Author: kannadanewsnow57

ಬೆಂಗಳೂರು: ನೀವು ಬಾಡಿಗೆ ಮನೆಯಲ್ಲಿದ್ದೀರಾ ಅಥವಾ ಆಫೀಸ್ಗೆಂದು ಬಿಲ್ಡಿಂಗ್ ಬಾಡಿಗೆಗೆ ಪಡೆದಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ನಿರಾಳ ತರುವಂತಹ ಸುದ್ದಿ ಇಲ್ಲಿದೆ. ಬಿಲ್ಡಿಂಗ್ ಅಥವಾ ಆಸ್ತಿಯ ಒಡೆಯ ಬ್ಯಾಂಕ್ನಲ್ಲಿ ಲೋನ್ ಮಾಡಿ ಸುಸ್ತಿದಾರನಾದರೆ, ಅದಕ್ಕೆ ಅಲ್ಲಿರುವ ಬಾಡಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಲು ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಷ್ಟೇ ಅಲ್ಲ, ಬ್ಯಾಂಕ್ ಕ್ರಮದ ವಿರುದ್ಧ ಮೇಲ್ಮನವಿ ಸಲ್ಲಿಸಲು ಬಾಡಿಗೆದಾರರು ಸಾಲದ ಮೊತ್ತದ ಶೇ. 50 ರಷ್ಟು ಹಣವನ್ನು ಮುಂಗಡವಾಗಿ ಠೇವಣಿ ಇಡಬೇಕು ಎನ್ನುವ ನಿಯಮ ಕಡ್ಡಾಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಆಸ್ತಿ ಮಾಲೀಕರು ಬ್ಯಾಂಕ್ ಲೋನ್ ಕಟ್ದೇ ಹೋದಾಗ, ಬ್ಯಾಂಕುಗಳು ಸಾಲ ವಸೂಲಾತಿ ನ್ಯಾಯಾಧಿಕರಣದ (DRT) ಮೂಲಕ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗುತ್ತವೆ. ಇಂತಹ ಸಂದರ್ಭದಲ್ಲಿ ಅಲ್ಲಿರುವ ಬಾಡಿಗೆದಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಡಿಆರ್ಟಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಾದರೆ, ಒಟ್ಟು ಸಾಲದ ಅರ್ಧದಷ್ಟು (50%) ಹಣವನ್ನು ಠೇವಣಿ ಇಡಬೇಕು ಎಂಬ ನಿಯಮ ಬಾಡಿಗೆದಾರರಿಗೆ ದೊಡ್ಡ ತಲೆನೋವಾಗಿತ್ತು. ಈ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜೂನ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಬಿಸಿಯೂಟ (ಮಧ್ಯಾಹ್ನದ ಉಪಹಾರ) ಯೋಜನೆಗೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಕರ್ನಾಟಕ ಸರ್ಕಾರ ಸೂಚಿಸಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ (Middle East) ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಮುಂಬರುವ ದಿನಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಬಿಸಿಯೂಟ) ಯೋಜನೆಯಡಿ ಶಾಲೆಗಳಿಗೆ ಅಗತ್ಯವಿರುವ ಗ್ಯಾಸ್ ಸಿಲಿಂಡರ್ಗಳ ಸರಬರಾಜು ನಿರಂತರವಾಗಿ ಸಿಗುವಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ ಬರೆದಿದ್ದಾರೆ. ಆದ್ಯತೆಯ ಮೇರೆಗೆ ಪೂರೈಕೆ: ಬಿಸಿಯೂಟ ಯೋಜನೆಯನ್ನು ಸರ್ಕಾರದ ಪ್ರತಿಷ್ಠಿತ ಹಾಗೂ ಮಹತ್ವಾಕಾಂಕ್ಷಿ ಯೋಜನೆಯೆಂದು ಪರಿಗಣಿಸಲಾಗಿದೆ. ಹಾಗಾಗಿ, ಎಲ್ಪಿಜಿ ಇಂಧನವನ್ನು ‘ಅಗತ್ಯ ವಸ್ತು ಕಾಯ್ದೆ’ ಅಡಿಯಲ್ಲಿ ಪರಿಗಣಿಸಿ, ಶಾಲೆಗಳಿಗೆ ಆದ್ಯತೆಯ ಮೇರೆಗೆ ಸಿಲಿಂಡರ್ ವಿತರಿಸಲು ಕ್ರಮ ಕೈಗೊಳ್ಳಬೇಕು. ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ: ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ಯಾಸ್ ವಿತರಕರಿಗೆ…

