Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಪೂರ್ವ ಮಳೆ ಚಟುವಟಿಕೆಗಳು ಚುರುಕುಗೊಂಡಿದ್ದು, ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ನಗರದಲ್ಲಿ ಗರಿಷ್ಠ ತಾಪಮಾನ 36°C ಮತ್ತು ಕನಿಷ್ಠ ತಾಪಮಾನ 24°C ದಾಖಲಾಗುವ ನಿರೀಕ್ಷೆಯಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು ಎಂದು ಸೂಚಿಸಲಾಗಿದೆ. ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್? ಮಳೆಯ ತೀವ್ರತೆಯನ್ನು ಆಧರಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಈ ಕೆಳಗಿನಂತೆ ಎಚ್ಚರಿಕೆ ನೀಡಲಾಗಿದೆ: ಆರೆಂಜ್ ಅಲರ್ಟ್: ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು…
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತು ಹೋಟೆಲ್ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದ್ದು, ಇದು ಹೋಟೆಲ್ ಉದ್ಯಮದ ಮೇಲೆ ಭಾರಿ ಪರಿಣಾಮ ಬೀರಿದೆ. ಮೇ 1, 2026ರಿಂದ ಜಾರಿಗೆ ಬರುವಂತೆ ಈ ಬೆಲೆ ಏರಿಕೆ ಘೋಷಣೆಯಾಗಿದೆ. ಈಗಾಗಲೇ ದಿನಸಿ ಪದಾರ್ಥಗಳು ಹಾಗೂ ತರಕಾರಿ ಬೆಲೆ ಗಗನಕ್ಕೇರಿರುವುದರಿಂದ ಹೋಟೆಲ್ ನಿರ್ವಹಣೆ ಕಷ್ಟಕರವಾಗಿತ್ತು. ಈಗ ಏಕಾಏಕಿ ಸಿಲಿಂಡರ್ ದರದಲ್ಲಿ ಸುಮಾರು ಒಂದು ಸಾವಿರ ರೂಪಾಯಿಗಳಷ್ಟು ಏರಿಕೆಯಾಗಿರುವುದು ಹೋಟೆಲ್ ಮಾಲೀಕರಿಗೆ ‘ಗಾಯದ ಮೇಲೆ ಬರೆ’ ಎಳೆದಂತಾಗಿದೆ. ಶೀಘ್ರದಲ್ಲೇ ದರ ಏರಿಕೆ ಸಾಧ್ಯತೆ? ವಾಣಿಜ್ಯ ಸಿಲಿಂಡರ್ ದರ ಏರಿಕೆಯ ಬೆನ್ನಲ್ಲೇ, ರಾಜ್ಯದಾದ್ಯಂತ ಹೋಟೆಲ್ಗಳಲ್ಲಿ ಊಟ ಮತ್ತು ತಿಂಡಿಯ ದರಗಳನ್ನು ಹೆಚ್ಚಿಸಲು ಹೋಟೆಲ್ ಮಾಲೀಕರ ಸಂಘ ಚಿಂತನೆ ನಡೆಸುತ್ತಿದೆ. ನಷ್ಟವನ್ನು ಸರಿದೂಗಿಸಲು ಶೇ. 10 ರಿಂದ 20 ರಷ್ಟು ದರ ಹೆಚ್ಚಳ ಮಾಡುವ…
ಬೆಂಗಳೂರು : “ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ ಐದು ಪಾಲಿಕೆಗಳಲ್ಲಿ ಮೇ 16 ರಿಂದ ಪ್ರತಿ ಶನಿವಾರ ಸುಮಾರು 50 ಕಡೆಗಳಲ್ಲಿ ಓಪನ್ ಹೌಸ್ ಕೌಂಟರ್ ತೆರೆದು. ‘ನಮ್ಮ ಇ ಖಾತಾ’ ಆಂದೋಲನ ನಡೆಸಲಾಗುವುದು. ಜನರಿಗೆ ಭೂಮಿ ಗ್ಯಾರಂಟಿ ನೀಡಲಾಗುವುದು” ಎಂದೂ ಅವರು ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು. “ಪಾಲಿಕೆ ಕಚೇರಿಗಳಲ್ಲಿ ಜನಸಂದಣಿ ಉಂಟಾಗಬಹುದು ಎಂದು ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ಈ ಆಂದೋಲನ ಹಮ್ಮಿಕೊಳ್ಳಲಾಗುವುದು. ಪ್ರತಿ ವಾರ ಅಂದಾಜು 5 ಸಾವಿರ ಜನರ ದೂರುಗಳಿಗೆ ಪರಿಹಾರ ನೀಡಲಾಗುವುದು. ಪ್ರತಿ ಪಾಲಿಕೆಗಳಲ್ಲಿ 5-10 ಕೌಂಟರ್ ಗಳನ್ನು ತೆರೆಯಲಾಗುವುದು. ದಟ್ಟಣೆ ಇರುವ ಕಡೆ ಹೆಚ್ಚು ಕೌಂಟರ್ ಗಳು, ಕಡಿಮೆ ದಟ್ಟಣೆ ಇರುವ ಕಡೆ…
ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ಒಂಬತ್ತು ರಾಜ್ಯಗಳಲ್ಲಿ ಆದಾಯದ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಹೊರೆಯ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ರಾಜ್ಯಗಳು ಮುಂಬರುವ ದಿನಗಳಲ್ಲಿ ಗಂಭೀರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಬಹುದು ಎಂದು ಕೇಂದ್ರ ಎಚ್ಚರಿಸಿದೆ. ಗ್ಯಾರಂಟಿ ಯೋಜನೆಗಳ ಮೇಲೆ ಕಣ್ಣು ಆದಾಯದ ಕೊರತೆಗೆ ನೇರ ಕಾರಣಗಳನ್ನು ಕೇಂದ್ರ ಉಲ್ಲೇಖಿಸದಿದ್ದರೂ, ರಾಜ್ಯ ಸರ್ಕಾರಗಳು ಘೋಷಿಸಿರುವ ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ಈ ಹಿಂದೆಯೇ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ವಿಶೇಷವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕೂಡ ಇಂತಹ ಯೋಜನೆಗಳಿಂದ ರಾಜ್ಯಗಳ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಕೇಂದ್ರದ ಎಚ್ಚರಿಕೆಯ ಪ್ರಮುಖ ಅಂಶಗಳು: ಆರ್ಥಿಕ ಹೊರೆ: ಹೆಚ್ಚಿನ ಹಣಕಾಸು ಕೊರತೆ ಮತ್ತು ಸಾಲದ ಹೊರೆಯಿಂದಾಗಿ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ಬಾಹ್ಯ ಬಿಕ್ಕಟ್ಟುಗಳ ಭೀತಿ: ಮಧ್ಯಪ್ರಾಚ್ಯದ ಬಿಕ್ಕಟ್ಟಿನಂತಹ ಜಾಗತಿಕ ವಿದ್ಯಮಾನಗಳು ಮರುಕಳಿಸಿದರೆ, ಹಣಕಾಸಿನ ನಿರ್ವಹಣೆ ಮತ್ತಷ್ಟು ಕಷ್ಟವಾಗಲಿದೆ. ಅಭಿವೃದ್ಧಿಗೆ ಅಡ್ಡಿ: ಆರ್ಥಿಕ ಮುಗ್ಗಟ್ಟಿನಿಂದಾಗಿ ಆದ್ಯತಾ ವಲಯಗಳಿಗೆ…
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಬರೋಬ್ಬರಿ 56,432 ಸರ್ಕಾರಿ ಹುದ್ದೆಗಳ ತುರ್ತು ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಮತ್ತು ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸಲು 400 ರೋಸ್ಟರ್ ಬಿಂದುಗಳನ್ನು (Roster Points) ಅನುಸರಿಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಇದ್ದ 100 ರೋಸ್ಟರ್ ಬಿಂದುಗಳ ಬದಲಾಗಿ, ಇನ್ನು ಮುಂದೆ 400 ರೋಸ್ಟರ್ ಬಿಂದುಗಳ ವಲಯಗಳಾಗಿ ವಿಂಗಡಿಸಿ ನೇಮಕಾತಿ ನಡೆಸಲಾಗುವುದು. 