Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನಗರದ ನಾಗರಬಾವಿಯ ಹೋಟೆಲ್ವೊಂದರಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಹೋಟೆಲ್ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಇಡೀ ಕಟ್ಟಡದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೋಟೆಲ್ನ ಒಳಗಿದ್ದ ಐವರು ಸಿಬ್ಬಂದಿಗಳು ಹೊರಬರಲಾರದೆ ಸಿಲುಕಿಕೊಂಡಿದ್ದರು. ಹೊಗೆಯ ತೀವ್ರತೆಗೆ ಉಸಿರಾಡಲು ಸಾಧ್ಯವಾಗದೆ ಐವರೂ ತೀವ್ರವಾಗಿ ಅಸ್ವಸ್ಥಗೊಂಡಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಹೋಟೆಲ್ನಲ್ಲಿ ಸಿಲುಕಿದ್ದ ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಸೇರಿದಂತೆ ಐವರನ್ನು ರಕ್ಷಿಸಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿತ್ತು. ದುರಾದೃಷ್ಟವಶಾತ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 45 ವರ್ಷದ ರಾಜಕುಮಾರ್ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ನೀವು ಬ್ಯಾಂಕ್ನಿಂದ ಸಾಲ ಪಡೆದಿದ್ದೀರಾ? ಹಾಗಿದ್ದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಮಗೊಂದು ಮಹತ್ವದ ಸಿಹಿಸುದ್ದಿ ನೀಡಿದೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಾಲದ ಕಂತು (EMI) ಪಾವತಿಸಲು ಕಷ್ಟಪಡುವ ಗ್ರಾಹಕರಿಗೆ ನೆರವಾಗಲು ಆರ್ಬಿಐ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ನಿಯಮವು ಜುಲೈ 1, 2026 ರಿಂದ ಜಾರಿಗೆ ಬರಲಿದೆ. ನೋಂದಣಿ ಇಲ್ಲದೆಯೇ ಸಿಗಲಿದೆ ಇಎಂಐ ರಿಯಾಯಿತಿ! ಈ ಮೊದಲು ಪ್ರವಾಹ, ಭೂಕಂಪ ಅಥವಾ ಚಂಡಮಾರುತದಂತಹ ವಿಪತ್ತುಗಳು ಸಂಭವಿಸಿದಾಗ, ಸಾಲಗಾರರು ತಮಗೆ ಇಎಂಐ ಪಾವತಿಸಲು ವಿನಾಯಿತಿ ಬೇಕೆಂದು ಬ್ಯಾಂಕ್ಗಳಿಗೆ ಅಲೆದು ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಹೊಸ ನಿಯಮದಂತೆ, ನಿಮ್ಮ ಪ್ರದೇಶದಲ್ಲಿ ಸರ್ಕಾರವು ಅಧಿಕೃತವಾಗಿ ‘ಪ್ರಾಕೃತಿಕ ವಿಕೋಪ’ ಎಂದು ಘೋಷಿಸಿದರೆ, ಬ್ಯಾಂಕ್ಗಳೇ ಸ್ವಯಂಪ್ರೇರಿತವಾಗಿ ನಿಮಗೆ ಸಾಲ ಮರುಪಾವತಿಯಲ್ಲಿ ರಿಯಾಯಿತಿ ನೀಡಲಿವೆ. ಹೊಸ ನಿಯಮದ ಪ್ರಮುಖ ಅಂಶಗಳು: ಯಾವ ವಿಪತ್ತುಗಳಿಗೆ ಅನ್ವಯ?: ರಾಜ್ಯ ವಿಪತ್ತು ಪರಿಹಾರ ನಿಧಿ (SDRF) ಅಥವಾ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಘೋಷಿತವಾದ ನೈಸರ್ಗಿಕ ವಿಕೋಪಗಳಿಗೆ ಮಾತ್ರ…
ಬೆಂಗಳೂರು: ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್ಗಳನ್ನು ಸಕ್ರಿಯಗೊಳಿಸಲಾಗಿದೆ. ಪ್ರಮುಖ ಸೇವೆಗಳು ಮತ್ತು ಸಮಯ: ಸಾರ್ವಜನಿಕರು ಈ ಕೆಳಗಿನ ಸೇವೆಗಳನ್ನು ನಿಗದಿತ ಸಮಯದಲ್ಲಿ ಪಡೆದುಕೊಳ್ಳಬಹುದು: ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಅವಕಾಶವಿರುತ್ತದೆ. ಹೊಸ ಪಡಿತರ ಚೀಟಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ. GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ಮೇ…
