Author: kannadanewsnow57

ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿ ಶಾಮಕ, ತುರ್ತು ಸೇವೆಗಳ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಮೂಹ ಅಪಘಾತ ವಿಮಾ ಯೋಜನೆಯ ವಿಮಾ ಮೊತ್ತವನ್ನು ರೂ,20.00 ಲಕ್ಷದಿಂದ 50 ಲಕ್ಷಗಳವರೆಗೆ ಹೆಚ್ಚಿಸಿ  ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದನ್ವಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ. ಆದ್ದರಿಂದ ಸದರಿ ಸುತ್ತೋಲೆಯಲ್ಲಿ ನಮೂದಿರುವ ಸೇವಾ ಸೌಲಭ್ಯವನ್ನು ಎಲ್ಲಾ ಅಗ್ನಿಶಾಮಕ ಠಾಣಾಧಿಕಾರಿಗಳು ಹಾಜರಾತಿ (ರೋಲ್ ಕಾಲ್) ಸಮಯದಲ್ಲಿ ಕರ್ತವ್ಯ…

Read More

ಬೆಂಗಳೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಂದರ್ಭದಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದಂತೆ ಇತರೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು…

Read More

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಹೌದು, 2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೂರನೇ ತೈಮಾಸಿಕ ಕಂತಿನ ಗೌರವಧನ ಪಾವತಿಗೆ ಸರಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಮೂರನೇ ತ್ರೈಮಾಸಿಕ ಅನುದಾನ 61.50 ಲಕ್ಷ ರೂ. ಬಿಡುಗಡೆ ಮಾಡಿದೆ. ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳತಕ್ಕದ್ದು ಎಂದು ಷರತ್ತು ವಿಧಿಸಿದೆ. ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು 2025-26ನೇ ಸಾಲಿಗೆ ಲೆಕ್ಕಶೀರ್ಷಿಕ 2211-00-103-0-11-324 (ಗೌರವಧನ) ರಡಿ ಮೂರನೇ ತ್ರೈಮಾಸಿಕ ಅನುದಾನ (ಅಕ್ಟೋಬರ್ ನಿಂದ ಡಿಸೆಂಬರ್ ಮಾಹೆಯವರೆಗೆ) ರೂ. 6150.00 ಲಕ್ಷ (ಆರು ಸಾವಿರದ ಒಂದು ನೂರ ಐವತ್ತು ಲಕ್ಷ ರೂಪಾಯಿಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ…

Read More

ಬೆಂಗಳೂರು: ಪರಿಶಿಷ್ಟ ಜಾತಿ (SC)ಯಲ್ಲಿ ಒಳಮೀಸಲಾತಿ ಕಲ್ಪಿಸಿ ಹೊರಡಿಸಿರುವ ಆದೇಶದ ಅನುಸಾರ ನೇಮಕಾತಿಯ ಅಂತಿಮ ಆದೇಶಗಳನ್ನು ಪ್ರಕಟಿಸದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳಿಗೆ 6:6:5 ಆಂತರಿಕ ಮೀಸಲಾತಿ ನಿಗದಿಪಡಿಸುವ ಆಗಸ್ಟ್ 25, 2025 ರ ಅಧಿಸೂಚನೆಯ ಆಧಾರದ ಮೇಲೆ ಯಾವುದೇ ನೇಮಕಾತಿಗಳನ್ನು ಮಾಡದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಒಳಮೀಸಲಾತಿ ಆದೇಶ ಪ್ರಶ್ನಿಸಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿಗಳ ಮಹಾ ಒಕ್ಕೂಟದಿಂದ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ನೇಮಕಾತಿ ಪ್ರಕ್ರಿಯೆಯು ಮುಂದುವರಿಯಬಹುದಾದರೂ, ಅಧಿಸೂಚನೆಯ ಆಧಾರದ ಮೇಲೆ ಯಾವುದೇ ವ್ಯಕ್ತಿಗಳನ್ನು ನೇಮಿಸದಂತೆ ಪ್ರತಿವಾದಿಗಳನ್ನು ನಿರ್ಬಂಧಿಸಲಾಗಿದೆ, ”ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮಧ್ಯಂತರ ಆದೇಶದಲ್ಲಿ ತಿಳಿಸಿದ್ದಾರೆ. ನ್ಯಾಯಾಲಯವು ಈಗ ಈ ವಿಷಯವನ್ನು ನವೆಂಬರ್ 13 ಕ್ಕೆ ಮುಂದೂಡಿದೆ ಮತ್ತು ನವೆಂಬರ್ 5 ರೊಳಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ನಿರ್ದೇಶಿಸಿದೆ. ಕರ್ನಾಟಕದ ಅಸ್ಪೃಶ್ಯ ಅಲೆಮಾರಿ…

