Author: kannadanewsnow57

ದಾವಣಗೆರೆ : ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ ಫಾರಂ -41 ಎ ಜಾರಿಗೊಳಿಸಿದ್ದು, ನೋಟಿಸ್ ಜಾರಿಗೊಂಡ 24 ಗಂಟೆಯಲ್ಲೇ ತನಿಕೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದೆ. ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಿದೆ. ದಿನ 3 (03.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು,…

Read More

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರದ ಮನೆ ಬಾಗಿಲಿಗೆ ನಿನ್ನೆ ರಾತ್ರಿ ಎಸ್ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವುದರಿಂದ ಕಾಲಾವಕಾಶವನ್ನು ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್ ಐ ಟಿ ಗೆ ಕಾಲಾವಕಾಶ ಕೇಳಿದ್ದೇನೆ. ಏಳು ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದರು. ಅಲ್ಲದೆ ಪ್ರಕರಣದ ನಂತರ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ವಕೀಲರ ಮೂಲಕ ಏಳು ದಿನ ಕಾಲಾವಕಾಶವನ್ನು ಕೇಳಿದ್ದಾರೆ. ಕಾಲಾವಕಾಶ ಕೇಳಿದ ಬಗ್ಗೆ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ…

Read More

ಬೆಂಗಳೂರು : ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್ ಕರೆಸಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ‌ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿದೆ. ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಮೇ.8ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ಮೇ 8ರಂದು ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. 2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಹೆಚ್ಚಾಗಿದ್ದು, ಅತಿಸಾರ ಬೇದಿ/ ಕಾಲರಾ ಸೋಂಕು ಪ್ರಕರಣಗಳ Outbreak ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳು ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಬೇಸಿಗೆ ಕಾಲದಲ್ಲಿ ಅತಿಸಾರ ಬೇದಿ / ಕಾಲರ ಸೋಂಕುಗಳ ಪ್ರಕರಣಗಳು ಸಾಮಾನ್ಯವಾಗಿದ್ದು ಯಾವುದೇ Outbreakಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು ಆದ್ಯ ಕರ್ತವ್ಯವಾಗಿರುತ್ತದೆ. ಆದರೂ ಸಹ Outbreak ಸಂಭವಿಸಿದಲ್ಲಿ ಅದನ್ನು ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ಸಮರ್ಪಕವಾಗಿ ನಿಭಾಯಿಸಲು ಸಿದ್ಧರಾಗಿರುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಪ್ರಕರಣಗಳ ಹರಡುವಿಕೆಯನ್ನು ತಗ್ಗಿಸಲು ಮತ್ತು ಔಟ್ ಬ್ರೇಕ್ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಈ ಕೆಳಕಂಡಂತಿದೆ: 1. 24/7 ತಾತ್ಕಾಲಿಕ ಚಿಕಿತ್ಸಾಲಯಗಳ ಸ್ಥಾಪನೆ ಸಕ್ರಿಯ ಪ್ರಕರಣಗಳ ನಿರ್ವಹಣೆ ಮತ್ತು ತುರ್ತು ಔಷಧಿಗಳ ದಾಸ್ತಾನು: ರೋಗ ನಿಯಂತ್ರಣಕ್ಕಾಗಿ 24/7 ತಾತ್ಕಾಲಿಕ ಚಿಕಿತ್ಸಾಲಯಗಳ ಸ್ಥಾಪನೆ, ತುರ್ತು ಔಷಧಿಗಳ (IV fluids, ORS, antibiotics etc) ದಾಸ್ತಾನುಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು. ನಿರ್ಜಲೀಕರಣದ…

Read More

ನವದೆಹಲಿ : ಕರೋನಾ ಸಾಂಕ್ರಾಮಿಕ ರೋಗದಲ್ಲಿ, ಬ್ರಿಟಿಷ್ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಡ್ 19 ಲಸಿಕೆ ಗಂಭೀರ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಭಾರತದಲ್ಲಿ, ಕೋವಿಶೀಲ್ಡ್ ಅಸ್ಟ್ರಾಜೆನೆಕಾ ಕಂಪನಿಯ ಸೂತ್ರದ ಮೇಲೆ ತಯಾರಿಸಿದ ಲಸಿಕೆಯಾಗಿದೆ. ಅಸ್ಟ್ರಾಜೆನೆಕಾದ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ಮಾತನಾಡುತ್ತಾ, ಅದನ್ನು ತೆಗೆದುಕೊಂಡ ನಂತರ, ಅನೇಕ ಜನರು ರಕ್ತ ಹೆಪ್ಪುಗಟ್ಟುವಿಕೆ, ಹೃದಯ ಸಮಸ್ಯೆಗಳು ಮತ್ತು ಇತರ ಗಂಭೀರ ಸಮಸ್ಯೆಗಳನ್ನು ಎದುರಿಸಿದ್ದಾರೆ. ದೇಶದ ಕೋಟ್ಯಂತರ ಜನರು ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದರು. ನೀವು ಯಾವ ಲಸಿಕೆ ತೆಗೆದುಕೊಂಡಿದ್ದೀರಿ ಎಂಬುದನ್ನು ಮರೆತಿದ್ದರೆ, ಅಸಮಾಧಾನಗೊಳ್ಳುವ ಬದಲು ನೀವು ಯಾವ ಲಸಿಕೆಯನ್ನು ತೆಗೆದುಕೊಂಡಿದ್ದೀರಿ ಎಂಬುದನ್ನು ನಿಮಿಷಗಳಲ್ಲಿ ಕಂಡುಕೊಳ್ಳಿ. ವೆಬ್ ಸೈಟ್ ಮೂಲಕ ಪರಿಶೀಲಿಸಿ ನೀವು ಬಯಸಿದರೆ, ನೀವು ವೆಬ್ಸೈಟ್ ಮೂಲಕವೂ ಲಸಿಕೆಯನ್ನು ಕಂಡುಹಿಡಿಯಬಹುದು. ಇದಕ್ಕಾಗಿ, ನೀವು selfregistration.cowin.gov.in ಹೋಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಗೆಟ್ ಒಟಿಪಿ ಮೇಲೆ ಕ್ಲಿಕ್ ಮಾಡಿ. ಈ ಒಟಿಪಿ ನಿಮ್ಮ ನೋಂದಾಯಿತ ಸಂಖ್ಯೆಗೆ ಬರುತ್ತದೆ. ಈಗ ಲಾಗಿನ್…

