Author: kannadanewsnow57

ಬೆಂಗಳೂರು : ಬಿಜೆಪಿಯಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ನಿಯಮ ಇಲ್ಲ. ನರೇಂದ್ರ ಮೋದಿಯವರೇ ಐದು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ನಿಯಮ ಇಲ್ಲ. ಬಿಜೆಪಿ ಕಾರ್ಯಕಾರಣಿ ಮಂಡಳಿ ಅಂತ ನಿಯಮ ಮಾಡಿಲ್ಲ. ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಐದು ವರ್ಷ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಜೆಡಿಎಸ್ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ಮಾಡಬೇಕು. ಪ್ರಕರಣದಲ್ಲಿ ಕೆಲವರನ್ನು ಅನವಶ್ಯಕವಾಗಿ ಸಿಕ್ಕಿಸಲಾಗುತ್ತಿದೆ ಎಂದಿದ್ದಾರೆ.

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಎಸ್ ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ .ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಎಸ್ ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಶ್ಯಕತೆ ಇಲ್ಲ. ಇಂಟರ್ ಪೋಲ್ ನವರು ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ. ಸಿಬಿಐ ಅಧಿಕಾರಿಗಳ ಮೂಲಕ ನಮಗೆ ಗೊತ್ತಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಎಸ್ ಐಟಿ ತನಿಕೆ ಮಾಡುತ್ತಿದೆ. ಪ್ರಜ್ವಲ್ ಪ್ರಕರಣದ ಬಗ್ಗೆ ಯಾರ್ಯಾರೋ ಏನೇನೋ ಮಾತನಾಡುತ್ತಿದ್ದಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗೂ ಉತ್ತರ ಕೊಡಲು ಆಗಲ್ಲ. ತನಿಖೆ ಆಗುವವರೆಗೂ ಯಾವುದೇ ಮಾಹಿತಿಯನ್ನು ಹೇಳಲು ಆಗಲ್ಲ. ನಾಯಕರು ಹೇಳಿಕೆ ಕೊಟ್ಟರೂ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ವಿರುದ್ಧವೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ…

Read More

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪೆನ್ ಡ್ರೈವ್ ಇಟ್ಟುಕೊಂಡಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ಎಸ್ ಐಟಿ ವಶಕ್ಕೆ ಪಡೆದುಕೊಂಡಿದೆ. ಚೇತನ್ ಹಾಗೂ ಲಿಖಿತ್ ಇಬ್ಬರು ಆರೋಪಿಗಳನ್ನು ಎಸ್ ಐಟಿ ಅಧಿಕಾಇರಗಳೂ ವಶಕ್ಕೆ ಪಡೆದುಕೊಂಡಿದ್ದಾರೆ. ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಟ್ಟು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಹಾಸನದಲ್ಲಿ ಬೀಡು ಬಿಟ್ಟಿದ್ದು, ವಿಡಿಯೋ ವೈರಲ್ ಆಗಿರುವ ಬಗ್ಗೆ ತನಿಖೆ ನಡೆಸುತ್ತಿದೆ. ಏಪ್ರಿಲ್ 23ರಂದು ಹಾಸನ ಸೈಬಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ ಐಟಿ ತನಿಖೆ ನಡೆಸುತ್ತಿದೆ.

Read More

ಮಂಡ್ಯ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ಕೊಡುವ ಕಾಲ ಬಂದಿದೆ. ಕುಮಾರಸ್ವಾಮಿ ಏನು ಸಾಚಾ ಅಲ್ಲಾ. ಕುಮಾರಸ್ವಾಮಿ, ಪ್ರಜ್ವಲ್ ರೀತಿ ಪರಿಸ್ಥಿತಿ ಎದುರಿಸಲಿದ್ದಾರೆ. ಇಷ್ಟು ದಿ‌ನ ಯಾರು ಬಂದು ದೂರು ಕೊಡಲು ಧೈರ್ಯ ಮಾಡಿರಲಿಲ್ಲ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೀವಿ‌. ರಾಧಿಕಾ ಅವ್ರನ್ನ ಪತ್ನಿ ರೀತಿ ಕಾಣುತ್ತಿದ್ದಾರ? ಈ ರೀತಿ ಬಹಳಷ್ಟು ನಡೆದಿರಬಹುದು. ವರ ಆಪ್ತರೆ ಹಲವಾರು ಬಾರಿ ಹೇಳಿದ್ದಾರೆ. ಕುಮಾರಸ್ವಾಮಿ ಏನು ಸಾಚಾ ಅಲ್ಲ ಎಂದು ಕಿಡಿಕಾರಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ. ಪೆನ್‌ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ.ಮುಂದಿನ ದಿನಗಳಲ್ಲಿ‌ ರೇವಣ್ಣನಿಗೆ…

