Author: kannadanewsnow57

ಕಠ್ಮಂಡು: ಭಾರತದ ಮಾವು ಬೆಳೆಗಾರರಿಗೆ ಮತ್ತೊಂದು ಭಾರಿ ಹಿನ್ನಡೆಯಾಗಿದೆ. ಭಾರತದಿಂದ ಆಮದಾಗುವ ಮಾವಿನ ಹಣ್ಣುಗಳ ಮೇಲೆ ನೆರೆಯ ರಾಷ್ಟ್ರ ನೇಪಾಳ ಸಂಪೂರ್ಣ ನಿಷೇಧ ಹೇರಿದೆ. ಭಾರತೀಯ ಮಾವಿನ ಹಣ್ಣುಗಳಲ್ಲಿ ಅತಿಯಾದ ಕೀಟನಾಶಕಗಳ (Pesticides) ಅಂಶ ಪತ್ತೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ನೇಪಾಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಗಡಿ ಪ್ರದೇಶಗಳಲ್ಲಿ ಸೂಕ್ತ ಕ್ವಾರಂಟೈನ್ ಸೌಲಭ್ಯಗಳ ಕೊರತೆಯೂ ಈ ನಿಷೇಧಕ್ಕೆ ಕಾರಣ ಎನ್ನಲಾಗಿದೆ. ಇತ್ತೀಚೆಗಷ್ಟೇ ಜಪಾನ್ ದೇಶ ಕೂಡ ಭಾರತೀಯ ಮಾವಿನ ಹಣ್ಣುಗಳ ಆಮದನ್ನು ನಿಷೇಧಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಸ್ಥಳೀಯ ರೈತರಿಗೆ ವರ, ಆದರೆ ಬೆಲೆ ಏರಿಕೆ ಭೀತಿ! ನೇಪಾಳದ ಕೃಷಿ ಮತ್ತು ಸಹಕಾರ ಸಚಿವಾಲಯದ ಮಾಹಿತಿ ಅಧಿಕಾರಿಯ ಪ್ರಕಾರ, ಭಾರತೀಯ ಮಾವಿನ ಹಣ್ಣುಗಳ ನಿಷೇಧದಿಂದ ನೇಪಾಳದ ಸ್ಥಳೀಯ ರೈತರಿಗೆ ಅನುಕೂಲವಾಗಲಿದೆ. ಈ ಋತುವಿನಲ್ಲಿ ಅವರು ಭಾರತೀಯ ಮಾರುಕಟ್ಟೆಯೊಂದಿಗೆ ಸ್ಪರ್ಧಿಸಬೇಕಾದ ಅಗತ್ಯವಿರುವುದಿಲ್ಲ. ನೇಪಾಳದ ಮಧೇಶ್ ಪ್ರಾಂತ್ಯದ ಸಿರಾಹಾ, ಸಪ್ತರಿ ಮತ್ತು ಧನುಷಾ ಜಿಲ್ಲೆಗಳು ಅಲ್ಲಿನ ಪ್ರಮುಖ…

Read More

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಇಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಿದ್ದಾರೆ. ಕರ್ನಾಟಕ ದಲಿತ ಸಂಘಟನಾ ಸಮಿತಿ ವತಿಯಿಂದ ಇಂದು (11.06.2026) ಬೆಳಗ್ಗೆ 08:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ವಾಹನ ಸವಾರರು ಕೆಳಕಂಡ ಸಂಚಾರ ಬದಲಾವಣೆಗಳನ್ನು ಗಮನಿಸಬೇಕಾಗಿ ಕೋರಲಾಗಿದೆ. ಪ್ರಮುಖ ಸಂಚಾರ ಬದಲಾವಣೆಗಳು ಮತ್ತು ಪರ್ಯಾಯ ಮಾರ್ಗಗಳು: ಮಹಾರಾಣಿ ಅಂಡರ್ ಪಾಸ್ ರಸ್ತೆ ಬಳಕೆ ಕಡ್ಡಾಯ: ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆಯನ್ನು ಬಳಸಬೇಕಾಗುತ್ತದೆ. ಸಂಚಾರ ನಿಷೇಧ: ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ…

