Author: kannadanewsnow57

ನವದೆಹಲಿ : ಒಂದು ಪ್ರಮುಖ ಪೂರ್ವನಿದರ್ಶನವನ್ನು ಉಲ್ಲೇಖಿಸಿ, ಕಡ್ಡಾಯ ನಿವೃತ್ತಿ ಪಡೆದ ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರು ಸಹ ರಜೆ ನಗದೀಕರಣ ಪಡೆಯಲು ಅರ್ಹರು ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ವಿವೇಕ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಈ ಅಭಿಪ್ರಾಯದೊಂದಿಗೆ ಅರ್ಜಿದಾರ ಬ್ಯಾಂಕ್ ಅಧಿಕಾರಿಗೆ ಈ ಪ್ರಯೋಜನವನ್ನು ನೀಡುವಂತೆ ನಿರ್ದೇಶನ ನೀಡಿತು. ಅರ್ಜಿದಾರರಾದ ಶಹದೋಲ್ ನಿವಾಸಿ ರಾಮ್ ಕುಮಾರ್ ಗುಪ್ತಾ ಪರವಾಗಿ ವಕೀಲ ವಿಕಾಸ್ ಮಹಾವರ್ ಹಾಜರಾಗಿದ್ದರು. ಅರ್ಜಿದಾರರನ್ನು ಎಂಪಿ ಗ್ರಾಮೀಣ ಬ್ಯಾಂಕಿನಲ್ಲಿ ಸ್ಕೇಲ್ -1 ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಅವರು ವಾದಿಸಿದರು. ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಯಿತು. ಅರ್ಜಿದಾರರು ರಜೆ ನಗದೀಕರಣಕ್ಕಾಗಿ ಅರ್ಜಿ ಸಲ್ಲಿಸಿದಾಗ, ಬ್ಯಾಂಕ್ ಆಡಳಿತ ಮಂಡಳಿ ಅದನ್ನು ತಿರಸ್ಕರಿಸಿತು. 2022 ರಲ್ಲಿ, ಹೈಕೋರ್ಟ್ನ ಇಂದೋರ್ ಪೀಠವು ತನ್ನ ಆದೇಶದಲ್ಲಿ ಕಡ್ಡಾಯ ನಿವೃತ್ತಿಯ ಆದೇಶವು ಉದ್ಯೋಗಿಯು ರಜೆ ನಗದೀಕರಣದ ಪ್ರಯೋಜನವನ್ನು ಪಡೆಯುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಗ್ರಾಮೀಣ ಬ್ಯಾಂಕ್ ಸಲ್ಲಿಸಿದ್ದ…

Read More

ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಪಿಎಫ್ನಿಂದ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಹೆಚ್ಚು ಸುಲಭಗೊಳಿಸಿದೆ. ಇಪಿಎಫ್ಒ ಆಟೋ ಮೋಡ್ ಸೆಟಲ್ಮೆಂಟ್ ಅನ್ನು ಪರಿಚಯಿಸಿದೆ. ಇದರಿಂದ 6 ಕೋಟಿಗೂ ಹೆಚ್ಚು ಪಿಎಫ್ ಸದಸ್ಯರಿಗೆ ಅನುಕೂಲವಾಗಲಿದೆ. ಇದು ತುರ್ತು ಪರಿಸ್ಥಿತಿಯಲ್ಲಿ ಪಿಎಫ್ ಸದಸ್ಯರಿಗೆ ಹಣವನ್ನು ಒದಗಿಸುವ ಸೌಲಭ್ಯವಾಗಿದೆ. ಇದರ ಅಡಿಯಲ್ಲಿ, 3 ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಕಳುಹಿಸಲಾಗುತ್ತದೆ. ಆಟೋ-ಮೋಡ್ ಸೆಟಲ್ಮೆಂಟ್ ಅಡಿಯಲ್ಲಿ, ಉದ್ಯೋಗಿಗಳು ತುರ್ತು ಸಮಯದಲ್ಲಿ ತಮ್ಮ ಇಪಿಎಫ್ನಿಂದ ಹಣವನ್ನು ಹಿಂಪಡೆಯಬಹುದು. ಇಪಿಎಫ್ಒ ತನ್ನ ಚಂದಾದಾರರಿಗೆ ಕೆಲವು ರೀತಿಯ ತುರ್ತು ಪರಿಸ್ಥಿತಿಗಳಿಗಾಗಿ ನಿಧಿಯಿಂದ ಹಣವನ್ನು ಹಿಂಪಡೆಯಲು ಅನುಮತಿಸುತ್ತದೆ. ಇದರಲ್ಲಿ ತುರ್ತು ರೋಗದ ಚಿಕಿತ್ಸೆ, ಶಿಕ್ಷಣ, ಮದುವೆ ಮತ್ತು ಮನೆ ಖರೀದಿಸುವುದು ಸೇರಿವೆ. ಈ ತುರ್ತು ಸಂದರ್ಭಗಳಲ್ಲಿ, ನೀವು ಪಿಎಫ್ನಿಂದ ಹಣವನ್ನು ಹಿಂಪಡೆಯಬಹುದು. ಕ್ಲೈಮ್ ಇತ್ಯರ್ಥವನ್ನು ಆಟೋ ಮೋಡ್ ವ್ಯವಸ್ಥೆಯ ಮೂಲಕ ಮಾಡಲಾಗುತ್ತದೆ ತುರ್ತು ಪರಿಸ್ಥಿತಿಯಲ್ಲಿ ಈ ನಿಧಿಯ ಕ್ಲೈಮ್ ಇತ್ಯರ್ಥಕ್ಕಾಗಿ ಆಟೋ ಮೋಡ್ ಅನ್ನು ಏಪ್ರಿಲ್ 2020 ರಲ್ಲಿಯೇ…

