Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ವಿಷಪೂರಿತ ಔಷಧ, ಡಿಕಂಪೋಸ್, ಟೊಕ್ಸಿಕ್ ಔಷಧಗಳ ಮಾರಾಟ ಮಾಡಿದರೆ ನಾನ್ ಬೇಲೆಬಲ್ ಪ್ರಕರಣ ಆಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಔಷಧ ಮತ್ತು ಪ್ರಸಾಧನ ಸಾಮಗ್ರಿ ತಿದ್ದುಪಡಿ ವಿಧೇಯಕ- 2025ದ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಕಷ್ಟು ಚರ್ಚೆ ಮಾಡಿಯೇ ಈ ವಿಧೇಯಕ ಮಾಡುತ್ತಿದ್ದೇವೆ. ಇದರ ಮುಖ್ಯ ಉದ್ದೇಶ ಕಳಪೆ ಮತ್ತು ನಕಲಿ ಔಷಧ ಜಾಲ ತಲೆ ಎತ್ತದಂತೆ ನೋಡಿಕೊಳ್ಳುವುದು. ಎಲ್ಲ ಔಷಧಗಳನ್ನು Central drug lab ನಲ್ಲಿ ಕಡೆಯದಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಿ ರಾಜ್ಯದಲ್ಲಿಯೇ ಲ್ಯಾಬ್ ಮಾಡುತ್ತಿದ್ದೇವೆ. ಔಷಧ ಪರೀಕ್ಷೆಯಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸುವುದು ಇದರ ಉದ್ದೇಶ. ಎಲ್ಲದಕ್ಕೂ ಸರಿಯಾದ ಸಪ್ಲೈ ಚೈನ್ ಇರಬೇಕು, ಇಲ್ಲದಿದ್ದರೆ ಅಡಲ್ಟ್ರೇಟೆಡ್ ಔಷಧ ಮಾರುಕಟ್ಟೆಗೆ ಬರುವ ಸಾಧ್ಯತೆ ಇರುತ್ತದೆ. ಈ ಮೊದಲು ಕೇಸ್ ಹಾಕಿದರೆ ಸುಲಭದಲ್ಲಿ ತಪ್ಪಿಸಿಕೊಳ್ಳಲು ಅವಕಾಶ ಸಿಗುತ್ತಿತ್ತು. ಈ ಕಾಯಿದೆ ಮೂಲಕ ಔಷಧ ಎಲ್ಲಿಂದ ಎಲ್ಲಿಗೆ ಬರುತ್ತದೆ…

Read More

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಾಲಾ ವಿದ್ಯಾರ್ಥಿಗಳ Aadhar Mandatory Biometric Update (Aadhar MBU) ಹಾಗೂ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರಲ್ಲಿನ ದಿನಾಂಕ:16.07.2025ರ ಸಭಾ ನಡವಳಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, AJSK ಮತ್ತು EDCS ಸಹಯೋಗದೊಂದಿಗೆ, ವಾರ್ಷಿಕವಾಗಿ ಸುಮಾರು 20 ಲಕ್ಷ MBU ಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಪ್ರಸ್ತಾಪಿಸಲಾಗಿರುವುದಾಗಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನು ಯುಐಡಿಎಐ ಅಡಿಯಲ್ಲಿ ರಾಜ್ಯ ರಿಜಿಸ್ಟ್ರಾರ್ ಆಗಿ ನೇಮಿಸಲು, 300-500 ಇಸಿಎಂಪಿ ಕಿಟ್ಗಳನ್ನು ಸಂಗ್ರಹಿಸಲು ಮತ್ತು ಶಾಲಾ ಅಧಿಕಾರಿಗಳಿಗೆ ತರಬೇತಿ ನೀಡಲು ಅಥವಾ ಪ್ರಮಾಣೀಕೃತ ನಿರ್ವಾಹಕರ ಮೂಲಕ ವಿದ್ಯಾರ್ಥಿಗಳ ಆಧಾರ್ MBU ಕಾರ್ಯವನ್ನು ನಡೆಸಲು ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರಸ್ತಾಪಿಸಲಾಗಿದೆ. ಮೇಲೆ ಓದಲಾದ (2)ರಲ್ಲಿನ, ದಿನಾಂಕ:16.09.2025ರ ಸಭಾ ನಡವಳಿಯಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳನ್ನು ನೋಂದಣಿ ಅಥವಾ ದಾಖಲಾತಿ ಏಜೆನ್ಸಿಗಳನ್ನಾಗಿ ಮಾಡಲಾಗುವುದಿಲ್ಲ ಎಂದು…

