Author: kannadanewsnow57

ಬೆಂಗಳೂರು : ಒಳಮೀಸಲಾತಿ ಸಮೀಕ್ಷೆಯನ್ನು ಎರಡು ತಿಂಗಳ ಕಾಲ ವಿಸ್ತರಿಸಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶೇ.100ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಜೊತೆಗೆ ಸಭೆ ನಡೆಸಿದ್ದಾರೆ. ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು. ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ  ಕ್ರಮ ಕೈಗೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನು…

Read More

ಬೆಂಗಳೂರು : ರಾಜ್ಯದಲ್ಲಿ ಸ್ಮಶಾನ ಮತ್ತು ಕಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು.ಸರ್ಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಸತತ 9 ಗಂಟೆಗಳ ಕಾಲ ಸುಧೀರ್ಘ ಸಭೆ ನಡೆಸಿದ್ದಾರೆ. ಹಾಸ್ಟೆಲ್ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು. ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ. ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.           ಒಟ್ಟು…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಐದು ಜನರು ಮೃತಪಟ್ಟಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಲವಾರು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಇಂದೂ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್​ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ ಮಾಡಿದೆ.

Read More

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಜೂನ್ 1 ರಿಂದ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ ಈ ಬಗ್ಗೆ ಮಾಹಿತಿ ನೀಡಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜೂನ್ 1ರಿಂದಲೇ ರಜಾ ದಿನಗಳಲ್ಲಿಯೂ ಸಬ್ ರಿಜಿಸ್ಟರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಿವೆ. ರಾಜ್ಯದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದು ಕಚೇರಿ ಮಾತ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸರದಿ ಆಧಾರದ ಮೇಲೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನದಂದು ಕಾರ್ಯ ನಿರ್ವಹಿಸಬೇಕು.ರಜಾ ದಿನ ಕಾರ್ಯನಿರ್ವಹಿಸಿದ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜಾ ದಿನವೆಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ರಜಾ ದಿನ ಕರ್ತವ್ಯ ನಿರ್ವಹಿಸುವ ವೇಳಾಪಟ್ಟಿಯನ್ನು ಕಾವೇರಿ 2.0 ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ…

Read More

ಬೆಂಗಳೂರು : ರಾಜ್ಯ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ –ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 (2023ರ ಕರ್ನಾಟಕ ಅಧಿನಿಯಮ ಸಂಖ್ಯೆ:13)ರ ಪ್ರಕರಣ 6ರ ಅಡಿಯಲ್ಲಿ ಅಧಿಕೃತಗೊಳಿಸಿದ the Cigarettes and…

Read More

ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಸತತ 9 ಗಂಟೆಗಳ ಕಾಲ ಸುಧೀರ್ಘ ಸಭೆ ನಡೆಸಿದ್ದಾರೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದರು.

Read More

ಬೆಂಗಳೂರು :  ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು, NTT DDO CODE ಆಧಾರದ ಮೇಲೆ ವಿಮಾ ಇಲಾಖೆಯ ಆನ್‌ಲೈನ್ ಸೇವೆಗಳನ್ನು ಪಡೆಯಲು ಹೆಚ್ .ಆ‌ರ್.ಎಂ.ಎಸ್.ನಲ್ಲಿ ಸೇವಾ ವಿವರಗಳ ಪ್ರಾಥಮಿಕ ಮಾಹಿತಿಯನ್ನು ಇಂದೀಕರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮೆಯ ಎಲ್ಲಾ ಸೇವೆಗಳನ್ನು ಪ್ರಸ್ತುತ ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ. ಈ ಆನ್‌ಲೈನ್ ಸೇವೆಗಳನ್ನು ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು ಅರ್ಜಿಗಳನ್ನು ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳ ಮುಖಾಂತರ ವಿಮಾ ಇಲಾಖೆಗೆ ಸಲ್ಲಿಸಬೇಕಿರುತ್ತದೆ. ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರ ವೇತನ ಬಟವಾಡೆ ಅಧಿಕಾರಿಗಳಿಗೆ ಖಜಾನೆ DDO Code ಇಲ್ಲದಿರುವುದರಿಂದ ಇಂತಹ DDO ಗಳಿಗೆ ಈವರೆಗೆ ವಿಮಾ ಇಲಾಖೆಯಲ್ಲಿ…

Read More

ಬೆಂಗಳೂರು : 2025-26 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕುರಿತಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸನ್ 2025-26 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದಂತೆ, ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ (Working Strength) ಶೇ. 6 ನ್ನು (6%) ಮೀರದಂತೆ ದಿನಾಂಕ:15-05-2025 ರಿಂದ ದಿನಾಂಕ: 14-06-2025 ವರೆಗೆ ವರ್ಗಾವಣೆ ಕೈಗೊಳ್ಳಲು ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿರುತ್ತದೆ. ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆಯ ಈ ಆಯುಕ್ತಾಲಯ ವ್ಯಾಪ್ತಿಯಲ್ಲಿನ ಬೋಧಕೇತರ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆ ಮಾಡುವ ಕುರಿತು ಆಯಾ…

Read More

ಬೆಂಗಳೂರು : ಖಜಾನೆ-2 ರಲ್ಲಿನ ಪಿಂಚಣಿಗೆ ಸಂಬಂಧಿಸಿದಂತೆ ಕೆಲವೊಂದು ಹೊಸ ಕಾರ್ಯಚಟುವಟಿಕೆಗಳ ಸೇರ್ಪಡೆ ಕುರಿತು ಹಾಗೂ ನಿವೃತ್ತಿ ವೇತನವನ್ನು ಪಡೆಯಲು ಸ್ವೀಕರ್ತರ ವಿಧ 28 ರಲ್ಲಿ ನೊಂದಾವಣೆಯಾಗಲು ಇನ್ನೊಂದು ಬ್ಯಾಂಕ್ ಖಾತೆಯನ್ನು ತೆರೆಯದೆ ವೇತನ ಬ್ಯಾಂಕ್ ಖಾತೆಯನ್ನು ಮುಂದುವರೆಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಖಜಾನೆ-2 ರಲ್ಲಿ, ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನು ಪಾವತಿಸಲು ನೌಕರರನ್ನು ಸ್ವೀಕರ್ತರ ವಿಧ 27 ರಲ್ಲಿ ಸ್ವೀಕರ್ತರನ್ನಾಗಿ ನೋಂದಾಯಿಸಲಾಗುತ್ತದೆ. ಸದರಿ ನೌಕರರು ಸೇವೆಯಿಂದ ನಿವೃತ್ತರಾದಲ್ಲಿ ಪಿಂಚಣಿ ಸೌಲಭ್ಯವನ್ನು ಪಾವತಿಸಲು ಅವರನ್ನು ಸ್ವೀಕರ್ತರ ವಿಧ-28 ರಲ್ಲಿ ನೋಂದಾಯಿಸಬೇಕಾಗಿರುತ್ತದೆ. ಒಂದೇ ಬ್ಯಾಂಕ್ ಖಾತೆಗೆ 2 ಸ್ವೀಕರ್ತರ ವಿಧಗಳಲ್ಲಿ ನೋಂದಾಯಿಸಲು ಅವಕಾಶವಿಲ್ಲದಿರುವುದರಿಂದ ಪ್ರಸ್ತುತ ನಿವೃತ್ತಿದಾರರು ಮತ್ತೊಂದು ಬ್ಯಾಂಕ್ ಖಾತೆಯನ್ನು ತೆರೆದು ವಿವರಗಳನ್ನು ನೀಡಬೇಕಾಗಿರುತ್ತದೆ. ಈ ರೀತಿ ಇನ್ನೊಂದು ಬ್ಯಾಂಕ್ ಖಾತೆಯನ್ನು ತೆರೆದು, ಪಿಂಚಣಿ ಸ್ವೀಕರ್ತರ ವಿಧ-28 ರಲ್ಲಿ ಸ್ವೀಕರ್ತರಾಗಿ ನೋಂದಾಯಿಸುವ ಬದಲು ವೇತನ ಬ್ಯಾಂಕ್ ಖಾತೆಯಲ್ಲೇ ಸ್ವೀಕರ್ತರ ವಿಧ-28 ರಲ್ಲಿ ನೋಂದಾಯಿಸಲು ಈ ಕೆಳಕಂಡಂತೆ ಅವಕಾಶ ಕಲ್ಪಿಸಲಾಗಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದಿದೆ. ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆ ಗೆ ಒಳಪಡಲಿದ್ದಾರೆ .ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರ್ಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ.

Read More