Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮಾಲೀಕರು ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮುದ್ರಣದಾರರು ಜಾಹೀರಾತು ಮುದ್ರಿಸುವ ಸಮಯದಲ್ಲಿ ಶೇಕಡ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಹಾಗಾಗಿ ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ಹಾಗೂ ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಮಾಲೀಕರು ಪ್ರಧಾನವಾಗಿ ಶೇಕಡ 60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಕನ್ನಡ ಭಾಷೆ ನಾಮಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ…
ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರಿಗೆ ಬೀದಿ ಪುಂಡರು ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರದಿಂದ ಬಿಟಿಎಂ ಲೇಔಟ್ ಕಡೆಗೆ ಪ್ರಯಾಣಿಸುತ್ತಿದ್ದ ಯುವತಿಗೆ ಕಿಡಿಗೇಡಿಗಳು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಸುಮಾರು 2 ಕಿಲೋಮೀಟರ್ ವರೆಗೂ ಯುವತಿಯನ್ನು ಪುಂಡರು ಫಾಲೋ ಮಾಡಿದ್ದಾರೆ. ಒಂದೇ ಬೈಕ್ ನಲ್ಲಿ ಮೂವರು ಪುಂಡರು ಯುವತಿಯನ್ನು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿ ಸ್ಕೂಟಿ ಮೇಲೆ ತೆರಳುತ್ತಿದ್ದರೆ. ಕಾರಿನಲ್ಲಿ ಹಿಂದೆ ಬರುತ್ತಿದ್ದ ವ್ಯಕ್ತಿ ಈ ವಿಡಿಯೋ ಸೆರೆ ಹಿಡಿದು ವಿಡಿಯೋ ಸಮೇತ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಅಪ್ರಾಪ್ತ ವಯಸ್ಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರೋಷನ್(19) ಮತ್ತು ಅಯಾನ್ (19) ಮತ್ತು ಸ್ಥಳೀಯ ಗ್ಯಾರೇಜ್ನಲ್ಲಿ ಕೆಲಸ ಮಾಡುವ ಅಪ್ರಾಪ್ತ ವಯಸ್ಕ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಬೆಂಗಳೂರು : ಇತ್ತೀಚಿಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಅಲರ್ಟ್ ಆದ ಆರೋಗ್ಯ ಇಲಾಖೆ ಮೊಟ್ಟೆ ಟೆಸ್ಟ್ ಮಾಡಲು ಮುಂದಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ವಿವಿಧ ಮಾದರಿ ಮೊಟ್ಟೆ ಟೆಸ್ಟ್ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮೊಟ್ಟೆ ಸ್ಯಾಂಪಲ್ ರಿಪೋರ್ಟ್ ಬಹಿರಂಗ ಆಗಿದ್ದು ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ತಿಳಿದುಬಂದಿದೆ. 