Author: kannadanewsnow57

ನವದೆಹಲಿ: ದೇಶದಲ್ಲಿ ಅಡುಗೆ ಅನಿಲದ (LPG) ಪ್ರಮಾಣವನ್ನು ಕಡಿತಗೊಳಿಸಲಾಗುತ್ತಿದೆ ಎಂಬ ವದಂತಿಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ತೆರೆ ಎಳೆದಿದೆ. ಸದ್ಯ ಬಳಕೆಯಲ್ಲಿರುವ 14.2 ಕೆಜಿ ಸಿಲಿಂಡರ್ ಬದಲಿಗೆ ಕೇವಲ 10 ಕೆಜಿ ಗ್ಯಾಸ್ ಮಾತ್ರ ಪೂರೈಸಲಾಗುತ್ತದೆ ಎಂಬ ಸುದ್ದಿಯು ಸಂಪೂರ್ಣ ಸುಳ್ಳು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್‌ಪಿಜಿ ಕೊರತೆಯಾಗಬಹುದು ಎಂಬ ಆತಂಕವಿತ್ತು. ಈ ಕಾರಣದಿಂದಾಗಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೆಚ್ಚಿನ ಮನೆಗಳಿಗೆ ಗ್ಯಾಸ್ ತಲುಪಿಸಲು ಸಿಲಿಂಡರ್ ತೂಕವನ್ನು 10 ಕೆಜಿಗೆ ಇಳಿಸಲು ಚಿಂತನೆ ನಡೆಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಸಚಿವಾಲಯದ ಸ್ಪಷ್ಟನೆ: ಈ ವದಂತಿಯನ್ನು ತಳ್ಳಿಹಾಕಿರುವ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು ಈ ಕೆಳಗಿನ ಅಂಶಗಳನ್ನು ಹಂಚಿಕೊಂಡಿದ್ದಾರೆ. ಸಿಲಿಂಡರ್ ತೂಕ ಇಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ.ಇದೆಲ್ಲವೂ ಕೇವಲ ಊಹಾಪೋಹ ಮತ್ತು ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಅವರು…