ಬೆಂಗಳೂರು : ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬುಧವಾರ ಬಿಡುಗಡೆ ಮಾಡಿರುವ 2024ನೇ ಸಾಲಿನ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ವ್ಯಕ್ತಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ. 2.22 ರಷ್ಟು ಇಳಿಕೆಯಾಗಿದೆ. ಆದರೆ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಈ ಪ್ರಮಾಣ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 2024ರಲ್ಲಿ ದೇಶಾದ್ಯಂತ ಒಟ್ಟು 10,546 ಕೃಷಿ ವಲಯದ ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ (2023) ಈ ಸಂಖ್ಯೆ 10,786 ಇತ್ತು. ರೈತರು: 4,633 ಪ್ರಕರಣಗಳು. ಕೃಷಿ ಕಾರ್ಮಿಕರು: 5,913 ಪ್ರಕರಣಗಳು. ದೇಶದ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಕೃಷಿ ವಲಯದ ಪಾಲು ಶೇ. 6.2 ರಷ್ಟಿದೆ. ಕರ್ನಾಟಕದ ಸ್ಥಿತಿ ಕೃಷಿ ಸಂಬಂಧಿತ ಆತ್ಮಹತ್ಯೆಗಳಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಆತ್ಮಹತ್ಯೆ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ರೈತರು: 1,770 (ಹಿಂದಿನ ವರ್ಷ 1,425 ಇತ್ತು). ಕೃಷಿ ಕಾರ್ಮಿಕರು: 1,201 (ಹಿಂದಿನ ವರ್ಷ 998 ಇತ್ತು). ಕರ್ನಾಟಕದಲ್ಲಿ…
ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯದ ಆಹಾರ ಭದ್ರತೆ ಕಾಯ್ದೆಯಡಿ 2026ನೇ ಮೇ ತಿಂಗಳಿಗೂ ಜೂನ್ ಈ ಎರಡೂ ತಿಂಗಳುಗಳಲ್ಲಿ ಸಂಬಂದಿಸಿದ ಪಡಿತರ ಅಕ್ಕಿಯನ್ನು ಇದೇ ತಿಂಗಳ ಅಂದರೆ 2026ನೇ ಮೇ ತಿಂಗಳಲ್ಲಿಯೇ ವಿತರಣೆ ಮಾಡುವಂತೆ ನಿರ್ದೇಶನಗಳನ್ನು ಇರುವುದರಿಂದ ಪ್ರಸ್ತುತ 2026ನೇ ಮೇ ತಿಂಗಳಲ್ಲಿ ಮೇ ಹಾಗೂ ಜೂನ್ ಈ ಎರಡೂ ತಿಂಗಳ ಸಂಬಂದಿಸಿದಂತೆ ಅಕ್ಕಿಯನ್ನು ವಿತರಣೆ ಮಾಡುವ ಜಿಲ್ಲೆ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆಯನ್ನು ನೀಡಲಾಗಿರುತ್ತದೆ. ಅಂತ್ಯೋದಯ ಅನ್ನಯೋಜನೆ ಪಡಿತರ ಚೀಟಿಗೆ ಎರಡೂ ತಿಂಗಳ ಪಡಿತರ ಅಕ್ಕಿ ಒಟ್ಟು 70 ಕೆಜಿ, ಹಾಗೂ ಆಧ್ಯತಾ (ಬಿಪಿಎಲ್) ಪಡಿತರ ಚೀಟಿಗೆ ಪ್ರತಿತಿಂಗಳು ಪ್ರತಿಸಿದಸ್ಯರಿಗೆ 5 ಕೆಜಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ಕೇಂದ್ರಿಯವಾಗಿ ಎರಡು ಪ್ರತ್ಯೇಕ ಬಯೋಮೆಟ್ರಿಕ್ ನೀಡುವ ಮೂಲಕ ಪಡಿತರ ಚೀಟಿದಾರರಿಗೆ ವಿತರಿಸಲಾಗುವುದು. ಹಾಗೂ ಕಾರ್ಡುಕೋರ ಸಾರ್ವಜನಿಕರು ನೀಡುತ್ತಿರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಬಿ ಪಿ ಎಲ್ ಕಾರ್ಡುಗಳನ್ನು ರದ್ದು ಪಡಿಸಲಾಗುವುದು. ರಾಜ್ಯ ಸರ್ಕಾರದ ಅನ್ನಭಾಗ್ಯ…