27 ಮೊಟ್ಟೆಗಳ ಸ್ಯಾಂಪಲ್ ಟೆಸ್ಟಿಗೆ ಆರೋಗ್ಯ ಇಲಾಖೆ ಒಳಪಡಿಸಿತ್ತು. ಇದೀಗ ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ವರದಿ ಬಂದಿದೆ. ಸುಮಾರು 60 ಆಯಾಮಗಳಲ್ಲಿ ಮೊಟ್ಟೆ ಟೆಸ್ಟ್ ಮಾಡಲಾಗಿತ್ತು. ಸ್ಯಾಂಪಲ್ ಸಂಗ್ರಹಿಸಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಟೆಸ್ಟ್ ನಡೆಸಿತ್ತು. ಬೆಂಗಳೂರು ಸೇರಿ ರಾಜ್ಯಾದ್ಯಂತ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ರಾಜ್ಯದಲ್ಲಿ 200 ಕ್ಕೂ ಹೆಚ್ಚು ಮೊಟ್ಟೆಗಳ ಸ್ಯಾಂಪಲ್ ಸಂಗ್ರಹಿಸಿದ್ದರು ರಾಜಧಾನಿ ಬೆಂಗಳೂರಿನಲ್ಲಿ 50 ಸ್ಯಾಂಪಲ್ ಕಲೆಕ್ಟ್ ಮಾಡಿದರು. ಇದರಲ್ಲಿ ಇಲಾಖೆಯ…
ಮುಂಬೈ: ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ 56 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪ್ರಶಾಂತ್ ನಡೆಸುತ್ತಿದ್ದ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ 17 ಕೆಜಿ ದ್ರವ ಮೆಫೆಡ್ರೋನ್, 4.10 ಕೆಜಿ ಘನ ಮೆಫೆಡ್ರೋನ್ ವಶಕ್ಕೆ ಪಡೆಯಲಾಗಿದೆ. ದಂಧೆ ನಡೆಸುತ್ತಿದ್ದ ಪ್ರಶಾಂತ್ ಪಾಟೀಲ್ ಮತ್ತು ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖನ್ ರಾಮಲಾಲ್ ಬಿಷ್ಣೋಯಿನನ್ನು ಬಂಧಿಸಲಾಗಿದೆ. ಡಿಸೆಂಬರ್ 21ರಂದು ಮಹಾರಾಷ್ಟ್ರ ಮಾದಕ ದ್ರವ್ಯ ನಿಗ್ರಹ ಕಾರ್ಯಪಡೆ(ANTF) ಕೊಂಕಣ ವಿಭಾಗದ ಅಧಿಕಾರಿಗಳು ಮುಂಬೈನಲ್ಲಿ ದಾಳಿ ನಡೆಸಿ 1.5 ಕೋಟಿ ರೂಪಾಯಿ ಮೌಲ್ಯದ 1.5 ಕೆಜಿ ಮಾದಕ ದ್ರವ್ಯ ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಅಬ್ದುಲ್ ಖಾದಿರ್ ಶೇಖ್ ಎಂಬುವನನ್ನು ಬಂಧಿಸಿದ್ದು, ಆತ ನೀಡಿದ ಮಾಹಿತಿ ಮೇರೆಗೆ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ನನ್ನ ಬಂಧಿಸಲಾಗಿದೆ. ಆತನನ್ನು…
ಇತ್ತೀಚಿನ ದಿನಗಳಲ್ಲಿ ನಾವು ತಿನ್ನುವ ಮತ್ತು ಕುಡಿಯುವ ಪ್ರತಿಯೊಂದೂ ಕಲಬೆರಕೆಯಾಗುತ್ತಿದೆ. ನಾವು ಮುಟ್ಟುವ ಯಾವುದೇ ವಸ್ತುವನ್ನು ಕಲಬೆರಕೆ ಮಾಡಲಾಗುತ್ತದೆ, ಮೆಣಸಿನಕಾಯಿಗೆ ಇಟ್ಟಿಗೆ ಪುಡಿ, ಮಸಾಲೆಗಳಿಗೆ ಮರದ ಪುಡಿ, ಶುಂಠಿಗೆ ಬಾಳೆಹಣ್ಣಿನ ಸಿಪ್ಪೆಯನ್ನು ಸೇರಿಸುವಂತೆ. ನಾವು ಪ್ರತಿದಿನ ಕುಡಿಯುವ ಹಾಲು ಕೂಡ ಕಲಬೆರಕೆಯಾಗುತ್ತಿದೆ. ಇತ್ತೀಚೆಗೆ, ಇದಕ್ಕೆ ಸಂಬಂಧಿಸಿದ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಒಬ್ಬ ವ್ಯಕ್ತಿ ಮನೆಯಲ್ಲಿ ಸರ್ಫ್, ಯೂರಿಯಾ, ಸಂಸ್ಕರಿಸಿದ ಎಣ್ಣೆ ಮತ್ತು ಬಟ್ಟೆ ಒಗೆಯಲು ಬಳಸುವ ಸಂಶ್ಲೇಷಿತ ರಾಸಾಯನಿಕಗಳಿಂದ ಹಾಲು ತಯಾರಿಸುತ್ತಿದ್ದಾನೆ. ಅವನು ಮನೆಯಲ್ಲಿ ರಾಸಾಯನಿಕಗಳಿಂದ ಹಾಲನ್ನು ತಯಾರಿಸಿ ಪ್ಯಾಕೆಟ್ಗಳಲ್ಲಿ ತುಂಬಿಸುತ್ತಿದ್ದಾನೆ. ಈ ಬಗ್ಗೆ ಮಾಹಿತಿ ಪಡೆದ ನಂತರ, ಅಧಿಕಾರಿಗಳು ಅವನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ಘಟನೆ ಮುಂಬೈನ ಅಂಧೇರಿ ಕಪಸ್ವಾಡಿಯಲ್ಲಿ ನಡೆದಿರುವಂತೆ ತೋರುತ್ತದೆ. ಈ ವಿಡಿಯೋವನ್ನು ನೆಟಿಜನ್ ಒಬ್ಬರು ಹಂಚಿಕೊಂಡಿದ್ದು, ಅದು ವೈರಲ್ ಆಗುತ್ತಿದೆ. ಇದರೊಂದಿಗೆ, ಕಲಬೆರಕೆ ಹಾಲು ತಯಾರಿಸುತ್ತಿರುವ ವ್ಯಕ್ತಿಯ ಮೇಲೆ ನೆಟಿಜನ್ಗಳು ತೀವ್ರ ಕೋಪ ವ್ಯಕ್ತಪಡಿಸುತ್ತಿದ್ದಾರೆ. ಅವನ ವಿರುದ್ಧ ಕಠಿಣ ಕ್ರಮ…
