Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿಯಾಗಿದ್ದು,ಈ ಕಾರ್ಯಕ್ರಮದಡಿ ಅಧಿಕಾರಿಗಳು ಪಂಚಾಯತಿಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲಿದ್ದಾರೆ. ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಅಧಿಕಾರಿಗಳಿಗೆ ಪುರಸ್ಕಾರ ಲಭಿಸಲಿದೆ. ಕಾಯಕ ಗ್ರಾಮ ಎಂದರೇನು? ಅಧಿಕಾರಿಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದ ಗ್ರಾಮ ಪಂಚಾಯತಿಗಳ ದತ್ತು ನಿಯಮಿತ ಭೇಟಿ, ಅಭಿವೃದ್ಧಿ ಯೋಜನೆಗಳ ಅನುಷ್ಠಾನ, ಪರಿಶೀಲನೆ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಅಧಿಕಾರಿಗಳಿಗೆ ಪುರಸ್ಕಾರ ‘ಕಾಯಕ ಗ್ರಾಮ’ ‘ಕೂಸಿನ ಮನೆ’ ಕೂಸಿನ ಮನೆ ನಿಯಮಿತವಾಗಿ ಕಾರ್ಯಾಚರಣೆಯಲ್ಲಿರುವಂತೆ ನೋಡಿಕೊಳ್ಳುವುದು ಕೂಸಿನ ಮನೆಗೆ ಪ್ರತ್ಯೇಕ ಅಡುಗೆಕೋಣೆ, ಮಕ್ಕಳ ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಹಾಗು ಆರೋಗ್ಯ ತಪಾಸಣೆ ಮಾಡುವುದು ಗ್ರಾಮೀಣ ಭಾಗದ ಮಕ್ಕಳ ಸಬಲೀಕರಣಕ್ಕೆ ವಿಶೇಷ ಕಾರ್ಯಕ್ರಮ ‘ಕಾಯಕ ಗ್ರಾಮ’ ‘ಶಿಕ್ಷಣ’ ನರೇಗಾ ಯೋಜನೆ ಮೂಲಕ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದು ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಶಾಲೆಗೆ ಮರಳಿ ಕರೆತರುವುದು ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಗ್ರಂಥಾಲಯದ ವ್ಯವಸ್ಥೆ ಮಾಡುವುದು, ಫಲಿತಾಂಶದಲ್ಲಿ ಸುಧಾರಣೆ…
ಹಿಂದುಳಿದ ವರ್ಗಗಳ ಆಯೋಗದ ಆದೇಶದಂತೆ ಧಾರವಾಡ ಜಿಲ್ಲೆಯಲ್ಲಿ ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ್ದ ಶಿಕ್ಷಕರು ಆಕಸ್ಮಿಕವಾಗಿ ಬೈಕ್ ಅಪಘಾತ ಹಾಗೂ ಜಾರಿ ಬಿದ್ದು ಮೂಳೆ ಮುರಿತವಾಗಿದ್ದ ಓರ್ವ ಶಿಕ್ಷಕ ಹಾಗೂ ಇಬ್ಬರು ಶಿಕ್ಷಕೀಯರಿಗೆ ವಿಶೇಷ ರಜೆ ಮಂಜೂರು ಮಾಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನೀಡಿದ್ದ ನಿರ್ದೇಶನವನ್ನು ಪಾಲಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿಶೇಷ ರಜೆಯನ್ನು ಮಂಜೂರು ಮಾಡಿ ಆದೇಶಿಸಿದ್ದಾರೆ. