Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಕಚೇರಿ ಸಮಯದ ಹೊರಗೆ ಕೆಲಸಕ್ಕೆ ಸಂಬಂಧಿಸಿದ ಕರೆಗಳು ಮತ್ತು ಇಮೇಲ್ಗಳಿಗೆ ಹಾಜರಾಗುವುದನ್ನು ತಡೆಯಲು ನೌಕರರಿಗೆ ಅವಕಾಶ ನೀಡುವ ಗುರಿಯನ್ನು ಹೊಂದಿರುವ ಖಾಸಗಿ ಸದಸ್ಯರ ಮಸೂದೆಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದಸ್ಯರು ಸರ್ಕಾರಿ ಶಾಸನದ ಅಗತ್ಯವಿದೆ ಎಂದು ಅವರು ನಂಬುವ ವಿಷಯಗಳ ಕುರಿತು ಮಸೂದೆಗಳನ್ನು ಮಂಡಿಸಬಹುದು. ಆದಾಗ್ಯೂ, ಹೆಚ್ಚಿನ ಸಂದರ್ಭಗಳಲ್ಲಿ, ಸರ್ಕಾರವು ಪ್ರಸ್ತಾವಿತ ಕಾನೂನಿಗೆ ಪ್ರತಿಕ್ರಿಯಿಸಿದ ನಂತರ ಖಾಸಗಿ ಸದಸ್ಯರ ಮಸೂದೆಗಳನ್ನು ಹಿಂಪಡೆಯಲಾಗುತ್ತದೆ. ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ “ಸಂಪರ್ಕ ಕಡಿತಗೊಳಿಸುವ ಹಕ್ಕು ಮಸೂದೆ, 2025” ಅನ್ನು ಮಂಡಿಸಿದರು, ಇದು ನೌಕರರ ಕಲ್ಯಾಣ ಪ್ರಾಧಿಕಾರವನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಅಧಿಕೃತ ಕೆಲಸದ ಸಮಯವನ್ನು ಮೀರಿ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು ಮತ್ತು ಇಮೇಲ್ಗಳಿಂದ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಪ್ರತಿ ಉದ್ಯೋಗಿಗೆ ನೀಡಲು ಮಸೂದೆ ಪ್ರಸ್ತಾಪಿಸುತ್ತದೆ. ಖಾಸಗಿ ಸದಸ್ಯರ ಮಸೂದೆಯಡಿ ಈ ಮಸೂದೆಯನ್ನು ಮಂಡಿಸಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಸರ್ಕಾರವು ಕಾನೂನುಗಳನ್ನು ತರಬೇಕು ಎಂದು…
2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಯಮಿತ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್ಪಿಓ/ಎಸ್ಜಿಎಸ್ ಗಳನ್ನು ಸಂಗ್ರಹಣಾ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ಗಳಲ್ಲಿರುವ ಕೆಎಫ್ಸಿಎಸ್ಸಿ ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ರೈತರಿಂದ ಭತ್ತ ಖರೀದಿಸಲಾಗುವುದು. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ದಿ:31-12-2025…
ಮಂಡ್ಯ : ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಶ್ರೀಗಳಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅಪಚಾರ ಆಗಿದ್ರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ. ಸ್ವಾಮಿಗಳು ಅವರದ್ದೇ ಆದ ಕಲ್ಪನೆ ಹೊಂದಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಾಮಾನ ಎಲ್ಲರಿಗೂ ಗೊತ್ತು. ಈ ಬಗ್ಗೆ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿ ಬರಬಾರದು ಎಂದು ಆದಿಚುಂಚನಗಿರಿ ಶ್ರೀಗಳಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಶುಕ್ರವಾರ ಸಂಡೂರು ತಾಲ್ಲೂಕಿನ ವಿಠಲಾಪುರÀ ಮತ್ತು ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಯಾರಿಗಾದರೂ ಬಾಯಿ ಒಣಗಿದಂತೆ ಆಗುವುದು ಅಥವಾ ವಿಪರೀತ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆ, ಹಸಿವು ಹೆಚ್ಚಾಗುವುದು, ಮಂದದೃಷ್ಟಿ ಕಾರಣವಿಲ್ಲದೇ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರ ಬಳಿ ತೆರಳಿ ಪರಿಕ್ಷೀಸಿಕೊಳ್ಳಬೇಕು. 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದಾಗಿದೆ ಎಂದು ತಿಳಿಸಿದರು. 30 ರಿಂದ 59 ವರ್ಷ ಹೆಚ್ಚಿನ ಸಾವುಗಳಿಗೆ ಅಸಾಂಕ್ರಾಮಿಕ ರೋಗಗಳೇ ಕಾರಣವಾಗಿವೆ. 2026 ರ ಹೊತ್ತಿಗೆ ದೇಶದಲ್ಲಿ 75 ಮಿಲಿಯನ್ ಮಧುಮೇಹಿಗಳು ಕಂಡುಬರುವ ಸಾಧ್ಯತೆಯಿದ್ದು, ಇದರಿಂದ…
ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ…
ಅನೇಕ ಜನರು ಪೋಷಕರಾಗಲು ಸಾಧ್ಯವಾಗುತ್ತಿಲ್ಲ ಎಂದು ಚಿಂತಿತರಾಗಿದ್ದಾರೆ. ಅವರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಾರೆ, ಆದರೆ ಅದು ಇನ್ನೂ ಕೆಲಸ ಮಾಡುವುದಿಲ್ಲ. ಹೆಚ್ಚಿನ ಜನರಿಗೆ ತಿಂಗಳಿನ ಯಾವ ದಿನಗಳಲ್ಲಿ ಗರ್ಭಧಾರಣೆಯ ಸಾಧ್ಯತೆಗಳು ಹೆಚ್ಚು ಎಂದು ತಿಳಿದಿಲ್ಲ. ಇದಕ್ಕಾಗಿಯೇ ಅವರು ಸರಿಯಾಗಿ ಯೋಜಿಸಲು ವಿಫಲರಾಗುತ್ತಾರೆ ಮತ್ತು ತಪ್ಪುಗಳನ್ನು ಮಾಡುತ್ತಾರೆ. ಇಂದು, ನೀವು ಲೈಂಗಿಕ ಕ್ರಿಯೆ ನಡೆಸಿದರೆ ತಿಂಗಳಿನ ಯಾವ ದಿನಗಳಲ್ಲಿ ಗರ್ಭಧಾರಣೆಯ ಸಾಧ್ಯತೆಗಳು ಹೆಚ್ಚು ಎಂದು ತಿಳಿದುಕೊಳ್ಳಿ. ಅಂಡೋತ್ಪತ್ತಿ ಅವಧಿಯು ಪ್ರತಿ ಮಹಿಳೆಗೆ ವಿಭಿನ್ನವಾಗಿರುತ್ತದೆ ಅಂಡೋತ್ಪತ್ತಿ ಅವಧಿಯಲ್ಲಿ ಗರ್ಭಧಾರಣೆಯ ಸಾಧ್ಯತೆಗಳು ಹೆಚ್ಚು. ಆದಾಗ್ಯೂ, ಪ್ರತಿಯೊಬ್ಬ ಮಹಿಳೆಯ ಅಂಡೋತ್ಪತ್ತಿ ಅವಧಿಯು ಬದಲಾಗಬಹುದು, ಅದಕ್ಕಾಗಿಯೇ ಜನರು ತಪ್ಪುಗಳನ್ನು ಮಾಡುತ್ತಾರೆ. ಇದು ಮಹಿಳೆಯ ಋತುಚಕ್ರವನ್ನು ಅವಲಂಬಿಸಿರುತ್ತದೆ. ಈ ಅವಧಿಯಲ್ಲಿ ಮೊಟ್ಟೆಗಳು ರೂಪುಗೊಳ್ಳುತ್ತವೆ, ಇದು 12 ರಿಂದ 24 ಗಂಟೆಗಳವರೆಗೆ ಇರುತ್ತದೆ. ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಗರ್ಭಧಾರಣೆಯ ಸಾಧ್ಯತೆಗಳು ಹೆಚ್ಚಾಗುತ್ತವೆ. ಅಂಡೋತ್ಪತ್ತಿ ಅವಧಿಯನ್ನು ಹೇಗೆ ನಿರ್ಧರಿಸುವುದು? ಈಗ, ಮೊದಲು, ನಿಮ್ಮ ಅಂಡೋತ್ಪತ್ತಿ ಅವಧಿಯನ್ನು ಹೇಗೆ ನಿರ್ಧರಿಸುವುದು ಎಂದು…
