Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ನವೋದಯ ವಿದ್ಯಾಲಯ ಸಮಿತಿ (ಎನ್ವಿಎಸ್) 1377 ಬೋಧಕೇತರ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ನೇಮಕಾತಿಗೆ ಅರ್ಜಿಗಳನ್ನು ಈಗ ಮೇ 7 ರವರೆಗೆ ಸಲ್ಲಿಸಬಹುದು. ಮೊದಲ ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿತ್ತು. ಬೋಧಕೇತರ ಸಿಬ್ಬಂದಿ ನೇಮಕಾತಿ 2024 ರ ಆನ್ಲೈನ್ ಅರ್ಜಿಯು ನವೋದಯ ವಿದ್ಯಾಲಯ ಸಮಿತಿ navoday.gov.in ಅಥವಾ exams.nta.ac.in/NVS ವೆಬ್ಸೈಟ್ಗೆ ಹೋಗಬೇಕಾಗುತ್ತದೆ. ನಮೂನೆಯಲ್ಲಿ ತಿದ್ದುಪಡಿಗಳನ್ನು ಮೇ 9 ರಿಂದ ಮೇ 11 ರ ನಡುವೆ ಮಾಡಲಾಗುವುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನವೋದಯ ವಿದ್ಯಾಲಯ ನೇಮಕಾತಿ ಪರೀಕ್ಷೆಯನ್ನು ನಡೆಸಲಿದೆ. ಈ ನೇಮಕಾತಿಯ ಅಧಿಸೂಚನೆಯನ್ನು ಎನ್ಟಿಎ ಮಾರ್ಚ್ 22 ರಂದು ಬಿಡುಗಡೆ ಮಾಡಿದೆ. ಯಾವುದೇ ಪ್ರಶ್ನೆ ಅಥವಾ ಸ್ಪಷ್ಟತೆಗಾಗಿ ಏಜೆನ್ಸಿ ಸಹಾಯ ಡೆಸ್ಕ್ ಸಂಖ್ಯೆಯನ್ನು ನೀಡಿದೆ. ಯಾರಾದರೂ ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, 011 50759000/011 69227700 ಕರೆ ಮಾಡಬಹುದು. ಅಥವಾ nvsre.nt@nta.ac.in ಗೆ ಮೇಲ್ ಮಾಡಬಹುದು. ನವೋದಯ ವಿದ್ಯಾಲಯ ಸಮಿತಿ…
ಕೊಚ್ಚಿ : ಭಾರತೀಯ ಕೋಸ್ಟ್ ಗಾರ್ಡ್ ಹಡಗು ಅಭಿನವ್, ಸಿ -404 ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ಕೇರಳ ಕರಾವಳಿಯತ್ತ ಸಾಗುತ್ತಿದ್ದಾಗ ಕೇರಳ ಕರಾವಳಿಯಲ್ಲಿ ಇರಾನಿನ ರಾಷ್ಟ್ರೀಯತೆಯ ವಿದೇಶಿ ಮೀನುಗಾರಿಕಾ ಹಡಗನ್ನು ಯಶಸ್ವಿಯಾಗಿ ತಡೆದು ವಶಕ್ಕೆ ತೆಗೆದುಕೊಂಡಿದೆ. ವಶಪಡಿಸಿಕೊಂಡ ದೋಣಿಯನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಗಳಿಗಾಗಿ ಕೇರಳದ ಕೊಚ್ಚಿಗೆ ತರಲಾಗುತ್ತಿದೆ.ಭಾರತೀಯ ಸಿಬ್ಬಂದಿಯನ್ನು ಹೊಂದಿರುವ ವಿದೇಶಿ ಮೀನುಗಾರಿಕಾ ದೋಣಿಯನ್ನು ಐಸಿಜಿ ಬಂಧಿಸಿರುವುದು ಕಡಲ ಭದ್ರತೆಯ ಸಂಕೀರ್ಣತೆಗಳನ್ನು ಮತ್ತು ಸಮುದ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಯಾವುದೇ ಕಡಲ ಕಾನೂನು ಜಾರಿ ಸಂಸ್ಥೆ ಎದುರಿಸುತ್ತಿರುವ ಸವಾಲುಗಳನ್ನು ಮತ್ತೊಮ್ಮೆ ಎತ್ತಿ ತೋರಿಸುತ್ತದೆ. ಈ ಘಟನೆಯು ಭಾರತದ ಕಡಲ ಗಡಿಗಳನ್ನು ರಕ್ಷಿಸಲು ಮತ್ತು ಭಾರತದ ಕಡಲ ವಲಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಐಸಿಜಿಯ ನಿರಂತರ ಪ್ರಯತ್ನಗಳನ್ನು ಒತ್ತಿಹೇಳುತ್ತದೆ. ಕಾರ್ಯಾಚರಣೆಯ ಸಮಯದಲ್ಲಿ, ಐಸಿಜಿಎಸ್ ಅಭಿನವ್ ಸಂಯೋಜಿಸಿದ ಐಸಿಜಿ ಘಟಕಗಳು ಹೆಚ್ಚಿನ ಭದ್ರತಾ ಮಟ್ಟವನ್ನು ನಿರ್ವಹಿಸಿದವು, ಇದು ದೋಣಿಯ ತನಿಖೆಗಾಗಿ ತನ್ನ ಬೋರ್ಡಿಂಗ್ ತಂಡವನ್ನು…
