Subscribe to Updates
Get the latest creative news from FooBar about art, design and business.
Author: kannadanewsnow57
ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಒಂದೇ ಕುಟುಂಬದ ಇಬ್ಬರು ಮಕ್ಕಳು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಚಿಕ್ಕಸುಗೂರು ಗ್ರಾಮದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ತಾಯಿಯ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಕ್ಕಳನ್ನು ಆರತಿ (9), ಪ್ರಿಯಾಂಕ್ (7) ಎಂದು ಗುರುತಿಸಲಾಗಿದೆ. ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾಗಿದ್ದು, ಮಾರುತಿಯ ತಂದೆ ಹಾಗೂ ಮತ್ತೊಬ್ಬ ಮಗು ಅಸ್ವಸ್ಥರಾಗಿದ್ದು, ಅಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನವದೆಹಲಿ : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮೋದಿ ಸರ್ಕಾರ ಈರುಳ್ಳಿ ರಫ್ತು ಬಗ್ಗೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ಲಕ್ಷ ಟನ್ ಗಿಂತ ಹೆಚ್ಚು ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಲಾಗಿದೆ. ಕೇಂದ್ರದ ನಿರ್ಧಾರದಿಂದ ಈರುಳ್ಳಿ ಬೆಳೆಗಾರರು ಸಂತಸಗೊಂಡಿದ್ದಾರೆ. ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್, ಬಹ್ರೇನ್, ಮಾರಿಷಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ಮಧ್ಯ ಏಷ್ಯಾ ಮತ್ತು ಯುರೋಪಿಯನ್ ದೇಶಗಳಿಗೆ ಇನ್ನೂ 2,000 ಟನ್ ಬಿಳಿ ಈರುಳ್ಳಿ ರಫ್ತು ಮಾಡಲು ಇದು ಅನುಮತಿ ನೀಡಿದೆ. ಈ ಮನ್ನಾ ಐದು ತಿಂಗಳ ಅವಧಿಗೆ ಜಾರಿಯಲ್ಲಿರುತ್ತದೆ. ಈ ದೇಶಗಳಿಗೆ ಈರುಳ್ಳಿಯನ್ನು ರಫ್ತು ಮಾಡುವ ಏಜೆನ್ಸಿಯಾದ ನ್ಯಾಷನಲ್ ಕೋ-ಆಪರೇಟಿವ್ ಎಕ್ಸ್ಪೋರ್ಟ್ಸ್ ಲಿಮಿಟೆಡ್, ಎಲ್ -1 ನಲ್ಲಿ ಇ-ಪ್ಲಾಟ್ಫಾರ್ಮ್ ಮೂಲಕ ಮಾತುಕತೆಯ ಆಧಾರದ ಮೇಲೆ ದೇಶೀಯ ಉತ್ಪನ್ನಗಳನ್ನು ಶೇಕಡಾ 100 ರಷ್ಟು ಪೂರ್ವ ಪಾವತಿ ದರದಲ್ಲಿ ಸಂಗ್ರಹಿಸಿ ಪೂರೈಸಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.…
ಐಪಿಎಲ್ 2024: ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಗಳಿಸಿದೆ. ಇದರೊಂದಿಗೆ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಪ್ಲೇಆಫ್ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಹೊರತುಪಡಿಸಿ, ಕೋಲ್ಕತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪ್ರಸ್ತುತ ಅಗ್ರ 4 ಸ್ಥಾನಗಳಲ್ಲಿವೆ. ಕೆಕೆಆರ್, ಎಸ್ಆರ್ಹೆಚ್ ಮತ್ತು ಎಲ್ಎಸ್ಜಿ ಪ್ರಸ್ತುತ ಖಾತೆಯಲ್ಲಿ 10-10 ಅಂಕಗಳನ್ನು ಹೊಂದಿವೆ. ಪ್ರಸ್ತುತ ಐದನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಖಾತೆಯಲ್ಲೂ ಇದೇ ಸಂಖ್ಯೆಯ ಅಂಕಗಳಿವೆ. ಚೆನ್ನೈ ಸೂಪರ್ ಕಿಂಗ್ಸ್ 8 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಅದೇ ಸಂಖ್ಯೆಯ ಅಂಕಗಳು ಗುಜರಾತ್ ಟೈಟಾನ್ಸ್ ಖಾತೆಯಲ್ಲಿವೆ. ಅಂತಹ ಪರಿಸ್ಥಿತಿಯಲ್ಲಿ, ಪಾಯಿಂಟ್ಸ್ ಟೇಬಲ್ ಈ ಬಾರಿ ಆಸಕ್ತಿದಾಯಕವಾಗುತ್ತಿದೆ, ಆದರೆ ಈ ಸಮಯದಲ್ಲಿ ಕೆಲವು ತಂಡಗಳ ಸ್ಥಿತಿ ಕೆಟ್ಟದಾಗಿದೆ ಮತ್ತು ಅವರಿಗೆ ಸಮಸ್ಯೆಗಳು ಹೆಚ್ಚುತ್ತಿವೆ. ಐಪಿಎಲ್ 2024 ರ ಪಾಯಿಂಟ್ಸ್ ಟೇಬಲ್ನಲ್ಲಿ ಪಂಜಾಬ್ ಕಿಂಗ್ಸ್ 8 ನೇ ಸ್ಥಾನದಲ್ಲಿದೆ, ಇದು 9 ಪಂದ್ಯಗಳಲ್ಲಿ ಕೇವಲ 3…