Read More

ಬಾಗಲಕೋಟೆ : ಹೆತ್ತ ತಾಯಿಯ ಮಮತೆ ಹಾಗೂ ಮಗಳ ಜನ್ಮಜನ್ಮಾಂತರದ ಅನುಬಂಧಕ್ಕೆ ಸಾಕ್ಷಿಯಾದ ಹೃದಯವಿದ್ರಾವಕ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಸಂಭವಿಸಿದೆ. ನೂರು ವಸಂತಗಳನ್ನು ಕಂಡು ಇಹಲೋಕ ತ್ಯಜಿಸಿದ ಶತಾಯುಷಿ ತಾಯಿಯ ಸಾವಿನ ಆಘಾತಕ್ಕೆ ಒಳಗಾಗಿ 76 ವರ್ಷದ ವೃದ್ಧ ಮಗಳು ಕೂಡ ಕೊನೆಯುಸಿರೆಳೆದ ಕರುಣಾಜನಕ ಘಟನೆ ತೋದಲಬಾಗಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಪಾರ್ಥನಹಳ್ಳಿಯ ನಿವಾಸಿಯಾದ ಗಂಗವ್ವ ಚನ್ನಬಸಪ್ಪ ಪಾರ್ಥನಹಳ್ಳಿ (101 ವರ್ಷ) ಎಂಬ ಶತಾಯುಷಿ ಮಾತೆ ಕಳೆದ ಶುಕ್ರವಾರ ವಯೋಸಹಜ ಕಾರಣಗಳಿಂದಾಗಿ ನಿಧನರಾಗಿದ್ದರು. ತಾಯಿಯ ಸಾವಿನ ವಾರ್ತೆ ತಿಳಿಯುತ್ತಿದ್ದಂತೆಯೇ, ಅಥಣಿಯ ಪಾರ್ಥನಹಳ್ಳಿಯಲ್ಲೇ ವಾಸವಿದ್ದ ಅವರ ಮಗಳು ಹಣಮವ್ವ ರಾಮು ಮುಜ ಗೋಣಿ (76 ವರ್ಷ) ತೀವ್ರ ಆಘಾತಕ್ಕೆ ಒಳಗಾಗಿದ್ದರು. ತಮ್ಮ ಹೆತ್ತ ತಾಯಿಯ ಅಂತಿಮ ದರ್ಶನ ಪಡೆದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹಣಮವ್ವ ಅವರು ಜಮಖಂಡಿ ತಾಲೂಕಿನ ತೋದಲಬಾಗಿ ಗ್ರಾಮಕ್ಕೆ ಧಾವಿಸಿದ್ದರು. ಆದರೆ ಅಲ್ಲಿಗೆ ತಲುಪಿದಾಗ ತಾಯಿಯ ಪಾರ್ಥಿವ ಶರೀರವನ್ನು ಕಂಡು ಅವರ ದುಃಖ ಆಣೆಕಟ್ಟೆ ಒಡೆದಂತೆ ಉಕ್ಕಿ…

Read More

ಅಹಮದಾಬಾದ್: ಇಂದು ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಗಾಗಿ ಭರ್ಜರಿ ಫೈನಲ್ ಪಂದ್ಯ ನಡೆಯಲಿದ್ದು, ಹಾಲಿ ಚಾಂಪಿಯನ್ ಬೆಂಗಳೂರು ಹಾಗೂ ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳಿಗೂ ಇದು 2ನೇ ಐಪಿಎಲ್ ಟ್ರೋಫಿ ಗೆಲ್ಲುವ ಸುವರ್ಣ ಅವಕಾಶವಾಗಿದೆ. ಒಂದು ಟ್ರೋಫಿಗಾಗಿ ಬರೋಬ್ಬರಿ 18 ವರ್ಷ ಕಾದಿದ್ದ ಆರ್ಸಿಬಿಗೆ ಈಗ ಸತತ 2ನೇ ವರ್ಷವೂ ಚಾಂಪಿಯನ್ ಎನಿಸಿಕೊಳ್ಳುವ ಕಾತರ ಹೆಚ್ಚಾಗಿದೆ. ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ತೋರಿರುವ ಆರ್ಸಿಬಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಪ್ಲೇ-ಆಫ್ ಪ್ರವೇಶಿಸಿತ್ತು. ಕ್ವಾಲಿಫೈಯರ್-1ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ನೇರವಾಗಿ ಫೈನಲ್‌ಗೇರಿದೆ. ಮತ್ತೊಂದೆಡೆ ಗುಜರಾತ್ ತಂಡವೂ ಅತ್ಯಂತ ಬಲಿಷ್ಠವಾಗಿದ್ದು, ಗುಂಪು ಹಂತದಲ್ಲಿ ಆರ್ಸಿಬಿಗಿಂತ ಅಂಕ ಪಡೆದಿದ್ದರೂ ನೆಟ್ ರನ್‌ರೇಟ್ ಕಡಿಮೆ ಇದ್ದ ಕಾರಣ 2ನೇ ಸ್ಥಾನಿಯಾಗಿತ್ತು. ಆದರೆ ಕ್ವಾಲಿಫೈಯರ್-1ರಲ್ಲಿ ಸೋತ ಬಳಿಕ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಫೈನಲ್ ತಲುಪಿದೆ. ಉಭಯ ತಂಡಗಳ ಮುಖಾಮುಖಿಯಲ್ಲಿ ಈವರೆಗೆ 9 ಪಂದ್ಯಗಳು ನಡೆದಿದ್ದು, ಆರ್ಸಿಬಿ…