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರ ನಾಳೆ ಮತದಾನ ನಡೆಯಲಿದ್ದು, ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ. ಮೇ 7ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದ್ದು, ಮತದಾರರ ಗುರುತಿನ ಚೀಟಿ (ಎಪಿಕ್) ಕಾರ್ಡ್ ಅಥವಾ ತಮ್ಮ ಭಾವಚಿತ್ರವಿರುವ ಕೆಳಕಂಡ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ. 12 ಪರ್ಯಾಯ ದಾಖಲೆಗಳ ವಿವರ ಇಂತಿದೆ. 1) ಆಧಾರ್ ಕಾರ್ಡ್ 2) ಎಮ್.ಎನ್.ಆರ್.ಇ.ಜಿ.ಎ. (MNREGA) ಜಾಬ್ ಕಾರ್ಡ್ 3) ಬ್ಯಾಂಕ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್ಬುಕ್ 4) ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ…
ಬೆಂಗಳೂರು : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಝಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ. ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡದಂತೆ ಸೂಚಿಸಲಾಗಿದೆ.
ಬೆಂಗಳೂರು : ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಮೊಬೈಲ್ ಬಳಸುತ್ತಿದ್ದಾರೆ. ಮೊಬೈಲ್ ನಲ್ಲಿ ಇಂದು ಹಲವರು ಹಣ , ಡೆಬಿಟ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಹಲವು ರೀತಿಯ ವಸ್ತುಗಳನ್ನು ಇಡುತ್ತಾರೆ. ಆದರೆ ಈ ವಸ್ತುಗಳ ಕಾರಣದಿಂದ ಮೊಬೈಲ್ ಸ್ಪೋಟವಾಗುವ ಸಾಧ್ಯತೆ ಇದೆ. ಜನರು ತಮ್ಮ ಮೊಬೈಲ್ ಕವರ್ ಗಳ ಹಿಂದೆ ನೋಟುಗಳು, ನಾಣ್ಯಗಳು ಮತ್ತು ಕೀಲಿಗಳು ಸೇರಿದಂತೆ ಅನೇಕ ವಸ್ತುಗಳನ್ನು ಇಡುವುದನ್ನು ಅನೇಕ ಬಾರಿ ನೋಡಲಾಗಿದೆ. ಆದಾಗ್ಯೂ, ಈ ರೀತಿಯ ನಮ್ಮ ಜೀವನಕ್ಕೆ ಅಪಾಯಕಾರಿಯಾಗಬಹುದು. ಫೋನ್ ನ ಕವರ್ ನ ಹಿಂದೆ ನೀವು ನೋಟುಗಳನ್ನು ಸುರಕ್ಷಿತವಾಗಿರಿಸಿದ್ದರೂ, ನಿಮ್ಮ ಈ ಅಭ್ಯಾಸವು ತುಂಬಾ ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಮೊಬೈಲ್ ಕವರ್ ನಲ್ಲಿ ವಸ್ತುಗಳನ್ನು ಇಡುವುದು ಹೇಗೆ ಅಪಾಯಕಾರಿ ಎಂದು ಸಾಬೀತುಪಡಿಸುತ್ತದೆ. ಮೊಬೈಲ್ ಗೆ ಬೆಂಕಿ ತಗುಲಬಹುದು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಗಳಿಗೆ ಬೆಂಕಿ ಬೀಳುವುದು ಅಥವಾ ಸ್ಫೋಟಗೊಳ್ಳುವುದು ಸಾಮಾನ್ಯವಾಗಿದೆ, ಆದರೆ ಇದರ ಹಿಂದಿನ ಕಾರಣ ಎಲ್ಲೋ ನಮ್ಮ ಅಜಾಗರೂಕತೆಯಾಗಿರಬಹುದು. ಆಗಾಗ್ಗೆ ಫೋನ್…
ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದೆ. ಇಂದಿನಿಂದ ಐದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸೊರಬ : ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭೆ ಚುನಾವಣೆ ನಂತರ ಪತನಗೊಳ್ಳಲಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಕಿಸಾನ್ ಸಮ್ಮಾಣ್ ಯೋಜನೆ ಸೇರಿ ತಮ್ಮ ಅಧಿಕಾರವಧಿಯಲ್ಲಿ ರೂಪಿಸಿದ ಭಾಗ್ಯಲಕ್ಷ್ಮೀ ಯೋಜನೆ ಸ್ಥಗಿತಗೊಳಿಸಿದ್ದಾರೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಖಜಾನೆ ಖಾಲಿಯಾಗಿರುವುದರಿಂದ ರಾಜ್ಯದಲ್ಲಿ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಎಸ್ ಐಟಿ ಅಧಿಕಾರಿಗಳು ಈಗಾಗಲೇ ಸಿಕ್ಕಿರುವ ಪೆನ್ ಡ್ರೈವ್ ನಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಈ ಮೂವರು ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ದೂರು ನೀಡುವಂತೆ ಸೂಚಿಸಿದ್ದಾರೆ. ಇನ್ನು ಎಸ್ ಐಟಿ ಅಧಿಕಾರಿಗಳು ಅಶ್ಲೀಲ ವಿಡಿಯೋಗಳು ಹಾಗೂ ಫೋಟೋದಲ್ಲಿರುವ ಮಹಿಳೆಯರನ್ನು ಗುರುತಿಸಿ, ದೂರು ನೀಡುವಂತೆ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ. ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣನವರು ಇಂದು ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ…
ಚನ್ನಪಟ್ಟಣ : ಮದುವೆ ಊಟದ ನಂತರ ಐಸ್ ಕ್ರೀಂ ಸೇವಿಸಿ ಸುಮಾರು 80 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣದ ಸತನೂರು ಸರ್ಕಲ್ ಬಳಿ ಮದುವೆ ಸಮಾರಂಭದಲ್ಲಿ ಮದುವೆ ಊಟದ ನಂತರ ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 80 ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥಗೊಂಡವರೆಲ್ಲ ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳಾಗಿದ್ದಾರೆ. ಅಸ್ವಸ್ಥರಲ್ಲಿ ೪೦ ಮಂದಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣನವರು ಇಂದು ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಸ್ಥಳೀಯ ಸಂಸ್ಥೆಗಳ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.