Read More

ನವದೆಹಲಿ: ಭಾರತದಲ್ಲಿ ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ನಿಯಮಗಳು ಮತ್ತು ನಿಬಂಧನೆಗಳನ್ನು ಬದಲಾಯಿಸುತ್ತಲೇ ಇರುತ್ತದೆ. ಈ ನಡುವೆ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಸಂಸತ್ತಿನಲ್ಲಿ ಲಗೇಜ್ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲಿನಲ್ಲಿ ಪ್ರಯಾಣಿಸುವಾಗ, ಪ್ರಯಾಣಿಕರು ನಿಗದಿತ ಮಿತಿಗಿಂತ ಹೆಚ್ಚು ಲಗೇಜ್ ಸಾಗಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ವೈಷ್ಣವ್ ಹೇಳಿದರು. ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸದ ವೇಮಿರೆಡ್ಡಿ ಪ್ರಭಾಕರ ರೆಡ್ಡಿ ಅವರು ಕೇಳಿದ ಪ್ರಶ್ನೆಗಳಿಗೆ ಲಿಖಿತ ಉತ್ತರದಲ್ಲಿ ವೈಷ್ಣವ್ ಈ ವಿಷಯ ತಿಳಿಸಿದ್ದಾರೆ. ರೆಡ್ಡಿ ಕೇಳಿದರು. ವಿಮಾನ ನಿಲ್ದಾಣದಲ್ಲಿ ಅಳವಡಿಸಿಕೊಂಡಿರುವ ವ್ಯವಸ್ಥೆಗಳಿಗೆ ಅನುಗುಣವಾಗಿ ರೈಲು ಪ್ರಯಾಣಿಕರಿಗೆ ಬ್ಯಾಗೇಜ್ ನಿಯಮಗಳನ್ನು ರೈಲ್ವೆ ಜಾರಿಗೊಳಿಸುತ್ತದೆಯೇ? ಇದಕ್ಕೆ ಪ್ರತಿಕ್ರಿಯಿಸಿದ ವೈಷ್ಣವ್, ಪ್ರಸ್ತುತ, ಕೋಚ್ಗಳಲ್ಲಿ ಪ್ರಯಾಣಿಕರು ಸಾಗಿಸಬಹುದಾದ ಲಗೇಜ್ಗಳಿಗೆ ವರ್ಗವಾರು ಗರಿಷ್ಠ ಮಿತಿಯನ್ನು ನಿಗದಿಪಡಿಸಲಾಗಿದೆ. ಸಚಿವರ ಮಾಹಿತಿಯ ಪ್ರಕಾರ, ‘ಎಸಿ ತ್ರೀ ಟೈರ್’ ಅಥವಾ ‘ಚೇರ್ ಕಾರ್’ ನಲ್ಲಿ ಪ್ರಯಾಣಿಸುವ ಪ್ರಯಾಣಿಕರು 40 ಕೆಜಿ ವರೆಗೆ ಉಚಿತ…

Read More

ಬೆಳಗಾವಿ ಸುವರ್ಣಸೌಧ :‌ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ಮೇಲ್ಮನೆಯಲ್ಲಿ ಡಿ.17ರಂದು ಅಂಗೀಕರಿಸಲಾಯಿತು. ಹೀಗಾಗಿ ಇನ್ಮುಂದೆ ನಿಯಮ ಮೀರಿದಂತ ಮಾಲೀಕರು, ಬ್ರೋಕರ್ ಗಳಿಗೂ ದಂಡ ಫಿಕ್ಸ್ ಆದಂತೆ ಆಗಿದೆ. ಬಾಡಿಗೆ ಹೆಸರಿನಲ್ಲಿ ಕೆಲ ಕಡೆಗಳಲ್ಲಿ ಆಘಾತಕಾರಿ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ದುರುಪಯೋಗಕ್ಕೆ ಅವಕಾಶವಿಲ್ಲದ ಹಾಗೆ ಎಚ್ಚರ ವಹಿಸಿ ಈ ಕಾಯಿದೆಯನ್ನು ತಿದ್ದುಪಡಿ ಮಾಡಬೇಕಿದೆ ಎಂದು ಸದಸ್ಯರಾದ ನವೀನ ಕೆ.ಎಸ್., ಐವನ್ ಡಿ’ಸೋಜಾ, ರಮೇಶಬಾಬು ಹಾಗೂ ಇನ್ನೀತರರು ಸಲಹೆ ಮಾಡಿದರು. ತಪ್ಪಿತಸ್ಥರನ್ನು ದಂಡದ ಮೂಲಕ ಶಿಕ್ಷೆಗೆ ಗುರಿಪಡಿಸುವುದು, ದಂಡದ ಮೊತ್ತ ಹೆಚ್ಚಳ ಮಾಡುವುದು ಕಾಯಿದೆಯ ತಿದ್ದುಪಡಿ ಹಿಂದಿನ ಉದ್ದೇಶವಾಗಿದೆ. ಮೂಲ ಕಾಯಿದೆಯಲ್ಲಿನ ಮಹತ್ವದ ಅಂಶಗಳನ್ನು ತಿದ್ದುಪಡಿ ಮಾಡಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿ, ಮಸೂದೆಯ ಅಂಗೀಕಾರಕ್ಕೆ ಕೋರಿದರು. ಸಭಾಪತಿಯವರು, ವಿಧೇಯಕವನ್ನು ಅಂಗೀಕರಿಸಲು ಧ್ವನಿಮತಕ್ಕೆ ಹಾಕಿದರು. ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ…

