Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ರಾಷ್ಟ್ರಗೀತೆ ‘ವಂದೇ ಮಾತರಂ’ ಹಾಡುವುದಕ್ಕೆ ಅಡ್ಡಿಪಡಿಸುವುದು ಅಥವಾ ಗೀತೆಯನ್ನು ಅವಮಾನಿಸುವುದನ್ನು ಇನ್ಮುಂದೆ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟವು ಮಹತ್ವದ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971’ ಕ್ಕೆ ತಿದ್ದುಪಡಿ ತರುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಈವರೆಗೆ ರಾಷ್ಟ್ರಗೀತೆ ‘ಜನ ಗಣ ಮನ’, ರಾಷ್ಟ್ರಧ್ವಜ ಮತ್ತು ಸಂವಿಧಾನಕ್ಕೆ ಮಾತ್ರ ಇದ್ದ ಕಾನೂನಾತ್ಮಕ ರಕ್ಷಣೆಯನ್ನು ಈಗ ‘ವಂದೇ ಮಾತರಂ’ಗೂ ವಿಸ್ತರಿಸಲಾಗುತ್ತಿದೆ. ರಾಷ್ಟ್ರಧ್ವಜ ಅಥವಾ ಸಂವಿಧಾನದ ಪ್ರತಿಯನ್ನು ಸುಡುವುದು, ವಿರೂಪಗೊಳಿಸುವುದು ಅಥವಾ ರಾಷ್ಟ್ರಗೀತೆ ಹಾಡುವಾಗ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ, ಅಥವಾ ಎರಡನ್ನೂ ವಿಧಿಸಬಹುದಾಗಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ 3 ನಿಮಿಷ 10 ಸೆಕೆಂಡ್ಗಳ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ನಿಯಮಗಳೇನು? ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ, ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯನ್ನು ಮೊದಲು ಹಾಡಬೇಕು ಅಥವಾ ನುಡಿಸಬೇಕು. ಗೀತೆ ಹಾಡುವ ಸಂದರ್ಭದಲ್ಲಿ ಸಭಿಕರೆಲ್ಲರೂ ಎದ್ದು ನಿಂತು…
ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿ, ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪತ್ನಿಯು ಉದ್ಯೋಗದಲ್ಲಿದ್ದರೂ ಸಹ, ಮದುವೆಯ ನಂತರ ಪತಿಯ ಮನೆಯಲ್ಲಿ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಹಿಂದೆ ದಂಪತಿಗಳು ಬೇರೆ ಬೇರೆಯಾಗಿದ್ದು, 2021ರಲ್ಲಿ ವಿವಾಹವಾಗಿದ್ದರು. ಆದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ 2022ರಲ್ಲಿ ಪತ್ನಿ ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂ. ಜೀವನಾಂಶ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. 2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ. ತಂದೆ-ತಾಯಿಯ ಪಿಂಚಣಿ ಮತ್ತು ಉಳಿತಾಯದ ಹಣದಲ್ಲಿ ಜೀವನ ನಡೆಸುತ್ತಿದ್ದೇನೆ. ಪತ್ನಿಯು ಪದವೀಧರೆಯಾಗಿದ್ದು, ಸ್ವಂತ ಆದಾಯ ಹೊಂದಿರುವುದರಿಂದ ಆಕೆಗೆ ಜೀವನಾಂಶದ ಅಗತ್ಯವಿಲ್ಲ.ನ್ಯಾಯಮೂರ್ತಿ ಡಾ. ಕೆ. ಮನ್ಮಥ ರಾವ್ ಅವರಿದ್ದ…
