Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ಎರಡು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಡಿಜಿಟಲ್ ಅಂಕಪಟ್ಟಿ ವಿತರಣೆ 2027ರ ಶೈಕ್ಷಣಿಕ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮುದ್ರಿತ (Physical) ಅಂಕಪಟ್ಟಿಗಳನ್ನು ನೀಡುವುದಿಲ್ಲ. ಬದಲಾಗಿ ಸಂಪೂರ್ಣವಾಗಿ ಡಿಜಿಟಲ್ ಅಂಕಪಟ್ಟಿಗಳನ್ನು ಮಾತ್ರ ವಿತರಿಸಲು ನಿರ್ಧರಿಸಲಾಗಿದೆ. ಡೌನ್ಲೋಡ್ ವಿಧಾನ: ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಡಿಜಿ ಲಾಕರ್ (DigiLocker) ಮೂಲಕ ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ವರ್ಷದ ಫಲಿತಾಂಶ ಬಂದ ದಿನವೇ ಡಿಜಿ ಲಾಕರ್ನಲ್ಲಿ ಅಂಕಪಟ್ಟಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ‘ಪರೀಕ್ಷೆ-3’ ರದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ, ಈ ಬಾರಿ ಪರೀಕ್ಷೆ-3 ಅನ್ನು ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಪರೀಕ್ಷೆ-1ರಲ್ಲಿ ಈ ಬಾರಿ ಐತಿಹಾಸಿಕ ಫಲಿತಾಂಶ ಬಂದಿದೆ. ಅಲ್ಲದೆ, ಕಳೆದ ಬಾರಿ ಪರೀಕ್ಷೆ-2ರಲ್ಲಿ ಶೇ.…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದ್ದು, ದಾಖಲೆ ಮಟ್ಟದಲ್ಲಿ ಪಿಯುಸಿ ಫಲಿತಾಂಶ ಏರಿಕೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ವರ್ಷ ಶೇ. 86 ರಷ್ಟು ಫಲಿತಾಂಶದ ದಾಖಲಾಗಿದ್ದು, ಕಳೆದ ವರ್ಷ 73.45 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ವರ್ಷ ಶೇಕಡ 12.55ಕ್ಕಿಂತ ಹೆಚ್ಚು ಫಲಿತಾಂಶ ದಾಖಲು ಆಗಿದೆ. ಅಲ್ಲದೆ ಪರೀಕ್ಷೆಗೆ ಹಾಜರಾದವರ ವಿದ್ಯಾರ್ಥಿಗಳ ಪೈಕಿ ಶೇಕಡ 86 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ಪಿಯುಸಿ ಪರೀಕ್ಷೆಗೆ ಒಟ್ಟು 7, 10,363 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ನೋಂದಣಿ ಆದವರ ಪೈಕಿ 6,10,000 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ದಾಖಲೆಯ ಮಟ್ಟದಲ್ಲಿ ಪಿಯುಸಿ ಫಲಿತಾಂಶದಲ್ಲಿ ಏರಿಕೆ ಆಗಿದೆ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ,…
