Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) ನಿರುದ್ಯೋಗಿಗಳಿಗೆ ಶುಭ ಸುದ್ದಿ ಪ್ರಕಟಿಸಿದೆ. ತಾಂತ್ರಿಕೇತರ ಜನಪ್ರಿಯ ವರ್ಗದಲ್ಲಿ (NTPC) 8,850 ಹುದ್ದೆಗಳನ್ನ ಭರ್ತಿ ಮಾಡಲು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಈ ಪ್ರಕ್ರಿಯೆಯ ಮೂಲಕ, ಭಾರತೀಯ ರೈಲ್ವೆಯಲ್ಲಿ ವಿವಿಧ ಪದವಿ ಮತ್ತು ಪದವಿಪೂರ್ವ ಹಂತದ ಉದ್ಯೋಗಗಳಿಗೆ ನೇಮಕಾತಿ ಮಾಡಲಾಗುತ್ತದೆ. ಮಧ್ಯಂತರ ಮತ್ತು ಪದವಿ ಪಡೆದವರು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನ ಬಳಸಿಕೊಳ್ಳಬಹುದು. ಏತನ್ಮಧ್ಯೆ, ಈ ಅಧಿಸೂಚನೆಯಲ್ಲಿ ಆಲ್ ಸ್ಟೇಷನ್ ಮಾಸ್ಟರ್, ಗೂಡ್ಸ್ ರೈಲು ವ್ಯವಸ್ಥಾಪಕ, ಸಂಚಾರ ಸಹಾಯಕ (ಮೆಟ್ರೋ ರೈಲ್ವೆ), ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್-ಕಮ್-ಟೈಪಿಸ್ಟ್, ಸೀನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಜೂನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಅಕೌಂಟ್ಸ್ ಕ್ಲರ್ಕ್-ಕಮ್-ಟೈಪಿಸ್ಟ್, ರೈಲು ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಮುಂತಾದ ವಿವಿಧ ಹುದ್ದೆಗಳು ಸೇರಿವೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಕ್ಟೋಬರ್ 21 ರಿಂದ ಪ್ರಾರಂಭವಾಗಲಿದ್ದು, ನವೆಂಬರ್ 20 ರಂದು ಕೊನೆಯ ದಿನಾಂಕವಾಗಲಿದೆ. ಒಟ್ಟು ಹುದ್ದೆಗಳು…
ಮರ್ಯಾದಾ ಪುರುಷೋತ್ತಮ ಶ್ರೀರಾಮನ ನಗರವಾದ ಅಯೋಧ್ಯೆಯಲ್ಲಿ 9 ನೇ ಆವೃತ್ತಿಯ ದೀಪೋತ್ಸವ 2025 ಮತ್ತೊಮ್ಮೆ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಭಗವಾನ್ ರಾಮನ ಆಗಮನವನ್ನು ಆಚರಿಸಲು, ರಾಮ್ ಕಿ ಪೈದಿ ಸೇರಿದಂತೆ 56 ಘಾಟ್ಗಳಲ್ಲಿ 26,11,101 ದೀಪಗಳನ್ನು ಏಕಕಾಲದಲ್ಲಿ ಬೆಳಗಿಸಲಾಗುತ್ತದೆ. ಸರಯು ನದಿಯ ದಡದಲ್ಲಿ 2,100 ವೇದಾಚಾರ್ಯರಿಂದ ಭವ್ಯ ಆರತಿ ಮತ್ತು ಮಂತ್ರಗಳ ಪಠಣವು ರಾಮನಗರಿಗೆ ಹೊಸ ಶಕ್ತಿಯನ್ನು ತುಂಬುತ್ತದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2017 ರಲ್ಲಿ ಈ ಕಾರ್ಯಕ್ರಮವನ್ನು ಮೊದಲು ಪ್ರಾರಂಭಿಸಿದಾಗ, ಅಯೋಧ್ಯೆಯಲ್ಲಿ ಸುಮಾರು 171,000 ದೀಪಗಳನ್ನು ಬೆಳಗಿಸಲಾಯಿತು ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜೈವೀರ್ ಸಿಂಗ್ ಹೇಳಿದ್ದಾರೆ. ಈ ದೀಪೋತ್ಸವವು ಅಯೋಧ್ಯೆಯಲ್ಲಿ 26 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆಯನ್ನು ಸ್ಥಾಪಿಸಲು ಸಜ್ಜಾಗಿದೆ. ದೀಪೋತ್ಸವದ ಮೊದಲ ಆವೃತ್ತಿಯಿಂದ ಒಂಬತ್ತನೇ ಆವೃತ್ತಿಯವರೆಗೆ ದೀಪಗಳ ಸಂಖ್ಯೆ ಸುಮಾರು 15 ಪಟ್ಟು ಹೆಚ್ಚಾಗಿದೆ. ದೀಪೋತ್ಸವ 2025 ಬೆಳಕಿನ ಉತ್ಸವದ ಪರಾಕಾಷ್ಠೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಯೋಧ್ಯೆಯ ವಿವಿಧ ಕಾಲೇಜುಗಳಿಂದ…