ಮೈಸೂರು: ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅತೀ ಶೀಘ್ರದಲ್ಲೇ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಸಿದ್ದರಾಮೇಶ್ವರ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಮುದಾಯದವರ ಒಮ್ಮತದ ಮೇರೆಗೆ ಒಳಮೀಸಲಾತಿಯನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಗಣತಿ ವರದಿ ಹೊರಬಂದ ನಂತರ ಮತ್ತೊಮ್ಮೆ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಒಳಮೀಸಲಾತಿ ಹಂಚಿಕೆಯಲ್ಲಿ ಈಗಾಗಲೇ ಸರ್ಕಾರ ಸಾಕಷ್ಟು ಮುಂದೆ ಹೋಗಿದ್ದು, ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದ ಸಚಿವರು ಒಮ್ಮತ ಸೂಚಿಸಿದ್ದಾರೆ ಎಂದು ಸಿಎಂ ತಿಳಿಸಿದರು. ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಹಾಗೂ ರಾಜ್ಯದ ಸರ್ವರಿಗೂ ಸಮಪಾಲು-ಸಮಬಾಳು ಸಿಗಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಶೋಷಿತ ವರ್ಗಗಳು…
ಬೆಂಗಳೂರು: ಮಗುವಿಗೆ ತಾಯಿಯಿಂದ ಗಂಭೀರ ಅಪಾಯವಿದೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳಿಲ್ಲದೆ, ಮಗುವನ್ನು ಭೇಟಿ ಮಾಡುವ ತಾಯಿಯ ಹಕ್ಕನ್ನು ಕಸಿಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ಫ್ಯಾಮಿಲಿ ಕೋರ್ಟ್ ವಿಧಿಸಿದ್ದ ನಿರ್ಬಂಧವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಅರ್ಜಿದಾರ ಮಹಿಳೆಯ ಪತಿ 2025ರಲ್ಲಿ ಮೃತಪಟ್ಟಿದ್ದರು. ಪತಿಯ ನಿಧನದ ನಂತರ ಆಸ್ತಿ ವಿಚಾರವಾಗಿ ಅರ್ಜಿದಾರ ಮಹಿಳೆ ಹಾಗೂ ಆಕೆಯ ಅತ್ತೆಯ ನಡುವೆ ಕಾನೂನು ಸಮರ ಆರಂಭವಾಗಿತ್ತು. ಈ ಮಧ್ಯೆ, ಅತ್ತೆ ಮತ್ತು ನಾದಿನಿ ಸೇರಿ 11 ವರ್ಷದ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ತಾಯಿ ಮಗುವನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಆರೋಪದ ಮೇರೆಗೆ, ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ಮಗುವಿನ ಭೇಟಿಗೆ ತಾಯಿಗೆ ನಿರ್ಬಂಧ ಹೇರಿತ್ತು. ಇದನ್ನು ಪ್ರಶ್ನಿಸಿ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಗುವಿನ ಭೇಟಿಯ ಹಕ್ಕು ಸಾಂವಿಧಾನಿಕ ಮತ್ತು ನೈಸರ್ಗಿಕ ಹಕ್ಕಾಗಿದೆ. ಇದನ್ನು ಅಕಾರಣವಾಗಿ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಮಗು ತನ್ನ ತಾಯಿಯ ವಿರುದ್ಧ ಹೇಳಿಕೆ ನೀಡಿದ್ದರೂ, ಅದನ್ನು ಅಂತಿಮ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪಸಮೂಹದಲ್ಲಿ ಕಂಡುಬಂದಿರುವ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ, ಕರ್ನಾಟಕ ರಾಜ್ಯದಾದ್ಯಂತ ಈ ವಾರ ಪೂರ್ತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಭಾಗಗಳಿಗೆ ಹೋಲಿಸಿದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತುಸು ಹೆಚ್ಚಾಗಿರಲಿದೆ. ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 8 ರಿಂದ ಮೇ 12 ರವರೆಗೆ ಮಳೆ ಸುರಿಯಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮೇ 7 ರಿಂದ ಮೇ 10 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಂದರ್ಭದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಾಳಿಯ…
ನವದೆಹಲಿ: ದೇಶದ ಕೋಟ್ಯಂತರ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA), 2026-27ನೇ ಸಕ್ಕರೆ ಹಂಗಾಮಿಗೆ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಯನ್ನು ಪ್ರತಿ ಕ್ವಿಂಟಾಲ್ಗೆ ₹365 ಕ್ಕೆ ಹೆಚ್ಚಿಸಿ ಅನುಮೋದನೆ ನೀಡಿದೆ. ಕಳೆದ ಹಂಗಾಮಿನ ಬೆಲೆ ₹355ಕ್ಕೆ ಹೋಲಿಸಿದರೆ, ಈ ಬಾರಿ ಕ್ವಿಂಟಾಲ್ಗೆ ₹10 ಹೆಚ್ಚಳ ಮಾಡಲಾಗಿದೆ (ಶೇ. 2.81ರಷ್ಟು ಏರಿಕೆ). ಈ ಬೆಲೆಯು ಶೇ. 10.25 ರಷ್ಟು ಮೂಲ ಸಕ್ಕರೆ ಚೇತರಿಕೆ ದರವನ್ನು ಆಧರಿಸಿದೆ.ಒಂದು ವೇಳೆ ಸಕ್ಕರೆ ಚೇತರಿಕೆ ಪ್ರಮಾಣವು ಶೇ. 10.25ಕ್ಕಿಂತ ಹೆಚ್ಚಿದ್ದರೆ, ಪ್ರತಿ ಶೇ. 0.1 ಹೆಚ್ಚಳಕ್ಕೆ ರೈತರು ಪ್ರತಿ ಕ್ವಿಂಟಾಲ್ಗೆ ₹3.56 ಹೆಚ್ಚುವರಿ ಪ್ರೀಮಿಯಂ ಪಡೆಯಲಿದ್ದಾರೆ.ಚೇತರಿಕೆ ದರ ಕಡಿಮೆ ಇದ್ದರೂ ರೈತರ ಹಿತರಕ್ಷಣೆ ಮಾಡಲಾಗಿದ್ದು, ಶೇ. 9.5ಕ್ಕಿಂತ ಕಡಿಮೆ ಚೇತರಿಕೆ ಇರುವ ಗಿರಣಿಗಳಿಗೆ ಕಡಿತ ಅನ್ವಯಿಸುವುದಿಲ್ಲ. ಅಂತಹ ಸಂದರ್ಭದಲ್ಲೂ ರೈತರಿಗೆ…