Read More

ಬೆಂಗಳೂರು : ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆವಿನ್ಯೂ ಸೈಟ್ ಅಥವಾ ಕಟ್ಟಡಗಳಿಗೆ ಇ-ಖಾತಾ ನೀಡಲು ರಾಜ್ಯ ಸರ್ಕಾರ ಅಧಿಸೂಚನೆ ಅಂತಿಮಗೊಳಿಸಿದೆ. ಹೌದು, ಮ ಪಂಚಾಯಿತಿ ವ್ಯಾಪ್ತಿಯ ರೆವಿನ್ಯೂ ಸೈಟ್ಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾಯ್ದೆಗೆ ತಿದ್ದುಪಡಿ ತಂದು ಇದೀಗ ಎಲ್ಲ ಆಸ್ತಿಗಳಿಗೆ ತಂತ್ರಾಂಶದಲ್ಲಿ ದಾಖಲಿಸಿ ನಮೂನೆ-11ಎ (ಇ-ಖಾತಾ) ನೀಡಲು ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಗ್ರಾಮ ಪಂಚಾಯಿತಿ ಗ್ರೇಡ್-1/ಗ್ರೇಡ್-2 ಕಾರ್ಯದರ್ಶಿಗಳು ಅರ್ಜಿಯನ್ನು ಸ್ವೀಕರಿಸಿದ ನಂತರ ಸ್ಥಳ ಪರಿಶೀಲನೆ ಕೈಗೊಂಡು 4 ಕರ್ತವ್ಯದ ದಿನಗಳಲ್ಲಿ ಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ತಂತ್ರಾಂಶದಲ್ಲಿ ಮಾಹಿತಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಬೇಕು. ಅವರು ಎರಡು ದಿನಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅನುಮೋದನೆಗೆ ಸಲ್ಲಿಸಿ ಅವರಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ ನಂತರ 4 ಕೆಲಸದ ದಿನಗಳ ಒಳಗಾಗಿ ತೀರ್ಮಾನ ತೆಗೆದುಕೊಳ್ಳಬೇಕು. ನಿಗದಿತ ದಾಖಲೆ ಸಲ್ಲಿಸಿದ್ದರೆ 15 ದಿನಗಳ ಒಳಗಾಗಿ ಡಿಜಿಟಲ್ ಸಹಿ ಮಾಡಿ ಇ-ಖಾತಾ ನೀಡಬೇಕೆಂದು ಅಧಿಸೂಚನೆಯಲ್ಲಿ…

Read More

ಈ ಚಿತ್ರವನ್ನು ಮನೆಯಲ್ಲಿಟ್ಟು ಪೂಜಿಸಿದರೆ ಸ್ವಂತ ಮನೆ, ಜಮೀನು ಖರೀದಿಸುವ ಯೋಗ ಬರುತ್ತದೆ. ಮನೆ ಮತ್ತು ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಸಂಪೂರ್ಣವಾಗಿ ಸರಳ ಪರಿಹಾರವಾಗಿದೆ. ಸ್ವಂತ ಮನೆ, ಜಮೀನು ಖರೀದಿಸುವುದು ಇಂದಿನ ಜನರ ಬಹುದಿನದ ಮಹತ್ವಾಕಾಂಕ್ಷೆಯಾಗಿದೆ. ಆದರೆ, ಚಿಕ್ಕ ಮನೆ ಕಟ್ಟಿಕೊಂಡು ವಾಸ ಮಾಡುವ ಹಂಬಲ ಹಲವರಿದ್ದಾರೆ. ಅಂತಹವರು ಈ ಒಂದು ಸರಳ ಉಪಾಯವನ್ನು ಮಾಡಿದಾಗ ಸ್ವಂತ ಜಮೀನು, ಮನೆ ಖರೀದಿಸಿ ನೆಲೆಸುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಅದು ಏನೆಂದು ನೀವು ಕಂಡುಹಿಡಿಯಬಹುದು . ಮನೆ ಭೂಮಿ, ಪೂಜೆ ಮನೆ ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಅಂಗಾರ ಕಾರಕನ ಕೃಪೆ ಖಂಡಿತಾ ಬೇಕು. ಮುರುಗನು ಆ ಗ್ರಹದ ಅಧಿದೇವತೆ. ಆದ್ದರಿಂದ ಮಂಗಳವಾರದಂದು ಮುರುಗನನ್ನು ಪೂಜಿಸುವುದರಿಂದ ಇಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಹಲವರಿಗೆ ತಿಳಿದಿರುವ ವಿಚಾರ. ಆದರೆ ಈಗ ನಾವು ಯಾವ ಚಿತ್ರವನ್ನು ಹೇಗೆ ಹಾಕಬೇಕೆಂದು ತಿಳಿಯಬಹುದು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ…

