Author: kannadanewsnow57

ಲಕ್ನೋ : ಮಕ್ಕಳ ಕೈಗೆ ಮೊಬೈಲ್ ಕೊಡುವ ಪೋಷರಕೇ ಎಚ್ಚರ, ಉತ್ತರ ಪ್ರದೇಶದ ಲಕ್ನೋದಿಂದ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಮೊಬೈಲ್ ಗೇಮ್ ಆಡುತ್ತಿದ್ದಾಗ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಕುಟುಂಬದವರು ಅವನು ನಿದ್ದೆಗೆ ಜಾರಿದ್ದನೆಂದು ಭಾವಿಸಿದ್ದರು, ಆದರೆ ಅವನ ಸಹೋದರಿ ಬೆಳಿಗ್ಗೆ ಅವನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಅವನ ದೇಹವು ತಣ್ಣಗಾಗಿತ್ತು. ಇಂದಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪರಮೇಶ್ವರ್ ಎನ್‌ಕ್ಲೇವ್‌ನ ಶಿವಾಜಿಪುರಂನಲ್ಲಿ ಈ ಘಟನೆ ನಡೆದಿದೆ. ಮೃತ ಮಗುವನ್ನು ವಿವೇಕ್ ಕಶ್ಯಪ್ ಎಂದು ಗುರುತಿಸಲಾಗಿದೆ, ಅವರು ಫ್ರೀ ಫೈರ್ ಉತ್ಸಾಹಿ. ತಡರಾತ್ರಿಯವರೆಗೂ ಆಟ ಆಡುವುದರಲ್ಲಿ ಮಗ್ನರಾಗಿದ್ದರು ಮತ್ತು ಯಾರೊಂದಿಗೂ ಮಾತನಾಡಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮೂಲತಃ ಸೀತಾಪುರ ಜಿಲ್ಲೆಯ ನೈಮಿಶ್ ಠಾಕೂರ್ ನಗರದ ವಿವೇಕ್ ಕಶ್ಯಪ್, ತನ್ನ ತಾಯಿ ಪ್ರೇಮ್ ಕುಮಾರಿ ಮತ್ತು ಮೂವರು ಸಹೋದರಿಯರಾದ ಅಂಜು, ಚಾಂದನಿ ಮತ್ತು ಪಿಂಕಿ ಅವರೊಂದಿಗೆ ಲಕ್ನೋದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸಹೋದರಿ ಚಾಂದಿನಿ ಪ್ರಕಾರ, ಕೆಲಸದಿಂದ ಹಿಂತಿರುಗಿದ…

Read More

ಬೆಂಗಳೂರು : ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಿಸಲಾಗಿದ್ದು, ನಾಳೆಯೇ ಕೊನೆಯ ದಿನವಾಗಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯವನ್ನು ಸಿದ್ಧಪಡಿಸಲಾಗಿದೆ. ಸಾರ್ವಜನಿಕರು https://kscbcselfdeclaration.karnataka.gov.in/ ನಲ್ಲಿ ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಾಗುತ್ತದೆ. ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ಸಿಕ್ಕಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಜು.1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಸರ್ಕಾರ ಪರಿಷ್ಕರಿಸಿದೆ. ಈ ಸಂಬಂಧ ಸರ್ಕಾರ ಬುಧವಾರ ಆದೇಶ ಹೊರಡಿಸಿದ್ದು, ಪ್ರಸ್ತುತ ಮೂಲ ವೇತನದ ಶೇ.12.25ರಿಂದ ಶೇ.14.25ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ…

Read More

ಬೆಂಗಳೂರು : ರಾಜ್ಯದಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ. ಹೌದು, ಸರ್ಕಾರಿ ಶಾಲೆಗಳ ಸಬಲೀಕರಣ, ದಾಖಲಾತಿ, ಕಲಿಕಾ ಗುಣಮಟ್ಟ ಮತ್ತು ಮೂಲಸೌಕರ್ಯ ಹೆಚ್ಚಿಸುವುದಕ್ಕಾಗಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಸೇರಿ ಗುಣಾತ್ಮಕ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ. ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಇಲ್ಲವೇ ಡಿಸೆಂಬರ್ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು, ಅನುದಾನಿತ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸೇರಿ ಒಟ್ಟು 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಿಸಲಾಗುತ್ತದೆ ಎಂದು…

Read More

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಈ ನಡುವೆ ಸಮೀಕ್ಷೆಯಲ್ಲಿ ಭಾಗಿಯಾದರೆ ರೇಷನ್ ಕಾರ್ಡ್ ರದ್ದಾಗುತ್ತಾ? ಎಂಬ ನಿಮ್ಮ ಈ ಗೊಂದಲಕ್ಕೆ ಪ್ರಶ್ನೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ನಾಯ್ಕ್ ಅವರು ಉತ್ತರಿಸಿದ್ದಾರೆ. ವಿಡಿಯೋ ನೋಡಿ.. https://twitter.com/KarnatakaVarthe/status/1978706755933638676 ಹಿಂದುಳಿದ ವರ್ಗಗಳ ಆಯೋಗವೇ ಯಾಕೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ? ಈ ಪ್ರಶ್ನೆಗೆ ಸ್ವತಃ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ನಾಯ್ಕ್ ಅವರೇ ಉತ್ತರಿಸಿದ್ದಾರೆ. ವಿಡಿಯೋ ನೋಡಿ.. https://twitter.com/KarnatakaVarthe/status/1978468405255803371