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏಪ್ರಿಲ್ 09) ಪ್ರಕಟವಾಗಿದೆ. ಈಗಾಗಲೇ ಆನ್ಲೈನ್ನಲ್ಲಿ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ಸುದ್ದಿಗೋಷ್ಠಿ ಮತ್ತು ಅಧಿಕೃತ ಪ್ರಕಟಣೆ ಫಲಿತಾಂಶದ ಕುರಿತು ಹೆಚ್ಚಿನ ಮಾಹಿತಿ ನೀಡಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾವಾರು ಸಾಧನೆ, ತೇರ್ಗಡೆ ಪ್ರಮಾಣ ಹಾಗೂ ಟಾಪರ್ಗಳ ವಿವರಗಳನ್ನು ಸಚಿವರು ಅಧಿಕೃತವಾಗಿ ಹಂಚಿಕೊಳ್ಳಲಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? ವಿದ್ಯಾರ್ಥಿಗಳು ಈ ಕೆಳಗಿನ ವಿವಿಧ ವಿಧಾನಗಳ ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು: ಅಧಿಕೃತ ವೆಬ್ಸೈಟ್: https://karresults.nic.in ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಮೊಬೈಲ್ ಆಪ್: ಕರ್ನಾಟಕ ಒನ್ (KarnatakaOne) ಮೊಬೈಲ್ ಆಪ್ ಮೂಲಕವೂ ಮಾಹಿತಿ ಪಡೆಯಬಹುದು. ನೇರ ಸಂದೇಶ: ವಿದ್ಯಾರ್ಥಿಗಳ ನೊಂದಾಯಿತ…
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏಪ್ರಿಲ್ 09) ಪ್ರಕಟವಾಗಿದೆ. ಈಗಾಗಲೇ ಆನ್ಲೈನ್ನಲ್ಲಿ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ಸುದ್ದಿಗೋಷ್ಠಿ ಮತ್ತು ಅಧಿಕೃತ ಪ್ರಕಟಣೆ ಫಲಿತಾಂಶದ ಕುರಿತು ಹೆಚ್ಚಿನ ಮಾಹಿತಿ ನೀಡಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾವಾರು ಸಾಧನೆ, ತೇರ್ಗಡೆ ಪ್ರಮಾಣ ಹಾಗೂ ಟಾಪರ್ಗಳ ವಿವರಗಳನ್ನು ಸಚಿವರು ಅಧಿಕೃತವಾಗಿ ಹಂಚಿಕೊಳ್ಳಲಿದ್ದಾರೆ. 2025–26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ–1 ಫೆ.28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42…
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏಪ್ರಿಲ್ 09) ಪ್ರಕಟವಾಗಿದೆ. ಈಗಾಗಲೇ ಆನ್ಲೈನ್ನಲ್ಲಿ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ಸುದ್ದಿಗೋಷ್ಠಿ ಮತ್ತು ಅಧಿಕೃತ ಪ್ರಕಟಣೆ ಫಲಿತಾಂಶದ ಕುರಿತು ಹೆಚ್ಚಿನ ಮಾಹಿತಿ ನೀಡಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾವಾರು ಸಾಧನೆ, ತೇರ್ಗಡೆ ಪ್ರಮಾಣ ಹಾಗೂ ಟಾಪರ್ಗಳ ವಿವರಗಳನ್ನು ಸಚಿವರು ಅಧಿಕೃತವಾಗಿ ಹಂಚಿಕೊಳ್ಳಲಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? ವಿದ್ಯಾರ್ಥಿಗಳು ಈ ಕೆಳಗಿನ ವಿವಿಧ ವಿಧಾನಗಳ ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು: ಅಧಿಕೃತ ವೆಬ್ಸೈಟ್: https://karresults.nic.in ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಮೊಬೈಲ್ ಆಪ್: ಕರ್ನಾಟಕ ಒನ್ (KarnatakaOne) ಮೊಬೈಲ್ ಆಪ್ ಮೂಲಕವೂ ಮಾಹಿತಿ ಪಡೆಯಬಹುದು. ನೇರ ಸಂದೇಶ: ವಿದ್ಯಾರ್ಥಿಗಳ ನೊಂದಾಯಿತ…