ಚಿತ್ರದುರ್ಗ : ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಬ್ಯಾಂಕ್ ಅಧಿಕಾರಿಗಳು, ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ನೆರವು ಪಡೆಯುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳ ಇತ್ಯರ್ಥಕ್ಕಾಗಿ ಹಮ್ಮಿಕೊಂಡಿದ್ದ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲ್ಲೂಕುವಾರು ಬ್ಯಾಂಕಿನ ಪ್ರತಿ ಶಾಖೆಯಲ್ಲಿ ಧೀರ್ಘ ಕಾಲದವರೆಗೆ ಹಕ್ಕು ಪಡೆಯದೇ ಉಳಿದಿರುವ ಬ್ಯಾಂಕ್ ಠೇವಣಿಗಳ ವಾರಸುದಾರರ ಮಾಹಿತಿಯೊಂದಿಗೆ ಬ್ಯಾಂಕ್ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಸ್ವ-ಸಹಾಯ ಗುಂಪುಗಳ ಸದಸ್ಯರ ಸಹಕಾರ ಪಡೆದು, ಸಂಬಂಧಪಟ್ಟ ವಾರಸುದಾರರನ್ನು ಗುರುತಿಸಿ, ಠೇವಣಿ ಮೊತ್ತವನ್ನು ಸಂಬಂಧಪಟ್ಟವರಿಗೆ ತಲುಪಿಸಬೇಕು. ಈ ಸಂಬಂಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ…
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಇಬ್ಬರು ಹೆಣ್ಣು ಮಕ್ಕಳ ಮೇಲೆಯೇ ಪಾಪಿ ತಂದೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಗಣಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ಎಂಬಾತ ಮದ್ಯದ ಅಮಲಿನಲ್ಲಿ ತನ್ನ 13 ಹಾಗೂ 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕುಡಿತಕ್ಕೆ ದಾಸನಾಗಿದ್ದ ಮಂಜುನಾಥ್ ತನ್ನ ಮೇಲೂ ಅತ್ಯಾಚಾರ ಎಸಗಲು ಮುಂದಾಗಿದ್ದ ಆರೋಪಿ ತಾಯಿ ಕೂಡ ಆರೋಪ ಮಾಡಿದ್ದಾರೆ. ಆರೋಪಿ ಮಂಜುನಾಥನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸ್ನಾನ ಮಾಡಲು ಬಾತ್ ರೂಮ್ ಗೆ ಹೋಗಿದ್ದ ಮಹಿಳೆಯೊಬ್ಬರು ವಿಷಕಾರಿ ಅನಿಲ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತಳನ್ನು ಹಾಸನದ ಭೂಮಿಕಾ (24) ಎಂದು ಗುರುತಿಸಲಾಗಿದೆ. ಕೃಷ್ಣಮೂರ್ತಿ ಅವರೊಂದಿಗೆ ಭೂಮಿಕಾ ವಿವಾಹವಾಗದಿದ್ದರು. ಕಳೆದ 15 ದಿನಗಳಿಂದ ತೋಟದಗುಡ್ಡದಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಪತಿಯೊಂದಿಗೆ ವಾಸವಿದ್ದರು. ಕೃಷ್ಣಮೂರ್ತಿ ನವೆಂಬರ್ 29 ರಂದು ಬೆಳಿಗ್ಗೆ ಕಚೇರಿಗೆ ಹೋಗಿದ್ದರು. ಈ ನಡುವೆ ಪತ್ನಿ ಭೂಮಿಕಾ ಸ್ನಾನದ ಗೃಹಕ್ಕೆ ಹೋಗಿದ್ದು, ಗ್ಯಾಸ್ ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ ಉಂಟಾಗಿ ವಿಷಕಾರಿ ಹೊಗೆ ಬಂದಿದೆ. ಈ ವಿಷಕಾರಿ ಹೊಗೆಯನ್ನು ಉಸಿರಾಡಿದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೀವು ಗ್ಯಾಸ್ ಗೀಸರ್ ಅನ್ನು ಸಹ ಬಳಸುತ್ತಿದ್ದರೆ, ಈ 5 ತಪ್ಪುಗಳನ್ನು ಮಾಡಬೇಡಿ ವಿಂಡಿ ಬಾತ್ರೂಮ್: ಗ್ಯಾಸ್ ಗೀಸರ್ ಬಳಸುವಾಗ, ಸ್ನಾನಗೃಹದಲ್ಲಿ ವಾತಾವರಣ ಉತ್ತಮವಾಗಿದೆಯೇ ಎಂದು…
ALERT : ಮಹಿಳೆಯರೇ ಎಚ್ಚರ : `ಮೈಕ್ರೋ ಓವನ್’ ನಲ್ಲಿ ಬಿಸಿ ಮಾಡಿದ ಆಹಾರ ತಿನ್ನುವುದರಿಂದ `ಕ್ಯಾನ್ಸರ್’ ಅಪಾಯ ಹೆಚ್ಚು.!
