Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಫೆಬ್ರವರಿ/ಮಾರ್ಚ್ 2026 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ ನಡೆಸುತ್ತಿರುವ ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ:15-10-2025 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ONLINE ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇರವಾಗಿ ಕಾಲೇಜಿನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ. ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಕಡ್ಡಾಯವಾಗಿ ಇರಬೇಕಾದ ಅರ್ಹತೆಗಳು ಹಾಗೂ ಸೂಚನೆಗಳು: 1. ದಿನಾಂಕ: 31-03-2026 ಕ್ಕೆ 17 ವರ್ಷಗಳು ತುಂಬಿರಬೇಕು. (31-03-2009 ರಂದು ಅಥವಾ ಅದಕ್ಕಿಂತ ಹಿಂದೆ…
ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ, ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು. ಹೌದು, ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು. ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಟೋಬರ್ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಅಕ್ಕಿ ಹಾಗೂ ಪಿ.ಹೆಚ್.ಹೆಚ್. ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಅಕ್ಟೋಬರ್ ತಿಂಗಳ ಕೊನೆಯವರೆಗೆ ಪ್ರತಿದಿನ ಬೆಳಿಗ್ಗೆ ಎಂಟರಿಂದ ರಾತ್ರಿ ಎಂಟು ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಸರಿಯಾದ ಪ್ರಮಾಣದಲ್ಲಿ ಪಡಿತರ ವಿತರಿಸಬೇಕು. ಒಂದು ವೇಳೆ ಲೋಪ ದೋಷ ಕಂಡು…
ಬೆಂಗಳೂರು: ವಿಮಾನದಲ್ಲಿ ಬಾಂಬ್ ಇದೆ ಎಂದು ಬರೆದು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿರುವ ಘಟನೆ ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದಿದೆ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್ ನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿದ್ದಾನೆ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ 6E4814 ವಿಮಾನದಲ್ಲಿ 168 ಪ್ರಯಾಣಿಕರಿದ್ದರು. ವ್ಯಕ್ತಿಯ ಹುಚ್ಚಾಟದಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಬಾಂಬ್ ಎಂಬ ಪದ ನೋಡಿ ಪ್ರಯಾಣಿಕರು ಆತಂಕಗೊಂಡಿದ್ದರು. ಕೂಡಲೇ ಪೈಲಟ್ ಬೆಂಗಳೂರಿಗೆ ವಿಮಾಣವನ್ನು ಡೈವರ್ಟ್ ಮಾಡಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡ್ ಮಾಡಲಾಗಿದೆ. ಬಳಿಕ ಬಾಂಬ್ ನಿಷ್ಕ್ರಿಯ ಸಿಬ್ಬಂದಿ, ಶ್ವಾನದಳ ಸಿಬ್ಬಂದಿ ವಿಮಾವನ್ನು ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಯಾವ ಸ್ಪೋಟಕ ವಸ್ತುಗಳೂ ಪತ್ತೆಯಾಗಿಲ್ಲ. ಪೊಲೀಸರು ಮಾಹಿತಿಯಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಇಂದಿನ ಮಕ್ಕಳಿಗೆ ಮೊಬೈಲ್ ಕೊಡುವುದಕ್ಕಿಂತ ಹೆಚ್ಚೇನೂ ಬೇಕಾಗಿಲ್ಲ. ಅವರು ಇಡೀ ದಿನವನ್ನು ಕಾರ್ಟೂನ್ ವೀಡಿಯೊಗಳು ಮತ್ತು ಆಟಗಳೊಂದಿಗೆ ಕಳೆಯುತ್ತಾರೆ. ಪಾಲಕರು ತಮ್ಮ ಕೆಲಸ ಮಾಡಲು ಬಾಲ್ಯದಿಂದಲೇ ಮಕ್ಕಳನ್ನ ಮೊಬೈಲ್’ಗೆ ಒಗ್ಗಿಸಿ ಬಿಡ್ತಾರೆ. ಇದರಿಂದಾಗಿ ಮಕ್ಕಳಿಗೆ ಸ್ಮಾರ್ಟ್ ಫೋನ್ ಚಟವಾಗಿ ಪರಿಣಮಿಸಿದೆ. ಆದಾಗ್ಯೂ, ಮಕ್ಕಳು ಪದೇ ಪದೇ ಫೋನ್ ಬಳಸುವುದರಿಂದ ಒಹೆಚ್ಚು ಹಾನಿಯಾಗಬಹುದು ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಸ್ಕ್ರೀನ್ ಟೈಮ್ ಹೆಚ್ಚಾದಂತೆ ಸ್ಥೂಲಕಾಯದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಸಂಶೋಧನೆ ತೋರಿಸಿದೆ. ಯುವಕರಲ್ಲಿ ಸ್ಥೂಲಕಾಯದ ಸಮಸ್ಯೆ ತುಂಬಾ ಹೆಚ್ಚಾಗಿದೆ. ದಿನವಿಡೀ ಮೊಬೈಲ್ ಫೋನಿನತ್ತ ಕಣ್ಣು ಹಾಯಿಸುವುದು ಕ್ರೀಡೆಯಲ್ಲೂ ಹಿಂಜರಿಕೆಗೆ ಕಾರಣವಾಗುತ್ತದೆ ಎಂದು ಅಧ್ಯಯನ ತಿಳಿಸಿದೆ. ತಜ್ಞರ ಪ್ರಕಾರ, ಮೊಬೈಲ್ ಪರದೆಯನ್ನ ದೀರ್ಘಕಾಲ ನೋಡುವುದು ಮಕ್ಕಳಿಗೆ ಅಪಾಯಕಾರಿ. ಆಟದ ಸಮಯದಲ್ಲಿ ಫೋನ್’ಗಳ ಚಟದಿಂದ ಮಕ್ಕಳ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ಪರಿಣಾಮವಾಗಿ, ದೇಹದ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಾಧ್ಯವಾಗುದಿಲ್ಲ. ಹೀಗಾಗಿ ತೂಕ ಹೆಚ್ಚಾಗುತ್ತದೆ. ಸ್ಥೂಲಕಾಯದಂತಹ ಕಾಯಿಲೆಗಳಿಂದ ಮಕ್ಕಳನ್ನು ದೂರವಿರಿಸಲು ಕನಿಷ್ಠ 60 ನಿಮಿಷಗಳ…
ಬೆಂಗಳೂರು : ಆರೋಗ್ಯ ಇಲಾಖೆಯಡಿ ಕುಂದುಕೊರತೆ ಪರಿಹಾರಕ್ಕೆ ವಿನೂತನ ವ್ಯವಸ್ಥೆ ಜಾರಿಗೆ ತರಲಾಗಿದ್ದು, ವಾಟ್ಸಪ್ ಮೂಲಕ ನಿಮ್ಮ ಸಮಸ್ಯೆಯನ್ನು ವರದಿ ಮಾಡಬಹುದು. ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆಯಿದೆಯೇ? ಸಂಪರ್ಕಿಸಲು ಒಂದು ಮೆಸೇಜ್ ಸಾಕು. ವಾಟ್ಸಾಪ್ ಮೂಲಕ ನಮಗೆ ಮೆಸೇಜ್ ಮಾಡಿ, ಅಗತ್ಯವಿದ್ದರೆ ಫೋಟೋ/ವೀಡಿಯೊಗಳನ್ನು ಲಗತ್ತಿಸಿ. ನಿಮ್ಮ ಸಮಸ್ಯೆಯನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ವಾಟ್ಸಪ್ ಸಂಖ್ಯೆ- 9449843001- ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು, ಕೇವಲ ಸಂದೇಶಗಳನ್ನು ಮಾತ್ರ ಸ್ವೀಕರಿಸಲಾಗುವುದು. ದೂರವಾಣಿ ಕರೆಗಳಿಗೆ ಉತ್ತರಿಸಲಾಗುವುದಿಲ್ಲ.
