Author: kannadanewsnow57

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸುವುದು, ಒತ್ತುವರಿ ತೆರವುಗೊಳಿಸಲು ವಿಫಲರಾಗಿರುವ ಅಧಿಕಾರಿಗಳು, ಭೂ ಕಬಳಿಕೆಗೆ ದುಷ್ಪ್ರೇರಣೆ ನೀಡುವ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಶಾಮೀಲಾದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಾನೂನು, ಶಿಸ್ತು ಕ್ರಮದ ಬಗ್ಗೆ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ಸರ್ಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಹಾಗೂ ಅಕ್ರಮ ಹಿಡುವಳಿಗಳನ್ನು ಸಕ್ರಮಗೊಳಿಸುವಿಕೆ ಕುರಿತು ವರದಿ ಸಂಖ್ಯೆ: 05/2018 ಸಲ್ಲಿಸಿರುತ್ತಾರೆ. ಸದರಿ ವರದಿಯ ಬಗ್ಗೆ ಕರ್ನಾಟಕ ವಿಧಾನ ಮಂಡಲದ 2019-20ನೇ ಸಾಲಿನ 14.01.2020ರಂದು ಸಭೆ ನಡೆಸಿದ್ದು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ದಿನಾಂಕ: 07.01.2020 ಮತ್ತು ಕಬಳಿಕೆಯಾಗಿರುವ ಸರ್ಕಾರಿ ಜಮೀನುಗಳನ್ನು ಹಿಂಪಡೆಯುವ ಪ್ರಕ್ರಿಯೆ ಮಂದ ಗತಿಯಲ್ಲಿಯಲ್ಲಿರುವುದು, ಭೂ ಕಬಳಿಕೆದಾರರು ಹಾಗೂ ದುಷ್ಟೇರಣೆ ನೀಡಿದವರ ವಿರುದ್ಧ ಕಠಿಣ ಕ್ರಮಗಳಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿರುತ್ತದೆ ಎಂದಿದೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಕಲಂ 192 192-29…

Read More

ನವದೆಹಲಿ : ವಾಟ್ಸಾಪ್, ಟೆಲಿಗ್ರಾಮ್, ಸಿಗ್ನಲ್, ಸ್ನ್ಯಾಪ್ಚಾಟ್, ಶೇರ್ಚಾಟ್, ಜಿಯೋಚಾಟ್, ಅರಟ್ಟೈ ಮತ್ತು ಜೋಶ್ ನಂತಹ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳನ್ನು ಲಕ್ಷಾಂತರ ಜನರು ಹೇಗೆ ಬಳಸುತ್ತಾರೆ ಎಂಬುದನ್ನು ಬದಲಾಯಿಸುವ ಪ್ರಮುಖ ನಿರ್ದೇಶನವನ್ನು ಭಾರತ ಸರ್ಕಾರ ಹೊರಡಿಸಿದೆ. ಹೌದು, ದೇಶದಲ್ಲಿ ಇನ್ನು ಮುಂದೆ ಸಿಮ್ ಕಾರ್ಡ್ ಇಲ್ಲದೇ ವಾಟ್ಸಪ್ ಬಳಕೆ ಅಸಾಧ್ಯ. ಕೇಂದ್ರ ಸರ್ಕಾರ ಸೈಬರ್ ಭದ್ರತಾ ಕಾರ್ಯಚೌಕಟ್ಟನ್ನು ಬಿಗಿಗೊಳಿಸುತ್ತಿದ್ದು ಅವುಗಳ ನಿಯಮ ಈಗ ವಾಟ್ಸಪ್ ಮತ್ತು ಇತರ ಮೆಸೆಜಿಂಗ್ ಅಪ್ಲಿಕೇಶನ್‌ಗಳಿಗೂ ಅನ್ವಯವಾಗುತ್ತದೆ. ದೂರ ಸಂಪರ್ಕ ಇಲಾಖೆ ಹೊರಡಿಸಿದ ಸೈಬರ್ ಭದ್ರತಾ ತಿದ್ದುಪಡಿ ನಿಯಮದ ಅನುಸಾರ ವಾಟ್ಸಪ್ ಖಾತೆಯು ಎಲ್ಲಾ ಕಾಲದಲ್ಲಿಯೂ ಸಕ್ರಿಯವಾದ ಸಿಮ್ ಕಾರ್ಡ್‌ ಗೆ ಲಿಂಕ್ ಆಗಿರಬೇಕು. ನೀವು ಕಚೇರಿಯಲ್ಲಿ ಕೆಲಸ ಮಾಡುವಾಗ ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಮೂಲಕ ವಾಟ್ಸಾಪ್ ವೆಬ್‌ನಲ್ಲಿ ಚಾಟ್ ಮಾಡುವ ಲಕ್ಷಾಂತರ ಜನರಲ್ಲಿ ಒಬ್ಬರಾಗಿದ್ದರೆ, ಈ ಸುದ್ದಿ ನಿಮ್ಮ ಮನಸ್ಥಿತಿಯನ್ನು ಹಾಳು ಮಾಡಬಹುದು. ಒಮ್ಮೆ ಲಾಗಿನ್ ಆಗಿ ವಾರಗಳವರೆಗೆ ಅಡೆತಡೆಯಿಲ್ಲದೆ ವಾಟ್ಸಾಪ್ ಬಳಸುವ ಸೌಲಭ್ಯವು ಕೊನೆಗೊಳ್ಳಲಿದೆ.…