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ, ಭಾರತದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (OMC) ಎದುರಿಸುತ್ತಿರುವ ಭಾರೀ ಆರ್ಥಿಕ ನಷ್ಟವನ್ನು ಸರಿದೂಗಿಸಲು ಮೇ 15ರ ಒಳಗಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕಚ್ಚಾ ತೈಲ ದರ ಏರಿಕೆಯಾಗಿದ್ದರೂ ಚಿಲ್ಲರೆ ಮಾರಾಟ ದರ ಸ್ಥಿರವಾಗಿರುವುದರಿಂದ, ತೈಲ ಕಂಪನಿಗಳು ತಿಂಗಳಿಗೆ ಅಂದಾಜು 30,000 ಕೋಟಿ ರೂ. ನಷ್ಟ ಅನುಭವಿಸುತ್ತಿವೆ. ಒಂದು ವೇಳೆ ಬೆಲೆ ಏರಿಕೆಗೆ ಅನುಮೋದನೆ ಸಿಕ್ಕರೆ, ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ಗೆ 4 ರಿಂದ 5 ರೂ. ಹಾಗೂ ಗೃಹಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬೆಲೆ 40 ರಿಂದ 50 ರೂ. ಹೆಚ್ಚಾಗುವ ಸಾಧ್ಯತೆಯಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಪೂರೈಕೆ ಅಡಚಣೆಯಿಂದಾಗಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ಗೆ 70 ಡಾಲರ್ನಿಂದ…
ಬೆಂಗಳೂರು: ವಾಹನಗಳ ನೋಂದಣಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ತರುವ ನಿಟ್ಟಿನಲ್ಲಿ ಆಧಾರ್ ಇ-ಕೆವೈಸಿ (e-KYC) ಕಡ್ಡಾಯ ಮಾಡುವುದು ಸೂಕ್ತ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ‘ಸಕಾಲ’ ಸೇವೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಧಾರ್ ಮಾದರಿ ಅನುಸರಣೆ: ಚಾಲನಾ ಪರವಾನಗಿ (Driving License) ಪಡೆಯಲು ಆಧಾರ್ ಕಡ್ಡಾಯಗೊಳಿಸಿರುವ ಮಾದರಿಯಲ್ಲೇ, ವಾಹನಗಳ ನೋಂದಣಿಗೂ ಆಧಾರ್ ಇ-ಕೆವೈಸಿ ಏಕೆ ಕಡ್ಡಾಯ ಮಾಡಬಾರದು ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು. ಸಾರ್ವಜನಿಕರಿಗೆ ಸೇವೆಗಳು ಶೀಘ್ರವಾಗಿ ತಲುಪಲು ಕೆಲವು ಪ್ರಮುಖ ಸೇವೆಗಳನ್ನು ಆಟೋಮೇಷನ್ (Automation) ಮಾಡುವ ಅಗತ್ಯವಿದೆ. ಇದರಿಂದ ಜನರಿಗೆ ವಿಳಂಬವಿಲ್ಲದೆ ಸೇವೆ ಸಿಗಲಿದೆ ಎಂದು ಅವರು ತಿಳಿಸಿದರು. ಕುಟುಂಬ ಡೇಟಾಬೇಸ್ ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ‘ಸಕಾಲ’ ಕುಟುಂಬ ಡೇಟಾಬೇಸ್ ಅಪ್ಡೇಟ್ ಮಾಡಲಾಗುತ್ತಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸೇವೆಯ ದತ್ತಾಂಶಗಳು ಬೆರಳ ತುದಿಯಲ್ಲಿ ಲಭ್ಯವಿರಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಸಕಾಲಿಕ ಸೇವೆಗೆ ಸೂಚನೆ ಸಕಾಲ ಗ್ಯಾರಂಟಿ…
ಯಡಿಯೂರಪ್ಪ ರಾಜಕೀಯ ಪಯಣಕ್ಕೆ 50 ವರ್ಷ, ಚಿತ್ರದುರ್ಗದಲ್ಲಿ ಇಂದು ಬಿಎಸ್ ವೈ ‘ಅಭಿಮಾನೋತ್ಸಾಹ’ : 10 ಲಕ್ಷ ಮಂದಿ ಭಾಗಿ.!
