Author: kannadanewsnow57

ಬೆಂಗಳೂರು : 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಆಗಸ್ಟ್-2025 ನೇ ಮಾಹೆಯ ಮೊದಲ ವಾರದಲ್ಲಿ http://rdprtransfer.kamataka.gov.in ನಲ್ಲಿ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿವರಗಳನ್ನು ಪರಿಶೀಲಿಸಿ ತಮ್ಮ ಹಂತದಲ್ಲಿ ಅನುಮೋದನೆ ನೀಡಲಾಗಿರುತ್ತದೆ. ಪ್ರಸ್ತುತ ಸದರಿ ಅನುಮೋದನೆ ನೀಡಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸೇವಾ ವಿವರಗಳಲ್ಲಿ ಯಾವುದೇ ಪ್ರಕಾರದ ಮಾಹಿತಿ ತಿದ್ದುಪಡಿ ಮಾಡಬೇಕಾಗಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ದಿನಾಂಕ:04.08.2025ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಮುಂದುವರೆದು ಈ ಪತ್ರದೊಂದಿಗೆ ಲಗತ್ತಿಸಿರುವ ನಮೂನೆ 1 ರಿಂದ 4 ರ ವರೆಗಿನ ನಮೂನೆಗಳಲ್ಲಿ ಮಾಹಿತಿಯನ್ನು ಕಡ್ಡಾಯವಾಗಿ ದಿನಾಂಕ: 04.08.2025ರ ಒಳಗೆ ಸಲ್ಲಿಸಲು ತಿಳಿಸಿದೆ. ದಿನಾಂಕ: 04.08.2025ರ ನಂತರ ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.

Read More

ಉತ್ತರ ಪ್ರದೇಶದ ನೋಯ್ಡಾದಲ್ಲಿ 15 ವರ್ಷದ ಬಾಲಕಿಯ ಅಪಹರಣ ಸಂಚಲನ ಮೂಡಿಸಿದೆ. ನೋಯ್ಡಾದ ಮದರ್ ತೆರೇಸಾ ಶಾಲೆಯ ಹೊರಗೆ ಈ ಘಟನೆ ನಡೆದಿದೆ. ಬಾಲಕಿ ಶಾಲೆಯಿಂದ ಹೊರಬಂದ ತಕ್ಷಣ, ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಬಾಲಕಿಯನ್ನು ಬಲವಂತವಾಗಿ ಅಪಹರಿಸಿದ್ದು, ಅದು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಜನರು ಮತ್ತು ಪೋಷಕರಲ್ಲಿ ಸಾಕಷ್ಟು ಭಯಭೀತತೆ ಉಂಟಾಗಿತ್ತು. ಆರೋಪಿಯ ಮುಖ ಮತ್ತು ಕಾರಿನ ವಿವರಗಳು ಸಿಸಿಟಿವಿಯಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದರಿಂದ, ಪೊಲೀಸರಿಗೆ ಆತನನ್ನು ಗುರುತಿಸುವುದು ಸುಲಭವಾಯಿತು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದರು ಮತ್ತು ಬಾಲಕಿಯನ್ನು ಅಪಹರಿಸಲು ಬಳಸಿದ ಕಾರನ್ನು ಸಹ ವಶಪಡಿಸಿಕೊಂಡರು. ಏತನ್ಮಧ್ಯೆ, ಬಾಲಕಿಯನ್ನು ರಕ್ಷಿಸಲಾಗಿದೆಯೇ ಎಂಬ ಮಾಹಿತಿಯ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಈ ಘಟನೆ ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಮತ್ತು ಪೋಷಕರಲ್ಲಿ ಭಯವನ್ನು ಸೃಷ್ಟಿಸಿದೆ. ಪೊಲೀಸರು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಮತ್ತು ಬಾಲಕಿಯ ಸುರಕ್ಷತೆಗಾಗಿ…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿದ್ದ 9ನೇ ಪಾಯಿಂಟ್ ನಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಲಿದ್ದಾರೆ. ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿನ್ನೆ 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ವೇಳೆಯಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ನಿನ್ನೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳ ಹುಟುಕಾಟಕ್ಕೆ ಭೂಮಿ ಅಗೆಯಲಾಗುತ್ತಿತ್ತು. 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ಸಂದರ್ಭದಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಎಸ್ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ…

