೋರಿಸಿ ಕರ್ನಾಟಕದ ವ್ಯಾಪ್ತಿ ನಿಗದಿಪಡಿಸಿದ್ದಾರೆ. ನೋಂದಣಿ ಪೂರ್ವದಲ್ಲಿ ಸಹಕಾರ ಸಂಘದ ಕಾರ್ಯವ್ಯಾಪ್ತಿಯಲ್ಲಿನ ಕನಿಷ್ಠ…
ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೇನು ಕಚ್ಚಿ ಮೃತಪಟ್ಟ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ಸೋಮವಾರ ಪುತ್ತೂರಿನಲ್ಲಿ ಆಯೋಜಿಸಿದ್ದ “ಅಶೋಕ ಜನ-ಮನ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು. ಈ ಬಗ್ಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ್ಯ…
ಚನ್ನಪಟ್ಟಣ : ಪೋಷಕರೇ ಎಚ್ಚರ, ನೀರಿನ ಬಕೆಟ್ ನಲ್ಲಿ ಮುಳುಗಿ 1 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದ ಜೀವನ್ಪುರ ಮೊಹಲ್ಲಾದಲ್ಲಿ ಶಮ್ ಶಾದ್ ಪಠಾಣ್ ಮತ್ತು ಮುಷ್ಕಾನ್ ದಂಪತಿ ಯ ಪುತ್ರಿ ಖುಷಿ ಎಂಬ ಮಗು ನೀರಿನ ಬಕೆಟ್ ನಲ್ಲಿ ಮುಳುಗಿ ಸಾವನ್ನಪ್ಪಿದೆ. ದಂಪತಿ ಮಧ್ಯಾಹ್ನ ಮಲಗಿದ್ದ ವೇಳೆ ಘಟನೆ ನಡೆದಿದೆ. ಮನೆ ಒರೆಸಲು ಹಾಲ್ನಲ್ಲಿ ನೀರು ತುಂಬಿ ಇಟ್ಟಿದ್ದ ಬಕೆಟ್ನಲ್ಲಿ ಮುಳುಗಿ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದೆ. ಬಕೆಟ್ ನಲ್ಲಿ ಮಗು ಬಿದ್ದಿರುವುದನ್ನು ನೋಡಿದ ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಪುತ್ತೂರಿನಲ್ಲಿ ಆಯೋಜಿಸಿದ್ದ “ಅಶೋಕ ಜನ-ಮನ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು. ಈ ಬಗ್ಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ…
ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು. ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ…
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಕೃಷಿಹೊಂಡಗಳಲ್ಲಿ ಬಿದ್ದು ಮಕ್ಕಳು ಸಾವನ್ನಪುತ್ತಿರುವ ಪ್ರಕರಣಗಳನ್ನು ತಡೆಯುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಎಲ್ಲಾ ಕೃಷಿಹೊಂಡಗಳಿಗೆ ರಕ್ಷಣಾ ಬೇಲಿ (Fencing) ನಿರ್ಮಿಸಲು ಸೂಚನೆ ನೀಡಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೃಷಿಹೊಂಡಗಳಲ್ಲಿ ಮಕ್ಕಳು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸಾಕಷ್ಟು ದೂರು ದಾಖಲಾಗುತ್ತಿರುವುದು ಕಂಡುಬಂದಿದ್ದು ಹಾಗೂ ತೋಟಗಾರಿಕೆ ಇಲಾಖೆಯಿಂದ ನೀಡಲಾಗುತ್ತಿರುವ ಕೃಷಿಹೊಂಡಗಳಲ್ಲಿ ಜೀವಹಾನಿ ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್-ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಈ ಹಿಂದೆ ನೀಡಲಾದ ಎಲ್ಲಾ ಕೃಷಿಹೊಂಡಗಳಿಗೆ ರಕ್ಷಣಾ ಬೇಲಿ (Fencing) ನಿರ್ಮಿಸಲು ಫಲಾನುಭವಿಗಳಿಗೆ ಅರಿವು ಮೂಡಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ನಿರ್ಮಿಸುವ ಕೃಷಿಹೊಂಡಗಳ ಸುತ್ತಲೂ ರಕ್ಷಣಾ ಬೇಲಿಯನ್ನು ಪರಿಣಾಮಕಾರಿಯಾಗಿ ಅಳವಡಿಸಲು ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಹಾಗೂ ರಕ್ಷಣಾ ಬೇಲಿ ಅಳವಡಿಸಿದ…