Read More

ಬೆಂಗಳೂರು : ರಾಜ್ಯದಲ್ಲಿ ಕಾಯಕ ಗ್ರಾಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಉಲ್ಲೇಖ (1) ರಂತೆ ಮಾನ್ಯ ಮುಖ್ಯಮಂತ್ರಿಯವರು, 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 272 (IV) ರಲ್ಲಿ ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ದತ್ತು ಕಾರ್ಯಕ್ರಮವನ್ನು ಆರಂಭಿಸಲಾಗುವುದು’ ಎಂದು ಘೋಷಿಸಿರುತ್ತಾರೆ. ಈ ಘೋಷಣೆಯನ್ನು ಈಡೇರಿಸಲು “ಕಾಯಕ ಗ್ರಾಮ” ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ. ಉಲ್ಲೇಖ (2) ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಸಿದ್ಧಪಡಿಸುವ Gram Panchayat Performance Ranking ನಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ದತ್ತು ಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಪಂಚಾಯಿತಿ ಕಾರ್ಯನಿರ್ವಹಣೆ, ನಿಯಮಿತವಾಗಿ ವಿವಿಧ ಸಭೆಗಳ ಆಯೋಜನೆ, ತೆರಿಗೆ ವಸೂಲಾತಿ, ನರೇಗಾ, ಸ್ವಚ್ಛ ಭಾರತ್ ಮಿಷನ್-ಗ್ರಾಮೀಣ, ಜಲ ಜೀವನ್ ಮಿಷನ್, ಸಾಮಾಜಿಕ ಲೆಕ್ಕಪರಿಶೋಧನೆ ಮತ್ತು…

Read More

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, : ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ವಾಜಿದ್ (17), ರಾಜಾಹುಸೇನ್ (17) ಹಾಗೂ ಆಸೀಫ್ (18) ಎಂದು ಗುರುತಿಸಲಾಗಿದೆ. ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳು, ವಾಜಿದ್, ಹುಸೇನ್, ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿರುವ ಆಸೀಫ್. ಶ್ರೀರಾಮನಗರದಿಂದ ಹೊಸಹಳ್ಳಿಗೆ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ.

Read More

ರೈಲ್ವೆ ನೇಮಕಾತಿ ಮಂಡಳಿ (RRB) ನಿರುದ್ಯೋಗಿ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿ ಪ್ರಕಟಿಸಿದೆ. ವಿವಿಧ ಇಲಾಖೆಗಳಲ್ಲಿನ ಉದ್ಯೋಗಗಳ ನೇಮಕಾತಿಗಾಗಿ 2026 ರ ಸಮಗ್ರ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಉದ್ದೇಶದಿಂದ ಈ ಕ್ಯಾಲೆಂಡರ್ ಅನ್ನು ಮುಂಚಿತವಾಗಿ ಘೋಷಿಸಲಾಗಿದೆ. ವರ್ಷಗಳಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಯುವಕರಿಗೆ ಇದು ಉತ್ತಮ ಅವಕಾಶ ಎಂದು ಹೇಳಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಫೆಬ್ರವರಿ – ಸಹಾಯಕ ಲೋಕೋ ಪೈಲಟ್.. ಈ ವಾರ್ಷಿಕ ಕ್ಯಾಲೆಂಡರ್ ಪ್ರಕಾರ, 2026 ರ ಆರಂಭದಿಂದ ಅಧಿಸೂಚನೆಗಳ ಸರಣಿ ಪ್ರಾರಂಭವಾಗುತ್ತದೆ. ಫೆಬ್ರವರಿ ತಿಂಗಳಲ್ಲಿ ಸಹಾಯಕ ಲೋಕೋ ಪೈಲಟ್ (ಎಎಲ್ಪಿ) ಹುದ್ದೆಗಳ ನೇಮಕಾತಿಗೆ ಮೊದಲ ಅಧಿಸೂಚನೆ ಬಿಡುಗಡೆಯಾಗಲಿದೆ. ತಾಂತ್ರಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದರ ನಂತರ, ತಂತ್ರಜ್ಞ ವಿಭಾಗಗಳಲ್ಲಿ ಸಾವಿರಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯು ಮಾರ್ಚ್ ತಿಂಗಳಲ್ಲಿ…