Read More

ನವದೆಹಲಿ: ಯುದ್ಧತಂತ್ರದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ‘ಹೊರ್ಮುಜ್ ಜಲಸಂಧಿ’ಯಲ್ಲಿ (Strait of Hormuz) ಅಮೆರಿಕ ಸೇನೆಯು ರಹಸ್ಯ ಕಾರ್ಯಾಚರಣೆಯೊಂದನ್ನು ನಡೆಸಿದ್ದು, ವಾಣಿಜ್ಯ ಹಡಗುಗಳು ಮತ್ತು ತೈಲ ಟ್ಯಾಂಕರ್ಗಳ ಸುರಕ್ಷಿತ ಸಂಚಾರವನ್ನು ಖಚಿತಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯ ಫಲವಾಗಿ 10 ಕೋಟಿಗೂ ಹೆಚ್ಚು ಬ್ಯಾರೆಲ್ ತೈಲವು ಜಾಗತಿಕ ಮಾರುಕಟ್ಟೆಯನ್ನು ತಲುಪಿದೆ ಮತ್ತು 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಈ ಮಾರ್ಗದ ಮೂಲಕ ಸುರಕ್ಷಿತವಾಗಿ ಸಾಗಿವೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ. ರಹಸ್ಯ ಮಿಷನ್ ಯಶಸ್ವಿ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರುತ್ ಸೋಶಿಯಲ್’ನಲ್ಲಿ (Truth Social) ಪೋಸ್ಟ್ ಮಾಡಿರುವ ಟ್ರಂಪ್, “ಕಳೆದ ತಿಂಗಳು ನಾನು ತೈಲ ಟ್ಯಾಂಕರ್ಗಳು ಮತ್ತು ಇತರ ವಾಣಿಜ್ಯ ಹಡಗುಗಳನ್ನು ರಕ್ಷಿಸಲು ರಹಸ್ಯ ಕಾರ್ಯಾಚರಣೆ ನಡೆಸುವಂತೆ ಅಮೆರಿಕ ಸೇನೆಗೆ ನಿರ್ದೇಶನ ನೀಡಿದ್ದೆ. ಇಂದು ಈ ಪ್ರಯತ್ನದ ಫಲವಾಗಿ 10 ಕೋಟಿಗೂ ಹೆಚ್ಚು ಬ್ಯಾರೆಲ್ ತೈಲವು ಹೊರ್ಮುಜ್ ಜಲಸಂಧಿಯ ಮೂಲಕ ಮುಕ್ತ ಮಾರುಕಟ್ಟೆಯನ್ನು…

Read More

ನವದೆಹಲಿ: ದೇಶದಲ್ಲಿ ಪರಿಸರ ಸ್ನೇಹಿ ಇಂಧನ ಬಳಕೆಯನ್ನು ಉತ್ತೇಜಿಸಲು ಮತ್ತು ಕಚ್ಚಾ ತೈಲ ಆಮದನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಶೇಕಡಾ 22, 25, 27 ಮತ್ತು 30 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ಗೆ ನೀಡಲಾಗಿದ್ದ ಕೇಂದ್ರ ಅಬಕಾರಿ ಸುಂಕ (Central Excise Duty) ವಿನಾಯಿತಿಯನ್ನು ಸರ್ಕಾರ ಮತ್ತಷ್ಟು ವಿಸ್ತರಿಸಿದೆ. ಭಾರತೀಯ ಗುಣಮಟ್ಟ ಸಂಸ್ಥೆ (BIS) ನಿಯಮಾವಳಿಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾದ ಈ ಎಥೆನಾಲ್ ಮಿಶ್ರಿತ ಇಂಧನಗಳಿಗೆ ಇನ್ಮುಂದೆ ‘ಶೂನ್ಯ ಅಬಕಾರಿ ಸುಂಕ’ (Nil Excise Duty) ಅನ್ವಯಿಸಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೆಚ್ಚುವರಿ ಮಿಶ್ರಣಕ್ಕೆ ಉತ್ತೇಜನ: ಇದುವರೆಗೆ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಕ್ಕೆ ಮಾತ್ರ ಇದ್ದ ವಿನಾಯಿತಿಯನ್ನು, ಈಗ ಶೇ. 22 ರಿಂದ ಶೇ. 30 ರಷ್ಟು ಹೆಚ್ಚಿನ ಪ್ರಮಾಣದ ಮಿಶ್ರಿತ ಇಂಧನಗಳಿಗೂ ವಿಸ್ತರಿಸಲಾಗಿದೆ. ಗುಣಮಟ್ಟಕ್ಕೆ ಆದ್ಯತೆ: ಬಿಐಎಸ್ (BIS) ಮಾನದಂಡಗಳನ್ನು ಪೂರೈಸುವ ಇಂಧನ ಮಿಶ್ರಣಗಳಿಗೆ ಮಾತ್ರ ಈ ಸಂಪೂರ್ಣ ಸುಂಕ ಮನ್ನಾ ಸೌಲಭ್ಯ ಸಿಗಲಿದೆ. ಬೆಲೆ ನಿಯಂತ್ರಣ…