100 ಬಿಂದುಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಕಠಿಣವಾಗಿದ್ದರಿಂದ ಈ ಬದಲಾವಣೆ ತರಲಾಗಿದೆ.2025ರ ಸೆಪ್ಟೆಂಬರ್ 3ರ ನಂತರ ಹೊರಡಿಸಲಾಗಿದ್ದ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆಯಲು ಸಂಪುಟ ನಿರ್ಧರಿಸಿದೆ (ಸ್ಪರ್ಧಾತ್ಮಕ ಪರೀಕ್ಷೆ ನಡೆದ ಪ್ರಕರಣಗಳನ್ನು ಹೊರತುಪಡಿಸಿ). ಹೊಸ ನಿಯಮಾವಳಿಗಳೊಂದಿಗೆ ಇವುಗಳಿಗೆ ಮರು ಅಧಿಸೂಚನೆ ಹೊರಡಿಸಲಾಗುವುದು. ಒಳ ಮೀಸಲಾತಿ ಜಾರಿ: ಹೊಸ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿಯ (SC) ಒಳ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಒಟ್ಟು ಶೇ.15 ರಷ್ಟು ಮೀಸಲಾತಿಯಲ್ಲಿ:…
ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮವು (ಬೆಸ್ಕಾಂ) ಗೃಹ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ಒಟ್ಟು 91 ಪೈಸೆ ದರ ಹೆಚ್ಚಳ ಮಾಡಿದ್ದು, ಮೇ ತಿಂಗಳಿನಿಂದಲೇ ಈ ಹೊಸ ದರ ಜಾರಿಗೆ ಬರಲಿದೆ. ಈಗಾಗಲೇ ಏಪ್ರಿಲ್ ತಿಂಗಳಿನಿಂದ ಪ್ರತಿ ಯೂನಿಟ್ಗೆ 35 ಪೈಸೆ ಏರಿಕೆ ಮಾಡಲಾಗಿತ್ತು. ಪ್ರಸ್ತುತ ಮೇ ತಿಂಗಳಿನಿಂದ ‘ಟ್ರೂ ಅಪ್ ಚಾರ್ಜ್’ ಹೆಸರಿನಲ್ಲಿ ಹೆಚ್ಚುವರಿಯಾಗಿ 56 ಪೈಸೆ ದರ ವಿಧಿಸಲಾಗುತ್ತಿದೆ.ಒಟ್ಟಾರೆಯಾಗಿ ಗ್ರಾಹಕರು ಪ್ರತಿ ಯೂನಿಟ್ಗೆ 91 ಪೈಸೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ವಾಣಿಜ್ಯ ಬಳಕೆದಾರರಿಗೆ ‘ಡಬಲ್’ ಹೊರೆ: ಗೃಹ ಬಳಕೆದಾರರಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ಈ ಬೆಲೆ ಏರಿಕೆ ಮತ್ತಷ್ಟು ಆಘಾತಕಾರಿಯಾಗಿದೆ. ವಿವಿಧ ವರ್ಗದ ವಾಣಿಜ್ಯ ಗ್ರಾಹಕರಿಗೆ ಪ್ರತಿ ಯೂನಿಟ್ಗೆ ₹1.10 ರಿಂದ ಗರಿಷ್ಠ ₹2.81 ರವರೆಗೆ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಕೆಇಆರ್ಸಿ (KERC) ಈಗಾಗಲೇ ಕೈಗಾರಿಕಾ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್ ದರವನ್ನು ಪರಿಷ್ಕರಿಸಲು ಅನುಮತಿ ನೀಡಿದೆ. ಗೃಹಜ್ಯೋತಿ ಫಲಾನುಭವಿಗಳಿಗೆ ವಿನಾಯಿತಿ: ಸರ್ಕಾರದ ‘ಗೃಹಜ್ಯೋತಿ’ ಯೋಜನೆಯಡಿ ಉಚಿತ…
ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಹಾಗೂ ಆಟೋ ಚಾಲಕರಿಗೆ ಈಗ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ಹಿನ್ನೆಲೆಯಲ್ಲಿ ಆಟೋ LPG (Liqueified Petroleum Gas) ದರದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ದರ ಎಷ್ಟು? ಮೇ.1ರಿಂದ ಜಾರಿಗೆ ಬರುವಂತೆ ಆಟೋ ಗ್ಯಾಸ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 5.73 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಪ್ರತಿ ಲೀಟರ್ಗೆ 89 ರೂಪಾಯಿ ಇದ್ದ ದರವು, ಈ ಏರಿಕೆಯ ನಂತರ 95.08 ರೂಪಾಯಿಗೆ ತಲುಪಿದೆ. ಚಾಲಕರ ಆತಂಕ ದಿಢೀರ್ ಎಂದು ಲೀಟರ್ಗೆ ಸುಮಾರು 6 ರೂಪಾಯಿಯಷ್ಟು ಏರಿಕೆಯಾಗಿರುವುದು ಆಟೋ ಚಾಲಕರ ನಿದ್ದೆಗೆಡಿಸಿದೆ. ಇಂಧನ ದರ ಏರಿಕೆಯಾದಷ್ಟೂ ಚಾಲಕರ ನಿವ್ವಳ ಲಾಭ ಕಡಿಮೆಯಾಗಲಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಲಿದೆ. ಗ್ಯಾಸ್ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಆಟೋ ಪ್ರಯಾಣದ ದರವನ್ನು (Fare) ಹೆಚ್ಚಿಸುವಂತೆ ಚಾಲಕರು ಮತ್ತು ಸಂಘಟನೆಗಳು ಒತ್ತಾಯಿಸುವ ಸಾಧ್ಯತೆಯಿದೆ. ಇದು ನೇರವಾಗಿ ಸಾಮಾನ್ಯ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಿದೆ.
ಬೆಂಗಳೂರು: ರಾಜ್ಯದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿರುವ ಗೃಹರಕ್ಷಕ ದಳ (Home Guards) ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಡಿಜಿ ಮತ್ತು ಐಜಿಪಿ ಕಚೇರಿ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ದೂರಿನನ್ವಯ ಈ ಆದೇಶ ಹೊರಡಿಸಲಾಗಿದೆ. ಅಧಿಕಾರವಿಲ್ಲದಿದ್ದರೂ ಹಲವು ಕಡೆ ಗೃಹರಕ್ಷಕ ದಳದ ಸಿಬ್ಬಂದಿ ಮತ್ತು ಸಶಸ್ತ್ರ ಪಡೆ ಸಿಬ್ಬಂದಿಗಳು ವಾಹನಗಳನ್ನು ನಿಲ್ಲಿಸಿ ಸವಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದೇಶದಲ್ಲಿ ಏನಿದೆ? ಮೋಟಾರು ವಾಹನ ಕಾಯ್ದೆ 1988ರ ಅನ್ವಯ, ಕೇವಲ ಸಹಾಯಕ ಪೊಲೀಸ್ ಉಪ ನಿರೀಕ್ಷಕ (ASI) ಮತ್ತು ಅದಕ್ಕಿಂತ ಮೇಲ್ಪಟ್ಟ ದರ್ಜೆಯ ಅಧಿಕಾರಿಗಳಿಗೆ ಮಾತ್ರ ವಾಹನ ತಪಾಸಣೆ ನಡೆಸಲು ಮತ್ತು ದಂಡ ವಿಧಿಸಲು ಅಧಿಕಾರವಿರುತ್ತದೆ.ಪೊಲೀಸ್ ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್ಗಳು ಕೇವಲ ಸಂಚಾರ ನಿಯಮ ಉಲ್ಲಂಘನೆಗಳ ಬಗ್ಗೆ ಎಫ್ಟಿವಿಆರ್ (FTVR) ವರದಿಯ ಮೂಲಕ…