Read More

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ವೇವ್ ಸಿಟಿ ಪೊಲೀಸ್ ಠಾಣೆ ಪ್ರದೇಶದ ಉಸ್ಮಾನ್ ಕಾಲೋನಿಯಲ್ಲಿ ಗುರುವಾರ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಕಳ್ಳತನದ ಶಂಕೆಯ ಮೇಲೆ ಸ್ಥಳೀಯ ಜನರು ಮಾನಸಿಕ ಅಸ್ವಸ್ಥ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ಸಂಪೂರ್ಣ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಯುವಕನನ್ನು ಮರಕ್ಕೆ ಕಟ್ಟಿ ಗುಂಪು ಕೋಲು ಮತ್ತು ಕಪಾಳಮೋಕ್ಷದಿಂದ ಹೊಡೆಯುತ್ತಿರುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು. ಯುವಕನನ್ನು ಕಳ್ಳನೆಂದು ಭಾವಿಸಿ ಅನುಮಾನಾಸ್ಪದ ಸಂದರ್ಭಗಳಲ್ಲಿ ಥಳಿಸಲಾಗಿದೆ. ಸ್ವೀಕರಿಸಿದ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಕಾಲೋನಿಯಲ್ಲಿ ಕೆಲವು ಅನುಮಾನಾಸ್ಪದ ಚಟುವಟಿಕೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ, ಮರುದಿನ ಈ ಯುವಕ ಅಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ತಿರುಗಾಡುತ್ತಿರುವುದನ್ನು ನೋಡಿದ ಜನರು ಯಾವುದೇ ತನಿಖೆಯಿಲ್ಲದೆ ಅವನನ್ನು ಕಳ್ಳನೆಂದು ಪರಿಗಣಿಸಿದರು. ಇದರ ನಂತರ, ಗುಂಪು ಯುವಕನನ್ನು ಹಿಡಿದು, ಮರಕ್ಕೆ ಕಟ್ಟಿ ಥಳಿಸಿತು. ಪೊಲೀಸರು ಯುವಕನನ್ನು ಜನಸಂದಣಿಯಿಂದ ರಕ್ಷಿಸಿದಾಗ, ತನಿಖೆಯಲ್ಲಿ ಅವನು ಮಾನಸಿಕ ಅಸ್ವಸ್ಥ…

Read More

ಬೆಂಗಳೂರು: ಬಿಗ್‌ ಬಾಸ್‌ ಖ್ಯಾತಿಯ ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತದ ಘಟನೆಗೆ ಸಂಬಂಧಿಸಿದಂತೆ ಇದೀಗ ನಟ ರಕ್ಷಕ್‌ ಬುಲೆಟ್‌ ವಿರುದ್ಧ ಹೆಣ್ಣೂರು ಸಂಚಾರ ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿದೆ. ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್‌ ಬುಲೆಟ್‌ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅಜಾಗರೂಕವಾಗಿ ಜೀಪು ಚಾಲನೆ ಮಾಡಿ ಬೈಕ್‌ ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕಾಲುಮುರಿತಕ್ಕೆ ಕಾರಣವಾಗಿದೆ. ನಟ ರಕ್ಷಕ್‌ ಎಸಗಿದ ಅಪಘಾತದಿಂದ ಕಾಲು ಮುರಿದುಕೊಂಡಿರುವ ಖಾಸಗಿ ಕಂಪನಿ ಉದ್ಯೋಗಿ ವೇಣುಗೋಪಾಲ್‌ (27) ಎಂಬುವವರು ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತೆಯನ್ನು ಬೈಕ್‌ ಹಿಂಬದಿ ಕೂರಿಸಿಕೊಂಡು ವೇಣುಗೋಪಾಲ್‌ ಥಣಿಸಂದ್ರದ ಮಾನ್ಯತಾ ಟೆಕ್‌ಪಾರ್ಕ್ ಬಳಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಥಾರ್‌ ಜೀಪಿನಲ್ಲಿ ಬಂದ ರಕ್ಷಕ್‌, ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ವೇಣುಗೋಪಾಲ್‌ ಹಾಗೂ ಸ್ನೇಹಿತೆ ಇಬ್ಬರೂ ಕೆಳಗೆ ಉರುಳಿದ್ದಾರೆ. ಅಪಘಾತದಲ್ಲಿ ವೇಣುಗೋಪಾಲ್‌ ಎಡಕಾಲು ಮುರಿದಿದೆ. ಸ್ನೇಹಿತೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ವಂಚನೆ ಮಾಡಲಾಗಿದ್ದು, ವ್ಯಕ್ತಿಯೊಬ್ಬರು ಲಿಂಕ್ ಕ್ಲಿಕ್ ಮಾಡಿ ಬರೋಬ್ಬರಿ 22.59 ಲಕ್ಷ ರೂ. ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಮಲಾ ಸೀತಾರಾಮನ್ ಅವರು ಫೇಸ್ಬುಕ್ ನಲ್ಲಿ ಆನ್ಲೈನ್ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನುವ ನಕಲಿ ವಿಡಿಯೋ ನಂಬಿ ಅದರ ಕೆಳಗೆ ಇದ್ದ ಲಿಂಕ್ ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 22.59 ಲಕ್ಷ ರೂ. ಕಳೆದುಕೊಂಡಿದ್ದಾರೆ. ವಂಚನೆಯ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು ತಮ್ಮ ಹೆಸರು, ಮೊಬೈಲ್ ಸಂಖ್ಯೆ ನೋಂದಾಯಿಸಿದ್ದಾರೆ. ಬಳಿಕ ಅವರ ಮೊಬೈಲ್ ಗೆ ಒಬ್ಬ ವ್ಯಕ್ತಿಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತಾನು ಅನುರಾಗ್ ಶರ್ಮಾ ಎಂದು ಪರಿಚಯಿಸಿಕೊಂಡು ಖಾತೆಗೆ 12,600 ರೂ. ಹಾಕುವಂತೆ ಹೇಳಿದ್ದಾನೆ. ದೂರುದಾರ ಹಣ ಕಳುಹಿಸಿದ್ದಾರೆ. ಹೀಗೆ ಬೇರೆಬೇರೆ ಹೆಸರಿನಲ್ಲಿ ಕರೆ ಮಾಡಿದವರಿಗೆ ಒಟ್ಟು 22,59,613 ರೂಪಾಯಿ ವರ್ಗಾಯಿಸಿದ್ದು, ವಂಚನೆಗೊಳಗಾಗಿರುವುದು ಗೊತ್ತಾಗಿ ದೂರು…

