Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…
ನವದೆಹಲಿ : ನೀವು ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶವಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ವತಿಯಿಂದ ನಡೆಯುತ್ತಿರುವ 22,195 ಗ್ರೂಪ್ ಡಿ (Group D) ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆಯು ಇದೀಗ ಮುಕ್ತಾಯದ ಹಂತಕ್ಕೆ ತಲುಪಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 2, 2026 ಕೊನೆಯ ದಿನಾಂಕವಾಗಿದ್ದು, ಆಸಕ್ತರು ತಡಮಾಡದೆ ಕೂಡಲೇ ಅಪ್ಲೈ ಮಾಡುವುದು ಉತ್ತಮ. ಬೃಹತ್ ನೇಮಕಾತಿಯ ವಿವರಗಳು : ಭಾರತೀಯ ರೈಲ್ವೆಯು ದೇಶದ ಅತಿದೊಡ್ಡ ಸರ್ಕಾರಿ ಉದ್ಯೋಗದಾತ ಸಂಸ್ಥೆಯಾಗಿದ್ದು, ನಿರುದ್ಯೋಗಿ ಯುವಕರಿಗೆ ಆಸರೆಯಾಗಲು ಈ ಬಾರಿ ಬರೋಬ್ಬರಿ 22,195 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ದೇಶಾದ್ಯಂತ ಇರುವ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ರೈಲ್ವೆ ಇಲಾಖೆಯ ಭಾಗವಾಗಲು ಇದು ಸರಿಯಾದ ಸಮಯ. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 2, 2026 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮಾರ್ಚ್ 4, 2026 ಅಧಿಕೃತ ವೆಬ್ಸೈಟ್:…
ಬೆಂಗಳೂರು: ಮಗ ದತ್ತು ಹೋದ ಮಾತ್ರಕ್ಕೆ ಆತ ಹೆತ್ತ ತಾಯಿಗೆ ಮಗನಲ್ಲ ಎನ್ನಲಾಗುತ್ತದೆಯೇ?” ಎಂದು ಪ್ರಶ್ನಿಸಿರುವ ಹೈಕೋರ್ಟ್, ಸಂಧ್ಯಾಕಾಲದಲ್ಲಿರುವ ಹೆತ್ತ ತಾಯಿಗೆ ಮಾಸಿಕ ₹8,000 ಜೀವನಾಂಶ ನೀಡುವಂತೆ ಮಗನಿಗೆ ಆದೇಶಿಸಿದೆ. ಪ್ರಕರಣದ ಹಿನ್ನೆಲೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮೆಗಳಾಪುರ ನಿವಾಸಿ ಎಂ.ಸಿ. ಚೇತನ್ ಎಂಬುವವರು ಈ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದರು. ಚೇತನ್ ಅವರನ್ನು ಅವರ ಹೆತ್ತ ತಾಯಿ ಶಿವಲಿಂಗಮ್ಮ ಅವರು ತಮ್ಮ ಸಹೋದರಿ ಪುಟ್ಟಮ್ಮ ಅವರಿಗೆ ದತ್ತು ನೀಡಿದ್ದರು. ಕಾಲಾನಂತರದಲ್ಲಿ ಆರ್ಥಿಕ ಸಂಕಷ್ಟಕ್ಕೀಡಾದ ಶಿವಲಿಂಗಮ್ಮ, ತನ್ನ ಮಗನಿಂದ ಜೀವನಾಂಶ ಕೊಡಿಸುವಂತೆ ಮಳವಳ್ಳಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಕೆಳ ನ್ಯಾಯಾಲಯವು ಶಿವಲಿಂಗಮ್ಮ ಅವರಿಗೆ ಮಾಸಿಕ ₹8,000 ನೀಡುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಚೇತನ್ ಹೈಕೋರ್ಟ್ನಲ್ಲಿ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿದಾರರ ವಾದವನ್ನು ತಳ್ಳಿಹಾಕಿತು. ದತ್ತು ನೀಡಿದ ತಾಯಿಗೆ ಜೀವನಾಂಶ ನೀಡಲು ನಿರಾಕರಿಸಿದ ಮಗನ ವಿರುದ್ಧ ನ್ಯಾಯಮೂರ್ತಿಗಳು ತೀವ್ರ…
ಇಂದಿನ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ವಯಸ್ಸಾದವರು ಮಾತ್ರವಲ್ಲದೆ ಯುವಕರೂ ಕೂಡ ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೂತರೆ ಏಳಲಾಗದ, ನಡೆದರೆ ಕಟ-ಕಟ ಎಂಬ ಶಬ್ದ ಬರುವ ಮತ್ತು ವಿಪರೀತ ನೋವಿನಿಂದಾಗಿ ರಾತ್ರಿ ನಿದ್ದೆ ಕೂಡ ಬಾರದ ಪರಿಸ್ಥಿತಿ ಇಂದು ಅನೇಕರದ್ದಾಗಿದೆ. ಹಳೆಯ ಕಾಲದ ಶುದ್ಧ ಆಹಾರಗಳು ಇಂದು ಸಿಗುತ್ತಿಲ್ಲದಿರುವುದು ಈ ಮೂಳೆ ಸಂಬಂಧಿ ಕಾಯಿಲೆಗಳಿಗೆ ಮುಖ್ಯ ಕಾರಣ. ಆದರೆ ಗಾಬರಿಯಾಗುವ ಅಗತ್ಯವಿಲ್ಲ; ನಿಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕವೇ ಮೊಣಕಾಲು ನೋವನ್ನು ಹೋಗಲಾಡಿಸಿ ಮೂಳೆಗಳನ್ನು ಬಲಿಷ್ಠಗೊಳಿಸಬಹುದು. ಆ ಅದ್ಭುತ ಮನೆಮದ್ದುಗಳು ಇಲ್ಲಿವೆ: 1. ಪಾರಿಜಾತದ ಎಲೆಗಳ ಕಷಾಯ (Night Jasmine) ಪಾರಿಜಾತದ ಎಲೆಗಳು ಕೀಲು ನೋವಿಗೆ ರಾಮಬಾಣ. 6 ರಿಂದ 7 ಪಾರಿಜಾತದ ಎಲೆಗಳನ್ನು ಅರೆದು ಚಟ್ನಿ ಮಾಡಿ, ಅದನ್ನು ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ನೀರು ಅರ್ಧದಷ್ಟು ಆದ ಮೇಲೆ ಸೋಸಿಕೊಂಡು, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿರುವಾಗ ಕುಡಿಯಿರಿ. ಇದು ಯಾವುದೇ ಹಳೆಯ…
ಟೆಹ್ರಾನ್: ಇರಾನ್ನಲ್ಲಿ ಸಂಭವಿಸಿದ ಭೀಕರ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ನಾಲ್ವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಹೆಲಿಕಾಪ್ಟರ್ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಇರಾನ್ ರಕ್ಷಣಾ ಪಡೆಗಳು ಮತ್ತು ತುರ್ತು ನಿರ್ವಹಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಕರಾಚಿ: ಇರಾನ್ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಉದ್ರಿಕ್ತರ ಗುಂಪು ಭೀಕರ ದಾಳಿ ನಡೆಸಿದೆ. ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ.ಅಮೆರಿಕದ ಹಸ್ತಕ್ಷೇಪದಿಂದಲೇ ಈ ಹತ್ಯೆ ನಡೆದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಪಾಕಿಸ್ತಾನದಾದ್ಯಂತ ಅಮೆರಿಕ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಘಟನೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿದೆ. https://twitter.com/ALERTX360/status/2027994573600133311?ref_src=twsrc%5Etfw%7Ctwcamp%5Etweetembed%7Ctwterm%5E2027994573600133311%7Ctwgr%5Eeb1e3c86874902b9d150641687948be43ca13395%7Ctwcon%5Es1_c10&ref_url=https%3A%2F%2Fkannadadunia.com%2Fkhaminie-death-fire-on-karachi-us-consulate%2F
ಇರಾನ್ ಮೇಲಿನ ದಾಳಿಯು ಕೇವಲ ಪ್ರಾದೇಶಿಕ ಯುದ್ಧವಾಗಿ ಉಳಿಯದೆ, ಇಡೀ ವಿಶ್ವದ ಆರ್ಥಿಕತೆಯ ಮೇಲೆ “ಸುನಾಮಿ” ಎಬ್ಬಿಸುವ ಮುನ್ಸೂಚನೆ ನೀಡಿದೆ. ಇರಾನ್ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳ ನಡುವೆಯೂ ಅದು ಪ್ರತಿದಿನ 3 ಮಿಲಿಯನ್ ಬ್ಯಾರೆಲ್ ತೈಲ ಉತ್ಪಾದಿಸುತ್ತಿದ್ದು, ಅದರ 80% ಚೀನಾಕ್ಕೆ ಸರಬರಾಜಾಗುತ್ತದೆ. ಹೀಗಾಗಿ ಈ ಸಂಘರ್ಷ ಜಾಗತಿಕ ತೈಲ ಮಾರುಕಟ್ಟೆಯನ್ನು ಬೆಚ್ಚಿಬೀಳಿಸಿದೆ. 1. ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ ವಿಶ್ವದ 20% ತೈಲ ಸಾಗಣೆಯಾಗುವ ‘ಹೊರ್ಮುಜ್ ಜಲಸಂಧಿ’ (Strait of Hormuz) ಇರಾನ್ ಸಮೀಪದಲ್ಲಿದೆ. ಒಂದು ವೇಳೆ ಈ ಮಾರ್ಗ ಬಂದ್ ಆದಲ್ಲಿ ಜಾಗತಿಕ ತೈಲ ಬಿಕ್ಕಟ್ಟು ತೀವ್ರಗೊಳ್ಳಲಿದೆ. ಪ್ರಸ್ತುತ 72 ಡಾಲರ್ ಆಸುಪಾಸಿನಲ್ಲಿರುವ ಕಚ್ಚಾ ತೈಲ ಬೆಲೆ 80 ಡಾಲರ್ ದಾಟುವ ಅಂದಾಜಿದೆ. ತಜ್ಞರ ಪ್ರಕಾರ, ತೈಲ ಬೆಲೆಯಲ್ಲಿ 5% ರಿಂದ 10% ರಷ್ಟು ಏರಿಕೆಯಾಗಬಹುದು. 2. ಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೆ? ಯುದ್ಧದ ಸಮಯದಲ್ಲಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದತ್ತ ಮುಖ ಮಾಡುತ್ತಾರೆ.…