ನವದೆಹಲಿ : ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ಬರೋಬ್ಬರಿ 9,195 ಕಾನ್ಸ್ಟೇಬಲ್ (ಟೆಕ್ನಿಕಲ್ ಮತ್ತು ಟ್ರೇಡ್ಸ್ಮ್ಯಾನ್) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಮತ್ತು ಪ್ರಮುಖ ಮಾಹಿತಿ ಒಟ್ಟು ಹುದ್ದೆಗಳು: 9,195 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಏಪ್ರಿಲ್ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಮೇ 2026 ಅಧಿಕೃತ ವೆಬ್ಸೈಟ್: rect.crpf.gov.in ಅಥವಾ crpf.gov.in ಶೈಕ್ಷಣಿಕ ಅರ್ಹತೆ ಡ್ರೈವರ್: ಹತ್ತನೇ ತರಗತಿ (Matric) ಉತ್ತೀರ್ಣರಾಗಿರಬೇಕು ಮತ್ತು ಭಾರೀ ಸಾರಿಗೆ ವಾಹನ ಚಾಲನಾ ಪರವಾನಗಿ (Heavy Vehicle Driving License) ಹೊಂದಿರಬೇಕು. ಮೆಕ್ಯಾನಿಕ್ ಮೋಟಾರ್ ವೆಹಿಕಲ್: ಹತ್ತನೇ ತರಗತಿಯೊಂದಿಗೆ 2 ವರ್ಷದ ITI (Mechanic Motor Vehicle) ಪೂರ್ಣಗೊಳಿಸಿರಬೇಕು. ಇತರ ಟ್ರೇಡ್ಗಳು: ಹತ್ತನೇ ತರಗತಿ ಉತ್ತೀರ್ಣ ಹಾಗೂ ಸಂಬಂಧಪಟ್ಟ ಕೆಲಸದಲ್ಲಿ ಪರಿಣಿತಿ ಹೊಂದಿರಬೇಕು. ಪಯೋನಿಯರ್ ವಿಂಗ್ (ಮೇಸನ್/ಎಲೆಕ್ಟ್ರಿಷಿಯನ್): ಹತ್ತನೇ ತರಗತಿಯೊಂದಿಗೆ…
ಬೆಂಗಳೂರು: ಸ್ವಂತ ಮನೆ ಎಂಬುದು ಪ್ರತಿಯೊಬ್ಬರ ಜೀವಮಾನದ ಕನಸು. ಆದರೆ, ಆ ಕನಸನ್ನು ನನಸಾಗಿಸಲು ತೆಗೆದುಕೊಳ್ಳುವ ‘ಹೋಮ್ ಲೋನ್’ (Home Loan) ನಮ್ಮನ್ನು ಮುಂದಿನ 20 ವರ್ಷಗಳ ಕಾಲ ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತದೆ. ನಾವು ಬ್ಯಾಂಕಿನಿಂದ ಪಡೆದ ಅಸಲಿಗಿಂತ, ನಾವು ಕಟ್ಟುವ ಬಡ್ಡಿಯೇ ಹೆಚ್ಚಾಗಿರುವುದು ಆತಂಕಕಾರಿ ವಿಷಯ. ಉದಾಹರಣೆಗೆ, ನೀವು 50 ಲಕ್ಷ ರೂಪಾಯಿ ಸಾಲ ಪಡೆದರೆ, 20 ವರ್ಷಗಳಲ್ಲಿ ಬರೋಬ್ಬರಿ 55 ಲಕ್ಷ ರೂಪಾಯಿಗಳನ್ನು ಬಡ್ಡಿಯ ರೂಪದಲ್ಲೇ ಪಾವತಿಸುತ್ತೀರಿ! ಈ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ, ಸಾಲದ ಅವಧಿಯನ್ನು ಅರ್ಧಕ್ಕೆ ಇಳಿಸಲು ಆರ್ಥಿಕ ತಜ್ಞರು ಕೆಲವು ಅದ್ಭುತ ತಂತ್ರಗಳನ್ನು ಹಂಚಿಕೊಂಡಿದ್ದಾರೆ. ಅವು ಇಲ್ಲಿವೆ: 1. 13ನೇ EMI ಮ್ಯಾಜಿಕ್! ಸಾಮಾನ್ಯವಾಗಿ ನಾವು ವರ್ಷಕ್ಕೆ 12 ಇಎಂಐಗಳನ್ನು ಪಾವತಿಸುತ್ತೇವೆ. ಆದರೆ, ವರ್ಷಕ್ಕೊಮ್ಮೆ ನಿಮ್ಮ ಶಕ್ತಿಯನುಸಾರ ಒಂದು ಹೆಚ್ಚುವರಿ ಇಎಂಐ (13ನೇ ಇಎಂಐ) ಅನ್ನು ಮುಂಚಿತವಾಗಿ ಪಾವತಿಸಿ. ಈ ಹಣ ನೇರವಾಗಿ ನಿಮ್ಮ ‘ಅಸಲು’ (Principal) ಮೊತ್ತವನ್ನು ಕಡಿಮೆ ಮಾಡುತ್ತದೆ. ಸಾಲ ಪಡೆದ…