ಬೆಂಗಳೂರು : ಹೊಸ ವರ್ಷಾಚರಣೆಗೆ ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ. ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು. ಪಟಾಕಿ ಸಿಡಿಸುವಂತಿಲ್ಲ. ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ. ಪ್ರಚೋದನಕಾರಿ ಹಾಡು ಹಾಕಬಾರದು. ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಕಾರ್ಯಕ್ರಮದ ಸ್ಥಳದಲ್ಲಿ ಅಗ್ನಿ…
ಬೆಂಗಳೂರು : 2026 ರ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ ಪ್ರಾಯೋಗಿಕ ಪರೀಕ್ಷೆಗಳನ್ನು 2026ರ ಜನವರಿ ಮತ್ತು ಫೆಬ್ರವರಿ ಮಾಹೆಯಲ್ಲಿ ದಿನಾಂಕ: 27-01-2026 ರಿಂದ 14-02-2026 ರವರೆಗೆ ನಡೆಸುವ ಸಂಪೂರ್ಣ ಜವಾಬ್ದಾರಿಯು ಆಯಾ ಜಿಲ್ಲಾ ಉಪನಿರ್ದೇಶಕರದ್ದಾಗಿರುತ್ತದೆ. ಪ್ರಾಯೋಗಿಕ ಪರೀಕ್ಷೆಗಳಿರುವ ವಿಷಯಗಳಲ್ಲಿ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದು ತಾತ್ವಿಕ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಪಡೆಯುತ್ತಿರುವುದು ಮಂಡಲಿಯ ಗಮನಕ್ಕೆ ಬಂದಿರುತ್ತದೆ. ಇದು ಪ್ರಾಯೋಗಿಕ ಪರೀಕ್ಷೆಗಳ ಮೌಲ್ಯಮಾಪನದ ಪಾವಿತ್ರ್ಯತೆಯ ಬಗ್ಗೆ ಸಂದೇಹ ಮೂಡಿಸುತ್ತದೆ. ಇದನ್ನು ಮಂಡಲಿಯು ಗಂಭೀರವಾಗಿ ಪರಿಗಣಿಸಿದ್ದು 2025-26ರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಲ್ಲಿ ಈ ಕೆಳಗಿನ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಿದೆ. ಜಿಲ್ಲಾ ಉಪನಿರ್ದೇಶಕರುಗಳ ಕರ್ತವ್ಯಗಳು ಮತ್ತು ಜವಾಬ್ದಾರಿಗಳು:- 1. 2026ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ…
ದೇಶದಲ್ಲಿ ಆಧಾರ್ ಕಾರ್ಡ್ ಎಷ್ಟು ಮುಖ್ಯ ಎಂದು ಎಲ್ಲರಿಗೂ ತಿಳಿದಿದೆ. ದೈನಂದಿನ ಹಣಕಾಸು ವಹಿವಾಟಿನಿಂದ ಹಿಡಿದು ಸರ್ಕಾರಿ ಕಲ್ಯಾಣ ಯೋಜನೆಗಳವರೆಗೆ, ಅದು ಎಲ್ಲದಕ್ಕೂ ‘ಆಧಾರ್’ ಆಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಈ ಮಹತ್ವದ ಆಧಾರ್ಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಇದರ ನಿಯಮಗಳು ಡಿಸೆಂಬರ್ 31 ರ ಮಧ್ಯರಾತ್ರಿಯ ನಂತರ, ಅಂದರೆ ಹೊಸ ವರ್ಷ 2026 ರಲ್ಲಿ ಜಾರಿಗೆ ಬರಲಿವೆ. ಆಧಾರ್ ಕಾರ್ಡ್ ಹೊಸ ವಿನ್ಯಾಸ ಡಿಜಿಟಲ್ ವಂಚನೆಗಳು ಮತ್ತು ಡೇಟಾ ದುರುಪಯೋಗದ ಘಟನೆಗಳಲ್ಲಿ ಪ್ರಸ್ತುತ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಯುಐಡಿಎಐ ಈಗಾಗಲೇ ಡಿಸೆಂಬರ್ 1, 2025 ರಿಂದ ಆಧಾರ್ನ ಹೊಸ ವಿನ್ಯಾಸವನ್ನು ಘೋಷಿಸಿದೆ. ಈ ಹೊಸ ಕಾರ್ಡ್ ನಿಮ್ಮ ಫೋಟೋ ಮತ್ತು ಸುರಕ್ಷಿತ ಕ್ಯೂಆರ್ ಕೋಡ್ ಅನ್ನು ಮಾತ್ರ ಹೊಂದಿರುತ್ತದೆ. ನಿಮ್ಮ ಹೆಸರು ಮತ್ತು ಆಧಾರ್ ಸಂಖ್ಯೆ ಇರುವುದಿಲ್ಲ. ಜೂನ್ 14, 2026 ರೊಳಗೆ ಎಲ್ಲಾ ಕಾರ್ಡ್ ವಿನ್ಯಾಸಗಳನ್ನು ನವೀಕರಿಸಲು ಯುಐಡಿಎಐ. ಫೋಟೋಕಾಪಿಗಳ ಬಳಕೆಯ ಮೇಲಿನ…
ಬೆಂಗಳೂರು : 2026 ರ ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್ ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು. ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು.ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸುವುದು.ಹೊರವಲಯಗಳಲ್ಲಿ ಅಥವಾ…
ಸಾಮಾನ್ಯ ಜನರಿಗೆ ಮನೆ, ಸೈಟ್ ಖರೀದಿಸುವುದು ಕನಸಿನಂತೆ. ಇಂದಿನ ಹೆಚ್ಚುತ್ತಿರುವ ಹಣದುಬ್ಬರದಲ್ಲಿ, ಅನೇಕ ಜನರು ಮನೆ ಖರೀದಿಸಲು ಸಾಲ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮನೆ,ಸೈಟ್ ಖರೀದಿಸುತ್ತಿದ್ದರೆ, ಬಿಲ್ಡರ್ನಿಂದ ನೀವು ಪಡೆಯಬೇಕಾದ ಪ್ರಮುಖ ದಾಖಲೆಗಳ ಬಗ್ಗೆ ನೀವು ತಿಳಿದಿರಬೇಕು. ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯ. ಅದಕ್ಕಾಗಿಯೇ ಈ ಪ್ರಕ್ರಿಯೆಯಲ್ಲಿ ಮಾಡಿದ ಯಾವುದೇ ತಪ್ಪು ಭವಿಷ್ಯದಲ್ಲಿ ಗಮನಾರ್ಹ ಸಮಸ್ಯೆಗಳನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಆಸ್ತಿ ದಾಖಲೆಗಳನ್ನು ಪರಿಶೀಲಿಸುವಾಗ ಖರೀದಿದಾರರು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅಂತಹ ಒಂದು ದಾಖಲೆಯೆಂದರೆ ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರ. ಇದು ಆಸ್ತಿ ನೋಂದಣಿ ಮತ್ತು ರೂಪಾಂತರ ದಾಖಲೆಗಳಷ್ಟೇ ಮುಖ್ಯವಾಗಿದೆ. ಈ ಪ್ರಮಾಣಪತ್ರ ಏಕೆ ಅಗತ್ಯ? ಯಾವುದೇ ಆಸ್ತಿಯನ್ನು ಖರೀದಿಸಲು ನೋಂದಣಿ ದಾಖಲೆಗಳು ಮತ್ತು ರೂಪಾಂತರ ದಾಖಲೆಗಳು ಎಷ್ಟು ಮುಖ್ಯವೋ, ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರವೂ ಅಷ್ಟೇ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ದೆಹಲಿ ಮತ್ತು ಮುಂಬೈನಂತಹ ಪ್ರಮುಖ ನಗರಗಳ ಖರೀದಿದಾರರಿಗೆ ಇದು ಹೆಚ್ಚು ಮುಖ್ಯವಾಗಿದೆ. ಆದ್ದರಿಂದ, ಬಿಲ್ಡರ್ನಿಂದ ಮನೆ ಖರೀದಿಸುವಾಗ ನಾನ್-ಎನ್ಕಂಬ್ರನ್ಸ್…