Read More

ಕೊಪ್ಪಳ : ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಉದ್ದಿಮೆಗಳು ಕರ್ನಾಟಕ ಮುನ್ಸಿಪಾಲಟಿ ಬೈಲಾ 2020ರ ನಿಯಮಾನುಸಾರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ತಂಬಾಕು ಮಾರಾಟ ಪರವಾನಿಗೆಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಾದ ಶಾಂತಮ್ಮ ಕಟ್ಟಿಮನಿ, ಸಾಮಾಜಿಕ ಕಾರ್ಯಕರ್ತೆ ಸರಸ್ವತಿ ಹಾಗೂ ಭಾಗ್ಯನಗರ ಪ.ಪಂಚಾಯತ ಮುಖ್ಯಾಧಿಕಾರಿ ಸುರೇಶ ಬಬಲಾದ ಇವರ ನೇತೃತ್ವದ ತಂಡವು ಜುಲೈ 24 ರಂದು ದಾಳಿ ನಡೆಸಿ ಪರವಾನಿಗೆ ರಹಿತ ಮಾರಾಟಗಾರರಿಗೆ ದಂಡ ವಿಧಿಸಿ ಸರ್ಕಾರದ ನಿಯಮದಂತೆ ಷರತ್ತುಗಳನ್ನು ಪಾಲಿಸಿ ಪರವಾನಿಗೆ ಪಡೆಯಲು ತಿಳಿಸಿದರು. ಷರತ್ತುಗಳು: ನಿಯಮ 4ರ ಅನ್ವಯ ವ್ಯಾಪಾರ ಸ್ಥಳದಲ್ಲಿ ಕಡ್ಡಾಯವಾಗಿ 60+45 ಸೇಂ ಮೀ ಅಳತೆಯ ಧೂಮಪಾನ ನಿಷೇಧಿಸಿದೆ ಎಂಬ ನಾಮ ಫಲಕ ಅಳವಡಿಸುವುದು ಹಾಗೂ ಧೂಮಪಾನ ಆಗದಂತೆ ಮತ್ತು ಉತ್ತೇಜಿಸುವ ಬೆಂಕಿ ಪೊಟ್ಟಣ ಲೈಟರ್, ಆಶ್ ಟ್ರೇಗಳನ್ನು ಇಡುವಂತಿಲ್ಲ. ನಿಯಮ 5 ರ ಅನ್ವಯ ವ್ಯಾಪಾರ ಸ್ಥಳದ ಮುಂಭಾಗ ಅಥವಾ ಒಳಗಡೆ ತಂಬಾಕು ಉತ್ಪನ್ನಗಳ…