Read More

ಬ್ಯಾಂಕಾಕ್ : ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ನಡೆದ 74ನೇ ಫಿಫಾ ಕಾಂಗ್ರೆಸ್ ನಲ್ಲಿ ಬ್ರೆಜಿಲ್ 2027ರಲ್ಲಿ ನಡೆಯಲಿರುವ 10ನೇ ಫಿಫಾ ಮಹಿಳಾ ವಿಶ್ವಕಪ್ ನ ಆತಿಥ್ಯ ವಹಿಸಲಿದೆ. ಅತ್ಯಂತ ಸಮಗ್ರ ಫಿಫಾ ಮಹಿಳಾ ವಿಶ್ವಕಪ್ ಬಿಡ್ಡಿಂಗ್ ಪ್ರಕ್ರಿಯೆಯ ನಂತರ ಈ ಪ್ರಕಟಣೆ ಬಂದಿದೆ ಮತ್ತು ಮೊದಲ ಬಾರಿಗೆ ಫಿಫಾ ಕಾಂಗ್ರೆಸ್ನಲ್ಲಿ ಮುಕ್ತ ಮತದಾನದ ಮೂಲಕ ನಿರ್ಧರಿಸಲಾಯಿತು. ಬ್ರೆಜಿಲ್ 119 ಮತಗಳನ್ನು ಪಡೆದರೆ, ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಜರ್ಮನಿಯ ಜಂಟಿ ಬಿಡ್ 78 ಮತಗಳನ್ನು ಪಡೆಯಿತು.

Read More

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

Read More

ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಕೇಸ್ ಗೆ ಬಿಗ್ ಟ್ವಿಸ್ಟನ್ನು ಎಸ್ಐಟಿ ಅಧಿಕಾರಿಗಳ ವಶದಲ್ಲಿರುವಂತ ವಕೀಲ ದೇವರಾಜೇಗೌಡ ನೀಡಿದ್ದಾರೆ. ಅದೇ ಅಶ್ಲೀಲ ವೀಡಿಯೋ ವೈರಲ್ ಕೇಸ್ ಹಿಂದೆ ಇರೋದೇ ಡಿಕೆ ಶಿವಕುಮಾರ್. ಈ ವೀಡಿಯೋ ವೈರಲ್ ಮಾಡೋದಕ್ಕಾಗಿ ನನಗೆ 100 ಕೋಟಿ ಆಫರ್ ನೀಡಿದ್ರು. 5 ಕೋಟಿ ಅಡ್ವಾನ್ ಕೂಡ ಕೊಡೋದಕ್ಕೆ ಬಂದಿದ್ರು ಅಂತ ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಕೋರ್ಟ್ ಗೆ ಹಾಜರಾದಂತ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ. ಮೋದಿ, ಬಿಜೆಪಿ, ಹೆಚ್ ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ತರೋದಕ್ಕೆ ನನಗೆ 100 ಕೋಟಿ ಆಫರ್ ನೀಡಿದ್ರು ಅಂತ ಗಂಭೀರ ಆರೋಪ ಮಾಡಿದ್ದಾರೆ. ಡಿಕೆಶಿ ನನಗೆ ಕರೆದು ದೊಡ್ಡ ಮಟ್ಟದ ಆಫರ್ ನೀಡಿದ್ರು. ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಹಂಚಿದ್ದಾರೆ ಅಂತ ಹೇಳೋದಕ್ಕೆ ನನಗೆ ಡಿ.ಕೆ ಶಿವಕುಮಾರ್ ಹೇಳಿದ್ರು…