ಜಬಲ್ಪುರ: ರೈಲ್ವೆ ಸಂರಕ್ಷಣಾ ಪಡೆ (RPF) ಇತ್ತೀಚೆಗೆ ನಡೆಸಿದ ಮಿಲಿಟರಿ ಶೈಲಿಯ ಕಾರ್ಯಾಚರಣೆಯಲ್ಲಿ, ಅಂತರರಾಜ್ಯ ಕಳ್ಳನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿ ತನ್ನ ಪ್ರಾಣ ಉಳಿಸಿಕೊಳ್ಳಲು ಪಾಚಿಯಿಂದ ತುಂಬಿದ ಕೆರೆಯ ನೀರಿನಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಅಡಗಿ ಕುಳಿತಿದ್ದ ಎನ್ನುವುದು ವಿಶೇಷ. ಘಟನೆಯ ಹಿನ್ನೆಲೆ ಸಿಹೋರಾ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ, ಬೆಳಗಿನ ಜಾವ 4.50ರ ಸುಮಾರಿಗೆ ರೈಲು ಸಂಖ್ಯೆ 11753 ರಿಂದ ಇಳಿದ ಅನುಮಾನಾಸ್ಪದ ವ್ಯಕ್ತಿಯನ್ನು ಗಮನಿಸಿದರು. ಆತ ರೈಲಿನಲ್ಲಿ ಮಹಿಳೆಯೊಬ್ಬರ ಪರ್ಸ್ ಕದಿಯಲು ಯತ್ನಿಸುತ್ತಿದ್ದ ಎನ್ನಲಾಗಿದೆ. ಪೊಲೀಸರು ಆತನನ್ನು ಬೆನ್ನಟ್ಟಿದಾಗ, ತಪ್ಪಿಸಿಕೊಳ್ಳಲು ಸ್ಥಳೀಯ ಮಾರುಕಟ್ಟೆ ಸಮೀಪವಿದ್ದ ಪಾಚಿಯಿಂದ ಕೂಡಿದ ಕೆರೆಗೆ ಹಾರಿದ್ದಾನೆ. ಕಮಲದ ಕಡ್ಡಿಯ ಮೂಲಕ ಉಸಿರಾಟ! ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪಿ ಹೂಳು ತುಂಬಿದ ಕೆರೆಯಲ್ಲಿ ಮುಳುಗಿ ಕುಳಿತಿದ್ದ. ಉಸಿರಾಡಲು ಕೆರೆಯಲ್ಲಿದ್ದ ಕಮಲದ ಗಿಡದ ಟೊಳ್ಳಾದ ದಂಟನ್ನು (Lotus Stem) ಬಳಸಿಕೊಂಡು ನೀರಿನ ಅಡಿಯಲ್ಲೇ ಉಸಿರಾಡುತ್ತಿದ್ದ. ಸುಮಾರು 5 ಗಂಟೆಗಳ ಕಾಲ ಈತ ಇದೇ…
ಬೈರೂತ್: ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಇಸ್ರೇಲ್ ಸೇನೆಯು ಲೆಬನಾನ್ ರಾಜಧಾನಿ ಬೈರೂತ್ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ ಮುಖ್ಯಸ್ಥ ನಯಿಮ್ ಖಾಸಿಮ್ (Naim Qassem) ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಬೈರೂತ್ ಕಾರ್ಯಾಚರಣೆ: ಇಸ್ರೇಲ್ ರಕ್ಷಣಾ ಪಡೆಗಳು (IDF) ಬೈರೂತ್ನಲ್ಲಿರುವ ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಸರಣಿ ದಾಳಿಯಲ್ಲಿ ನಯಿಮ್ ಖಾಸಿಮ್ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಹಿನ್ನಡೆ: ಹಸನ್ ನಸ್ರಲ್ಲಾ ಸಾವಿನ ನಂತರ ಹಿಜ್ಬುಲ್ಲಾ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ನಯಿಮ್ ಖಾಸಿಮ್ ಸಾವು ಆ ಸಂಘಟನೆಗೆ ಮತ್ತು ಇರಾನ್ಗೆ ದೊಡ್ಡ ಆಘಾತ ಎಂದು ಹೇಳಲಾಗುತ್ತಿದೆ. ಕುಟುಂಬಸ್ಥರ ಸಾವು: ಇದೇ ಕಾರ್ಯಾಚರಣೆಯಲ್ಲಿ ನಯಿಮ್ ಖಾಸಿಮ್ ಅವರ ಸೋದರಸಂಬಂಧಿ ಮತ್ತು ವೈಯಕ್ತಿಕ ಕಾರ್ಯದರ್ಶಿಯಾಗಿದ್ದ ಅಲಿ ಯೂಸುಫ್ ಹರ್ಷಿ ಕೂಡ ಹತ್ಯೆಯಾಗಿದ್ದಾನೆ ಎಂದು ಇಸ್ರೇಲ್ ಸೇನೆ ಮಾಹಿತಿ ನೀಡಿದೆ. ಕದನ ವಿರಾಮದ ನಡುವೆ ದಾಳಿ: ಇರಾನ್ ಜೊತೆಗಿನ ಎರಡು ವಾರಗಳ ಕದನ ವಿರಾಮ ಒಪ್ಪಂದವು…
ಮೆಟಾ ಒಡೆತನದ ಪ್ರಸಿದ್ದ ಮೆಸೇಜಿಂಗ್ ಅಪ್ಲಿಕೇಶನ್ WhatsApp ಈಗ ಕೇವಲ ಚಾಟಿಂಗ್ಗೆ ಮಾತ್ರ ಸೀಮಿತವಾಗಿಲ್ಲ. ಇನ್ಮುಂದೆ ಇದು ಹಣ ಗಳಿಕೆಯ ದೊಡ್ಡ ವೇದಿಕೆಯಾಗಲಿದೆ. ಹೌದು, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್ ಮಾದರಿಯಲ್ಲೇ ಈಗ ವಾಟ್ಸಾಪ್ ಕೂಡ ತನ್ನ ‘ಚಾನಲ್’ (WhatsApp Channel) ಫೀಚರ್ ಮೂಲಕ ಬಳಕೆದಾರರಿಗೆ ಹಣ ಗಳಿಸುವ ಅವಕಾಶ ನೀಡಲು ಮುಂದಾಗಿದೆ. ವರದಿಗಳ ಪ್ರಕಾರ, ಕಂಪನಿಯು ಸದ್ಯದಲ್ಲೇ ‘ಮಾನಿಟೈಸೇಶನ್’ (Monetization) ವೈಶಿಷ್ಟ್ಯವನ್ನು ಪರಿಚಯಿಸಲಿದ್ದು, ಇದರಿಂದ ಕ್ರಿಯೇಟರ್ಗಳು ತಮ್ಮ ಚಾನಲ್ ಮೂಲಕ ಆದಾಯ ಗಳಿಸಬಹುದಾಗಿದೆ. ವಾಟ್ಸಾಪ್ನಲ್ಲಿ ಹಣ ಗಳಿಸುವುದು ಹೇಗೆ? ಇಲ್ಲಿಯವರೆಗೆ ನೀವು ಯಾವುದೇ ವಾಟ್ಸಾಪ್ ಚಾನಲ್ ಅನ್ನು ಉಚಿತವಾಗಿ ಫಾಲೋ ಮಾಡುತ್ತಿದ್ದೀರಿ. ಆದರೆ ಶೀಘ್ರದಲ್ಲೇ ಇದರಲ್ಲಿ ‘ಪೇಯ್ಡ್ ಸಬ್ಸ್ಕ್ರಿಪ್ಷನ್’ (Paid Subscription) ಆಯ್ಕೆ ಬರಲಿದೆ. ಪ್ರೀಮಿಯಂ ಕಂಟೆಂಟ್: ಕ್ರಿಯೇಟರ್ಗಳು ತಮ್ಮ ಸಬ್ಸ್ಕ್ರೈಬರ್ಗಳಿಗಾಗಿ ವಿಶೇಷ ವಿಡಿಯೋಗಳು, ಟಿಪ್ಸ್ ಅಥವಾ ಪ್ರಮುಖ ಮಾಹಿತಿಯನ್ನು ಹಂಚಿಕೊಳ್ಳಬಹುದು. ಇದನ್ನು ನೋಡಲು ಬಳಕೆದಾರರು ನಿರ್ದಿಷ್ಟ ಶುಲ್ಕ ಪಾವತಿಸಬೇಕಾಗುತ್ತದೆ. ಸಬ್ಸ್ಕ್ರೈಬರ್ ಮಾಹಿತಿ: ಒಂದು ಚಾನಲ್ಗೆ ಎಷ್ಟು ಪೇಯ್ಡ್ ಸದಸ್ಯರಿದ್ದಾರೆ ಎಂಬುದು…
ಇಂಗ್ಲಿಷ್ ಭಾಷೆಯು ವಿವಿಧ ಸಂಸ್ಕೃತಿಗಳ ಪ್ರಭಾವವನ್ನು ಅಳವಡಿಸಿಕೊಳ್ಳುತ್ತಾ ಹೇಗೆ ಬೆಳೆಯುತ್ತಿದೆ ಎಂಬುದಕ್ಕೆ ಆಕ್ಸ್ಫರ್ಡ್ ಡಿಕ್ಷನರಿಯಲ್ಲಿರುವ ಭಾರತೀಯ ಪದಗಳೇ ಸಾಕ್ಷಿ. ಭಾರತದ ಶ್ರೀಮಂತ ಸಂಪ್ರದಾಯಗಳು, ತತ್ವಚಿಂತನೆಗಳು ಮತ್ತು ದೈನಂದಿನ ಜೀವನಶೈಲಿಯು ಹಲವಾರು ವಿಶಿಷ್ಟ ಪದಗಳನ್ನು ಕೊಡುಗೆಯಾಗಿ ನೀಡಿದ್ದು, ಇವು ಇಂದು ಜಾಗತಿಕವಾಗಿ ಗುರುತಿಸಲ್ಪಟ್ಟಿವೆ. ನವೀನ ಆಲೋಚನೆಗಳಿಂದ ಹಿಡಿದು ಆಧ್ಯಾತ್ಮಿಕ ಪರಿಕಲ್ಪನೆಗಳವರೆಗೆ, ಈ ಪದಗಳು ಆಧುನಿಕ ಇಂಗ್ಲಿಷ್ ಬಳಕೆಯಲ್ಲಿ ಶಾಶ್ವತ ಸ್ಥಾನವನ್ನು ಪಡೆದಿವೆ. ನೀವು ತಿಳಿದಿರಲೇಬೇಕಾದ ಆಕ್ಸ್ಫರ್ಡ್ ಡಿಕ್ಷನರಿಯಲ್ಲಿನ ಪ್ರಮುಖ 10 ಭಾರತೀಯ ಪದಗಳು 1. ಜುಗಾಡ್ (Jugaad) ‘ಜುಗಾಡ್’ ಎಂದರೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಸೃಜನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸುವ ಮಾರ್ಗ. ಇದು ಸವಾಲಿನ ಸಂದರ್ಭಗಳಲ್ಲಿ ತ್ವರಿತ ಮತ್ತು ಪ್ರಾಯೋಗಿಕ ಪರಿಹಾರಗಳನ್ನು ಕಂಡುಕೊಳ್ಳುವ ಭಾರತೀಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇಂದು, ಸ್ಮಾರ್ಟ್ ಮತ್ತು ಕಡಿಮೆ ವೆಚ್ಚದ ಆಲೋಚನೆಗಳನ್ನು ವಿವರಿಸಲು ಜಾಗತಿಕ ವ್ಯವಹಾರ ಮತ್ತು ನಾವೀನ್ಯತೆ (Innovation) ಚರ್ಚೆಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. 2. ಚಾಯ್ (Chai) ಟೀ ಅಥವಾ ಚಹಾವನ್ನು ಸೂಚಿಸುವ ಭಾರತೀಯ ಪದ…
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಬಾರಿಯ ಫಲಿತಾಂಶದ ವಿಶೇಷವೆಂದರೆ, ಫಲಿತಾಂಶ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು (Marks Card) ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಡಿಜಿಲಾಕರ್ (DigiLocker) ಮೂಲಕ ವಿದ್ಯಾರ್ಥಿಗಳು ತಮ್ಮ ಅಧಿಕೃತ ಅಂಕಪಟ್ಟಿಯನ್ನು ಪಡೆಯಬಹುದಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? ವಿದ್ಯಾರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು: ಅಧಿಕೃತ ಜಾಲತಾಣ: https://karresults.nic.in ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು. ಮೊಬೈಲ್ ಆ್ಯಪ್: ‘ಕರ್ನಾಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಲಭ್ಯವಿರುತ್ತದೆ. ನೇರ ಸಂದೇಶ: ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್ (WhatsApp) ಮತ್ತು ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ವಿವರಗಳನ್ನು ರವಾನಿಸಲಾಗುತ್ತದೆ. ಇದೇ ಮೊದಲ ಬಾರಿಗೆ ಫಲಿತಾಂಶದ ದಿನದಂದೇ ಡಿಜಿಟಲ್ ಅಂಕಪಟ್ಟಿ ಲಭ್ಯವಾಗುತ್ತಿರುವುದು ವಿದ್ಯಾರ್ಥಿಗಳ ಮುಂದಿನ ಪ್ರವೇಶಾತಿ ಪ್ರಕ್ರಿಯೆಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತಾಗಿದೆ. https://twitter.com/KarnatakaVarthe/status/2042132556787937680?s=20