Read More

ಖಾಸಗಿ ಅಥವಾ ಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಿಂದ ಪ್ರತೀ ತಿಂಗಳು PF (Provident Fund) ಕಡಿತವಾಗುತ್ತಿದ್ದರೆ, ನಿಮಗೆ ತಿಳಿದಿರದ ಒಂದು ಮಹತ್ವದ ಪ್ರಯೋಜನವೂ ಸಿಗುತ್ತಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಜಾರಿಗೆ ತಂದಿರುವ ವಿಶೇಷ ವಿಮಾ ಯೋಜನೆಯಡಿ, ಉದ್ಯೋಗಿಯ ಕುಟುಂಬಕ್ಕೆ ಗರಿಷ್ಠ ₹7 ಲಕ್ಷದವರೆಗೆ ವಿಮಾ ರಕ್ಷಣೆ ದೊರೆಯುವ ಅವಕಾಶವಿದೆ. ಏನಿದು EDLI ಯೋಜನೆ? EPFO ವತಿಯಿಂದ ಜಾರಿಯಲ್ಲಿರುವ Employees’ Deposit Linked Insurance (EDLI) ಯೋಜನೆಯ ಮೂಲಕ ಈ ಸೌಲಭ್ಯ ಲಭ್ಯವಾಗುತ್ತದೆ. ಕೆಲಸದಲ್ಲಿರುವ ಅವಧಿಯಲ್ಲಿ ಉದ್ಯೋಗಿ ಅನಿರೀಕ್ಷಿತವಾಗಿ ಮೃತಪಟ್ಟರೆ, ಅವರ ಕುಟುಂಬದ ಸದಸ್ಯರು ಅಥವಾ ನಾಮಿನಿಗೆ ಒಮ್ಮೆಲೇ ವಿಮಾ ಮೊತ್ತವನ್ನು ಪಾವತಿಸಲಾಗುತ್ತದೆ. ಈ ಯೋಜನೆಯ ಪ್ರಮುಖ ಅಂಶವೆಂದರೆ, ಇದಕ್ಕಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವೇ ಇಲ್ಲ. PF ಖಾತೆ ಸಕ್ರಿಯವಾಗಿರುವ ಪ್ರತಿಯೊಬ್ಬ ಉದ್ಯೋಗಿಯೂ ಸ್ವಯಂಚಾಲಿತವಾಗಿ ಈ ವಿಮಾ ರಕ್ಷಣೆಯ ವ್ಯಾಪ್ತಿಗೆ ಬರುತ್ತಾರೆ. ಉದ್ಯೋಗಿಯಿಂದ ಒಂದು ರೂಪಾಯಿಯೂ ಪಾವತಿ ಬೇಡ EDLI ಯೋಜನೆಯ ವಿಶೇಷತೆ ಎಂದರೆ ಉದ್ಯೋಗಿಗಳು…

Read More

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು. ಕುಖ್ಯಾತ ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಯತ್ನಿಸಿದ ಪರಿಣಾಮ, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡೇಟಿಗೆ ಒಳಗಾದ ಆರೋಪಿ ಜೀವ (19) ಎಂದು ಗುರುತಿಸಲಾಗಿದ್ದು, ಆತನ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಆರೋಪಿಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಿರುಪಾಳ್ಯ ನಿವಾಸಿಯಾಗಿರುವ ಜೀವ, ಕೊಲೆ, ಸುಲಿಗೆ ಹಾಗೂ ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಕಳೆದ ವಾರ ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಪ್ರದೇಶಗಳಲ್ಲಿ ನಡೆದ ದರೋಡೆ ಪ್ರಕರಣಗಳಲ್ಲಿಯೂ ಆತನ ಪಾತ್ರವಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು.ಖಚಿತ ಮಾಹಿತಿ ಆಧರಿಸಿ ಸಿಂಗೇನಾ ಅಗ್ರಹಾರದ ತೋಪು ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ…