Read More

ಹೈದರಾಬಾದ್ : ತ್ರಿನಯನಿ ನಟಿ ಪವಿತ್ರಾ ಜಯರಾಮ್ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕಾರ್ತಿಕ ದೀಪಂ’, ‘ರಾಧಮ್ಮ ಪೆಲ್ಲಿ’, ‘ತ್ರಿನಯನಿ’ ಮತ್ತು ಇತರ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಚಂದು ಅವರು ಮೇ 12 ರಂದು ಆಂಧ್ರಪ್ರದೇಶದ ಕರ್ನೂಲ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಟಿವಿ ನಟಿ ಪವಿತ್ರಾ ಜಯರಾಮ್ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ನರಸಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೋನಿಯಲ್ಲಿರುವ ತನ್ನ ನಿವಾಸದಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತ್ರಿನಯನಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಚಂದು ಹೆಸರುವಾಸಿಯಾಗಿದ್ದಾರೆ. 2015 ರಲ್ಲಿ ಶಿಲ್ಪಾ ಅವರನ್ನು ವಿವಾಹವಾದ ಚಂದು ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಚಂದು ಕಳೆದ ಆರು ವರ್ಷಗಳಿಂದ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರೊಂದಿಗೆ ಸಂಬಂಧ ಹೊಂದಿದ್ದರು. ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲು ಬಯಸಿದ್ದರು. ಆದರೆ, ಈ ಮಧ್ಯೆ ಪವಿತ್ರಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಕೆ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಹೈದರಾಬಾದ್ ಗೆ…

Read More

ಬೆಂಗಳೂರು : ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ವಲಸೆ ಪ್ರಮಾಣ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶೈಕ್ಷಣಿಕ ವಿಭಾಗದಿಂದ ನೀಡಲಾಗುತ್ತಿರುವ ವಿದ್ಯಾರ್ಥಿಗಳ ដ (Students Migration Certificates) , ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬೆಂಗಳೂರು ಇವರಿಗೆ ಪ್ರತ್ಯಾಯೋಜಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ವಲಸೆ ಪ್ರಮಾಣ ಪತ್ರವನ್ನು (Students Migration Certificates) ONLINE , ಮುಖಾಂತರ ಪಡೆಯಲು ಮಂಡಳಿಯು ಜಾಲತಾಣದಲ್ಲಿ (https://kseab.karnataka.gov.in) ಅವಕಾಶ ಕಲ್ಪಿಸಲಾಗಿದೆ.

Read More

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಸುವಂತ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ 2024ನೇ ಸಾಲಿನ ಎರಡನೇ ವರ್ಷದ, ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತಿದೆ ಎಂದಿದೆ. ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಅರ್ಹ ಡಿಪ್ಲೋಮಾ ಅಭ್ಯರ್ಥಿಗಳು 20-05-2024ರ ಬೆಳಿಗ್ಗೆ 11 ಗಂಟೆಯಿಂದ 23-05-2024ರ ರಾತ್ರಿ 11.59ರವರೆಗೆ ನೋಂದಣಿ ಮಾಡಿ, ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಿ, 24-05-2024ರೊಳೆಗೆ ಶುಲ್ಕವನ್ನು ಪಾವತಿಸುವಂತೆ ತಿಳಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ಗೆ ಭೇಟಿ ನೀಡಿ, ಪಡೆಯುವಂತೆ ತಿಳಿಸಿದೆ.

Read More

ಬೆಂಗಳೂರು : ರಾಜ್ಯ ಸರಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬರ ಪರಿಹಾರ, ಪಿಂಚಣಿ ಹಣವನ್ನು ರೈತರ ಅನುಮತಿ ಇಲ್ಲದೆ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಸೂಚಿಸಿದ್ದಾರೆ. ಕೆಲವು ಕಡೆ ಬ್ಯಾಂಕಗಳು ಪರಿಹಾರ ಹಣವನ್ನು ರೈತರ ಸಾಲಕ್ಕೆ ಹೊಂದಿಸುತ್ತಿರುವ ಕುರಿತು ದೂರು, ವರದಿಗಳು ಬರುತ್ತಿವೆ. ಈ ವಿಷಯದಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ  ಬೇಸಿಗೆ ರಜೆ ಅವಧಿಯಲ್ಲಿ ವಿಶೇಷ ಬೋಧನಾ ತರಗತಿ ನಡೆಸಲು ಪ್ರೌಢಶಾಲಾ ಶಿಕ್ಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆಗೆ ಅಡ್ಡಿಯಾಗದಂತೆ ವಿಶೇಷ ತರಗತಿಗಳ ಜೊತೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ໖:15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ…

Read More