ಮನಾಮ/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದೆ. ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಇರಾನ್ ನಡೆಸುತ್ತಿರುವ ಪ್ರತೀಕಾರದ ದಾಳಿಗಳ ಭಾಗವಾಗಿ, ಇಂದು ಬಹ್ರೇನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಘಟನೆಯ ವಿವರ: ಬಹ್ರೇನ್ ಆಂತರಿಕ ಸಚಿವಾಲಯದ ಪ್ರಕಾರ, ಡ್ರೋನ್ ದಾಳಿಯಿಂದಾಗಿ ವಿಮಾನ ನಿಲ್ದಾಣದ ಕಟ್ಟಡಕ್ಕೆ ಪೀಠೋಪಕರಣ ಹಾಗೂ ಗಾಜು ಸೇರಿದಂತೆ ಭೌತಿಕ ಹಾನಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣವನ್ನು ಮೊದಲೇ ತೆರವುಗೊಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದುಬೈ ಮತ್ತು ಕುವೈತ್ ಮೇಲೂ ದಾಳಿ: ಇದೇ ವೇಳೆ ದುಬೈ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕುವೈತ್ ಮತ್ತು ಕತಾರ್ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಎಚ್ಚರಿಕೆ: ಅಮೆರಿಕ ಮತ್ತು ಇಸ್ರೇಲ್ನ ಮಿಲಿಟರಿ ನೆಲೆಗಳು ಇರುವ ಎಲ್ಲಾ ಕೊಲ್ಲಿ ರಾಷ್ಟ್ರಗಳು ನಮ್ಮ ಗುರಿಯಾಗಲಿವೆ ಎಂದು ಇರಾನ್ನ…
BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ | WATCH VIDEO
ಕರಾಚಿ: ಇರಾನ್ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಉದ್ರಿಕ್ತರ ಗುಂಪು ಭೀಕರ ದಾಳಿ ನಡೆಸಿದೆ. ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ.ಅಮೆರಿಕದ ಹಸ್ತಕ್ಷೇಪದಿಂದಲೇ ಈ ಹತ್ಯೆ ನಡೆದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಪಾಕಿಸ್ತಾನದಾದ್ಯಂತ ಅಮೆರಿಕ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಘಟನೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿದೆ. https://twitter.com/ALERTX360/status/2027994573600133311?ref_src=twsrc%5Etfw%7Ctwcamp%5Etweetembed%7Ctwterm%5E2027994573600133311%7Ctwgr%5Eeb1e3c86874902b9d150641687948be43ca13395%7Ctwcon%5Es1_c10&ref_url=https%3A%2F%2Fkannadadunia.com%2Fkhaminie-death-fire-on-karachi-us-consulate%2F
ಟೆಹ್ರಾನ್: ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ ರಹೀಮ್ ಮೂಸವಿ ಅವರು ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರಿ ದೂರದರ್ಶನ ಆರಂಭಿಕ ವರದಿಗಳಲ್ಲಿ ತಿಳಿಸಿದೆ. ಇರಾನ್ ಸೇನೆಯು ಅಮೆರಿಕ ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇರಾನ್ ಮಾಧ್ಯಮಗಳ ಪ್ರಕಾರ, ರಾಜಧಾನಿ ಟೆಹ್ರಾನ್ನಲ್ಲಿ ಹಲವಾರು ಭೀಕರ ಸ್ಫೋಟದ ಸಬ್ದಗಳು ಕೇಳಿಬಂದಿವೆ. ಇಸ್ರೇಲ್ ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದ ನಂತರ, ಪ್ರತಿಯಾಗಿ ನಡೆದ ದಾಳಿಯಲ್ಲಿ ಮೂಸವಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.