Read More

ರೈಲು ಪ್ರಯಾಣದ ಸಮಯದಲ್ಲಿ ಆನ್ಲೈನ್ ಮೂಲಕ ಆಹಾರ ಆರ್ಡರ್ ಮಾಡುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಇದೇ ಕ್ರೇಜ್ ಅನ್ನು ಬಂಡವಾಳ ಮಾಡಿಕೊಂಡಿರುವ ಕೆಲವು ಸಂಸ್ಥೆಗಳು ರೈಲ್ವೆ ಇಲಾಖೆಯ ಯಾವುದೇ ಅನುಮತಿ ಇಲ್ಲದೆ ಅನಧಿಕೃತವಾಗಿ ಆಹಾರ ವಿತರಣೆ (Food Delivery) ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಐಆರ್ಸಿಟಿಸಿ ಈಗ ಇಂತಹ 14 ಪ್ರಮುಖ ವೆಬ್ಸೈಟ್ ಹಾಗೂ ಆ್ಯಪ್ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧರಿಸಿದೆ. ಬ್ಲಾಕ್ ಲಿಸ್ಟ್ ಸೇರಿದ ಆ 14 ಆ್ಯಪ್ಗಳು ಯಾವುವು? ರೈಲ್ವೆ ನಿಯಮಗಳನ್ನು ಉಲ್ಲಂಘಿಸಿ, ಅನಧಿಕೃತವಾಗಿ ಸೇವೆ ನೀಡುತ್ತಿದ್ದ ಕಾರಣಕ್ಕಾಗಿ ಐಆರ್ಸಿಟಿಸಿ ಕೆಳಗಿನ ಸಂಸ್ಥೆಗಳಿಗೆ ಈಗಾಗಲೇ ಲೀಗಲ್ ನೋಟಿಸ್ ಜಾರಿ ಮಾಡಿದೆ: ರೈಲ್ ರೆಸ್ಟ್ರೋ (RailRestro) ಇ-ಕ್ಯಾಟರಿಂಗ್ ಆ್ಯಪ್ (e-Catering App) ಖಾನಾ ಆನ್ಲೈನ್ (Khana Online) ಟ್ರೈನ್ವೇ (Trainway) ರೈಲ್ ಮೀಲ್ (Rail Meal) ಟ್ರೈನ್ಮೆನು (Train Menu) ಫುಡ್ ಆನ್ ಟ್ರ್ಯಾಕ್ (Food on Track)…

