Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟೀಲ್ಸ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (OC)ದಿಂದ ವಿನಾಯಿತಿ ನೀಡಲು ಸಚಿವ ಸಂಪುಟ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಇತರೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಗಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು ಎರಡಂತಸ್ತು, ಸ್ಟಿಲ್ಟ್ ಮತ್ತು ಮೂರಂತಸ್ತಿನ ವಸತಿ ಕಟ್ಟಡಗಳಿಗೆ ಮಾತ್ರ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಲು ಸಂಪುಟ ನಿರ್ಧಾರ ಮಾಡಿದೆ. ಗ್ರೇಟರ್ ಬೆಂಗಳೂರು…
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆ ಅಥವಾ ಸಂಘಟ ನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ, ಚಟುವಟಿಕೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ಅನುಮತಿಪಡೆಯುವುದನ್ನು ಕಡ್ಡಾಯಗೊಳಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ. ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರ, ನಿಗಮ, ಮಂಡಳಿ, ಶಾಲಾ-ಕಾಲೇಜುಗಳು, ಅನು ದಾನಿತ ಶಿಕ್ಷಣ ಸಂಸ್ಥೆ ಗಳು, ಉದ್ಯಾನವನ, ಆಟದ ಮೈದಾನ, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರೆ ಆಸ್ತಿ ಅಥವಾ ಜಾಗಗಳಿಗೆ ಅನ್ವಯ ಇದು ಅನ್ವಯವಾಗಲಿದೆ. https://twitter.com/KarnatakaVarthe/status/1978826774550118533
ಹಾಸನ: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನದ ಸಂದರ್ಭದಲ್ಲಿ ಸರದಿ ಸಾಲಿನಲ್ಲಿದ್ದಂತ ಸಾರ್ವಜನಿಕರು ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬುದಾಗಿ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದಂತ ಅವರು, ಜುಲೈ ತಿಂಗಳವರೆಗಿನ ಹಣ ಈಗಾಗಲೇ ಕ್ಲಿಯರ್ ಆಗಿದೆ ಎಂದರು. ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಆಗಸ್ಟ್ ತಿಂಗಳ ಹಣ ದೀಪಾವಳಿಗೂ ಮುನ್ನ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಮಾಹಿತಿ ನೀಡಿದರು. ಈವರೆಗೂ ಫಲಾನುಭವಿಗಳಿಗೆ ಜುಲೈ ತಿಂಗಳ ಅಂದರೆ, 23 ತಿಂಗಳ ಹಣ ಸಂದಾಯವಾಗಿದೆ. ಇನ್ನು ಆಗಸ್ಟ್ ತಿಂಗಳ ಹಣ ಸಿಕ್ಕರೆ ಒಟ್ಟು 24 ತಿಂಗಳ…
ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರ ಇಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಇತರರು ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು…