Read More

ನವದೆಹಲಿ : ದೆಹಲಿ NCR ನಲ್ಲಿ ವಾಯು ಮಾಲಿನ್ಯವು ಪುರುಷರು ಮತ್ತು ಮಹಿಳೆಯರಲ್ಲಿ ಫಲವತ್ತತೆಯ ಮೇಲೆ ಪರಿಣಾಮ ಬೀರಬಹುದು. ವಿಷಕಾರಿ ಹೊಗೆಯು ಸಂತಾನೋತ್ಪತ್ತಿ ಆರೋಗ್ಯ, ಹಾರ್ಮೋನುಗಳು ಮತ್ತು ಗರ್ಭಧಾರಣೆಯ ಫಲಿತಾಂಶಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ. 2025 ರ ಕೊನೆಯಲ್ಲಿ ದೆಹಲಿ ಮತ್ತು NCR ನ ಇತರ ಭಾಗಗಳಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿತು ಮತ್ತು ಈ ಪ್ರದೇಶವನ್ನು ದೇಶದ ಅತ್ಯಂತ ಪೀಡಿತ ವಲಯಗಳ ಪಟ್ಟಿಯಲ್ಲಿ ಸೇರಿಸಿತು. PM2.5 ನ ಸರಾಸರಿ ಮಟ್ಟವು ಪ್ರತಿ ಘನ ಮೀಟರ್‌ಗೆ 215 ಮೈಕ್ರೋಗ್ರಾಂಗಳಿಗೆ ಏರಿತು, ಇದು ಅಕ್ಟೋಬರ್‌ನಲ್ಲಿ ಕಂಡುಬಂದ ಎರಡು ಪಟ್ಟು ಹೆಚ್ಚಾಗಿದೆ. ಹಲವಾರು ದಿನಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 400 ಕ್ಕಿಂತ ಹೆಚ್ಚಿತ್ತು, ಇದು ಆರೋಗ್ಯವಂತ ವ್ಯಕ್ತಿಗೂ ಸಹ ನಿರ್ಣಾಯಕ ಮಟ್ಟವಾಗಿದೆ. ಪ್ರದೇಶದ ದೊಡ್ಡ ಭಾಗಗಳಲ್ಲಿ ದಟ್ಟವಾದ ಮಬ್ಬು ಆವರಿಸಿದ್ದು, ಜನರು ಉಸಿರಾಟದ ತೊಂದರೆ, ತಲೆ ದಟ್ಟಣೆ ಮತ್ತು ಆಯಾಸದಿಂದ ಬಳಲುತ್ತಿದ್ದಾರೆ. ವರದಿಗಳು ಪ್ರಾಥಮಿಕವಾಗಿ ಶ್ವಾಸಕೋಶ ಮತ್ತು ಹೃದಯರಕ್ತನಾಳದ…

Read More

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ, ಶೀಘ್ರವೇ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಎಲ್ಲಾ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿ ಆಗಲಿದೆ. ಪದೇಪದೇ ಫೆಬ್ರವರಿ, ಮಾರ್ಚ್ ತಿಂಗಳ ಹಣದ ಬಗ್ಗೆ ಮಾಹಿತಿ ಕೇಳಿದ್ದರು. ನಾನು ಪರಿಶೀಲಿಸಿದಾಗ 2 ತಿಂಗಳ ಹಣ ವ್ಯತ್ಯಾಸ ಆಗಿದ್ದು ಗೊತ್ತಾಗಿದೆ. ಸದನವನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶ ನನಗೆ ಇಲ್ಲ ಎಂದರು. ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ…

Read More

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More