Read More

ಬೀದರ್ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಧರ್ಮಿಯ ವ್ಯಕ್ತಿಯ ಜೊತೆಗೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮದ ಮಹಿಳೆಯ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದಾರೆ. ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಇನ್ನು ಕಳೆದ ಜನವರಿ 08ರಂದು ಅನ್ಯಕೋಮಿನ ಹಿಂದೂ ಧರ್ಮದ ವ್ಯಕ್ತಿ ಮತ್ತು ಮುಸ್ಲಿಂ ಧರ್ಮದ ಮಹಿಳೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದರು. ಈ ವಿಚಾರ ತಿಳಿದ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್​ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ…

Read More

ಮಂಡ್ಯ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಜೈಲಿಗೆ ಹೋಗುವ ಕಾಲ ದೂರವಿಲ್ಲ. ರೇವಣ್ಣಗೆ ಆದ ಪರಿಸ್ಥಿತಿಯೂ ಕುಮಾರಸ್ವಾಮಿಗೆ ಆಗಲಿದೆ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಜೈಲಿಗೆ ಹೋಗುವ ದೂರವಿಲ್ಲ. ಹೆಚ್. ಡಿ. ರೇವಣ್ಣನ ಪರಿಸ್ಥಿತಿ ಕುಮಾರಸ್ವಾಮಿಗೂ ಬರಲಿದೆ. ಮುಂದೆ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡುತ್ತಾರೆ. ಮಹಿಳೆಯರು ದೂರು ಕೊಡುತ್ತಾರೆ. ಬಳಿಕ ಅವರು ಜೈಲಿಗೆ ಹೋಗಲಿದ್ದಾರೆ ಎಂದು ಕಿಡಿಕಾರಿದ್ದಾರೆ. ಇನ್ನು ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಜೆಡಿಎಸ್ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ಮಾಡಬೇಕು. ಪ್ರಕರಣದಲ್ಲಿ ಕೆಲವರನ್ನು ಅನವಶ್ಯಕವಾಗಿ ಸಿಕ್ಕಿಸಲಾಗುತ್ತಿದೆ ಎಂದಿದ್ದಾರೆ.

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹೇಳಿಕೆ ಕೊಡುವ ನಾಯಕರ ವಿರುದ್ಧ 41A ಪ್ರಕಾರ ವಿಚಾರಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ .ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಎಸ್ ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಶ್ಯಕತೆ ಇಲ್ಲ. ಇಂಟರ್ ಪೋಲ್ ನವರು ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ. ಸಿಬಿಐ ಅಧಿಕಾರಿಗಳ ಮೂಲಕ ನಮಗೆ ಗೊತ್ತಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಎಸ್ ಐಟಿ ತನಿಕೆ ಮಾಡುತ್ತಿದೆ. ಪ್ರಜ್ವಲ್ ಪ್ರಕರಣದ ಬಗ್ಗೆ ಯಾರ್ಯಾರೋ ಏನೇನೋ ಮಾತನಾಡುತ್ತಿದ್ದಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗೂ ಉತ್ತರ ಕೊಡಲು ಆಗಲ್ಲ. ತನಿಖೆ ಆಗುವವರೆಗೂ ಯಾವುದೇ ಮಾಹಿತಿಯನ್ನು ಹೇಳಲು ಆಗಲ್ಲ. ನಾಯಕರು ಹೇಳಿಕೆ ಕೊಟ್ಟರೂ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ವಿರುದ್ಧವೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ…

Read More

ನವದೆಹಲಿ: ಜನವರಿ 1, 2016 ರಿಂದ ಡಿಸೆಂಬರ್ 31, 2021 ರವರೆಗೆ ಆರು ವರ್ಷಗಳಲ್ಲಿ ಭಾರತದಲ್ಲಿ ಸುಮಾರು 9,681 ಮಕ್ಕಳನ್ನು ವಯಸ್ಕರ ಸೌಲಭ್ಯಗಳಲ್ಲಿ ತಪ್ಪಾಗಿ ಇರಿಸಲಾಗಿದೆ ಎಂದು ಲಂಡನ್ ಮೂಲದ ಸಂಸ್ಥೆ ಐಪ್ರೊಬೊನೊ ನಡೆಸಿದ ಅಧ್ಯಯನ ಬಹಿರಂಗಪಡಿಸಿದೆ. ಇದು ವಾರ್ಷಿಕವಾಗಿ ಸರಾಸರಿ 1,600 ಕ್ಕೂ ಹೆಚ್ಚು ಮಕ್ಕಳನ್ನು ಜೈಲುಗಳಿಂದ ವರ್ಗಾಯಿಸಲಾಗುತ್ತದೆ.ಈ ಅಧ್ಯಯನವು ಸಂಶೋಧನೆ ಮತ್ತು ಸರ್ಕಾರದ ಮಾಹಿತಿ ಹಕ್ಕು (ಆರ್ಟಿಐ) ಅರ್ಜಿಗಳ ಮೂಲಕ ಪಡೆದ ದತ್ತಾಂಶವನ್ನು ಆಧರಿಸಿದೆ. ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಮತ್ತು ಸುಪ್ರೀಂ ಕೋರ್ಟ್ ಬಾಲಾಪರಾಧಿ ನ್ಯಾಯ ಸಮಿತಿಯ ಅಧ್ಯಕ್ಷ ರವೀಂದ್ರ ಭಟ್ ಈ ವಿಷಯವನ್ನು ಪ್ರಸ್ತಾಪಿಸಿ, ರಾಜ್ಯಗಳು “ಪರೇನ್ಸ್ ಪ್ಯಾಟ್ರಿಯೇ” ಅಂದರೆ ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗದವರ ಕಾನೂನು ರಕ್ಷಕರು ಎಂದು ಹೇಳಿದರು. ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಕಾರಣ ರಾಜ್ಯಗಳು ವಿಫಲವಾಗಿವೆ. ದೆಹಲಿಯಲ್ಲಿ ಶನಿವಾರ ಬಹಿರಂಗಪಡಿಸಿದ ಅಧ್ಯಯನದ ಪ್ರಕಾರ, ಇದು ಒಟ್ಟು 570 ಜಿಲ್ಲಾ ಮತ್ತು ಕೇಂದ್ರ ಕಾರಾಗೃಹಗಳಲ್ಲಿ 50% ರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ, ಇದು ದತ್ತಾಂಶ ಸಂಗ್ರಹಣೆ…