ಮೈಕ್ರೋ ಓವನ್ ಗಳು ಈ ಯುಗದಲ್ಲಿ ಅತ್ಯಂತ ಅಗತ್ಯವಾದ ಅಡುಗೆ ಉಪಕರಣಗಳಲ್ಲಿ ಒಂದಾಗಿದೆ. ಇದನ್ನು ಬಳಸುವುದರಿಂದ ಕೆಲವು ವಿಶೇಷ ಪ್ರಯೋಜನಗಳಿವೆ. ಇದು ನಿಮ್ಮ ಸಮಯವನ್ನು ಉಳಿಸುತ್ತದೆ. ಆಹಾರವು ಬೇಗನೆ ಬಿಸಿಯಾಗುತ್ತದೆ. ನೀವು ಆರಾಮವಾಗಿ ಕುಳಿತು ಸಂತೋಷದಿಂದ ಆಹಾರವನ್ನು ತಿನ್ನಬಹುದು. ಆದರೆ ಮೈಕ್ರೋವೇವ್ ಗಳ ಅನುಕೂಲಗಳು ಮತ್ತು ಅನಾನುಕೂಲಗಳೂ ಇವೆ. ನೀವು ಇದನ್ನು ಒಮ್ಮೆ ಬಳಸಿದರೆ ಚಿಂತಿಸಬೇಡಿ, ಆದರೆ ಪ್ರತಿದಿನ ಬಳಸಿದರೆ, ಇಂದೇ ನಿಲ್ಲಿಸಿ. ಬಿಸಿ ಮಾಡಿದ ಆಹಾರವನ್ನು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಹಾನಿಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಮೈಕ್ರೋ ಓವನ್ ನಲ್ಲಿ ಬಿಸಿ ಮಾಡಿದ ಆಹಾರವನ್ನು ಸೇವಿಸುವುದರಿಂದ ಉಂಟಾಗುವ ಕೆಲವು ಅನಾನುಕೂಲಗಳ ಬಗ್ಗೆ ತಿಳಿಯೋಣ. ಪೌಷ್ಠಿಕಾಂಶದ ಕೊರತೆಗಳು: ಮೈಕ್ರೋವೇವ್ ನಲ್ಲಿ ಆಹಾರವನ್ನು ಬಿಸಿ ಮಾಡುವುದರಿಂದ ಕೆಲವು ಪೋಷಕಾಂಶಗಳು, ವಿಶೇಷವಾಗಿ ವಿಟಮಿನ್ ಸಿ ಮತ್ತು ಬಿ ಕಡಿಮೆಯಾಗುತ್ತದೆ. ಮೈಕ್ರೋ ಓವನ್ ನಲ್ಲಿ ಆಹಾರವನ್ನು ಪದೇ ಪದೇ ಬಿಸಿ ಮಾಡುವುದರಿಂದ ಅದರ ಶೇಕಡಾ 90 ರಷ್ಟು ಪೋಷಕಾಂಶಗಳು ಸಾಯುತ್ತವೆ ಮತ್ತು ದೇಹಕ್ಕೆ ಹಾನಿಯಾಗುತ್ತದೆ ಎಂದು…