Read More

ನವದೆಹಲಿ : ನಟ ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (TVK) ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ECI) ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ ಅರುಲ್ ಮುರುಗನ್ ಅವರ ಪೀಠದ ಮುಂದೆ ಹಾಜರಾದ ವಕೀಲ ನಿರಂಜನ್ ರಾಜಗೋಪಾಲ್, ಇಸಿಐ ಮಾನದಂಡಗಳ ಪ್ರಕಾರ, ಟಿವಿಕೆ ಮಾನ್ಯತೆ ಪಡೆದ ರಾಜ್ಯ ಪಕ್ಷವಾಗಿ ಅರ್ಹತೆ ಪಡೆಯುವ ಮಾನದಂಡಗಳನ್ನು ಪೂರೈಸಿಲ್ಲ ಎಂದು ಸಲ್ಲಿಸಿದರು. ಮಾನ್ಯತೆ ಪಡೆಯಲು, ಲೈವ್ ಲಾ ವರದಿ ಮಾಡಿದಂತೆ, ಇಸಿಐ ನಿಗದಿಪಡಿಸಿದ ಇತರ ಮಾನದಂಡಗಳಲ್ಲಿ ಕನಿಷ್ಠ 6% ಮತಗಳು ಮತ್ತು ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಅಥವಾ ಲೋಕಸಭೆಯಲ್ಲಿ ಒಂದು ಸ್ಥಾನವನ್ನು ಪಕ್ಷವು ಪಡೆಯಬೇಕು.

Read More

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಭಾರತೀಯ ಆಹಾರಗಳು ಪ್ರಪಂಚದಾದ್ಯಂತ ಬಹಳ ಜನಪ್ರಿಯವಾಗಿವೆ. ಆದಾಗ್ಯೂ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಭಾರತೀಯರು ಸೇವಿಸುವ ಆಹಾರವು ಅನಾರೋಗ್ಯಕರ ಎಂದು ಹೇಳಿದೆ. ಭಾರತೀಯರು ಸೇವಿಸುವ ಆಹಾರದಲ್ಲಿ ಕಾರ್ಬೋಹೈಡ್ರೇಟ್‌’ಗಳು ಅಧಿಕ ಮತ್ತು ಪ್ರೋಟೀನ್ ಕಡಿಮೆ ಇರುತ್ತದೆ. ಇದು ದೇಶದಲ್ಲಿ ಬೊಜ್ಜು, ಮಧುಮೇಹ ಮತ್ತು ಸ್ನಾಯು ದೌರ್ಬಲ್ಯದಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯಾದ ಐಸಿಎಂಆರ್ (ಐಸಿಎಂಆರ್ -ಟಿಪ್ಸ್) ನಡೆಸಿದ ಈ ಸಂಶೋಧನೆಯು ಭಾರತೀಯ ಆಹಾರಗಳ ಕುರಿತು ಸಂಶೋಧನೆ ನಡೆಸಿದೆ. ಭಾರತೀಯ ಆಹಾರವು 65 ರಿಂದ 70 ಪ್ರತಿಶತ ಕಾರ್ಬೋಹೈಡ್ರೇಟ್‌’ಗಳನ್ನು ಮತ್ತು ಕೇವಲ 10 ಪ್ರತಿಶತ ಪ್ರೋಟೀನ್ ಹೊಂದಿರುತ್ತದೆ ಎಂದು ವರದಿ ಹೇಳಿದೆ. ಇದರರ್ಥ ಜನರು ತಮ್ಮ ನೆಚ್ಚಿನ ಆಹಾರವನ್ನ ಸೇವಿಸುತ್ತಾರೆ ಮತ್ತು ಅವರ ಹಸಿವನ್ನ ನೀಗಿಸುತ್ತಾರೆ. ಆದರೆ ಅವರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಸೇವಿಸುವುದಿಲ್ಲ. ಭಾರತೀಯರು ಹೆಚ್ಚಾಗಿ ಅಕ್ಕಿ, ರೊಟ್ಟಿ ಮತ್ತು ಆಲೂಗಡ್ಡೆಯಂತಹ ಕಾರ್ಬೋಹೈಡ್ರೇಟ್‌’ಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನ ಸೇವಿಸುತ್ತಾರೆ. ಇವುಗಳನ್ನು ಹೆಚ್ಚು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಭಾರಿ…