Read More

ಕೋಟಾ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂರನೇ ಪ್ರಯತ್ನಕ್ಕೆ ಕೆಲವೇ ದಿನಗಳ ಮೊದಲು 20 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟಾದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಜಸ್ಥಾನದ ಧೋಲ್ಪುರ್ ನಿವಾಸಿ ಭರತ್ ಕುಮಾರ್ ರಜಪೂತ್ ಎಂದು ಗುರುತಿಸಲಾಗಿದೆ. ಅವರು ಮಂಗಳವಾರ ಬೆಳಿಗ್ಗೆ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಘಟನೆಯು ಕಳೆದ 48 ಗಂಟೆಗಳಲ್ಲಿ ಕೋಟಾದಲ್ಲಿ ನಡೆದ ಎರಡನೇ ಶಂಕಿತ ಆತ್ಮಹತ್ಯೆ ಪ್ರಕರಣವಾಗಿದೆ. ರಜಪೂತ್ ಈ ಹಿಂದೆ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದರು ಮತ್ತು ಮೇ 5 ರಂದು ಮೂರನೇ ಪ್ರಯತ್ನಕ್ಕೆ ಹಾಜರಾಗಲು ಸಜ್ಜಾಗಿದ್ದರು ಎಂದು ಜವಾಹರ್ ನಗರ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಸಿಂಗ್ ತಿಳಿಸಿದ್ದಾರೆ. ‘ಕ್ಷಮಿಸಿ ಅಪ್ಪಾ…’ ಕೋಣೆಯಲ್ಲಿ ಕಂಡುಬಂದ ಒಂದು ಸಾಲಿನ ಟಿಪ್ಪಣಿಯಲ್ಲಿ, ಕ್ಷಮಿಸಿ ಅಪ್ಪಾ, ಈ ವರ್ಷವೂ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಡೆತ್ ನೋಟ್…

Read More

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಕರ್ನಾಟಕ ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಸ್ಥಳಗಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ್ಯಪ್ ಆಧಾರಿತ ಮೋಸದ ಹೂಡಿಕೆ ಯೋಜನೆ – ಎಚ್ಪಿಜೆಡ್ ಟೋಕನ್ ಅಪ್ಲಿಕೇಶನ್ಗೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಈ ಕ್ರಮ ಕೈಗೊಂಡಿದೆ. ಶೋಧದ ಸಮಯದಲ್ಲಿ, ಮೊಬೈಲ್ ಫೋನ್ಗಳು, ಕಂಪ್ಯೂಟರ್ ಹಾರ್ಡ್ ಡ್ರೈವ್ಗಳು, ಸಿಮ್ ಕಾರ್ಡ್ಗಳು, ಎಟಿಎಂ / ಡೆಬಿಟ್ ಕಾರ್ಡ್ಗಳು, ಇಮೇಲ್ ಖಾತೆಗಳು ಮತ್ತು ವಿವಿಧ ದೋಷಾರೋಪಣೆ ದಾಖಲೆಗಳು ಸೇರಿದಂತೆ ನಿರ್ಣಾಯಕ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಬುಧವಾರ (ಮೇ 01) ತಿಳಿಸಿದೆ. ಎಚ್ಪಿಜೆಡ್ ಟೋಕನ್ ಅಪ್ಲಿಕೇಶನ್ ಒಳಗೊಂಡ ಮೋಸದ ಹೂಡಿಕೆ ಯೋಜನೆಯಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಎರಡು ಖಾಸಗಿ ಕಂಪನಿಗಳು ಮತ್ತು ಅವುಗಳ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ಪ್ರಕಾರ, ಆರೋಪಿಗಳ ಹೆಸರುಗಳು ಶಿಗು…

Read More

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಯನ್ನು ಎದುರಿಸುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಯಾವ ತನಿಖೆಯನ್ನೂ ಎದುರಿಸಲು ಸಿದ್ದನಾಗಿದ್ದೇನೆ. ಎಸ್ ಐಟಿ ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಏನಿದೆ ಅಂತ ತಿಳಿದುಕೊಳ್ಳುತ್ತೇನೆ ಎಂದರು. ಇದೆಲ್ಲಾ ಸುಳ್ಳಿನ ಆರೋಪ ಮಾಡಲಾಗಿದೆ. ನಾನು ಏನೂ ಮಾತನಾಡುವುದಿಲ್ಲ. ಷಡ್ಯಂತರ ಮಾಡಿದ್ದಾರೆ. ಇದನ್ನೆಲ್ಲಾ ನಾನು ಎದುರಿಸುತ್ತನೆ ನಾನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.

Read More