Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಹತ್ತಿರದ ಲಸಿಕಾ ಕೇಂದ್ರ ಪತ್ತೆಗೆ ‘Nearby Vaccination centre Karnataka’ ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು, ಕೇಂದ್ರ ಹುಡುಕಬಹುದು…
ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು 2015 ರ ಏಪ್ರಿಲ್, 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈಣನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಅದರಂತೆ ಜನನ ಮರಣ ನೋಂದಣಿ(ತಿದ್ದುಪಡಿ-2023) ಅಧಿನಿಯಮ 1960, ಕರ್ನಾಟಕ ಜನನ ಮರಣ ನೋಂದಣಿ (ತಿದ್ದುಪಡಿ 2024) ರಂತೆ ನಿಯಮಗಳಲ್ಲಿ ಕೆಲವು ಮಾರ್ಪಾಡಾಗಿದ್ದು, ಅದರಂತೆ ನಿಯಮಗಳನ್ನು ಪಾಲಿಸಬೇಕಾಗಿ ಕೋರಿದೆ. ಜನನ ಮರಣ ನೋಂದಣಿಯಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಪ್ರಮುಖ ಅಂಶಗಳು; ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನಮೂನೆ-1 ರ ಕಾಲಂ 4 ಮತ್ತು 5 ರಲ್ಲಿ ತಂದೆ ತಾಯಿಗಳ ಆಧಾರ್ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ…
ವಿಷಪೂರಿತ ಜೇಡದೊಂದಿಗೆ ಮಹಿಳೆಯೊಬ್ಬಳ ದೇಹ ಹಾವಿನ ಪೊರೆಯಂತಾಗಿದ್ದು, ಸದ್ಯ ಘಟನೆ ವೈರಲ್ ಆಗಿದ್ದು, ಲಕ್ಷಣಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡರೂ ಸಹ, ಕಂದು ಏಕಾಂತ ಜೇಡ ಕಡಿತವು ಎಷ್ಟು ಅಪಾಯಕಾರಿ ಎಂಬುದರ ಮೇಲೆ ಬೆಳಕು ಚೆಲ್ಲುತ್ತದೆ. ಕೆಲವು ಕ್ಷಣಗಳ ಹಿಂದೆ ಆರೋಗ್ಯವಾಗಿದ್ದ ಮೈನಿಟಾ ಎಸ್., ಕಂದು ಏಕಾಂತ ಜೇಡದಿಂದ ಕಚ್ಚಿದ ನಂತರ ಜೀವನವನ್ನು ಬದಲಾಯಿಸುವ ವೈದ್ಯಕೀಯ ತುರ್ತುಸ್ಥಿತಿಯನ್ನು ಅನುಭವಿಸಿದರು. ನಂತರ ಅವರು ತಮ್ಮ ಅಗ್ನಿಪರೀಕ್ಷೆಯನ್ನು ಹಂಚಿಕೊಳ್ಳಲು ಇನ್ಸ್ಟಾಗ್ರಾಮ್ಗೆ ಕರೆದೊಯ್ದರು, ಕಚ್ಚುವಿಕೆಯು ವಾರಗಳ ಕಾಲ ಆಸ್ಪತ್ರೆಗೆ ದಾಖಲಾಗಲು ಮತ್ತು ಡಿಸ್ಚಾರ್ಜ್ ಆದ ನಂತರ ದೀರ್ಘಕಾಲದವರೆಗೆ ಪರಿಣಾಮ ಬೀರಿತು ಎಂದು ಬಹಿರಂಗಪಡಿಸಿದರು. ಘಟನೆಯನ್ನು ನೆನಪಿಸಿಕೊಳ್ಳುತ್ತಾ, ಮೈನಿಟಾ ಬರೆದಿದ್ದಾರೆ, “ಮೇ 17, 2025 ರಂದು ನನಗೆ ಅನಿರೀಕ್ಷಿತವಾದದ್ದು ಸಂಭವಿಸಿದೆ. ಬ್ರೌನ್ ಏಕಾಂತ ಜೇಡವು ನನ್ನನ್ನು ಕಚ್ಚಿದ್ದರಿಂದ ನಾನು ಎರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದೆ.” ಅನುಭವವನ್ನು ಹೆಚ್ಚು ಆತಂಕಕಾರಿಯನ್ನಾಗಿ ಮಾಡಿದ್ದು ಅವಳ ಸ್ಥಿತಿ ಎಷ್ಟು ಹಠಾತ್ತನೆ ಹದಗೆಟ್ಟಿತು. ಹಠಾತ್ ಮತ್ತು ತೀವ್ರ ಲಕ್ಷಣಗಳು ಮೈನಿಟಾ ಪ್ರಕಾರ, ಲಕ್ಷಣಗಳು ಯಾವುದೇ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮಿನ ತೊಗರಿ ಉತ್ಪನ್ನ ಖರೀದಿಸುವ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಆದೇಶಿಸಿರುವುದರಿಂದ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಖರೀದಿಸಲಾಗುವುದು ಎಂದರು. ಪ್ರತಿ ಕ್ವಿಂಟಾಲ್ ಗೆ ರೂ.8 ಸಾವಿರದಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ನಂತೆ ಫ್ರೂಟ್ಸ್ ತಂತ್ರಾAಶದಲ್ಲಿ ಲಭ್ಯವಾಗುವ ರೈತರು ತೊಗರಿ ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ತೊಗರಿ ಖರೀದಿಸಲಾಗುತ್ತದೆ. ಬೆಂಬಲ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾAಶದ ಆಧಾರದ ಮೇಲೆ ರೈತರಿಂದ…
ಬೆಂಗಳೂರು : ರಾಜ್ಯದಲ್ಲಿ ತಾಪಮಾನ ಕುಸಿತವಾಗಿದ್ದು, ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಈ ನಡುವೆ ಇನ್ನೂ 2 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಹೌದು,ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯು ತೀವ್ರವಾಗಿರುವ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಶೀತ ಅಲೆ ಇರಲಿದ್ದು, ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ಸಾರ್ವಜನಿಕರೇ ಎಚ್ಚರ, ಹೊಸ ವರ್ಷಕ್ಕೆ ನಿಮ್ಮ ವಾಟ್ಸಪ್ ಗೆ ಅಪರಿಚಿತರು ಕಳುಹಿಸುವ `APK’ ಶುಭಾಶಯ ಲಿಂಕ್ಗಳ ಮೇಲೆ ಕ್ಲಿಕ್ ಮಾಡಬೇಡಿ. ಹೌದು, ಅಪರಿಚಿತರು ಲಿಂಕ್ನೊಂದಿಗೆ ಹೊಸ ವರ್ಷದ ಶುಭಾಶಯ ಸಂದೇಶವನ್ನು ಕಳುಹಿಸುತ್ತಾರೆ, ಶುಭಾಶಯ ಪತ್ರಗಳನ್ನು ಕಳುಹಿಸಲು APK ಇನ್ಸಾಲ್ ಮಾಡಲು ನಿಮ್ಮನ್ನು ಕೇಳಲಾಗುತ್ತದೆ. ಒಮ್ಮೆ ಇನ್ಸಾಲ್ ಮಾಡಿದ ನಂತರ, ಸೈಬರ್ ವಂಚಕರು ನಿಮ್ಮ ಫೋಟೋಗಳು, ಸಂಪರ್ಕಗಳು, OTP ಗಳು ಮತ್ತು ಬ್ಯಾಂಕಿಂಗ್ ಡೇಟಾವನ್ನು ಕದಿಯಬಹುದು. ಸುರಕ್ಷಿತವಾಗಿರಲು ಸಲಹೆಗಳು ಲಿಂಕ್ಗಳಿಂದ APK ಗಳನ್ನು ಎಂದಿಗೂ ಇನ್ಸಾಲ್ ಮಾಡದಿರಿ ಅಧಿಕೃತ ಅಪ್ಲಿಕೇಶನ್ ಸ್ಟೋರ್ಗಳನ್ನು ಬಳಸಿ ಕ್ಲಿಕ್ ಮಾಡುವ ಮೊದಲು ಕಳುಹಿಸುವವರೊಂದಿಗೆ ಪರಿಶೀಲಿಸಿ ಸಂದೇಹವಿದ್ದರೆ, ಕ್ಲಿಕ್ ಮಾಡಬೇಡಿ ನಿಮ್ಮ ಕುಟುಂಬ ಮತ್ತು ಸ್ನೇಹಿತರನ್ನು ರಕ್ಷಿಸಲು ಇದನ್ನು ಹಂಚಿಕೊಳ್ಳಿ
ಬೆಂಗಳೂರು : ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register) ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ/ಸಂಘ ಸಂಸ್ಥೆಗಳಿಂದ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಈ ಕುರಿತು ಈ ಹಿಂದೆ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳನ್ನು ಪಾಲನೆ ಮಾಡದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ. ಚಲನಾ ನೋಂದಣಿ ಕಚೇರಿ ವೇಳೆಯಲ್ಲಿ ಸರ್ಕಾರಿ ನೌಕರರ ಚಲನವಲನವನ್ನು ನಿಯಂತ್ರಿಸಲು ಚಲನವಲನ ವಹಿಯ ನಿರ್ವಹಣೆ ಬಗ್ಗೆ ಸುತ್ತೋಲೆ ಸಂಖ್ಯೆ: ಸಿಆಸುಇ 02 ತಎಇ 2016, ದಿನಾಂಕ: 12.04.2016, ಸಿಆಸುಇ 05 ಕತವ 2020, ໖:07.02.2020 ಹಾಗೂ /4464335/2025, ໖:25.07.2022 , 03, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಚಲನವಲನ ವಹಿ (Movement Register) ಯನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿದೆ. ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸರ್ಕಾರಿ ಕಚೇರಿಗಳ ನಿಗದಿತ ಪ್ರಾರಂಭ ಸಮಯವಾದ…
ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ಶಿಶು ಪಾಲನಾ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧನಾ ಸಿಬ್ಬಂದಿಗಳಿಗೆ ಶಿಶು ಪಾಲನಾ ರಜೆಯನ್ನು ನೀಡಬೇಕಾದರೆ ಸಂಬಂಧಿತ ಬೋಧಕರ ರಜೆ ಅವಧಿಯಲ್ಲಿ ಪರ್ಯಾಯ ಬೋಧಕ ವ್ಯವಸ್ಥೆಯನ್ನು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ತನ್ನ ಸ್ವಂತ ಸಂಪನ್ಮೂಲದಿಂದ ಭರಿಸಿದ್ದಲ್ಲಿ ಸದರಿ ಪ್ರಸ್ತಾವನೆಯನ್ನು ಒಪ್ಪಬಹುದಾಗಿದೆ ಎಂದು ನಿರ್ದೇಶಿಸಿದ್ದು, ಇದನ್ನು ತಮ್ಮ ಕಛೇರಿ ವ್ಯಾಪ್ತಿಯ ಖಾಸಗಿ ಅನುದಾನಿತ ಕಾಲೇಜುಗಳ ಗಮನಕ್ಕೆ ತರಲು ಈ ಮೂಲಕ ತಿಳಿಸಲಾಗಿದೆ.
ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳು ಕಂಪ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರಕುತ್ತದೆ ಎಂದು ಈ ಹಿಂದೆ ಕಂದಾಯ ಜಮೀನಿನ ನಿವೇಶನಗಳಲ್ಲಿ ಜಮೀನಿನ ಮಾಲೀಕರೊಂದಿಗೆ ಅಗ್ರೀಮೆಂಟ್ ಪತ್ರ ಮಾಡಿಕೊಂಡು ಖರೀದಿಸಿ, ಈಗಾಗಲೇ ವಸತಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ, ಇಂತಹ ಪ್ರಕರಣಗಳು ರಾಜ್ಯಾದ್ಯಂತ ಇವೆ. ಹೀಗಾಗಿ ಇಂತಹವರಿಗೆ ದಾಖಲೆಗಳನ್ನು ಪರಿಶೀಲಿಸಿ, ಹಕ್ಕುಪತ್ರ ಕೊಡಿಸಿ, ಇವರಿಗೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಮನವಿ ಮಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು…
BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
ಬೆಂಗಳೂರು : ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳವಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರಲ್ಲಿನ ಸರ್ಕಾರದ ಆದೇಶ ದಿನಾಂಕ:01/04/2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿದ್ದು, ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿರುತ್ತದೆ. ಅದರಂತೆ ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30/06/2024 ರೊಳಗೆ ಅಭಿಮತವನ್ನು ಪಡೆದು ಕ್ರೂಡೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿರುತ್ತದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿನ ಸರ್ಕಾರದ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಹಿಂದಿನ ಡಿಫೈನ್ಸ್ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರ ಎನ್ಪಿಎಸ್ ಪ್ರಾನ್ ಖಾತೆಯಲ್ಲಿನ…