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ಧಾರವಾಡ ತಾಲೂಕಿನ ದುರ್ಗದಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸುರೇಶ ಪೂಜಾರ ಅವರು ಭಾಗವಹಿಸಿದ್ದರು. ಅವರು ಸಮೀಕ್ಷಾ ಕಾರ್ಯಕ್ಕೆ ತೆರಳುವಾಗ ಬೈಕ್ ಸ್ಕೀಡ್ ಆಗಿ, ಅಪಘಾತವಾಗಿತ್ತು. ಗಂಭೀರ ಗಾಯವಾಗಿ ಕಾಲಿನ ಮೂಳೆ ಮುರಿತದಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಇವರಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಕೆ.ಸಿ.ಎಸ್.ಆರ್. ನಿಯಮದಂತೆ ವಿಶೇಷ ಅಂಗವೈಕಲ್ಯ ರಜೆ ಮಂಜೂರು ಮಾಡಿ ಧಾರವಾಡ ಗ್ರಾಮೀಣ…
ಬೆಂಗಳೂರು: ರಾಜ್ಯದ ಜಲಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳ ಕುರಿತು ಬೆಳಕು ಚೆಲ್ಲಲು ಡಿಸಿಎಂ ಡಿ.ಕೆ. ಶಿವಕುಮಾರ್ ರಚಿಸಿರುವ ‘ನೀರಿನ ಹೆಜ್ಜೆ’ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಇಂದು ಬಿಡುಗಡೆ ಮಾಡಲಿದ್ದಾರೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಎನ್.ಎಸ್.ಬೋಸರಾಜು, ಸುಪ್ರೀಂಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. https://twitter.com/KarnatakaVarthe/status/1988895192024256705
ಫ್ರೆಂಚ್ ಫ್ರೈಸ್ ತಿನ್ನುವುದು ದಿನಕ್ಕೆ 25 ಸಿಗರೇಟ್ ಸೇದುವುದಕ್ಕೆ ಸಮ ಎಂಬುದಾಗಿ ಶಾಂಕಿಂಗ್ ಮಾಹಿತಿಯನ್ನು ಹೃದ್ರೋಗ ತಜ್ಞರು ಹಂಚಿಕೊಂಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಫ್ರೆಂಚ್ ಫ್ರೈಸ್ ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ಮತ್ತು ಪ್ರೀತಿಯ ತಿಂಡಿಗಳಲ್ಲಿ ಒಂದಾಗಿದೆ. ಬರ್ಗರ್ ಗಳಿಗೆ ಸೈಡ್ ಡಿಶ್ ಆಗಿ ಅಥವಾ ತಮ್ಮದೇ ಆದ ರೀತಿಯಲ್ಲಿ ಆನಂದಿಸಲಿ, ಅವು ಅನೇಕರಿಗೆ ಆರಾಮದಾಯಕ ಆಹಾರವಾಗಿ ಮಾರ್ಪಟ್ಟಿವೆ. ಅವುಗಳ ಗರಿಗರಿಯಾದ ವಿನ್ಯಾಸ ಮತ್ತು ಉಪ್ಪಿನ ರುಚಿ ಅವುಗಳನ್ನು ತಡೆಯಲಾಗದಂತೆ ಮಾಡುತ್ತದೆ. ಆದರೆ ಈ ರುಚಿಕರವಾದ ಔತಣದ ಹಿಂದೆ ಗಂಭೀರ ಆರೋಗ್ಯ ಕಾಳಜಿ ಇದೆ. ಇತ್ತೀಚಿನ ಅಧ್ಯಯನಗಳು ಮತ್ತು ತಜ್ಞರ ಅಭಿಪ್ರಾಯಗಳು ಫ್ರೆಂಚ್ ಫ್ರೈಗಳನ್ನು ಆಗಾಗ್ಗೆ ಸೇವಿಸುವುದರಿಂದ ತೂಕ ಹೆಚ್ಚಾಗುವುದು ಮಾತ್ರವಲ್ಲದೆ ಹೃದಯದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಬಹಿರಂಗಪಡಿಸಿದೆ. ಫ್ರೆಂಚ್ ಫ್ರೈಗಳೊಂದಿಗಿನ ಪ್ರಮುಖ ಕಾಳಜಿಯೆಂದರೆ ಅವುಗಳನ್ನು ತಯಾರಿಸುವ ವಿಧಾನ. ಸಾಮಾನ್ಯವಾಗಿ, ಅವುಗಳನ್ನು ಹೆಚ್ಚಿನ ತಾಪಮಾನದಲ್ಲಿ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಲಾಗುತ್ತದೆ. ಇದು…