Read More

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಗ್ರಾಮೀಣ ಪ್ರದೇಶದ ಜನರ ಆಸ್ತಿಗಳಿಗೆ ಇ-ಖಾತಾ ವಿತರಿಸುವ ಮೂಲಕ ಅವುಗಳನ್ನು ಸುರಕ್ಷಿತಗೊಳಿಸುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್. ಶಾಸಕ, ರಿಜ್ವಾನ್ ಅರ್ಷದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸ್ಥಳೀಯವಾಗಿ ಸಂಪನ್ಮೂಲಗಳನ್ನು ಸೃಷ್ಟಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ, ಗ್ರಾಮೀಣರ ಜೀವನಮಟ್ಟ ಸುಧಾರಿಸುವಂತೆ ಗಮನಾರ್ಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಗಿದೆ. ಇದೇ ವೇಳೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು ಪ್ರಸ್ತುತ 43 ವಲಯಗಳ ಅಸಂಘಟಿತ ಕಾರ್ಮಿಕರನ್ನು ಗುರುತಿಸಿದ್ದು, 2017-18ನೇ ಸಾಲಿನಲ್ಲಿ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಅನುಷ್ಠಾನಗೊಳಿಸುತ್ತಿದೆ. ಸದರಿ ಯೋಜನೆಯಡಿ ಈ ಕೆಳಕಂಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. (ಅ) ಸ್ಮಾರ್ಟ್ ಕಾರ್ಡ್ ಸೌಲಭ್ಯ: * 2017-18ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, 5 ಅಸಂಘಟಿತ ವಲಯಗಳಾದ “ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್‌ಗಳು ಹಾಗೂ ಮೆಕ್ಯಾನಿಕ್” ಕಾರ್ಮಿಕರನ್ನು ಏಕ ಶೀರ್ಷಿಕೆ ಮತ್ತು ಏಕ ಚಿಹ್ನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ← 2018-19ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, 6 ಅಸಂಘಟಿತ ವಲಯಗಳಾದ “ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನೂ ಸಹ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಷರತ್ತುಗಳು: ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು. ಪ್ರಸ್ತುತ ಮೇಲ್ಕಂಡ 11 ವರ್ಗಗಳ…

Read More

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಗ್ರಾಮೀಣ ಪ್ರದೇಶದ ಜನರ ಆಸ್ತಿಗಳಿಗೆ ಇ-ಖಾತಾ ವಿತರಿಸುವ ಮೂಲಕ ಅವುಗಳನ್ನು ಸುರಕ್ಷಿತಗೊಳಿಸುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್. ಶಾಸಕ, ರಿಜ್ವಾನ್ ಅರ್ಷದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸ್ಥಳೀಯವಾಗಿ ಸಂಪನ್ಮೂಲಗಳನ್ನು ಸೃಷ್ಟಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ, ಗ್ರಾಮೀಣರ ಜೀವನಮಟ್ಟ ಸುಧಾರಿಸುವಂತೆ ಗಮನಾರ್ಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಗಿದೆ. ಇದೇ ವೇಳೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ…