Read More

ಪ್ರತಿಯೊಬ್ಬ ಮಹಿಳೆಯೂ ತನ್ನ ಕೂದಲು ಉದ್ದವಾಗಿ, ದಟ್ಟವಾಗಿ ಮತ್ತು ಬಲವಾಗಿರಬೇಕೆಂದು ಬಯಸುತ್ತಾರೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಉತ್ಪನ್ನಗಳನ್ನು ಬಳಸಿದರೂ, ಇಂದಿನ ಬದಲಾದ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಕೂದಲು ಉದುರುವಿಕೆ (Hair Fall) ಸಾಮಾನ್ಯ ಸಮಸ್ಯೆಯಾಗಿದೆ. ಸರಿಯಾದ ಸಮಯದಲ್ಲಿ ಕಾಳಜಿ ವಹಿಸದಿದ್ದರೆ ಕೂದಲು ತೆಳ್ಳಗಾಗಿ ಅಂದಗೆಡಬಹುದು. ಆದರೆ, ನಿಮ್ಮ ಮನೆಯ ಸುತ್ತಮುತ್ತ ಸುಲಭವಾಗಿ ಸಿಗುವ ದಾಸವಾಳದ ಹೂವು ಈ ಸಮಸ್ಯೆಗೆ ಅದ್ಭುತ ಪರಿಹಾರ ನೀಡಬಲ್ಲದು. ದಾಸವಾಳದಲ್ಲಿರುವ ವಿವಿಧ ಪೋಷಕಾಂಶಗಳು ಕೂದಲಿನ ಬುಡವನ್ನು ಬಲಪಡಿಸಿ, ಕೂದಲು ಉದ್ದವಾಗಿ ಮತ್ತು ಕಪ್ಪಾಗಿ ಬೆಳೆಯಲು ಸಹಾಯ ಮಾಡುತ್ತದೆ. ಇದನ್ನು ಬಳಸುವ ಎರಡು ಸುಲಭ ವಿಧಾನಗಳು ಇಲ್ಲಿವೆ: ದಾಸವಾಳದ ಹೇರ್ ಪ್ಯಾಕ್ (Hair Pack) ಒಂದು ವೇಳೆ ನೀವು ತಕ್ಷಣದ ಫಲಿತಾಂಶ ಬಯಸುವುದಾದರೆ ಈ ವಿಧಾನ ಅನುಸರಿಸಿ: ತಯಾರಿಸುವ ವಿಧಾನ: ಸುಮಾರು 10 ರಿಂದ 15 ದಾಸವಾಳದ ಹೂವುಗಳನ್ನು ತೆಗೆದುಕೊಂಡು ಚೆನ್ನಾಗಿ ಸ್ವಚ್ಛಗೊಳಿಸಿ. ನಂತರ ಇವುಗಳನ್ನು ಮಿಕ್ಸಿಯಲ್ಲಿ ಹಾಕಿ ನಯವಾದ ಪೇಸ್ಟ್ ಮಾಡಿಕೊಳ್ಳಿ. ಬಳಸುವ ಕ್ರಮ:…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳು ಕಾರ್ಯನಿರ್ವಹಿಸುತ್ತಿರುವ ಭೂಮಿಯನ್ನು ಸಂರಕ್ಷಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸೋಮವಾರ ವಿಧಾನಸಭೆಯಲ್ಲಿ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮತಿ) ವಿಧೇಯಕ 2026’ ಅನ್ನು ಮಂಡಿಸಲಾಯಿತು. ಯಾವುದೇ ಖಾಸಗಿ ಜಾಗದಲ್ಲಿ ಕನಿಷ್ಠ 12 ವರ್ಷಗಳಿಂದ ಸತತವಾಗಿ ಸರ್ಕಾರಿ ಶಾಲೆ ಅಥವಾ ಕಾಲೇಜು ನಡೆಯುತ್ತಿದ್ದರೆ, ಆ ಭೂಮಿ ಇನ್ನು ಮುಂದೆ ಅಧಿಕೃತವಾಗಿ ಸರ್ಕಾರದ ಸ್ವತ್ತಾಗಲಿದೆ.ಈ ಭೂಮಿಯ ಮೇಲೆ ಈ ಹಿಂದೆ ಯಾವುದೇ ಸಾಲ (ಋಣಭಾರ), ಹಕ್ಕು ಪ್ರತಿಪಾದನೆ ಅಥವಾ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವಿವಾದಗಳಿದ್ದರೂ, ಅವೆಲ್ಲವೂ ಇನ್ನು ಮುಂದೆ ಮಾನ್ಯವಾಗುವುದಿಲ್ಲ. ಅವುಗಳನ್ನು ಸಂಪೂರ್ಣವಾಗಿ ಮುಕ್ತಗೊಳಿಸಿ ಸರ್ಕಾರದ ಹೆಸರಿಗೆ ನೋಂದಾಯಿಸಲಾಗುತ್ತದೆ. ನ್ಯಾಯಾಲಯಕ್ಕೆ ಹೋಗುವಂತಿಲ್ಲ: ಈ ವಿಧೇಯಕದ ಅನ್ವಯ, ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ನ್ಯಾಯಾಲಯದಲ್ಲಿ ದಾವೆ ಹೂಡಲು ಅವಕಾಶವಿಲ್ಲದಂತೆ ನಿರ್ಬಂಧ ವಿಧಿಸಲಾಗಿದೆ. ಯಾತಕ್ಕಾಗಿ ಈ ಹೊಸ ಕಾನೂನು? ರಾಜ್ಯದ ಒಟ್ಟು 48 ಸಾವಿರ ಸರ್ಕಾರಿ ಶಾಲೆಗಳ…

