Author: kannadanewsnow57

ಹೈದರಾಬಾದ್ : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ದೇಶಾದ್ಯಂತ ಎನ್ ಐಎ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಪಾಕಿಸ್ತಾನಕ್ಕೆ ಟ್ರಿಪ್ ಹೋಗಿ ತೆಲಂಗಾಣದ ಯೂಟ್ಯೂಬರ್ ಬಯ್ಯ ಸನ್ನಿ ಯಾದವ್ ನನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಹೌದು,ತೆಲಂಗಾಣದ ಸೂರ್ಯಪೇಟೆಯ ಜನಪ್ರಿಯ ಯೂಟ್ಯೂಬರ್ ಬಯ್ಯ ಸನ್ನಿ ಯಾದವ್ ಅವರನ್ನು ಮೇ 29, ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದ್ದು, ಪಾಕಿಸ್ತಾನ ಪ್ರವಾಸ ಕೈಗೊಂಡುಅಲ್ಲಿ ವಿಡಿಯೋ ಮಾಡಿದ್ದಕ್ಕಾಗಿ ಭಾರತಕ್ಕೆ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು. ಎರಡು ತಿಂಗಳ ಹಿಂದೆ ಯಾದವ್ ಪಾಕಿಸ್ತಾನಕ್ಕೆ ಮಾಡಿದ ಮೋಟಾರ್ ಸೈಕಲ್ ಪ್ರಯಾಣವನ್ನು ದಾಖಲಿಸಿದ ನಂತರ ಈ ಬಂಧನವಾಗಿದ್ದು, ಅದನ್ನು ಅವರು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ವ್ಯಾಪಕವಾಗಿ ಪಾಕಿಸ್ತಾನದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.  ಆಪರೇಷನ್ ಸಿಂಧೂರ್ ಮತ್ತು ನಡೆಯುತ್ತಿರುವ ಭಾರತ-ಪಾಕ್ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಅವರ ವೀಡಿಯೊಗಳು ಭದ್ರತಾ ಸಂಸ್ಥೆಗಳಲ್ಲಿ ಕಳವಳವನ್ನು ಹುಟ್ಟುಹಾಕಿದವು. ಅಧಿಕಾರಿಗಳ ಪ್ರಕಾರ, ಯಾದವ್ ಗಡಿಯಾಚೆಗಿನ ವಾಸ್ತವ್ಯದ ಸಮಯದಲ್ಲಿ ಯಾವುದೇ…

Read More

ಭೋಪಾಲ್ : ಲೋಕಮಾತಾ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವದ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ’ ಬಿಡುಗಡೆ ಮಾಡಿದರು. ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ನಡೆದ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನದಲ್ಲಿ ಲೋಕಮಾತಾ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವದ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ’ ಬಿಡುಗಡೆ ಮಾಡಿದರು. http://twitter.com/ANI/status/1928702926312103937?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸೂಚನೆ ನೀಡಿದರು. ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು. ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.

Read More

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Read More

ಮೈಸೂರು : ಮೈಸೂರಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಹತ್ತಿ  ಮೂರ್ತಿ ಬಾಯಿಗೆ ಸಿಗರೇಟ್ ಇಟ್ಟು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ. ಹೌದು, ಇಂದು ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದ ವ್ಯಕ್ತಿ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟು ವಿಕೃತಿ ಮೆರೆದಿದ್ದಾನೆ. ವ್ಯಕ್ತಿಯ ಹುಚ್ಚಾಟಕ್ಕೆ ಸಾರ್ವಜನಿಕರು ಗಾಬರಿಯಾಗಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದಂತೆ ವ್ಯಕ್ತಿ ಎಸ್ಕೇಪ್ ಆಗಿದ್ದಾನೆ. ಸದ್ಯ ವ್ಯಕ್ತಿಯ ಹುಚ್ಚಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪರಾರಿಯಾಗಿರುವ ವ್ಯಕ್ತಿಯ ಪತ್ತೆಗಾಗಿ ದೇವರಾಜ ಠಾಣೆ ಪೊಲಿಸರು ಹುಡುಕಾಟ ನಡೆಸಿದ್ದಾರೆ.

Read More

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇಂದು ಸಚಿವ ದಿನೇಶ್ ಗುಂಡೂರಾವ್ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿ, ಪರಿಹಾರದ ಚೆಕ್ ವಿತರಿಸಿದೆ. ಜೊತೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. ಮಳೆಯ ಹಿನ್ನೆಲೆ ಸಾರ್ವಜನಿಕರ ಜೀವಹಾನಿ ತಪ್ಪಿಸಲು ನಮ್ಮ ಸರ್ಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದರು. ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ  ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ…

Read More

ನವದೆಹಲಿ : ಭಯೋತ್ಪಾದಕರ ಸಾವಿನ ನಂತರ ಸಂತಾಪ ಸೂಚಿಸಿದ ಕೊಲಂಬಿಯಾ, 48 ಗಂಟೆಗಳಲ್ಲಿ ತನ್ನ ಸ್ವರವನ್ನು ಬದಲಾಯಿಸಿದೆ. ಇದಕ್ಕೆ ಕಾರಣ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಹೇಳಿಕೆ, ನಂತರ ಕೊಲಂಬಿಯಾ ಅಧಿಕೃತವಾಗಿ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಸೇನೆಯು ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರ ಮೇಲೆ ದಾಳಿ ನಡೆಸಿದಾಗ, ಕೊಲಂಬಿಯಾ ಭಯೋತ್ಪಾದಕರ ಸಾವಿಗೆ ಸಂತಾಪ ಸೂಚಿಸಿತು. ಆದರೆ, ಆಪರೇಷನ್ ಸಿಂಧೂರ್ ನಂತರ ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನವನ್ನು ಬಹಿರಂಗಪಡಿಸಲು ವಿವಿಧ ದೇಶಗಳಲ್ಲಿ ಸರ್ವಪಕ್ಷ ನಿಯೋಗವನ್ನು ಮುನ್ನಡೆಸುತ್ತಿರುವ ಶಶಿ ತರೂರ್ ಕೊಲಂಬಿಯಾಕ್ಕೆ ಹೇಳಿದಾಗ, ಅದರ ಸ್ವರ ಬದಲಾಗಿದೆ ಮತ್ತು ಈಗ ಅದು ಭಾರತಕ್ಕೆ ಬಲವಾದ ಬೆಂಬಲವನ್ನು ನೀಡುವ ಹೇಳಿಕೆಯನ್ನು ನೀಡಲಿದೆ. ಕೊಲಂಬಿಯಾದ ಮಾಜಿ ಅಧ್ಯಕ್ಷ ಸೀಸರ್ ಅಗಸ್ಟಸ್ ಗವಿರಿಯಾ ಟ್ರುಜಿಲ್ಲೊ ಅವರು ಭಾರತದ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ವಾಷಿಂಗ್ಟನ್‌ನಲ್ಲಿರುವ ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ಶುಕ್ರವಾರ (ಭಾರತೀಯ…

Read More

ಬೆಂಗಳೂರು : ಬೆಂಗಳೂರಿನ ವಾಹನ ಸವಾರರಿಗೆ ಟೋಯಿಂಗ್ ಶಾಕ್ ನಡುವೆಯೇ ಸಿಹಿಸುದ್ದಿಯೊಂದು ಸಿಕ್ಕಿದೆ. ಟೋಯಿಂಗ್ ಮಾಡಿದ್ರೂ ವಾಹನ ಸವಾರರಿಗೆ ಹೆಚ್ಚುವರಿ ಹೊರೆ ಇರುವುದಿಲ್ಲ. ಹೌದು, ಪೊಲೀಸರು ಟೋಯಿಂಗ್ ಚಾರ್ಜ್ ಹಾಕದಿರಲು ನಿರ್ಧರಿಸಿದ್ದಾರೆ. ನೋ ಪಾರ್ಕಿಂಗ್ ಫೈನ್ ಬಿಟ್ಟು ಹೆಚ್ಚುವರಿ 800 ರೂ. ಶುಲ್ಕ ವಿಧಿಸಿಸುತ್ತಿದ್ದರು. ಹೆಚ್ಚುವರಿ ಶುಲ್ಕದಿಂದಲೇ ಟೋಯಿಂಗ್ ಸಿಬ್ಬಂದಿ ಜೊತೆಗೆ ಗಲಾಟೆ ಆಗುತ್ತಿತ್ತು. ಆದರೆ ಇದೀಗ ಟೋಯಿಂಗ್ ಶುಲ್ಕ ವಿಧಿಸದಿರಲು ಪೊಲೀಸರು ನಿರ್ಧಾರ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ನಗರದಲ್ಲಿ ಟೋಯಿಂಗ್ ಹಗಲು ದರೋಡೆಯ ಕಾರಣಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಟೋಯಿಂದ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಧಿಕೃತ ಮಾಹಿತಿ ನೀಡಿದ್ದು, ಬಾಡಿಗೆ ಟೋಯಿಂಗ್ ವಾಹನ ಬಳಸದೇ ಪೊಲೀಸ್ ಇಲಾಖೆಯ ವಾಹನ ಬಳಸಿಕೊಂಡು ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿದು ಬಂದಿದೆ. ಅಂದಹಾಗೇ 2022ರಲ್ಲಿ ಬೆಂಗಳೂರಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ…

Read More

ಉತ್ತರ ಪ್ರದೇಶದ ಹಾರ್ಡೋಯ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮದುವೆಗೆ ಬಂದ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಸುಮಾ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಿ ಪಾಲಿ ಪೊಲೀಸ್ ಠಾಣೆ ಪ್ರದೇಶದ ಪಟಿಯಾನಿಮ್ ಗ್ರಾಮಕ್ಕೆ ಬಲಿಯಾದವರು ಹಿಂತಿರುಗುತ್ತಿದ್ದರು. ರಾಮ್‌ಸೇವಕ್ ಅವರ ಮಗ ನೀರಜ್ ವಿವಾಹವಾಗಿದ್ದಾಗ ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಕಾರು ಅತಿ ವೇಗವಾಗಿ ಚಲಿಸುತ್ತಿತ್ತು ಮತ್ತು ಅಲಮ್‌ನಗರ ರಸ್ತೆಯ ತೀಕ್ಷ್ಣವಾದ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡ ನಂತರ ಪಲ್ಟಿಯಾಗಿದೆ. ಈ ವಾಹನವು ಜಿತೇಂದ್ರ, ಅವರ ಮಗ ಸಿದ್ಧಾರ್ಥ್, ರಾಮು, ಆಕಾಶ್ ಮತ್ತು ಜೋಹ್ರಿ ಸೇರಿದಂತೆ 11 ಜನರನ್ನು ಹೊತ್ತೊಯ್ಯುತ್ತಿತ್ತು – ಎಲ್ಲರೂ ಪಟಿಯಾನಿಮ್ ನಿವಾಸಿಗಳು. ಐವರೂ ಸ್ಥಳದಲ್ಲೇ ಸಾವನ್ನಪ್ಪಿದರು ಅಥವಾ ಶಹಾಬಾದ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಇತರ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು…

Read More