Read More

ಬೆಂಗಳೂರು: ಇನ್ಮುಂದೆ ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ನಾನಾ ನೆಪಗಳನ್ನು ಹೇಳಿ ತಡವಾಗಿ ಶಾಲೆಗೆ ಬರುವಂತಿಲ್ಲ, ಹಾಗೆಯೇ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ಎಲ್ಲೆಂದರಲ್ಲಿ ಸುತ್ತಾಡುವ ಆಟ ಇನ್ನು ನಡೆಯುವುದಿಲ್ಲ. ಕರ್ತವ್ಯದ ಅವಧಿಯಲ್ಲಿ ಶಾಲೆಗೆ ಚಕ್ಕರ್ ಹೊಡೆಯುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ರಾಜ್ಯ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನಿಂದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತಂತ್ರಜ್ಞಾನ ಆಧಾರಿತ ಕಡ್ಡಾಯ ಹಾಜರಾತಿ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಶಿಕ್ಷಕರು ಶಾಲೆಗೆ ಬಂದು ತಮ್ಮ ಮುಖದ ಗುರುತು (Face Recognition) ಹಾಗೂ ಲೊಕೇಶನ್ (Location) ಆಧರಿಸಿ ಅಟೆಂಡೆನ್ಸ್ ಹಾಕಬೇಕಾಗುತ್ತದೆ. ಇದಕ್ಕಾಗಿ ಇಲಾಖೆಯು ‘ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ (KAAMS – ಕೆಎಎಎಂಎಸ್) ಎಂಬ ವಿಶೇಷ ಆಪ್ ರೂಪಿಸಿದೆ. ಕಳೆದ ಶುಕ್ರವಾರದಿಂದಲೇ ಈ ನೂತನ ತಂತ್ರಜ್ಞಾನ ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದ್ದು, ಶಿಕ್ಷಕರು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ಆಪ್ ಮೂಲಕವೇ ಹಾಜರಾತಿ ದಾಖಲಿಸಬೇಕಿದೆ. ನಿಗದಿತ ಸಮಯಕ್ಕಿಂತ ತಡವಾಗಿ ಬಂದರೆ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಬೆಳವಣಿಗೆಗೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ರಾಜ್ಯಪಾಲರು ಸರ್ಕಾರ ರಚಿಸಲು ಹಸಿರು ನಿಶಾನೆ ತೋರಿದ್ದಾರೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಶಕಗಳ ಕಾಲದ ಅವರ ಅವಿರತ ಶ್ರಮ ಮತ್ತು ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಂತಾಗಿದೆ. ಮೊದಲ ಹಂತದಲ್ಲೇ ಸಂಪುಟ ಸೇರಲು ಭರ್ಜರಿ ಲಾಬಿ! ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಕಾರ್ಯಕ್ರಮದ ಜೊತೆಯಲ್ಲೇ ಅವರ ಹೊಸ ಸಚಿವ ಸಂಪುಟದ ಸದಸ್ಯರ ಮೊದಲ ಪಟ್ಟಿ ಕೂಡ ಹೊರಬೀಳುವ ಸಾಧ್ಯತೆ ಇದೆ. ಮೊದಲ ಹಂತದಲ್ಲೇ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರಲ್ಲಿ ಭರ್ಜರಿ ಲಾಬಿ ಹಾಗೂ ಕಸರತ್ತು ಶುರುವಾಗಿದೆ. ಹೈಕಮಾಂಡ್‌ನೊಂದಿಗೆ ಚರ್ಚಿಸಿ ಸಚಿವರ…