Read More

ಚಾಮರಾಜನಗರ: ನಟರ ಮೇಲಿನ ಅಭಿಮಾನ ಯಾವ ಮಟ್ಟಕ್ಕೆ ಇರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಅವರ ಮೇಲಿನ ಅತೀವ ಪ್ರೀತಿಯಿಂದ ಅಭಿಮಾನಿಯೊಬ್ಬರು ತಮಿಳುನಾಡಿನಲ್ಲಿ ಅವರಿಗಾಗಿ ಪುಟ್ಟ ಗುಡಿಯೊಂದನ್ನು ನಿರ್ಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಚಾಮರಾಜನಗರದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ತಾಲೂಕಿನ ದೊಡ್ಡಗಾಜನೂರಿನಲ್ಲಿ ಈ ಅಪರೂಪದ ಅಭಿಮಾನ ಕಂಡುಬಂದಿದೆ. ಇಲ್ಲಿನ ನಿವಾಸಿ ಸಿದ್ದರಾಜು ಎಂಬುವವರು ಕಿಚ್ಚ ಸುದೀಪ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ತಮ್ಮ ಮನೆಯ ಆವರಣದಲ್ಲಿಯೇ ಸುದೀಪ್ ಅವರಿಗಾಗಿ ಒಂದು ಸಣ್ಣ ಗುಡಿಯನ್ನು ನಿರ್ಮಿಸಿದ್ದಾರೆ. ಈ ಗುಡಿಯಲ್ಲಿ ಮಹರ್ಷಿ ವಾಲ್ಮೀಕಿ, ವೀರ ಮದಕರಿ ನಾಯಕ ಹಾಗೂ ನಟ ಸುದೀಪ್ ಅವರ ಫೋಟೋಗಳನ್ನು ಇಟ್ಟು ಪ್ರತಿದಿನ ಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ‘ಕಿಚ್ಚ ಸಿದ್ದರಾಜು’ ಎಂದೇ ಖ್ಯಾತಿ 28 ವರ್ಷದ ಸಿದ್ದರಾಜು ಅವರು ಐಸ್ ಕ್ಯಾಂಡಿ ಮಾರಾಟ ಮಾಡುವ ಕಾಯಕ ಮಾಡುತ್ತಿದ್ದಾರೆ. ಸುದೀಪ್ ಅವರ ಮೇಲಿನ ಇವರ ಅಭಿಮಾನವನ್ನು ಕಂಡು ಸ್ಥಳೀಯರು ಇವರನ್ನು ಪ್ರೀತಿಯಿಂದ ‘ಕಿಚ್ಚ…

Read More

ಬೆಂಗಳೂರು: ಅಂತರ್ಜಾತಿ ವಿವಾಹದ ಸಂದರ್ಭದಲ್ಲಿ ನಡೆಯುವ ‘ಮರ್ಯಾದೆ ಗೇಡು’ (ಗೌರವ ಹತ್ಯೆ), ದೈಹಿಕ ಹಲ್ಲೆ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಘಟನೆಗಳನ್ನು ತಡೆಯಲು ರೂಪಿಸಲಾಗಿರುವ ಮಹತ್ವದ ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಈ ವಿಧೇಯಕಕ್ಕೆ ‘ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026’ ಎಂದು ಹೆಸರಿಸಲಾಗಿದೆ. ವಿಧೇಯಕದ ಉದ್ದೇಶ ಜಾತಿ ಮತ್ತು ಸಂಪ್ರದಾಯದ ಹೆಸರಿನಲ್ಲಿ ವಿವಾಹದ ಹಕ್ಕನ್ನು ಉಲ್ಲಂಘಿಸಿ ಹಿಂಸೆ ನೀಡುವುದು, ಬೆದರಿಕೆ ಹಾಕುವುದು ಹಾಗೂ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕುವುದನ್ನು ಈ ಕಾನೂನಿನ ಮೂಲಕ ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲಾಗುತ್ತದೆ. ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು, “12ನೇ ಶತಮಾನದಲ್ಲಿ ಬಸವಣ್ಣನವರು ‘ಇವನಾರವ ಇವನಾರವ ಎನ್ನದಿರಿ, ಇವ ನಮ್ಮವ ಇವ ನಮ್ಮವ ಎಂದೆನಿಸಿರಿ’ ಎಂದು ಹೇಳಿದ್ದರು. ಆದರೆ ಇಂದಿಗೂ ಸಮಾಜದಲ್ಲಿ ತಾರತಮ್ಯ ಮುಂದುವರಿದಿದೆ. ಇದನ್ನು ಹೋಗಲಾಡಿಸಲು ಈ ವಿಧೇಯಕ ಅನಿವಾರ್ಯ”…