Read More

ನಾವು ಮೋಜಿಗಾಗಿ ತಿನ್ನುವ ಕೆಲವು ರೀತಿಯ ತಿಂಡಿಗಳು ಅನಾರೋಗ್ಯಕ್ಕೆ ಕಾರಣವಾಗಬಹುದು. ಅಂತಹವುಗಳಲ್ಲಿ ಒಂದು ಸಮೋಸಾ. ಬಾಯಲ್ಲಿ ನೀರೂರಿಸುವ ಈ ಸಮೋಸಾಕ್ಕಾಗಿ ಕಚೇರಿಗಳಿಗೆ ಹೋಗುವವರಿಂದ ಹಿಡಿದು ರಸ್ತೆಯಲ್ಲಿ ತರಕಾರಿಗಳನ್ನು ಮಾರಾಟ ಮಾಡುವ ಸಣ್ಣ ಮಾರಾಟಗಾರರವರೆಗೆ, ಈ ಸಮೋಸಾ ಚಹಾ ಸಮಯದಲ್ಲಿ ತಿಂಡಿಯಾಗಿ ತಿನ್ನುವ ಖಾದ್ಯವಾಗಿದೆ. 10 ಅಥವಾ 20 ರೂ. ಖರ್ಚು ಮಾಡಿ ಅದನ್ನು ಖರೀದಿಸಿ ತಿನ್ನುವ ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಹೃದ್ರೋಗ ವೈದ್ಯರೊಬ್ಬರು ಎಚ್ಚರಿಸುವ ಪೋಸ್ಟ್ ವೈರಲ್ ಆಗಿದೆ. ದೆಹಲಿಯ ಹೃದ್ರೋಗ ತಜ್ಞರೊಬ್ಬರು ವಿವರಿಸುತ್ತಾ, “ವರ್ಷಗಳಿಂದ ಸಮೋಸಾಗಳಂತಹ ಅನಾರೋಗ್ಯಕರ ರಿ ತಿಂಡಿಗಳಿಗಾಗಿ ನಾವು ಎಷ್ಟು ಖರ್ಚು ಮಾಡುತ್ತಿದ್ದೇವೆ. ನಂತರ ನಾವು ಅನಾರೋಗ್ಯಕ್ಕೆ ಒಳಗಾಗುತ್ತೇವೆ ಮತ್ತು ಅದರಿಂದ ಸಾಲಕ್ಕೆ ಸಿಲುಕುತ್ತೇವೆ. ಅನೇಕ ಜನರು ಪ್ರತಿದಿನ ಸಂಜೆ ಸಮೋಸಾ ತಿನ್ನುತ್ತಿದ್ದರೆ ಮತ್ತು ಬೆಲೆ ರೂ. 20ರೂಪಾಯಿಗಳಾದರೆ, ನಿಯಮಿತವಾಗಿ ತಿನ್ನುವವನು ಪ್ರತಿ ವರ್ಷ 300 ರಂತೆ 15 ವರ್ಷಗಳಲ್ಲಿ ಅವುಗಳನ್ನು ತಿಂದರೆ, ಒಟ್ಟು ವೆಚ್ಚ 90,000 ರೂಪಾಯಿಗಳಾಗುತ್ತದೆ. ಅಂದರೆ, ನಾವು ಅನಾರೋಗ್ಯಕರ ಆಹಾರಕ್ಕಾಗಿ ಬಹಳಷ್ಟು…

Read More

ಚಿಕ್ಕಮಗಳೂರು : ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ಪ್ರಿನ್ಸಿಪಾಲ್ ವೊಬ್ಬರು ತರಗತಿಯಿಂದ ಮೂವರು ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತರಗತಿಯಿಂದ ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಬಳಿಕ ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದ ಹಿಂದೂ ಮುಖಂಡರು ಕಾಲೇಜಿಗೆ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Read More

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ 54 ವರ್ಷದ ಮಹಿಳೆಯೊಬ್ಬರಿಗೆ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ. ಹೌದು, ಹೊಸನಗರದ ಮಹಿಳೆಗೆ ಮಂಗನ ಕಾಯಿಲೆ (ಕೆಎಫ್‌ಡಿ) ದೃಢಪಟ್ಟಿದೆ. ಕೆಎಫ್‌ಡಿ ಪತ್ತೆಗೆ ಪರೀಕ್ಷೆಗಳನ್ನು ನಡೆಸುತ್ತಿದ್ದಾಗ ಹೊಸನಗರದ 54 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸದ್ಯ ಮಹಿಳೆಗೆ ಚಿಕಿತ್ಸೆ ಆರಂಭಿಸಲಾಗಿದೆ. ಸದ್ಯ ಅವರು ಗುಣಮುಖರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮಂಗನ ಕಾಯಿಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

Read More

ಹಾಸನ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಗೌಪ್ಯವಾಗಿ ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿ ಮಠದಲ್ಲಿ ಇಂದು ಸಚಿವ ಪರಮೇಶ್ವರ್ ಅವರು ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿ 1 ಗಂಟೆ ಚರ್ಚೆ ನಡೆಸಿದ್ದಾರೆ. ಮಠದಲ್ಲಿ ಸುಮಾರು 1 ಗಂಟೆ ಶ್ರೀಗಳೊಂದಿಗೆ ಚರ್ಚೆ ನಡೆಸಿದ ಪರಮೇಶ್ವರ್ ಅವರು ಶ್ರೀಗಳ  ಆಶೀರ್ವಾದ ಪಡೆದಿದ್ದಾರೆ. ಹೀಗಾಗಿ ಶ್ರೀಗಳು ಹಾಗೂ ಪರಮೇಶ್ವರ್ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

Read More

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026 ಕ್ಕೆ ಸಂಬಂಧಿಸಿದಂತೆ, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 10, 2025 ರವರೆಗೆ ಕಾಲಾವಕಾಶ ಇದೆ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.   ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ 13,917 ಪುರುಷರು, 10,852 ಮಹಿಳೆಯರು ಸೇರಿ ಒಟ್ಟು 24,769 ಮತದರರಿದ್ದಾರೆ.  ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ಅಂತರ್ಜಾಲ ceo.karnataka.gov.in ನಲ್ಲಿ, ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಾಣಿಧಿಕಾರಿಗಳು ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧಿಕೃತ ಅಂತರ್ಜಾಲ rcbelagavi.karnataka.gov.in ನಲ್ಲಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳವರ ಅಧಿಕೃತ…

Read More