ಚಿತ್ರದುರ್ಗ: ಕರ್ನಾಟಕದ ಜನಪ್ರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣ ಮಹೋತ್ಸವದ ಅಂಗವಾಗಿ ‘ಅಭಿಮಾನೋತ್ಸಾಹ’ ಬೃಹತ್ ಸಮಾವೇಶಕ್ಕೆ ಕೋಟೆನಾಡು ಚಿತ್ರದುರ್ಗ ಸಂಪೂರ್ಣ ಸಜ್ಜಾಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಶ್ರೇಯಸ್ಸಿನ ಯಡಿಯೂರಪ್ಪ ಅವರ ಈ ಐತಿಹಾಸಿಕ ಕಾರ್ಯಕ್ರಮವು ಇಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಜೆ 4 ಗಂಟೆಗೆ ಸಮಾವೇಶಕ್ಕೆ ಆಗಮಿಸಲಿದ್ದಾರೆ. 112 ಅಡಿ ಉದ್ದ, 40 ಅಡಿ ಅಗಲ ಹಾಗೂ 10 ಅಡಿ ಎತ್ತರದ ಭವ್ಯ ವೇದಿಕೆಯನ್ನು 150ಕ್ಕೂ ಹೆಚ್ಚು ಕಾರ್ಮಿಕರು ಸಿದ್ಧಪಡಿಸಿದ್ದಾರೆ. ಸಮಾವೇಶಕ್ಕೆ ರಾಜ್ಯದ ವಿವಿಧೆಡೆಯಿಂದ ಸುಮಾರು 10 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ. ಶುಕ್ರವಾರವಷ್ಟೇ ಚಿತ್ರದುರ್ಗಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ 40 ಅಡಿ ಎತ್ತರದ ಬೃಹತ್ 24 ತಮಟೆಗಳ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ್ದಾರೆ. ಊಟೋಪಚಾರ ಹಾಗೂ ಸಿದ್ಧತೆ ಸಮಾವೇಶಕ್ಕೆ ಬರುವ ಲಕ್ಷಾಂತರ ಅಭಿಮಾನಿಗಳಿಗಾಗಿ ಭರ್ಜರಿ ಭೋಜನದ ವ್ಯವಸ್ಥೆ…
ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳ ವಸತಿ ನಿಲಯಗಳು ಕಡ್ಡಾಯವಾಗಿ ಹೊಸ ನಿಯಮಾವಳಿಗಳಡಿ ನೋಂದಾಯಿಸಿಕೊಳ್ಳಬೇಕು ಮತ್ತು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2 ತಿಂಗಳ ಅವಧಿಯೊಳಗೆ ಎಲ್ಲಾ ವಸತಿ ನಿಲಯಗಳು ‘ಕರ್ನಾಟಕ ಮಕ್ಕಳ ವಸತಿ ನಿಲಯಗಳ ನಿಯಂತ್ರಣ ನಿಯಮಗಳು-2025’ ರ ಅಡಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪನ್ನೇಕರ್ ಅವರು ಮಾತನಾಡಿ, ಪ್ರತಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ, ಮೇಲ್ವಿಚಾರಣಾ ಸಮಿತಿ ಮತ್ತು ರ್ಯಾಗಿಂಗ್ ತಡೆ ಸಮಿತಿಗಳನ್ನು ರಚಿಸಿ ಪ್ರತಿ ತಿಂಗಳು ಸಭೆ ನಡೆಸಬೇಕು ಎಂದು ಹೇಳಿದರು. ಆಡಳಿತ ಮಂಡಳಿಗಳಲ್ಲಿ ಕನಿಷ್ಠ ಒಬ್ಬ ಮಹಿಳಾ ಸದಸ್ಯರಿರಬೇಕು.…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ (SC) ದಶಕಗಳ ಬೇಡಿಕೆಯಾದ ‘ಒಳ ಮೀಸಲಾತಿ’ಯನ್ನು ಜಾರಿಗೊಳಿಸಿ ಕರ್ನಾಟಕ ಸರ್ಕಾರ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ಹಾಗೂ ಸಚಿವ ಸಂಪುಟದ ತೀರ್ಮಾನದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ. ಮೀಸಲಾತಿ ಹಂಚಿಕೆ: ಪರಿಶಿಷ್ಟ ಜಾತಿಗೆ ನಿಗದಿಪಡಿಸಲಾದ ಶೇ. 15ರಷ್ಟು ಮೀಸಲಾತಿಯಲ್ಲಿ ವರ್ಗವಾರು ಹಂಚಿಕೆ ಮಾಡಲಾಗಿದೆ. ಪೃವರ್ಗ-ಎ: ಶೇ. 5.25 ಪೃವರ್ಗ-ಬಿ: ಶೇ. 5.25 ಪೃವರ್ಗ-ಸಿ: ಶೇ. 4.50 ಅತೀ ಹಿಂದುಳಿದವರಿಗೆ ಆದ್ಯತೆ: ಪೃವರ್ಗ ‘ಸಿ’ ಅಡಿಯಲ್ಲಿ ಲಭ್ಯವಿರುವ ಹುದ್ದೆಗಳಲ್ಲಿ ಶೇ. 20ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿಯಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ಈ ಗುಂಪಿನ ಅಭ್ಯರ್ಥಿಗಳು ಲಭ್ಯವಾಗದಿದ್ದರೆ ಮಾತ್ರ ಆ ಹುದ್ದೆಗಳನ್ನು ಪೃವರ್ಗ ‘ಸಿ’ಯ ಇತರ ಜಾತಿಗಳಿಗೆ ನೀಡಲಾಗುವುದು. ಹಳೆಯ ಅಧಿಸೂಚನೆಗಳ ರದ್ದು: ಒಳ ಮೀಸಲಾತಿ ಅಳವಡಿಸದೆ ಈಗಾಗಲೇ ಹೊರಡಿಸಲಾಗಿದ್ದ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆಯಲು ಸರ್ಕಾರ ಸೂಚಿಸಿದೆ. ಈಗ ಹೊಸ ಮೀಸಲಾತಿ…