ಬೆಂಗಳೂರು : ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪ್ರತಿ ಮಾಹೆ ನಿಯಮಿತವಾಗಿ ವೇತನ ಪಾವತಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ. ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ ಮತ್ತು ವೇತನ ಪಾವತಿ ಮಾಡದೇ ಇರುವ ಕುರಿತಾಗಿ ಸರ್ಕಾರದಲ್ಲಿ ಹಲವಾರು ದೂರುಗಳು ಸ್ವೀಕೃತಗೊಳ್ಳುತ್ತಿವೆ. ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ಸಹ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳ ವೇತನ ಪಾವತಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಪ್ರಸ್ತುತ ಅವಧಿಯವರೆಗೆ ವೇತನ ಪಾವತಿಗೆ ಬಾಕಿಯಿರುವ ಎಲ್ಲಾ ಗ್ರಾಮ ಪಂಚಾಯಿತಿ…
ನವದೆಹಲಿ : ಜೈಲಿನಲ್ಲಿರುವ ಬಡ ಕೈದಿಗಳ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಒಂದು ವಿಶಿಷ್ಟವಾದ SOP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಅನ್ನು ರೂಪಿಸಿದೆ. ಅಪರಾಧಕ್ಕಾಗಿ ಬಂಧಿಸಲ್ಪಟ್ಟು ವಿಚಾರಣೆಯ ಸಮಯದಲ್ಲಿ ಜೈಲಿನಲ್ಲಿರುವ ಯಾವುದೇ ಬಡ ವ್ಯಕ್ತಿ ಜಾಮೀನು ಪಾವತಿಸಲು ಸಾಧ್ಯವಾಗದಿದ್ದರೆ, ಸರ್ಕಾರವು ಅವರ ಬಿಡುಗಡೆಯನ್ನು ಖಚಿತಪಡಿಸುತ್ತದೆ ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಸರ್ಕಾರವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಭದ್ರತಾ ಠೇವಣಿಯನ್ನು ಒದಗಿಸುತ್ತದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಈ ಹೊಸ SOP ಅನ್ನು ಸುಪ್ರೀಂ ಕೋರ್ಟ್ ಅಮಿಕಸ್ ಕ್ಯೂರಿ (ಅಮಿಕಸ್ ಕ್ಯೂರಿ) ಅವರ ಸಲಹೆಗಳನ್ನು ಒಳಗೊಂಡಂತೆ ಅಭಿವೃದ್ಧಿಪಡಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಎಸ್.ಸಿ. ಶರ್ಮಾ ಅವರ ಪೀಠವು ಅಮಿಕಸ್ ಕ್ಯೂರಿ ಮತ್ತು ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಹಾಗೂ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರ ಸಲಹೆಗಳನ್ನು ಒಳಗೊಂಡಿದೆ. ಜಾಮೀನು ಬಾಂಡ್ ಪಾವತಿಸಲು ಸಾಧ್ಯವಾಗದ ಕಾರಣ ಸಾವಿರಾರು ವಿಚಾರಣಾಧೀನ ಕೈದಿಗಳು ಜಾಮೀನು ಪಡೆದಿದ್ದರೂ ಜೈಲಿನಲ್ಲೇ ಇದ್ದಾರೆ ಎಂದು ತಿಳಿದಾಗ ಸುಪ್ರೀಂ…