ನವದೆಹಲಿ: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ದಾಖಲಾಗಿದ್ದ ಪ್ರಕರಣವೊಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ನ್ಯಾಯಮೂರ್ತಿ ಮನ್ಮೋಹನ್ ಅವರನ್ನೊಳಗೊಂಡ ಪೀಠವು ಈ ಪ್ರಮುಖ ತೀರ್ಪನ್ನು ನೀಡಿದೆ. ಪ್ರಕರಣದ ಹಿನ್ನೆಲೆ ಮಹಾರಾಷ್ಟ್ರದ ಶೈಲೇಶ್ ಭಾಯ್ ಗೋವಿಂದ್ ಭಾಯ್ ಮಕ್ವಾನಾ ಎಂಬುವರ ವಿರುದ್ಧ 2021ರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ, ಆರೋಪಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದು ಇಬ್ಬರು ವ್ಯಕ್ತಿಗಳ ನಡುವೆ ದೀರ್ಘಕಾಲದವರೆಗೆ ನಡೆದ ‘ಪರಸ್ಪರ ಒಪ್ಪಿಗೆಯ ಸಂಬಂಧ’ ಎಂದು ಸ್ಪಷ್ಟಪಡಿಸಿದೆ. ದೂರುದಾರೆ ಮತ್ತು ಆರೋಪಿ ಇಬ್ಬರಿಗೂ ಮೊದಲೇ ಮದುವೆಯಾಗಿತ್ತು. ತಮ್ಮ ವೈವಾಹಿಕ ಸ್ಥಿತಿಯ ಬಗ್ಗೆ ಇಬ್ಬರಿಗೂ ಸಂಪೂರ್ಣ ಅರಿವಿತ್ತು.ಇಬ್ಬರೂ ಸುಮಾರು ನಾಲ್ಕು ವರ್ಷಗಳ ಕಾಲ ಒಟ್ಟಿಗೆ ಪ್ರಯಾಣಿಸಿದ್ದು, ದೈಹಿಕ ಸಂಬಂಧ ಹೊಂದಿದ್ದರು. 2017ರಲ್ಲಿ ಸಂಬಂಧ ಆರಂಭವಾಗಿದ್ದರೂ, 2021ರವರೆಗೆ ಯಾವುದೇ ದೂರು ದಾಖಲಾಗಿರಲಿಲ್ಲ.ಸಂಬಂಧದಲ್ಲಿ ಬಿರುಕು ಮೂಡಿದ ನಂತರವಷ್ಟೇ ಕ್ರಿಮಿನಲ್ ಕ್ರಮ…
ಬೆಂಗಳೂರು: ಕರ್ನಾಟಕದಲ್ಲಿ ವಿವಾಹದ ಆಯ್ಕೆಯ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಮತ್ತು ಮರ್ಯಾದೆ ಹಾಗೂ ಸಂಪ್ರದಾಯದ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಯಲು ರಾಜ್ಯ ಸರ್ಕಾರವು ‘ಇವ ನಮ್ಮವ’ (ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ, ನಿಷೇಧ ಕಾಯ್ದೆ-2026) ಅನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಮಂಗಳವಾರ ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಾಯ್ದೆಯ ಪ್ರಮುಖ ಉದ್ದೇಶಗಳು: ಜಾತಿ ಆಧಾರಿತ ಅಪರಾಧಗಳ ಮೂಲಕ ನಡೆಯುವ ಮಾನವ ಹಕ್ಕು ಉಲ್ಲಂಘನೆ ತಡೆಯುವುದು. ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡುವುದು ಮತ್ತು ವೈಯಕ್ತಿಕ ಆಯ್ಕೆಗಳ ಮೇಲೆ ಜಾತಿ ಆಧಾರಿತ ಬಲವಂತದ ಭೇದಭಾವವನ್ನು ತಡೆಯುವುದು. ಪ್ರಾಪ್ತ ವಯಸ್ಕ ಗಂಡು-ಹೆಣ್ಣು ಪರಸ್ಪರ ಒಪ್ಪಿ ಮದುವೆಯಾಗಲು ಯಾರ ಅನುಮತಿಯೂ ಬೇಕಿಲ್ಲ ಹಾಗೂ ಕುಟುಂಬದವರಿಂದ ಯಾವುದೇ ಅಡೆತಡೆ ಇಲ್ಲದಂತೆ ವಿವಾಹವಾಗುವ ಹಕ್ಕನ್ನು ಖಚಿತಪಡಿಸುವುದು. ಯಾವೆಲ್ಲಾ ಕೃತ್ಯಗಳು ಅಪರಾಧ? ಈ ಹೊಸ ಕಾನೂನಿನ ಅಡಿಯಲ್ಲಿ ಈ ಕೆಳಗಿನವುಗಳನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತದೆ: ವಿವಾಹಿತ ಅಥವಾ ಪ್ರೇಮಿಗಳ ಮೇಲೆ ಸಂಬಂಧಿಕರು…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಾಧ್ಯಮಗ್ರಾಮದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆಯು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಚಂದ್ರನಾಥ್ ರಥ್ ಅವರು ತಮ್ಮ ಸ್ಕಾರ್ಪಿಯೋ ಎಸ್ಯುವಿ ಕಾರಿನಲ್ಲಿ ಕುಳಿತಿದ್ದಾಗ ಈ ದಾಳಿ ನಡೆದಿದೆ. ದಾಳಿಕೋರರು: ಸುಮಾರು ಎಂಟು ಮಂದಿ ದುಷ್ಕರ್ಮಿಗಳು ನಾಲ್ಕು ಮೋಟಾರ್ ಸೈಕಲ್ಗಳಲ್ಲಿ ಆಗಮಿಸಿದ್ದರು. ಮುಖಕ್ಕೆ ಹೆಲ್ಮೆಟ್ ಧರಿಸಿದ್ದ ಹಂತಕರು, ನಕಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಮತ್ತು ಬೈಕ್ಗಳಲ್ಲಿ ಬಂದು ಪಾಯಿಂಟ್ ಬ್ಲಾಂಕ್ ರೇಂಜ್ನಲ್ಲಿ ಗುಂಡು ಹಾರಿಸಿದ್ದಾರೆ. ರಥ್ ಅವರ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ತೀವ್ರವಾದ ಗುಂಡೇಟು ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುವೇಂದು ಅಧಿಕಾರಿ ಆಕ್ರೋಶ ನಂದಿಗ್ರಾಮ ಮತ್ತು ಭವಾನಿಪುರ ಕ್ಷೇತ್ರಗಳಿಂದ ಜಯಗಳಿಸಿರುವ ಸುವೇಂದು ಅಧಿಕಾರಿ…
ಮುಂಬೈ: ಭಾರತದ ಚಿನ್ನದ ಮಾರುಕಟ್ಟೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರುವ ಉದ್ದೇಶದಿಂದ ರಾಷ್ಟ್ರೀಯ ಷೇರು ಮಾರುಕಟ್ಟೆಯು (NSE) ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ (EGR) ಎಂಬ ಹೊಸ ವಿಭಾಗವನ್ನು ಪ್ರಾರಂಭಿಸಿದೆ. ಮೇ 4, 2026 ರಿಂದ ಜಾರಿಗೆ ಬರುವಂತೆ ಈ ವ್ಯವಸ್ಥೆಯು ಭೌತಿಕ ಚಿನ್ನ ಮತ್ತು ಹಣಕಾಸು ಮಾರುಕಟ್ಟೆಯ ನಡುವಿನ ಅಂತರವನ್ನು ಕಡಿಮೆ ಮಾಡಲಿದೆ. ಏನಿದು ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ (EGR)? EGRಗಳು ಡಿಜಿಟಲ್ ರೂಪದ ಭದ್ರತೆಗಳಾಗಿದ್ದು, ಇವು ಭೌತಿಕ ಚಿನ್ನದ ಮಾಲೀಕತ್ವವನ್ನು ಪ್ರತಿನಿಧಿಸುತ್ತವೆ. ನೀವು ಖರೀದಿಸುವ ಪ್ರತಿಯೊಂದು ಎಲೆಕ್ಟ್ರಾನಿಕ್ ರಶೀದಿಯ ಹಿಂದೆಯೂ ಅಷ್ಟೇ ಪ್ರಮಾಣದ ಭೌತಿಕ ಚಿನ್ನವಿರುತ್ತದೆ. ಈ ಚಿನ್ನವನ್ನು ಸೆಬಿ (SEBI) ಮಾನ್ಯತೆ ಪಡೆದ ಸುರಕ್ಷಿತ ವಾಲ್ಟ್ಗಳಲ್ಲಿ ಇರಿಸಲಾಗುತ್ತದೆ ಮತ್ತು ಡಿಪಾಸಿಟರಿಗಳ ಮೂಲಕ ಎಲೆಕ್ಟ್ರಾನಿಕ್ ರೂಪದಲ್ಲಿ ನಿರ್ವಹಿಸಲಾಗುತ್ತದೆ. ಜ್ಯುವೆಲ್ಲರ್ಸ್, ರಿಫೈನರ್ಸ್ ಮತ್ತು ಹೂಡಿಕೆದಾರರಿಗೆ ಚಿನ್ನದ ಬೆಲೆ ನಿರ್ಧಾರದಲ್ಲಿ ಪಾರದರ್ಶಕತೆ ಸಿಗಲಿದೆ. ಚಾಲನೆಯ ಅಂಗವಾಗಿ ಎನ್ಎಸ್ಇ ಈಗಾಗಲೇ 1000 ಗ್ರಾಂ ಚಿನ್ನದ ಬಟ್ಟಿಯನ್ನು (Gold Bar) ಯಶಸ್ವಿಯಾಗಿ ಎಲೆಕ್ಟ್ರಾನಿಕ್ ರಶೀದಿಯಾಗಿ…













