Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 1 ದಿನ ವಿಸ್ತರಣೆ ಮಾಡಲಾಗಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು. ಹೀಗಾಗಿ ಎಸ್ಐಟಿ ಪೊಲೀಸರು ಕೋರ್ಟ್ ಗೆ ಆರೋಪಿಗಳ ಮಾಹಿತಿ ಸಲ್ಲಿಕೆ ಮಾಡಿದ್ದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ 1 ದಿನ ಕಾಲ ವಿಸ್ತರಣೆ ಮಾಡಿ ಆದೇಶಿಸಿದೆ.
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಸಿದ್ದರಾಮಯ್ಯ ಪರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ಸಿಎಂ ಸಿದ್ಧರಾಮಯ್ಯ ತಮ್ಮ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ಅಭಿಷೇಕ್ ಮನು ಸಿಂಘ್ವಿ ಅವರು ವಾದಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30…
ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್ ಎಸೆದು ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ವರದಿಯಾಗಿದೆ. ಸೆಪ್ಟಂಬರ್ 14ರವರೆಗೆ…
ನವದೆಹಲಿ : ವರ್ಷದ ಎರಡನೇ ಚಂದ್ರಗ್ರಹಣವು 18 ಸೆಪ್ಟೆಂಬರ್ 2024 ರಂದು ಸಂಭವಿಸಲಿದೆ. ಆದಾಗ್ಯೂ, ಇದು ಭಾಗಶಃ ಚಂದ್ರಗ್ರಹಣವಾಗಿರುತ್ತದೆ, ಇದು ಪ್ರಪಂಚದಾದ್ಯಂತ ಪರಿಣಾಮ ಬೀರುತ್ತದೆ. ಈ ಚಂದ್ರಗ್ರಹಣವು ಒಟ್ಟು 4 ಗಂಟೆ 4 ನಿಮಿಷಗಳ ಕಾಲ ಇರುತ್ತದೆ. ವರ್ಷದ ಕೊನೆಯ ಚಂದ್ರಗ್ರಹಣವು 18 ಸೆಪ್ಟೆಂಬರ್ 2024 ರಂದು ಸಂಭವಿಸಲಿದ್ದು, ಈ ಭಾಗಶಃ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಇದು ಯುರೋಪ್, ಏಷ್ಯಾ, ಆಫ್ರಿಕಾ, ಉತ್ತರ ಅಮೆರಿಕಾ, ದಕ್ಷಿಣ ಅಮೆರಿಕಾ, ಪೆಸಿಫಿಕ್, ಅಟ್ಲಾಂಟಿಕ್, ಹಿಂದೂ ಮಹಾಸಾಗರ, ಆರ್ಕ್ಟಿಕ್ ಮತ್ತು ಅಂಟಾರ್ಕ್ಟಿಕಾದಲ್ಲಿಯೂ ಗೋಚರಿಸುತ್ತದೆ. ಈ ಗ್ರಹಣದ ಸಮಯದಲ್ಲಿ ಚಂದ್ರನ ಒಂದು ಸಣ್ಣ ಭಾಗ ಮಾತ್ರ ಆಳವಾದ ನೆರಳು ಪ್ರವೇಶಿಸುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಚಂದ್ರಗ್ರಹಣವು ಕೆಲವು ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ರಾಶಿಚಕ್ರ ಚಿಹ್ನೆಯ ಜನರು ಜಾಗರೂಕರಾಗಿರಬೇಕು. ಚಂದ್ರಗ್ರಹಣದ ಸೂತಕವು ಗ್ರಹಣಕ್ಕೆ ನಿಖರವಾಗಿ 9 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ ಮತ್ತು ಗ್ರಹಣವು ಕೊನೆಗೊಂಡಾಗ ಕೊನೆಗೊಳ್ಳುತ್ತದೆ. 2024 ರಲ್ಲಿ…
ನವದೆಹಲಿ : ಗೂಗಲ್ ಇಂಡಿಯಾ ಗೂಗಲ್ ಪೇನಲ್ಲಿ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ, ಇದರ ಮೂಲಕ ಬಳಕೆದಾರರು ಅಪ್ಲಿಕೇಶನ್ನ ಸಹಾಯದಿಂದ ನೇರವಾಗಿ 1 ಲಕ್ಷದವರೆಗಿನ ವೈಯಕ್ತಿಕ ಸಾಲವನ್ನು ಸುಲಭವಾಗಿ ಪಡೆಯಬಹುದು. ಈ ವಿಧಾನವು ಬಳಕೆದಾರರಿಗೆ ಬ್ಯಾಂಕ್ ಶಾಖೆಗೆ ಭೇಟಿ ನೀಡದೆಯೇ ಸಾಧ್ಯವಾದಷ್ಟು ಬೇಗ ಸಾಲವನ್ನು ಪಡೆಯಲು ಸುಲಭವಾದ ಪ್ರಕ್ರಿಯೆಯಾಗಿದೆ. Google Pay ಬಳಕೆದಾರರು 2024 ರ ವೇಳೆಗೆ 1 ಲಕ್ಷದವರೆಗಿನ ವೈಯಕ್ತಿಕ ಸಾಲಗಳಿಗೆ ಅರ್ಜಿ ಸಲ್ಲಿಸಬಹುದು. ತಕ್ಷಣವೇ ಹಣದ ಅಗತ್ಯವಿರುವ ಸಾಮಾನ್ಯ Google Pay ಬಳಕೆದಾರರಿಗಾಗಿ ಈ ಸೇವೆಯನ್ನು ವಿನ್ಯಾಸಗೊಳಿಸಲಾಗಿದೆ. ಸಾಲದ ಅಪ್ಲಿಕೇಶನ್ ಬಳಕೆದಾರ ಸ್ನೇಹಿಯಾಗಿದೆ, ಇದಕ್ಕೆ ಹೆಚ್ಚಿನ ದಾಖಲೆಗಳು ಅಥವಾ ಬ್ಯಾಂಕ್ಗೆ ಭೇಟಿ ನೀಡುವ ಅಗತ್ಯವಿಲ್ಲ. ಬಳಕೆದಾರರು ನೇರವಾಗಿ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. G-Pay Loan 2024 ಗಾಗಿ ನೀವು ಈ ಮಾನದಂಡಗಳನ್ನು ಪೂರೈಸಬೇಕು Google Pay ಪರ್ಸನಲ್ ಲೋನ್ಗೆ ಅರ್ಹರಾಗಲು, ಅರ್ಜಿದಾರರು Google Pay ಮೊಬೈಲ್ ಅಪ್ಲಿಕೇಶನ್ನ ಸಕ್ರಿಯ ಬಳಕೆದಾರರಾಗಿರಬೇಕು, ವಿಶೇಷವಾಗಿ ವಾಣಿಜ್ಯ ವಹಿವಾಟುಗಳಿಗಾಗಿ. ಅವರು ಉತ್ತಮ ಕ್ರೆಡಿಟ್…
ಬೆಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ಗಲಭೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ…
ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 6 ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್ ಎಸೆದು ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ವರದಿಯಾಗಿದೆ. ಸೆಪ್ಟಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.…
ಬೆಂಗಳೂರು : ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ…
ಬೆಂಗಳೂರು : ಮೀಸಲಾತಿ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಬಹಿರಂಗ ಸಭೆಗಳಲ್ಲಿ ಮಾತ್ರವಲ್ಲ ಲೋಕಸಭೆಯಲ್ಲಿಯೂ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೀಸಲಾತಿ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಬಹಿರಂಗ ಸಭೆಗಳಲ್ಲಿ ಮಾತ್ರವಲ್ಲ ಲೋಕಸಭೆಯಲ್ಲಿಯೂ ಹೇಳಿದ್ದಾರೆ. ಬಿಜೆಪಿ ನಾಯಕರಿಗೆ ಮೀಸಲಾತಿ ಬಗ್ಗೆ ಅಷ್ಟೊಂದು ಕಾಳಜಿ-ಬದ್ಧತೆ ಇದ್ದರೆ ಮೀಸಲಾತಿಯ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಆಗ್ರಹಿಸಿದ್ದಾರೆ. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುತ್ತಿರುವ ಪ್ರತಿಭಟನೆ, ‘‘ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ’’. ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ…
ಬೆಂಗಳೂರು : ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ನಡೆಯಲಿದ್ದು, ರಾಜ್ಯದ ಜನರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದ್ದು, ಇಂದೇ ವಾದ ಮಂಡನೆ ಮುಗಿಸುವಂತೆ ನ್ಯಾ. ಎಂ.ನಾಗಪ್ರಸನ್ನ ಸೂಚನೆ ನೀಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸುತ್ತಿದೆ.