Read More

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲದ ಕೊರತೆ ಮತ್ತು ಕಾಳಸಂತೆ ಮಾರಾಟವನ್ನು ತಡೆಗಟ್ಟಲು ವಾಣಿಜ್ಯ ಬಳಕೆಯ ಸಿಲಿಂಡರ್ ಪಡೆಯುವವರು ಇನ್ನು ಮುಂದೆ ಕಡ್ಡಾಯವಾಗಿ ಗೇಲ್ (GAIL) ಸಂಸ್ಥೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ನೋಂದಣಿ ಕಡ್ಡಾಯ ಕಾಳಸಂತೆ ಮಾರಾಟ ತಡೆಯಲು ಎಲ್ಲಾ ವಾಣಿಜ್ಯ ಬಳಕೆದಾರರು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ (ಗೇಲ್) ಮೂಲಕ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆದಾರರ ದೈನಂದಿನ ಬೇಡಿಕೆಯಲ್ಲಿ ಶೇ. 20ರಷ್ಟು ಸಿಲಿಂಡರ್ ಪೂರೈಸಲು ಕೇಂದ್ರ ಒಪ್ಪಿಗೆ ನೀಡಿದೆ ಎಂದರು. ಸಿಲಿಂಡರ್ ಹಂಚಿಕೆ ವಿವರ: ಪ್ರತಿದಿನ ಶಿಕ್ಷಣ ಸಂಸ್ಥೆಗಳಿಗೆ: 4,200 ಸರ್ಕಾರಿ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಿಗೆ: 1,200 ಕೃಷಿ ಸಂಬಂಧಿತ ಬಳಕೆದಾರರಿಗೆ: 500 ಹೋಟೆಲ್ ಸೇರಿದಂತೆ ಇತರ ವಾಣಿಜ್ಯ ಉದ್ದೇಶಗಳಿಗೆ: 10,000 ತುರ್ತು ಪರಿಸ್ಥಿತಿಗೆ ಮೀಸಲು: 205 ಒಟ್ಟು ಹಂಚಿಕೆ: 16,105 ಸಿಲಿಂಡರ್‌ಗಳು.…

Read More

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳ (Social Media) ಬಳಕೆಯನ್ನು ನಿರ್ಬಂಧಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಪೋಷಕರು ಮತ್ತು ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿದ ಬಳಿಕವಷ್ಟೇ ಅಂತಿಮ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಮತ್ತು ಜೆಡಿಎಸ್‌ನ ಟಿ.ಎನ್. ಜವರಾಯಿಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.ಶಾಲಾ ಆವರಣದಲ್ಲಿ ಮೊಬೈಲ್ ನಿಷೇಧದ ಬಗ್ಗೆ ಈಗಾಗಲೇ ಆದೇಶಗಳಿವೆಯಾದರೂ, ಶಾಲೆಯ ಹೊರಗೆ ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಹೀಗಾಗಿ ಪೋಷಕರ ಅಭಿಪ್ರಾಯ ಬಹಳ ಮುಖ್ಯ ಎಂದು ಸಚಿವರು ಅಭಿಪ್ರಾಯಪಟ್ಟರು. ವಯಸ್ಸಿನ ಮಿತಿ ವಿಶೇಷವಾಗಿ 16 ವರ್ಷದೊಳಗಿನ ಮಕ್ಕಳ ಮೇಲೆ ಈ ನಿಯಮಗಳು ಕೇಂದ್ರೀಕೃತವಾಗಿರಲಿವೆ.ಇಂದಿನ ದಿನಗಳಲ್ಲಿ ಮೊಬೈಲ್ ಬಳಕೆ ಅನಿವಾರ್ಯವಾಗಿದೆ. ಆದರೆ, ಅದರಲ್ಲಿ ಒಳ್ಳೆಯದಕ್ಕಿಂತ ಹೆಚ್ಚಾಗಿ ಬೇಡದ ವಿಷಯಗಳೇ ಹೆಚ್ಚು ಸಿಗುತ್ತಿವೆ. ಇದು ಮಕ್ಕಳ…