ನವದೆಹಲಿ : ಬಿಹಾರದ ರಾಜಕೀಯ ದಿಕ್ಕನ್ನು ನಿರ್ಧರಿಸುವ 243 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ದಾಖಲೆಯ ಮತದಾನ, ಪ್ರಾದೇಶಿಕ ವೈವಿಧ್ಯತೆ ಮತ್ತು ಹಲವು ಸ್ಥಾನಗಳಲ್ಲಿನ ಬಹುಕೋನ ಸ್ಪರ್ಧೆಗಳು ಫಲಿತಾಂಶಗಳನ್ನು ಅತ್ಯಂತ ರೋಮಾಂಚಕಾರಿಯಾಗಿಸಿವೆ. ಸಮೀಕ್ಷೆಗಳು ಎನ್ ಡಿಎಗೆ ಮುನ್ನಡೆ ನೀಡಿದ್ದರೂ, ಬಿಹಾರದ ಸ್ಥಾನ-ವಾರು ರಾಜಕೀಯವು ಅಚ್ಚರಿಯ ಅಂತಿಮ ಚಿತ್ರವನ್ನು ನೀಡಬಹುದು ಎಂದು ರಾಜಕೀಯ ಪಂಡಿತರು ನಂಬುತ್ತಾರೆ. ಈ ಚುನಾವಣೆಯಲ್ಲಿ ಬಿಹಾರದಲ್ಲಿ 66.9% ಮತದಾನ ದಾಖಲಾಗಿರುವುದು ಗಮನಿಸಬೇಕಾದ ಸಂಗತಿ. ಈ ಹೆಚ್ಚಿನ ಮತದಾನವು ಚುನಾವಣಾ ಸಮೀಕರಣಗಳನ್ನು ಇನ್ನಷ್ಟು ಆಸಕ್ತಿದಾಯಕವಾಗಿಸಿದೆ. ಚುನಾವಣಾ ಆಯೋಗವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಿದೆ. ಬಿಗಿ ಭದ್ರತಾ ವ್ಯವಸ್ಥೆಗಳು ಜಾರಿಯಲ್ಲಿವೆ. 70 ಕ್ಕೂ ಹೆಚ್ಚು ವೀಕ್ಷಕರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳ ಸಮ್ಮುಖದಲ್ಲಿ ಇವಿಎಂಗಳು ಮತ್ತು ವಿವಿಪಿಎಟಿಗಳನ್ನು ಹೊಂದಿರುವ ಸ್ಟ್ರಾಂಗ್ ರೂಮ್ಗಳನ್ನು ಮುಚ್ಚಲಾಯಿತು ಮತ್ತು ಈಗ ಅವುಗಳನ್ನು ಕಟ್ಟುನಿಟ್ಟಿನ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಮೊದಲು, ಅಂಚೆ ಮತಪತ್ರ ಪ್ಯಾಕೆಟ್ಗಳನ್ನು ತೆರೆಯಲಾಗುತ್ತದೆ, ಎಣಿಸಲಾಗುತ್ತದೆ ಮತ್ತು ಬೇರ್ಪಡಿಸಲಾಗುತ್ತದೆ. ಇದರ…
ಬೆಂಗಳೂರು : ಸಾರ್ವತ್ರಿಕ ರಜಾ ದಿನಗಳೂ ಒಳಗೊಂಡಂತೆ ಎಲ್ಲ ದಿನಗಳಲ್ಲಿಯೂ ಅಧಿಕಾರಿಗಳು ತಪ್ಪದೆ ಕೇಂದ್ರ ಸ್ಥಾನದಲ್ಲಿರಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳು ಕೆಲವು ಬಾರಿ ಜಿಲ್ಲಾ ಮತ್ತು ತಾಲ್ಲೂಕು ಸ್ಥಳಗಳಲ್ಲಿ ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ, ಕೇಂದ್ರ ಬಿಟ್ಟು ತೆರಳುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ಒಂದು ವೇಳೆ ಸರ್ಕಾರಿ ಕೆಲಸ ಕಾರ್ಯ ನಿಮಿತ್ತ ಅಥವಾ ತುರ್ತು ವೈಯಕ್ತಿಕ ಕಾರ್ಯಗಳಿಗೆ ಕೇಂದ್ರ ಸ್ಥಾನ ಬಿಡುವ ಸಂದರ್ಭಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ರಾಜ್ಯ ಸರ್ಕಾರ ತಿಳಿಸಿದೆ.