Read More

ನವದೆಹಲಿ : ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (ಸಿಇಆರ್ಟಿ-ಇನ್) ಡೆಸ್ಕ್ಟಾಪ್ಗಳಿಗಾಗಿ ಆಪಲ್ ಐಟ್ಯೂನ್ಸ್ ಮತ್ತು ಗೂಗಲ್ ಕ್ರೋಮ್ನಲ್ಲಿನ ದುರ್ಬಲತೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಈ ಭದ್ರತಾ ರಂಧ್ರಗಳು ಹ್ಯಾಕರ್ ಗಳಿಗೆ ನಿಮ್ಮ ಕಂಪ್ಯೂಟರ್ ನ ನಿಯಂತ್ರಣವನ್ನು ತೆಗೆದುಕೊಳ್ಳಲು ಅನುಮತಿಸಬಹುದು. ಡೆಸ್ಕ್ ಟಾಪ್ ಗಳಿಗಾಗಿ ಆಪಲ್ ಐಟ್ಯೂನ್ಸ್ ಮತ್ತು ಗೂಗಲ್ ಕ್ರೋಮ್ ನ ಹಳೆಯ ಆವೃತ್ತಿಗಳು ಹ್ಯಾಕಿಂಗ್ ಪ್ರಯತ್ನಗಳಿಗೆ ಗುರಿಯಾಗುತ್ತವೆ ಎಂದು ಸಿಇಆರ್ ಟಿ-ಇನ್ ಎಚ್ಚರಿಸಿದೆ. ನಿಮ್ಮ ಕಂಪ್ಯೂಟರ್ ಸಿಸ್ಟಮ್ ಅನ್ನು ನಿಯಂತ್ರಿಸಲು ಮತ್ತು ನಿಮ್ಮ ಡೇಟಾವನ್ನು ಕದಿಯಲು ಅಥವಾ ಮಾಲ್ವೇರ್ ಸ್ಥಾಪಿಸಲು ಹ್ಯಾಕರ್ಗಳು ಈ ದುರ್ಬಲತೆಗಳನ್ನು ಬಳಸಿಕೊಳ್ಳಬಹುದು. ಸುರಕ್ಷಿತವಾಗಿರಲು ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ. ಆಪಲ್ ಐಟ್ಯೂನ್ಸ್ ದುರ್ಬಲತೆ ಆಪಲ್ ಐಟ್ಯೂನ್ಸ್ ನೊಂದಿಗಿನ ಸಮಸ್ಯೆಯು ವಿಂಡೋಸ್ ಬಳಕೆದಾರರಿಗೆ 12.13.2 ಗಿಂತ ಹಿಂದಿನ ಆವೃತ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಸಿಇಆರ್ಟಿ-ಇನ್ ಪ್ರಕಾರ, ದುರ್ಬಲತೆಯು ಕೋರ್ ಮೀಡಿಯಾ ಎಂಬ ಘಟಕದಲ್ಲಿದೆ. ಹಾನಿಕಾರಕ ಕೋಡ್ ಅನ್ನು ಚಾಲನೆ ಮಾಡಲು ನಿಮ್ಮ ಕಂಪ್ಯೂಟರ್ ಅನ್ನು ಮೋಸಗೊಳಿಸುವ ದುರುದ್ದೇಶಪೂರಿತ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಮಾರ್ಚ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತ ವಿದ್ಯಾರ್ಥಿನಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ನೇಹಾಳನ್ನು ಹತ್ಯೆ ಮಾಡಿದ್ದ. ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು. 6 ದಿನಗಳ ಕಾಲ ಆರೋಪಿ ಫಯಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಫಯಾಜ್ ತಂದೆ-ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದ ಎಸ್‌ಐಟಿ ಇದೀಗ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ನಡೆಸಿದೆ ಎನ್ನಲಾಗಿದೆ.

Read More