Read More

ಅಮೃತಸರ : ಅಮೃತಸರದಿಂದ ಸಹರ್ಸಾಗೆ ತೆರಳುತ್ತಿದ್ದ `ಗರೀಬ್ ರಥ್ ಎಕ್ಸ್ಪ್ರೆಸ್’ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಪಂಜಾಬ್ನ ಸಿರ್ಹಿಂದ್ ನಿಲ್ದಾಣದಲ್ಲಿ ಇಂದು ಮುಂಜಾನೆ ಅಮೃತಸರ-ಸಹರ್ಸಾ ರೈಲು ಸಂಖ್ಯೆ 12204 ರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಂದಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಪಂಜಾಬ್ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಗರೀಬ್ ರಥ ಎಕ್ಸ್ಪ್ರೆಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಅವಘಡದಿಂದ ರೈಲಿನಲ್ಲಿ ಭಯಭೀತ ವಾತಾವರಣ ನಿರ್ಮಾಣವಾಯಿತು. ಆದಾಗ್ಯೂ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂಬುದು ಸಮಾಧಾನಕರ ಸಂಗತಿ. ರೈಲ್ವೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ರೈಲಿನ ಒಂದು ಬೋಗಿಯಿಂದ ಹೊಗೆ ಬರುತ್ತಿರುವುದನ್ನು ಜನರು ಗಮನಿಸಿದರು, ಇದರಿಂದಾಗಿ ರೈಲು ನಿಲ್ಲಿಸಲಾಯಿತು ಎಂದು ಸಿರ್ಹಿಂದ್ ಜಿಆರ್ಪಿ ಎಸ್ಎಚ್ಒ ರತನ್ ಲಾಲ್ ಹೇಳಿದರು. https://twitter.com/ANI/status/1979395291070763426?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಪೊಲೀಸರ ಗುಂಡೇಟಿಗೆ ನಟೋರಿಯಸ್ ರೌಡಿಶೀಟರ್ ಯೂನೂಸ್ ಇಕ್ಲಾಸ್ ಬಲಿಯಾಗಿದ್ದಾನೆ.   ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಪೊಲೀಸರ ಫೈರಿಂಗ್ ನಲ್ಲಿ ನಟೋರಿಯಸ್ ಹಂತಕನಾಗಿದ್ದ ಯೂನುಸ್ ಇಕ್ಲಾಸ್ ಪಟೇಲ್ ಸಾವನ್ನಪ್ಪಿದ್ದಾನೆ. ರೌಡಿಶೀಟರ್ ಯೂನುಸ್ ಇಕ್ಲಾಸ್ ನಿನ್ನೆ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ 25 ಸಾವಿರ ಹಣ ಕಸಿದು ಆತನ ಬೈಕ್ ಕಸಿದುಕೊಂಡು ಪರಾರಿ ಆಗಿದ್ದನು. ಈ ಸಂಬಂಧ ವಿಜಯಪುರದ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಚಾಕು ಇರಿದು ಹಲ್ಲೆಗೆ ಯತ್ನಿಸಿದ್ದಾನೆ . ಪೊಲೀಸರು ಶರಣಾಗುವಂತೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ ಆತನ ಪರಾರಿಯಾಗಲು ಯತ್ನಿಸಿದ ಹಿನ್ನೆಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

Read More