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಿನ ಜಾವ ಪಾರ್ಕ್ ಗೆ ಬರುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಯ ಹಲವಡೆ ತಾಪಮಾನ ಕುಸಿದಿದೆ. ಸದ್ಯ ರಾಜ್ಯದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2-3 ಡಿ.ಸೆ. ಉಷ್ಣಾಂಶ ಕಡಿಮೆಯಾಗಿದೆ. ಸದ್ಯ ಗರಿಷ್ಠ ತಾಪಮಾನ ಸರಾಸರಿ 29 -30 ಡಿ.ಸೆ., ಕನಿಷ್ಠ ತಾಪಮಾನ 18 ರಿಂದ 19 ಡಿ.ಸೆ. ಇಳಿಕೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ರಾಯಚೂರು…
ಬೆಂಗಳೂರು : ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದ್ದು, ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನು (ಅ.10) ಸಾರ್ವತ್ರಿಕ ರಜೆ ದಿನಗಳ ಪಟ್ಟಿಯಲ್ಲಿ ನಮೂದಿಸಿಲ್ಲ. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ತರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ…
ನವದೆಹಲಿ : ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಹೌದು ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿದೆ. ಮೇಕೆದಾಟು ಯೋಜನೆ ಇನ್ನು ಆರಂಭಿಕ ಹಂತದಲ್ಲಿ ಇದೆ. ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸಲ್ಲಿಸಿದ್ದ ಪರಿಟ್ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.
BIG NEWS : ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `ಪೋಷಕರು-ಶಿಕ್ಷಕರ ಸಭೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ
ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 2025-26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳು ಎಲ್ಲಾ ಅರ್ಹ ವಯಸ್ಸಿನ ಮಕ್ಕಳಿಗೆ ಒಳಗೊಳ್ಳುವಿಕೆ, ಪ್ರವೇಶಾವಕಾಶ ಮತ್ತು ಸಮಾನತೆಯ ಮೂಲಕ ಶಿಕ್ಷಣವನ್ನು ಒದಗಿಸುತ್ತಿವೆ. ಸರ್ಕಾರಿ ಶಾಲೆ, ಕಾಲೇಜುಗಳು ಎಸ್.ಡಿ.ಎಂ.ಸಿ., ಸಿ.ಡಿ.ಸಿ. ಮತ್ತು ಒಟ್ಟಾರೆ ಸಮುದಾಯದ ಹಿತಾಸಕ್ತಿಗಳ ಫಲಶ್ರುತಿಯಾಗಿವೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಶಾಲಾ-ಕಾಲೇಜುಗಳ ಬಗ್ಗೆ ಪೋಷಕರಲ್ಲಿ ಭರವಸೆಯನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಯು ಶಾಲೆ, ಮನೆ ಮತ್ತು ಸಮಾಜಗಳ ನಡುವೆ ನಿರಂತರ ಸಂಪರ್ಕವನ್ನು ಕಲ್ಪಿಸುತ್ತದೆ. ಮಕ್ಕಳ ಸವಾರ್ಂಗೀಣ ಅಭಿವೃದ್ಧಿಯಲ್ಲಿ ಪೆÇೀಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು ಅವರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಎಸ್.ಎಸ್.ಕೆಳದಿಮಠ…