ಮುಂಬೈ : ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಲೋಡಾ ಪೊಲೀಸ್ ಠಾಣೆ ಪ್ರದೇಶದ ಚಾಂದ್ಸಾಲಿ ಘಾಟ್ ವಿಭಾಗದಲ್ಲಿ ವೇಗವಾಗಿ ಬಂದ ಮಿನಿ ಟ್ರಕ್ 200 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಳಿಗ್ಗೆ 10:30 ರ ಸುಮಾರಿಗೆ ಸುಮಾರು 40 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ಯಾತ್ರಾ ಸ್ಥಳದಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಆಳವಾದ ಕಂದಕಕ್ಕೆ ಉರುಳಿದೆ. ಸ್ಥಳೀಯ ಪೊಲೀಸರು ಮತ್ತು ಗ್ರಾಮಸ್ಥರ ಸಹಾಯದಿಂದ, ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ. ಟ್ರಕ್ ಚಾಲಕ ಸೇರಿದಂತೆ ಗಾಯಗೊಂಡ ಪ್ರಯಾಣಿಕರನ್ನು ನಂದೂರ್ಬಾರ್ ಉಪ-ಜಿಲ್ಲಾ ಆಸ್ಪತ್ರೆ ಮತ್ತು ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಣೇಶ್ ಭಿಲ್, ಭೂಷಣ್ ಗೋಸಾವಿ, ಪವನ್ ಮಿಸ್ತ್ರಿ, ಬಾಪು ಧಂಗರ್, ಚೇತನ್ ಪಾಟೀಲ್, ಯೋಗೇಶ್ ಠಾಕ್ರೆ, ರಾಹುಲ್ ಮಿಸ್ತ್ರಿ, ಹಿರಾಲಾಲ್ ಭಿಲ್ ಮೃತಪಟ್ಟಿದ್ದಾರೆ. ಟ್ರಕ್ ಚಾಲಕ ವಿಲಾಸ್ ಡೆಸ್ಲೆ ವಿರುದ್ಧ ನಿರ್ಲಕ್ಷ್ಯ…
ಬೆಂಗಳೂರು: ಈಶಾನ್ಯ ಮಾನ್ಸೂನ್ ಚುರುಕುಗೊಂಡ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ,ಉಡುಪಿ, ದಕ್ಷಿಣ ಕನ್ನಡದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅ.23ರಂದು ಭಾರಿ ಮಳೆ ಸುರಿಯುವುದರಿಂದ ಯೆಲ್ಲೋ ಅಲರ್ಟ್ ಇರಲಿದೆ. ಇನ್ನು ಧಾರವಾಡ, ಗದಗ, ಹಾವೇರಿ, ಗದಗ ಸೇರಿ ಉತ್ತರ ಕರ್ನಾಟಕದಲ್ಲಿ ಕೆಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐರಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂ್ಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್ಇುಇಆರ್ಐರ) ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು…
ನವದೆಹಲಿ : ದೀಪಾವಳಿಯನ್ನು ಆಚರಿಸುವ ಸಲುವಾಗಿ ಭಾರತದ ಪ್ರವರ್ತಕ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಪೂರೈಕೆದಾರ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ಹೊಸ ಗ್ರಾಹಕರಿಗೆ ಯಾವುದೇ ಇತರ ವೆಚ್ಚವಿಲ್ಲದೆ ಒಂದು ತಿಂಗಳ ಅವಧಿಗೆ ಕೇವಲ 1 ರೂ.ಗೆ 4G ಮೊಬೈಲ್ ಸೇವೆಗಳನ್ನು ಒದಗಿಸಿದೆ. ಈ ದೀಪಾವಳಿ ಬೊನಾಂಜಾ ಅಕ್ಟೋಬರ್ 15, 2025 ರಿಂದ ನವೆಂಬರ್ 15, 2025 ರವರೆಗೆ ಮುಂದುವರಿಯಲಿದೆ ಯೋಜನೆಯ ಪ್ರಯೋಜನಗಳು (ದೀಪಾವಳಿ ಯೋಜನೆ): ಅನಿಯಮಿತ ಧ್ವನಿ ಕರೆಗಳು (ಯೋಜನೆ ನಿಯಮಗಳು ಮತ್ತು ಷರತ್ತುಗಳ ಪ್ರಕಾರ) 2 GB/ದಿನಕ್ಕೆ ಹೈ-ಸ್ಪೀಡ್ ಡೇಟಾ 100 SMS/ದಿನ ಉಚಿತ ಸಿಮ್ (DoT ಮಾರ್ಗಸೂಚಿಗಳ ಪ್ರಕಾರ KYC) “BSNL ಇತ್ತೀಚೆಗೆ ದೇಶಾದ್ಯಂತ ಮೇಕ್-ಇನ್-ಇಂಡಿಯಾ, ಅತ್ಯಾಧುನಿಕ 4G ಮೊಬೈಲ್ ನೆಟ್ವರ್ಕ್ ಅನ್ನು ನಿಯೋಜಿಸಿದೆ, ಇದು ಆತ್ಮನಿರ್ಭರ ಭಾರತದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ. ಮೊದಲ 30 ದಿನಗಳವರೆಗೆ ಸೇವಾ ಶುಲ್ಕಗಳಿಲ್ಲದೆ ಸಂಪೂರ್ಣವಾಗಿ ಉಚಿತವಾದ ದೀಪಾವಳಿ ಬೊನಾಂಜಾ ಯೋಜನೆಯು ನಮ್ಮ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ 4G ನೆಟ್ವರ್ಕ್ ಅನ್ನು ಅನುಭವಿಸಲು ಗ್ರಾಹಕರಿಗೆ…