Read More

ನವದೆಹಲಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ಶಿಕ್ಷಣ ಸಂಘ (NESTS), ಶಿಕ್ಷಕರು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ EMRS ನೇಮಕಾತಿ 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 400 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) 7,267 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23. ವಿವಿಧ ಉದ್ಯೋಗ ಖಾಲಿ ಹುದ್ದೆಗಳ ವಿವರಗಳು ಶಾಲಾ ಪ್ರಾಂಶುಪಾಲರು ಖಾಲಿ ಹುದ್ದೆಗಳ ಸಂಖ್ಯೆ: 225 ಶೈಕ್ಷಣಿಕ ಅರ್ಹತೆ: ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ಪದವಿ ಹೊಂದಿರಬೇಕು. ಅಲ್ಲದೆ, 12 ವರ್ಷಗಳ ಕೆಲಸದ ಅನುಭವ ಕಡ್ಡಾಯವಾಗಿದೆ. ವಯಸ್ಸಿನ ಅರ್ಹತೆ: 50 ವರ್ಷಕ್ಕಿಂತ ಕಡಿಮೆ ಇರಬೇಕು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಸಂಬಳ: ₹78,800 – ₹2,09,200 ಸ್ನಾತಕೋತ್ತರ ಶಿಕ್ಷಕರು (PGT) ಖಾಲಿ ಹುದ್ದೆಗಳ ಸಂಖ್ಯೆ: 1,460 ಇಂಗ್ಲಿಷ್ – 112…

Read More

ಬೆಂಗಳೂರು : ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಹೊರಡಿಸಲಾಗಿರುತ್ತದೆ. ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹ್ವಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ໖:16.04.20190 ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಮಾರ್ಪಡಿಸಿ ಈ ಕೆಳಕಂಡಂತೆ ಹೊಸ ಮಾರ್ಗ ಸೂಚಿಗಳನ್ನು ಅಧಿಸೂಚಿಸಲಾಗಿದೆ. 1. ಸರ್ಕಾರಿ ಕಾರ್ಯಕ್ರಮಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿದೆ. – (a) ರಾಜ್ಯ ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೊಂದಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ಆಕುಕ 223 ಸಿಜಿಇ 2025, ದಿನಾಂಕ: 17.09.2025 ರಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ವಿವಿಧ ಯೋಜನೆಯಡಿಯಲ್ಲಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು “ಭಾವಿತ ನೊಂದಾವಣಿ” ಎಂದು ಪರಿಗಣಿಸಿರುವುದರಿಂದ 186 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೊಂದಾವಣೆಗೊಳಿಸಲಾಗಿರುತ್ತದೆ. ಮುಂದುವರೆದು, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆಗೊಳಿಸಲಾಗಿದೆ. ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್ಎಂಆರ್ 2020, ದಿನಾಂಕ:02.04.2025 ರಲ್ಲಿ ನೀಡಿರುವ ಅಧಿಕಾರ ಪ್ರತ್ಯಾಯೋಜನೆಯ…

Read More

ಬೆಂಗಳೂರು : ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು (ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 200 ಶಾಲೆಗಳನ್ನು ಹಾಗೂ ರಾಜ್ಯದ ಇತರೆಡೆ 500 ಶಾಲೆಗಳನ್ನು) ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ, ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಮತ್ತು 1,319 ಪದವಿಪೂರ್ವ ಕಾಲೇಜುಗಳಿರುತ್ತವೆ. ಒಟ್ಟಾರೆಯಾಗಿ ಕೇವಲ 309 ಶಾಲೆಗಳು ಎಲ್.ಕೆ.ಜಿಯಿಂದ 12ನೇ ತರಗತಿಯವರೆಗೆ ಸಂಯುಕ್ತ ವ್ಯವಸ್ಥೆಯನ್ನು ಹೊಂದಿವೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ (19% ಕಡಿಮೆ) ಕುಸಿದಿರುತ್ತದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು 46% ರಿಂದ 38% ಕ್ಕೆ ಕುಸಿದಿರುತ್ತದೆ. ಆದರೆ ಖಾಸಗಿ ಅನುದಾನರಹಿತ ಶಾಲೆಗಳ ಪಾಲು 2015-16ರಲ್ಲಿ 36.3 ಲಕ್ಷ ವಿದ್ಯಾರ್ಥಿಗಳಿಂದ 2025-26ರಲ್ಲಿ 47 ಲಕ್ಷ ವಿದ್ಯಾರ್ಥಿಗಳಿಗೆ (29%) ಹೆಚ್ಚಾಗಿದೆ.…

Read More

ಬೆಂಗಳೂರು :ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ 2 ಸೀರೆಗಳಂತೆ ಒಟ್ಟು 2,79,688 ಸೀರೆಗಳನ್ನು ರೂ.13.98 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿಲಾಗಿದೆ.  ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ರೂ.10.49 ಕೋಟಿ ವೆಚ್ಚದಲ್ಲಿ ಔಷಧ ಕಿಟ್ಗಳನ್ನು ಖರೀದಿಸಿ ಒದಗಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾ ಸಂಕೀರ್ಣವನ್ನು ರೂ. 2,350 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ 100 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.54.92 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ. ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ ರೂ.100 ಕೋಟಿಗಳ ಅನುದಾನದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ. ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ…

Read More