ಕ್ಯಾನ್ಸರ್ ಮತ್ತು ಯಕೃತ್ತಿನಂತಹ ಮಾರಕ ಕಾಯಿಲೆಗಳು ಜನರನ್ನು ಕಾಡುತ್ತಿವೆ. ಹೃದಯ ಸಂಬಂಧಿ ಸಮಸ್ಯೆಗಳೂ ಇದೇ ಪ್ರಮಾಣದಲ್ಲಿ ಹೆಚ್ಚಿವೆ. ಹಿಂದೆ, ಹೃದಯಾಘಾತ ಪ್ರಕರಣಗಳು ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದವು.ಆದರೆ ಇಂದಿನ ಆಧುನಿಕ ಜೀವನದಲ್ಲಿ, ಇದು ಯುವಕರ ಮೇಲೂ ಪರಿಣಾಮ ಬೀರುತ್ತಿದೆ. ಭಾರತದ ಪ್ರತಿಯೊಬ್ಬ ಯುವಕರು ಇದರ ಬಗ್ಗೆ ಚಿಂತಿತರಾಗಿದ್ದಾರೆ. ಮಾನಸಿಕ ಒತ್ತಡ, ಅನಾರೋಗ್ಯಕರ ಫಾಸ್ಟ್ ಫುಡ್ ಸೇವನೆ ಹೆಚ್ಚುತ್ತಿರುವುದು, ದೈಹಿಕ ಚಟುವಟಿಕೆಯ ಕೊರತೆ ಮತ್ತು ವ್ಯಾಯಾಮದ ಕೊರತೆ ಇತ್ತೀಚೆಗೆ ಆರೋಗ್ಯದ ದೊಡ್ಡ ಶತ್ರುಗಳಾಗಿವೆ. ವಿಶ್ವ ಹೃದಯ ಒಕ್ಕೂಟವು ಇತ್ತೀಚೆಗೆ ಈ ವಿಷಯದ ಬಗ್ಗೆ ಒಳ್ಳೆಯ ಸುದ್ದಿಯನ್ನು ನೀಡಿದೆ. ಇದರ ಪ್ರಕಾರ.. ಕೇವಲ ಐದು ನಿಯಮಗಳನ್ನು ಅನುಸರಿಸುವ ಮೂಲಕ, 80% ವರೆಗಿನ ಹೃದಯಾಘಾತ ಮತ್ತು ಪಾರ್ಶ್ವವಾಯುಗಳನ್ನು ತಡೆಯಬಹುದು. ಈಗ ಆ ಅಭ್ಯಾಸಗಳು ಯಾವುವು ಎಂದು ನೋಡೋಣ. 1. ಊಟದ ನಂತರ ನಡೆಯಿರಿ ಊಟದ ನಂತರ ತಕ್ಷಣ ಕುಳಿತುಕೊಳ್ಳಬೇಡಿ ಅಥವಾ ಮಲಗಬೇಡಿ. ಪ್ರತಿದಿನ ಊಟದ ನಂತರ 10-15 ನಿಮಿಷಗಳ ಕಾಲ ನಡೆಯುವ ಅಭ್ಯಾಸವನ್ನು ಮಾಡಿಕೊಳ್ಳಿ. ಊಟದ ನಂತರ…
ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಶೇ. 42 ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದತೆಲಂಗಾಣ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. https://twitter.com/ANI/status/1978720336276303886?ref_src=twsrc%5Egoogle%7Ctwcamp%5Eserp%7Ctwgr%5Etweet
ಆಂಧ್ರಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರ ಪ್ರದೇಶ ಪ್ರವಾಸ ಕೈಗೊಂಡಿದ್ದು, ಈ ವೇಳೆ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂದ್ಯಾಲ್ ಜಿಲ್ಲೆಯ ಶ್ರೀಶೈಲದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೂಜೆ ಮತ್ತು ದರ್ಶನ ಪಡೆದರು. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೂಡ ಉಪಸ್ಥಿತರಿದ್ದರು. https://twitter.com/ANI/status/1978719922919215514?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನಿಷೇಧ ಹೇರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಕಾನೂನು ಇಲಾಖೆ ವಿಧೇಯಕ ಸಿದ್ದಪಡಿಸಿ ಡ್ರಾಫ್ಟ್ ಮಾಡಿದ್ದು, ಸರ್ಕಾರಿ ಕಟ್ಟಡ, ಆವರಣ, ಆಸ್ತಿಗಳಲ್ಲಿ ಚಟುವಟಿಕೆ ನಿಯಂತ್ರಣ ನಿಯಮ ಸಿದ್ಧವಾಗಿದೆ. ಯಾವುದೇ ಧಾರ್ಮಿಕ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂಬ ನಿಯಮ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ ನೀಡುವ ಅಧಿಕಾರವಿದೆ. ನಿಯಮ ಮೀರಿ ಚಟುವಟಿಕೆ ನಡೆಸಿದರೆ 2 ವರ್ಷ ಜೈಲು ಮತ್ತು 50 ಸಾವಿರ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನಿಯಮ ಮೀರಿದರೆ 3 ವರ್ಷ ಜೈಲು ಶಿಕ್ಷೆ ರೂ. 1, ದಂಡ ವಿಧಿಸಲಾಗುತ್ತದೆ ಇದಕ್ಕೂ ಮೀರಿ ಮುಂದುವರಿದರೆ ನಿತ್ಯ…