ಬಳ್ಳಾರಿ : ಬರುವ ನವೆಂಬರ್ 04 ರಿಂದ 11 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಶುಕ್ರವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು. ವಿವಿಧ ಸಮಿತಿಗಳಲ್ಲಿನ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ಸೇನಾ ನೇಮಕಾತಿಗೆ ಸಂಬAಧಿಸಿದAತೆ ಇದೊಂದು ವಿಶೇಷ ರ್ಯಾಲಿಯಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ನಮ್ಮ ಜಿಲ್ಲೆಯ ವಿದ್ಯಾರ್ಥಿ, ಯುವಜನರಿಗೆ ಸ್ಪೂರ್ತಿ ಸಿಗುವ ಹಾಗೆ ರ್ಯಾಲಿಯು ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳ ಸಹಕಾರ ಬೇಕಾಗಿದೆ. ಹಾಗಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹೆಚ್ಚು ಸಮನ್ವಯದಿಂದ ಕಾರ್ಯನಿರ್ವಹಣೆ…
ಚಿತ್ತಾಪುರ : ಚಿತ್ತಾಪುರ ಕ್ಷೇತ್ರದಲ್ಲಿ ಇಂದು ಆರ್ ಎಸ್ಎಸ್ ಪಥಸಂಚಲನಕ್ಕೆ ಬ್ರೇಕ್ ಹಾಕಲಾಗಿದ್ದು, ಆರ್ ಎಸ್ ಎಸ್ ಪಥಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅನುಮತಿ ನಿರಾಕರಿಸಿದ್ದಾರೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸದಂತೆ ಉಲ್ಲೇಖಿತ (1) ರನ್ವಯ ತಾವು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತಿರುವ ಹಿನ್ನಲೆ ಹಾಗೂ ವಿಜಯದಶಮಿ ಉತ್ಸವದ ಹಿನ್ನಲೆಯಲ್ಲಿ ಚಿತ್ತಾಪೂರ ನಗರದಲ್ಲಿ ದಿನಾಂಕ; 19-10-2025 ರಂದು ಮಧ್ಯಾಹ್ನ 3-00 ಗಂಟೆಗೆ ತಾಲೂಕಿನ ಪಥ ಸಂಚಲನ ಹಾಗೂ ವಿಜಯದಶಮಿ ಕಾರ್ಯಕ್ರಮವನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದ್ದು, ಎಂದು ಮನವಿ ಪತ್ರದ ಮೂಲಕ ಅನುಮತಿ ನೀಡಬೇಕೇಂದು ವಿನಂತಿ ಪತ್ರ ಸಲ್ಲಿಸಿರುತ್ತಿರಿ. ಪ್ರಯುಕ್ತ ತಮ್ಮ ಮನವಿಯಂತೆ ಉಲ್ಲೇಖಿತ (2) ರನ್ವಯ ಈ ಕಛೇರಿಯ ಪತ್ರದನ್ವಯ ವರದಿ ಸಲ್ಲಿಸಲು ಆರಕ್ಷಕ ಉಪ ನಿರೀಕ್ಷಕರು ಪೋಲಿಸ್ ಠಾಣೆ ಚಿತ್ತಾಪೂರ ರವರಿಗೆ ವರದಿ ಸಲ್ಲಿಸಲು ಪತ್ರ ಬರೆಯಲಾಗಿರುತ್ತದೆ. ಅದರಂತೆ ಉಲ್ಲೇಖಿತ (3) ರನ್ವಯ ದಿನಾಂಕ; 19-10-2025 ರಂದು ಚಿತ್ತಾಪೂರ ಪಟ್ಟಣದಲ್ಲಿ ನಡೆಯುವ ಆರ್.ಎಸ್.ಎಸ್. ಸಂಘದ ವತಿಯಿಂದ ವಿಜಯ…
ನಾಸಿಕ್ : ಮಹಾರಾಷ್ಟ್ರದ ನಾಸಿಕ್ ರೈಲು ನಿಲ್ದಾಣದಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ಮುಂಬೈನಿಂದ ಬಿಹಾರಕ್ಕೆ ಹೋಗುತ್ತಿದ್ದ ಕರ್ಮಭೂಮಿ ಎಕ್ಸ್ಪ್ರೆಸ್ ಅನ್ನು ಹಿಡಿಯಲು ಪ್ರಯತ್ನಿಸುತ್ತಿದ್ದ ಮೂವರು ಪ್ರಯಾಣಿಕರು ರೈಲು ಡಿಕ್ಕಿ ಹೊಡೆದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಗಂಭೀರವಾಗಿ ಗಾಯಗೊಂಡರು. ವರದಿಗಳ ಪ್ರಕಾರ, ಹಬ್ಬದ ಸಮಯದಲ್ಲಿ ಮುಂಬೈ ಮತ್ತು ಮಹಾರಾಷ್ಟ್ರದ ಇತರ ನಗರಗಳಿಂದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ಹಳ್ಳಿಗಳಿಗೆ ಮರಳುತ್ತಿದ್ದಾರೆ. ಏತನ್ಮಧ್ಯೆ, ನಾಸಿಕ್ ನಿಲ್ದಾಣದಲ್ಲಿ ರೈಲು ಹಿಡಿಯುವ ಧಾವಿಸಿ ಇಬ್ಬರು ಪ್ರಯಾಣಿಕರನ್ನು ಬಲಿ ತೆಗೆದುಕೊಂಡಿತು.