Read More

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಡುವಿನ ರಹಸ್ಯ ಜಾಲವನ್ನು ದೆಹಲಿ ಪೊಲೀಸರ ವಿಶೇಷ ದಳ (Special Cell) ಪತ್ತೆಹಚ್ಚಿದೆ. ದೇಶದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ನೇಪಾಳ ಮೂಲದ ಪ್ರಜೆಗಳು ಸೇರಿದಂತೆ ಒಂಬತ್ತು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಐಎಎನ್ಎಸ್ (IANS) ವರದಿ ಮಾಡಿದೆ. ಬಂಧಿತರಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯು ಈ ಜಾಲವನ್ನು ಭಾರತದೊಳಗೆ ಕಾನೂನುಬಾಹಿರ ಮತ್ತು ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದಲೇ ದೀರ್ಘಕಾಲದವರೆಗೆ ಸಿದ್ಧಪಡಿಸಿತ್ತು ಎಂದು ಮೂಲಗಳು ತಿಳಿಸಿವೆ. ಸದ್ಯ ತನಿಖಾಧಿಕಾರಿಗಳು ಈ ಜಾಲದ ಕಾರ್ಯವಿಧಾನಗಳು, ಮುಂದಿನ ಕಾರ್ಯಾಚರಣೆಯ ಯೋಜನೆಗಳು ಮತ್ತು ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳ ಮೂಲದ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ಜಾಲಗಳನ್ನು ಮಟ್ಟಹಾಕುವಲ್ಲಿ ಈ ಬಂಧನವು ಭಾರತೀಯ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಪರಿಗಣಿಸಲಾಗಿದೆ. https://twitter.com/ANI/status/2060628397727088907?s=20

Read More

ರಾಮನಗರ: ರಾಜಕೀಯದಲ್ಲಿ ನಾಯಕರಿಗಾಗಿ ಅಭಿಮಾನಿಗಳು ಪ್ರಾಣ ಕೊಡುವುದನ್ನು ಕೇಳಿದ್ದೇವೆ, ಇಲ್ಲವೇ ದೇವಸ್ಥಾನಗಳಿಗೆ ನಡೆದುಕೊಂಡು ಹೋಗಿ ಹರಕೆ ಹೊರುವುದನ್ನು ನೋಡಿದ್ದೇವೆ. ಆದರೆ, ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಯೊಬ್ಬರು ಕಳೆದ ಮೂರು ವರ್ಷಗಳಿಂದ ಕ್ಷೌರವೇ ಮಾಡಿಸಿಕೊಳ್ಳದೆ ವಿಶಿಷ್ಟ ಶಪಥ ಮಾಡಿದ್ದ ರೋಚಕ ಕಥೆಯೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಇತ್ತೀಚೆಗಷ್ಟೇ ಡಿಕೆಶಿ ಸಿಎಂ ಆಗುವವರೆಗೂ ಕಾಲಿಗೆ ಚಪ್ಪಲಿ ಹಾಕಲ್ಲ ಎಂದು ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬರ ಸುದ್ದಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಬ್ಬ ಅಪ್ಪಟ ಅಭಿಮಾನಿಯ ಅಪರೂಪದ ಭಕ್ತಿ ಮುನ್ನೆಲೆಗೆ ಬಂದಿದೆ. ಯಾರು ಈ ಅಪ್ಪಟ ಅಭಿಮಾನಿ? ಏನಿದು ಶಪಥ? ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರೇ ಈ ವಿಶಿಷ್ಟ ಅಭಿಮಾನಿ. ತನಗಾಗಿ ಆಸ್ತಿ-ಅಂತಸ್ತು ಮಾಡಿಕೊಳ್ಳುವುದಕ್ಕಿಂತ, ತನ್ನ ನೆಚ್ಚಿನ ನಾಯಕ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಗಾದಿ ಏರಬೇಕು ಎಂಬುದೇ ಈಶ್ವರಪ್ಪ ಅವರ ಬದುಕಿನ ಏಕೈಕ…

Read More

ಏಲೂರು: ದೃಶ್ಯಂ ಸಿನಿಮಾ ಸ್ಟೈಲ್ನಲ್ಲಿ ಮಹಿಳೆಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ, ಆಕೆ ಬದುಕಿದ್ದಾಳೆ ಎಂದು ನಂಬಿಸಲು ಆಕೆಯ ಫೋನ್ ನಿಂದಲೇ ಪತಿಗೆ ವಾಟ್ಸಾಪ್ ಮೆಸೇಜ್ ಕಳುಹಿಸುತ್ತಿದ್ದ ಆರೋಪಿಯ ನಾಟಕವನ್ನು ಆಂಧ್ರಪ್ರದೇಶದ ಪೊಲೀಸರು ಬಯಲಿಗೆಳೆದಿದ್ದಾರೆ. ಅಕ್ರಮ ಸಂಬಂಧದಲ್ಲಿ ಉಂಟಾದ ಅನುಮಾನ ಹಾಗೂ ಹಣಕಾಸಿನ ವಿವಾದವೇ ಈ ಭೀಕರ ಕೊಲೆಗೆ ಕಾರಣವಾಗಿದೆ. ನಂಬಿಸಿ ಪ್ರಾಣ ತೆಗೆದು, ಶವವನ್ನು ಹೂತುಹಾಕಿ ಡ್ರಾಮಾ ಮಾಡುತ್ತಿದ್ದ ಆರೋಪಿಯನ್ನು ಏಲೂರು ತ್ರೀ ಟೌನ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಏಲೂರು ತ್ರೀ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸೌರಿಪುರಂ ಗ್ರಾಮದ ಮಲ್ಲವಲ್ಲಿ ವಿಶಾಲಿ (36) ಎಂಬ ವಿವಾಹಿತೆ, ಏಪ್ರಿಲ್ 18 ರಂದು ಗುಡಿವಾಡದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆದರೆ ಆಕೆ ಎಷ್ಟು ದಿನ ಕಳೆದರೂ ಮನೆಗೆ ಮರಳದಿದ್ದಾಗ ಮತ್ತು ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಪತಿ ಪೊಲೀಸರಿಗೆ ದೂರು ನೀಡಿದ್ದರು. ಪತಿಯ ದೂರಿನ ಮೇರೆಗೆ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.…

Read More

ನವದೆಹಲಿ: ಶಾಲಾ ಶಿಕ್ಷಕರ ಅರ್ಹತೆಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯ ಮಹತ್ವದ ತೀರ್ಪೊಂದನ್ನು ನೀಡಿದೆ. ಪ್ರಸ್ತುತ ಸೇವೆಯಲ್ಲಿರುವ ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ಮತ್ತೊಮ್ಮೆ ಖಡಕ್ ಆಗಿ ಹೇಳಿದೆ. ಆದರೆ, ಶಿಕ್ಷಕರಿಗೆ ಕೊಂಚ ನಿರಾಳತೆ ತರುವ ಸುದ್ದಿಯೆಂದರೆ, ಪರೀಕ್ಷೆ ಪಾಸ್ ಮಾಡಲು ನೀಡಲಾಗಿದ್ದ ಸಮಯವನ್ನು 2028ರ ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ‘ಅಂಜುಮಾನ್‌ ಇಶಾತ್‌ ಇ-ತಲೀಮ್‌ ಟ್ರಸ್ಟ್‌’ ಪ್ರಕರಣದ ಹಳೆಯ ತೀರ್ಪನ್ನು ಪ್ರಶ್ನಿಸಿ ವಿವಿಧ ರಾಜ್ಯ ಸರ್ಕಾರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರ ಸಂಘಟನೆಗಳು ಒಟ್ಟು 65 ಪುನರ್‌ ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಎಲ್ಲಾ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ದೀಪಾಂಕರ್‌ ದತ್ತಾ ಮತ್ತು ಮನಮೋಹನ್‌ ಸಿಂಗ್‌ ಅವರಿದ್ದ ದ್ವಿಸದಸ್ಯ ಪೀಠವು ಸಾರಾಸಗಟಾಗಿ ವಜಾಗೊಳಿಸಿದೆ. ಅಲ್ಲದೆ, ಗುಣಮಟ್ಟದ ಶಿಕ್ಷಣದ ದೃಷ್ಟಿಯಿಂದ ಟಿಇಟಿ ಕಡ್ಡಾಯ ಎಂಬ ತನ್ನ ಹಳೆಯ ಆದೇಶವನ್ನು ಎತ್ತಿ ಹಿಡಿದಿದೆ. 2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE) ಜಾರಿಗೆ ಬರುವ ಮುನ್ನವೇ…

Read More