ನವದೆಹಲಿ : ಸಾಮಾಜಿಕ ಮಾಧ್ಯಮದ ಅತಿದೊಡ್ಡ ವೀಡಿಯೊ ವೇದಿಕೆಯಾದ ಯೂಟ್ಯೂಬ್ ಭಾರತ ಸೇರಿದಂತೆ ವಿಶ್ವದಾದ್ಯಂತ ಡೌನ್ ಆಗಿದ್ದು, ಬಳಕೆದಾರರು ಪರದಾಡಿದ್ದಾರೆ. ಗುರುವಾರ ಬೆಳಿಗ್ಗೆ 5:23 ರ ಸುಮಾರಿಗೆ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು, ಇದು ಲಕ್ಷಾಂತರ ಬಳಕೆದಾರರಿಗೆ ಅನಾನುಕೂಲತೆಯನ್ನುಂಟುಮಾಡಿತು. ತಾಂತ್ರಿಕ ದೋಷಗಳನ್ನು ಪತ್ತೆಹಚ್ಚುವ ವೆಬ್ಸೈಟ್ ಡೌನ್ಡೆಕ್ಟರ್ ಪ್ರಕಾರ, 340,000 ಕ್ಕೂ ಹೆಚ್ಚು ಬಳಕೆದಾರರು ಯೂಟ್ಯೂಬ್ ಸೇವೆಯ ಸ್ಥಗಿತವನ್ನು ವರದಿ ಮಾಡಿದ್ದಾರೆ. ಯೂಟ್ಯೂಬ್ ಸ್ಥಗಿತಗೊಂಡ ತಕ್ಷಣ, ಸಾಮಾಜಿಕ ಮಾಧ್ಯಮ ಸ್ಫೋಟಗೊಂಡಿತು. #YouTubeDown ಟ್ವಿಟರ್ನಲ್ಲಿ ಟ್ರೆಂಡಿಂಗ್ ಪ್ರಾರಂಭಿಸಿತು. ಜನರು ಸ್ಕ್ರೀನ್ಶಾಟ್ಗಳನ್ನು ಹಂಚಿಕೊಳ್ಳುತ್ತಿದ್ದರು ಮತ್ತು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದರು. https://twitter.com/HPMusicid/status/1978709997539279209 ಡೌನ್ಡೆಕ್ಟರ್ನ ಗ್ರಾಫ್ ಬೆಳಿಗ್ಗೆ 5 ಗಂಟೆಯಿಂದ ದೂರುಗಳು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸಿದವು ಎಂದು ತೋರಿಸಿದೆ, ಕೆಲವೇ ನಿಮಿಷಗಳಲ್ಲಿ 340,000 ಕ್ಕೂ ಹೆಚ್ಚು ವರದಿಗಳು ದಾಖಲಾಗಿವೆ. ಈ ಅಂಕಿ ಅಂಶವು ಸಾಮಾನ್ಯವಾಗಿ 50 ಕ್ಕಿಂತ ಕಡಿಮೆ ಇರುತ್ತದೆ, ಇದು ಸಣ್ಣ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸುತ್ತದೆ. ಡೌನ್ಡೆಕ್ಟರ್ನ ವರದಿಯ ಪ್ರಕಾರ, 56% ಬಳಕೆದಾರರು ವೀಡಿಯೊ ಸ್ಟ್ರೀಮಿಂಗ್ ಸಮಸ್ಯೆಗಳನ್ನು ಅನುಭವಿಸಿದರು, 32%…
ದೀಪಗಳ ಹಬ್ಬ ದೀಪಾವಳಿಯು ಕತ್ತಲೆಯ ಮೇಲೆ ಬೆಳಕಿನ ವಿಜಯ ಮತ್ತು ಮನೆಗಳಿಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುವುದನ್ನು ಸಂಕೇತಿಸುತ್ತದೆ. ಈ ದಿನದಂದು, ದೇವತೆ ಲಕ್ಷ್ಮಿ ಮತ್ತು ಗಣೇಶನನ್ನು ಪೂಜಿಸಲಾಗುತ್ತದೆ ಮತ್ತು ಮನೆಗಳನ್ನು ದೀಪಗಳ ಬೆಳಕಿನಿಂದ ಬೆಳಗಿಸಲಾಗುತ್ತದೆ. ಆದಾಗ್ಯೂ, ಹಿಂದಿನ ವರ್ಷದ ಹಳೆಯ ಮಣ್ಣಿನ ದೀಪಗಳನ್ನು ಮತ್ತೆ ಬೆಳಗಿಸುವುದು ಶುಭವೇ ಅಥವಾ ದೀಪಾವಳಿಯಂದು ಇತರ ಪೂಜೆಗಳಲ್ಲಿ ಬಳಸುವ ದೀಪಗಳನ್ನು ಮತ್ತೆ ಬೆಳಗಿಸುವುದು ಶುಭವೇ ಎಂಬ ಬಗ್ಗೆ ಅನೇಕ ಜನರು ಗೊಂದಲಕ್ಕೊಳಗಾಗಿದ್ದಾರೆ. ಈ ವಿಷಯದ ಬಗ್ಗೆ ನಿಯಮಗಳು ಮತ್ತು ದೀಪಗಳನ್ನು ಬೆಳಗಿಸುವ ಸರಿಯಾದ ವಿಧಾನವನ್ನು ತಿಳಿಯಿರಿ. ದೀಪಾವಳಿಯಂದು ಹಳೆಯ ದೀಪಗಳನ್ನು ಮತ್ತೆ ಬೆಳಗಿಸಬೇಕೇ? ಮಣ್ಣಿನ ದೀಪಗಳಿಗೆ ನಿಯಮಗಳು ಸಾಮಾನ್ಯ ಪೂಜೆಗೆ: ಮಣ್ಣಿನ ದೀಪಗಳನ್ನು ಸಾಮಾನ್ಯವಾಗಿ ಒಮ್ಮೆ ಮಾತ್ರ ಬಳಸುವುದು ಶುಭವೆಂದು ಪರಿಗಣಿಸಲಾಗುತ್ತದೆ. ಪೂಜೆಯಲ್ಲಿ ಒಮ್ಮೆ ಬಳಸಿದ ಮಣ್ಣಿನ ಮಡಕೆಗಳನ್ನು ಮರುಬಳಕೆ ಮಾಡುವುದಿಲ್ಲ. ದೀಪಾವಳಿಯಂದು: ಮುಖ್ಯ ದೀಪಾವಳಿ ಪೂಜೆಯಲ್ಲಿ ಬಳಸುವ ಮಣ್ಣಿನ ದೀಪಗಳನ್ನು ಮರುಬಳಕೆ ಮಾಡುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ಪೂಜೆಯಲ್ಲಿ ಬಳಸುವ ಜೇಡಿಮಣ್ಣು ನಕಾರಾತ್ಮಕ ಶಕ್ತಿಯನ್ನು…