Read More

ನಗದು ವಹಿವಾಟುಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (Income Tax Department) ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ದೇಶದಲ್ಲಿ ಪಾರದರ್ಶಕವಾಗಿ ಹಣಕಾಸು ವಹಿವಾಟುಗಳು ನಡೆಯಬೇಕೆಂಬ ಉದ್ದೇಶದಿಂದ ಐಟಿ ಇಲಾಖೆ ಹಲವು ಕಟ್ಟುನಿಟ್ಟಿನ ನಿಯಮ ಹಾಗೂ ಮಿತಿಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಪ್ರತಿಯೊಬ್ಬ ನಾಗರಿಕರೂ ಪಾಲಿಸುವುದು ಕಡ್ಡಾಯವಾಗಿದೆ. ಸಾಮಾನ್ಯವಾಗಿ ತುರ್ತು ಸಂದರ್ಭಗಳಲ್ಲಿ ನಾವು ಸ್ನೇಹಿತರು ಅಥವಾ ಸಂಬಂಧಿಕರಿಂದ ಕೈಗಡವಾಗಿ (ಸಾಲ) ಹಣವನ್ನು ಪಡೆದುಕೊಳ್ಳುತ್ತೇವೆ. ಯಾವುದೇ ದಾಖಲೆಗಳಿಲ್ಲದೆ ನಗದು ರೂಪದಲ್ಲಿ ಇಂತಹ ವಹಿವಾಟುಗಳು ನಡೆಯುತ್ತವೆ. ಆದರೆ, ಇಂತಹ ದೊಡ್ಡ ಮೊತ್ತದ ನಗದು ವಹಿವಾಟುಗಳು ಕೂಡ ಐಟಿ ನಿಯಮಗಳ ಉಲ್ಲಂಘನೆಯ ವ್ಯಾಪ್ತಿಗೆ ಬರುತ್ತವೆ ಎಂಬುದು ನಿಮಗೆ ಗೊತ್ತೇ? ಕೈಗಡ ವಹಿವಾಟಿಗೆ ಇದೆ ಕಠಿಣ ನಿಯಮ! ಸ್ನೇಹಿತರು ಅಥವಾ ಪರಿಚಯಸ್ಥರಿಂದ ನಗದು ರೂಪದಲ್ಲಿ ಹಣವನ್ನು ಪಡೆಯುವ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆ ಸ್ಪಷ್ಟ ಮಿತಿಯನ್ನು ವಿಧಿಸಿದೆ. ಐಟಿ ಕಾಯ್ದೆಯ ಸೆಕ್ಷನ್ 269SS ಪ್ರಕಾರ, ಯಾವುದೇ ವ್ಯಕ್ತಿಯಿಂದ ನಗದು ರೂಪದಲ್ಲಿ ರೂ. 20,000 ಕ್ಕಿಂತ ಹೆಚ್ಚು ಸಾಲ ಅಥವಾ ಠೇವಣಿಯನ್ನು…

Read More

ಬ್ರಹ್ಮಾವರ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೊರಟಿದ್ದರು. ಎಂದಿನಂತೆ ಚಿಕ್ಕ ಮಗುವನ್ನು ಮನೆಯಲ್ಲಿ ಬಿಟ್ಟು ಹೋಗುವ ಬದಲು, ಅಂದು ಮಳೆ ನಿಂತಿದ್ದ ಕಾರಣ ಒಂದೂವರೆ ವರ್ಷದ ಪುಟ್ಟ ಮಗುವನ್ನೂ ಕಂಕುಳಲ್ಲಿ ಎತ್ತಿಕೊಂಡು ಹೊರಟಿದ್ದರು. ಮನೆ ಬಿಟ್ಟು ಸ್ವಲ್ಪ ದೂರ ಸಾಗುತ್ತಿದ್ದಂತೆ, ದಾರಿ ಬದಿಯ ತೋಟದ ಮರದಿಂದ ಅಚಾನಕ್ಕಾಗಿ ತೆಂಗಿನಕಾಯಿಯೊಂದು ನೇರವಾಗಿ ಮಗುವಿನ ತಲೆಯ ಮೇಲೆ ಬಿದ್ದಿದೆ. ತೆಂಗಿನಕಾಯಿ ಬಿದ್ದ ತಕ್ಷಣ ಮಗುವಿನ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ಪಕ್ಕದ…

Read More

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ ದಂಡವನ್ನು ಪಾವತಿಸದ ಆರೋಪಿಯನ್ನು ಯಾವುದೇ ಕಾರಣಕ್ಕೂ ಗರಿಷ್ಠ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲಿನಲ್ಲಿ ಇಡುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೋರ್ಟ್ ಹೇಳಿದ್ದೇನು? ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ (NI Act) ಸೆಕ್ಷನ್ 138ರ ಅಡಿಯಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ವ್ಯಕ್ತಿ ನ್ಯಾಯಾಲಯದ ಮೊರೆ ಹೋಗಿದ್ದನು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ಕಾನೂನಿನ ಮಿತಿಯನ್ನು ನೆನಪಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಾನೂನುಬದ್ಧವಾಗಿ ವಿಧಿಸಬಹುದಾದ ಗರಿಷ್ಠ ಶಿಕ್ಷೆಯ ಅವಧಿ ಎರಡು ವರ್ಷಗಳು ಮಾತ್ರ. ಹೀಗಾಗಿ, ದಂಡ ಕಟ್ಟದಿದ್ದರೂ ಸಹ ಆರೋಪಿಯನ್ನು ಎರಡು ವರ್ಷ ಮೀರಿ ಜೈಲಿನಲ್ಲಿ ಇರಿಸಲು ಅವಕಾಶವಿಲ್ಲ…

Read More