Read More

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಅಕ್ರಮ ಸಂಪರ್ಕ ಹೊಂದಿರುವ ರೈತರು ₹1.50 ಲಕ್ಷ ಪಾವತಿಸಿ ತಮ್ಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಬಹುದು. ಈ ಹಿಂದೆ ಮೂಲಸೌಕರ್ಯ ಒದಗಿಸಲು ₹4.50 ಲಕ್ಷ ಪಾವತಿಸಬೇಕಿತ್ತು. ಆದರೆ ರೈತರ ಹಿತದೃಷ್ಟಿಯಿಂದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ₹3 ಲಕ್ಷ ಕಡಿತಗೊಳಿಸಿ ಕೇವಲ ₹1.50 ಲಕ್ಷಕ್ಕೆ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸಲು ಸರ್ಕಾರ ವಾರ್ಷಿಕವಾಗಿ ₹24 ಸಾವಿರ ಕೋಟಿ ಸಬ್ಸಿಡಿ ನೀಡುತ್ತಿದೆ. ಇದರೊಂದಿಗೆ ‘ಗೃಹ ಜ್ಯೋತಿ’ ಯೋಜನೆಗಾಗಿ ವಾರ್ಷಿಕ ₹9 ಸಾವಿರ ಕೋಟಿ ಮೀಸಲಿಡಲಾಗಿದೆ.ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಒಟ್ಟು ₹42 ಸಾವಿರ ಕೋಟಿ ದೀರ್ಘಾವಧಿ ಸಾಲ ಹೊಂದಿವೆ. ಇದರಲ್ಲಿ ಬೆಸ್ಕಾಂ ಒಂದೇ ₹17,556 ಕೋಟಿ ಸಾಲದಲ್ಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ವಿಧಾನಪರಿಷತ್ತಿನಲ್ಲಿ ಉತ್ತರಿಸಿದ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಅಕ್ರಮವಾಗಿ ಪಾಲಾಗುವುದನ್ನು ತಡೆಯಲು ಆಹಾರ ಇಲಾಖೆ ಈಗ ತಂತ್ರಜ್ಞಾನದ ಮೊರೆ ಹೋಗಿದೆ. ಪಡಿತರ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಅಕ್ಕಿ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ಕಿ ಕಳ್ಳಸಾಗಾಟ ತಡೆಗಟ್ಟಲು ಸಗಟು ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಜಿಪಿಎಸ್ ಆಧಾರಿತ ವಾಹನ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ಇಡೀ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು 5 ಕೋಟಿ ರೂಪಾಯಿ ವೆಚ್ಚದಲ್ಲಿ ಕಮಾಂಡ್ ಕಂಟ್ರೋಲ್ ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದರು. ವೇಬ್ರಿಡ್ಜ್ ವ್ಯವಸ್ಥೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನಾಲ್ಕು ಗೋದಾಮುಗಳಲ್ಲಿ ಈಗಾಗಲೇ ವೇಬ್ರಿಡ್ಜ್‌ಗಳನ್ನು ಅಳವಡಿಸಲಾಗಿದೆ. ಉಳಿದಂತೆ ಬಾಡಿಗೆಗೆ ಪಡೆದಿರುವ ಉಗ್ರಾಣ ನಿಗಮ ಹಾಗೂ ಎಪಿಎಂಸಿ…

Read More

ಬೆಂಗಳೂರು : ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ಅಪ್ರಾಪ್ತ ಸಂತ್ರಸ್ತೆಯ 34 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸಂತ್ರಸ್ತೆಯ ಆರೋಗ್ಯ ಮತ್ತು ಭ್ರೂಣದ ಬೆಳವಣಿಗೆಯನ್ನು ಪರಿಗಣಿಸಿ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ಪೀಠವು, ವೈದ್ಯಕೀಯ ವರದಿಯನ್ನು ಆಧರಿಸಿ ಈ ನಿರ್ಧಾರ ಕೈಗೊಂಡಿದೆ. 34 ವಾರಗಳ ಸುದೀರ್ಘ ಅವಧಿಯ ನಂತರ ಗರ್ಭಪಾತ ಮಾಡುವುದು ಅಕಾಲಿಕ ಹೆರಿಗೆಗೆ ಸಮಾನ. ಇದು ತಾಯಿ ಮತ್ತು ಮಗು ಇಬ್ಬರ ಜೀವಕ್ಕೂ ಗಂಭೀರ ಅಪಾಯ ತಂದೊಡ್ಡಬಹುದು ಎಂದು ವೈದ್ಯಕೀಯ ಮಂಡಳಿ ವರದಿ ನೀಡಿದೆ. ಕಾನೂನಿನ ಪ್ರಕಾರ 24 ವಾರಗಳ ನಂತರ ಗರ್ಭಪಾತಕ್ಕೆ ಅವಕಾಶವಿರುವುದು ತಾಯಿಯ ಜೀವಕ್ಕೆ ತೀರಾ ಅನಿವಾರ್ಯತೆ ಇದ್ದಾಗ ಮಾತ್ರ. ಈ ಪ್ರಕರಣದಲ್ಲಿ ಸಂತ್ರಸ್ತೆಯ ದೈಹಿಕ ಸುರಕ್ಷತೆಯೇ ಆದ್ಯತೆಯಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಸಂತ್ರಸ್ತೆ ಲೈಂಗಿಕ ದೌರ್ಜನ್ಯದಿಂದ ಮಾನಸಿಕ ಅಘಾತಕ್ಕೆ ಒಳಗಾಗಿದ್ದರೂ, ಈ ಹಂತದಲ್ಲಿ ಶಸ್ತ್ರಚಿಕಿತ್ಸೆ…

Read More