Read More

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮಂದೆ ರೋಗಿಗಳಿಗೆ ಸರ್ಕಾರದಿಂದಲೇ ಸಿಟಿ, ಎಂಆರ್ ಐ ಸ್ಕ್ಯಾನ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವೆನ್ಸಾಕ್ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯಲ್ಲಿ ಶುಕ್ರವಾರ ಮಾತನಾಡಿ, ರೋಗಿಗಳಿಗೆ ಮತ್ತಷ್ಟು ಉತ್ತಮ ಸೇವೆ ನೀಡುವುದು ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಸರಕಾರದ ವತಿಯಿಂದಲೇ ಸಿಟಿ ಮತ್ತು ಎಂಆರ್ ಐ ಸ್ಕ್ಯಾನ್ ವ್ಯವಸ್ಥೆಗೆ ಸೂಚಿಸಲಾಗಿದೆ, ಈಗಾಗಲೇ ವೆನಾಕ್‌ನಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಸಂಬಂಧ ಖಾಸಗಿ ಸಂಸ್ಥೆ ಜತೆ ಒಡಂಬಡಿಕೆಯಾಗಿದೆ ಎಂದರು. ವೆನ್ಸಾಕ್ ಆಸ್ಪತ್ರೆ ಯಲ್ಲಿ ನೂತನವಾಗಿ ಸಿದ್ದಗೊಂಡಿರುವ ಕ್ಯಾಥ್‌ಲ್ಯಾಬ್ ಶೀಘ್ರ ಕಾರ್ಯಾರಂಭಿಸಲಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಅಂಜಿ ಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರಚಿಕಿತ್ಸೆಗಳು ಉಚಿತವಾಗಿರಲಿದೆ. ಆದರೆ ಆಂಜಿಯೋಗ್ರಾಂಗೆ ನಿಯಮಗಳ ಪ್ರಕಾರ ಬಿಪಿಎಲ್‌ದಾರರಿಗೆ 5,000 ರೂ. ಕನಿಷ್ಠ ದರ ನಿಗದಿ ಪಡಿಸಲಾಗಿದೆ. ಆದರೆ ಉಚಿತವಾಗಿ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಕ್ವಾಂಟಮ್ ಕ್ಷೇತ್ರದಲ್ಲಿ ಕರ್ನಾಟಕವನ್ನು ಏಷ್ಯದ ರಾಜಧಾನಿಯನ್ನಾಗಿಸಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಕ್ವಾಂಟಮ್ ಮಿಷನ್ ಗಾಗಿ ₹1,000 ಕೋಟಿ ಮೀಸಲಿಡಲು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕ್ವಾಂಟಮ್ ಮಿಷನ್ ನಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ, ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಗೆ ನೆರವು ನೀಡಲು ಕ್ವಾಂಟಮ್ ವೆ೦ಚರ್ ಕ್ಯಾಪಿಟಲ್ ಫ೦ಡ್ ಪ್ರಾರ೦ಭಿಸಲಾಗುವುದು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದಂತಹ ಕ್ರಮಗಳಿಂದಾಗಿ ಕರ್ನಾಟಕ ರಾಜ್ಯವನ್ನು ಜಾಗತಿಕ ಕ್ವಾಂಟಮ್ ಕೇಂದ್ರ ಮಾಡಲಾಗುವುದು. 2035ರ ವೇಳೆಗೆ 10 ಸಾವಿರ ಉದ್ಯೋಗ ಸೃಷ್ಟಿಸಿ, ಬೆಂಗಳೂರು ಅನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುವ ಗುರಿ ಇದೆ. ₹1.75 ಲಕ್ಷ ಕೋಟಿ ಮೌಲ್ಯದ ಕ್ವಾಂಟಮ್ ಆರ್ಥಿಕತೆ ಸೃಷ್ಟಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಸಂತೋಷ್ ಗಜಾನನ ಭಟ್ ಕೆ ಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. 4 ಕೇಸ್ ಗಳಿಗೆ ಸಂಬಂಧಿಸಿದಂತೆ ಕೋರ್ಟ್ ಮೊದಲನೇ ಕೇಸಿಗೆ ತೀರ್ಪು ನೀಡಿದ್ದು, ಇಂದು ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಯಿತು. ಎರಡು ಕಡೆಯ ವಕೀಲರಿಂದ ವಾದ ಆಲಿಸಿದ ನ್ಯಾಯಾಧೀಶ ಸಂತೋಷದ ಕ್ಷಣ ಭಟ್ ಅವರು ಕೆಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದರು ಇಂದು ಪ್ರಜ್ವಲ್ ಗೆ ಶಿಕ್ಷೆ ಪ್ರಮಾಣ…

Read More