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು, ಕಟ್ಟಡಗಳು ಇನ್ನುಮುಂದೆ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದ್ದಂತೆ ‘ಬಿ-ಖಾತಾ’ ಪಡೆಯಬಹುದು. ಹೌದು, ಅನಧಿಕೃತ ಸ್ವತ್ತುಗಳನ್ನು ‘ನಮೂನೆ-11ಬಿ’ ರಿಜಿಸ್ಟರ್ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಿದ ಕಾಯಿದೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ನಿಯಮಾವಳಿಗಳನ್ನು ಜಾರಿಗೊಳಿಸಿದೆ.ಇದರಿಂದ ರಾಜ್ಯಾದ್ಯಂತ ಗ್ರಾ.ಪಂ ವ್ಯಾಪ್ತಿಯಲ್ಲಿರುವ 95,75,935 ಅನಧಿಕೃತ ಸ್ವತ್ತುಗಳು ‘ಬಿ-ಖಾತಾ’ ಪಡೆದು ತೆರಿಗೆ ವ್ಯಾಪ್ತಿಗೆ ಸೇರಲು ಅವಕಾಶ ಕಲ್ಪಿಸಿದಂತಾಗಿದೆ. ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. 2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ʼಎಲ್ಲಾ…
ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿ ಶಾಮಕ, ತುರ್ತು ಸೇವೆಗಳ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಮೂಹ ಅಪಘಾತ ವಿಮಾ ಯೋಜನೆಯ ವಿಮಾ ಮೊತ್ತವನ್ನು ರೂ,20.00 ಲಕ್ಷದಿಂದ 50 ಲಕ್ಷಗಳವರೆಗೆ ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದನ್ವಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ. ಆದ್ದರಿಂದ ಸದರಿ ಸುತ್ತೋಲೆಯಲ್ಲಿ ನಮೂದಿರುವ ಸೇವಾ ಸೌಲಭ್ಯವನ್ನು ಎಲ್ಲಾ ಅಗ್ನಿಶಾಮಕ ಠಾಣಾಧಿಕಾರಿಗಳು ಹಾಜರಾತಿ (ರೋಲ್ ಕಾಲ್) ಸಮಯದಲ್ಲಿ ಕರ್ತವ್ಯ…
ಬೆಂಗಳೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಂದರ್ಭದಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದಂತೆ ಇತರೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು…
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಹೌದು, 2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೂರನೇ ತೈಮಾಸಿಕ ಕಂತಿನ ಗೌರವಧನ ಪಾವತಿಗೆ ಸರಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅಕ್ಟೋಬರ್ನಿಂದ ಡಿಸೆಂಬರ್ವರೆಗಿನ ಮೂರನೇ ತ್ರೈಮಾಸಿಕ ಅನುದಾನ 61.50 ಲಕ್ಷ ರೂ. ಬಿಡುಗಡೆ ಮಾಡಿದೆ. ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳತಕ್ಕದ್ದು ಎಂದು ಷರತ್ತು ವಿಧಿಸಿದೆ. ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು 2025-26ನೇ ಸಾಲಿಗೆ ಲೆಕ್ಕಶೀರ್ಷಿಕ 2211-00-103-0-11-324 (ಗೌರವಧನ) ರಡಿ ಮೂರನೇ ತ್ರೈಮಾಸಿಕ ಅನುದಾನ (ಅಕ್ಟೋಬರ್ ನಿಂದ ಡಿಸೆಂಬರ್ ಮಾಹೆಯವರೆಗೆ) ರೂ. 6150.00 ಲಕ್ಷ (ಆರು ಸಾವಿರದ ಒಂದು ನೂರ ಐವತ್ತು ಲಕ್ಷ ರೂಪಾಯಿಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ…