ಬೆಂಗಳೂರು : ರಾಜ್ಯಾದ್ಯಂತ ಏಪ್ರಿಲ್ 29 ರ ನಾಳೆಯಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ದಿನಾಂಕ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 02.15 ರಿಂದ ಸಂಜೆ 04.30 ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ…
ನವದೆಹಲಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಇದೀಗ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡಿದ್ದಾರೆ. ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಯನ್ನು ದೆಹಲಿ ಕಾಂಗ್ರೆಸ್ ಘಟಕ ವಿರೋಧಿಸಿತ್ತು. ಅದರ ಹೊರತಾಗಿಯೂ, ದೆಹಲಿಯಲ್ಲಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿತು ” ಎಂದು ಅರವಿಂದರ್ ಸಿಂಗ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಬೆಂಗಳೂರು : ನಾವು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಬಳಿ ಹಣ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಇವರ ಜೊತೆಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದೆ. ನಾವು ಮನವಿ ಸಲ್ಲಿಸಿ ಏಳು ತಿಂಗಳಾದ್ರು ಪರಿಹಾರ ಕೊಟ್ಟಿಲ್ಲ. ಹಾಗಾಗಿ ನಾವು ಸುಪ್ರೀಂಕೋರ್ಟ್ ಗೆ ಹೋಗಬೇಕಾಯಿತು. ಬರ ಬಂದಾಗ ಪರಿಹಾರ ಕೊಡುವುದು ಅವರ ಕರ್ತವ್ಯ, ಭಿಕ್ಷೆ ಅಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ನಡುವೆ ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ಡ್ರೈವ್ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ತಿಳಿಸಿರುತ್ತಾರೆ. ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ. ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್ಡ್ರೈವ್ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ…
ಟೆಹ್ರಾನ್: ಇಸ್ರೇಲ್ನೊಂದಿಗೆ ಉದ್ವಿಗ್ನತೆ ಹೆಚ್ಚಾದ ನಂತರ ಗಲ್ಫ್ನಲ್ಲಿ ಈ ತಿಂಗಳು ತನ್ನ ಪಡೆಗಳು ವಶಪಡಿಸಿಕೊಂಡ ಪೋರ್ಚುಗೀಸ್ ಧ್ವಜದ ಹಡಗು ಎಂಎಸ್ಸಿ ಮೇರಿಸ್ನಲ್ಲಿ ಸಿಲುಕಿರುವ 16 ಭಾರತೀಯರು ಸೇರಿದಂತೆ ಸಿಬ್ಬಂದಿಯನ್ನು ಬಿಡುಗಡೆ ಮಾಡುವುದಾಗಿ ಇರಾನ್ ದೃಢಪಡಿಸಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಏಪ್ರಿಲ್ 13 ರಂದು ಹಾರ್ಮುಜ್ ಜಲಸಂಧಿಯ ಬಳಿ 25 ಸಿಬ್ಬಂದಿಯೊಂದಿಗೆ ಎಂಎಸ್ಸಿ ಮೇರಿಸ್ ಅನ್ನು ಸ್ವಾಧೀನಪಡಿಸಿಕೊಂಡಿತು. ವಶಪಡಿಸಿಕೊಂಡ ನಂತರ, ಅಂತರರಾಷ್ಟ್ರೀಯ ಕಡಲ ಕಾನೂನನ್ನು ಉಲ್ಲಂಘಿಸಿದ ಆರೋಪದ ಮೇಲೆ ಹಡಗನ್ನು ತನಿಖೆ ಮಾಡಲಾಗುತ್ತಿದೆ ಎಂದು ಇರಾನ್ ಹೇಳಿದೆ. ಹಡಗಿನ ಸಿಬ್ಬಂದಿಯ ಬಿಡುಗಡೆಯ ಮಾನವೀಯ ವಿಷಯವು ನಮಗೆ ಬಹಳ ಕಳವಳಕಾರಿಯಾಗಿದೆ” ಎಂದು ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ತಮ್ಮ ಪೋರ್ಚುಗೀಸ್ ಸಹವರ್ತಿ ಪೌಲೊ ರಂಗೆಲ್ ಅವರೊಂದಿಗೆ ದೂರವಾಣಿ ಕರೆಯಲ್ಲಿ ತಿಳಿಸಿದ್ದಾರೆ. ನಾವು ಟೆಹ್ರಾನ್ನಲ್ಲಿರುವ ಅವರ ರಾಯಭಾರಿಗಳಿಗೆ ಕಾನ್ಸುಲರ್ ಪ್ರವೇಶವನ್ನು ನೀಡಿದ್ದೇವೆ ಮತ್ತು ಸಿಬ್ಬಂದಿ ಸದಸ್ಯರನ್ನು ಬಿಡುಗಡೆ ಮಾಡಲಾಗುವುದು ಮತ್ತು ಹಸ್ತಾಂತರಿಸಲಾಗುವುದು ಎಂದು ರಾಯಭಾರಿಗಳಿಗೆ ಘೋಷಿಸಿದ್ದೇವೆ” ಎಂದು ಅವರು ತಮ್ಮ ಸಚಿವಾಲಯದ ಹೇಳಿಕೆಯಲ್ಲಿ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ತುಳಸಿ ಸಸ್ಯವು ಎಲ್ಲರ ಮನೆಯಲ್ಲಿ ಕಂಡುಬರುತ್ತದೆ.ತುಳಸಿ ಸಸ್ಯವು ಬುಧಗ್ರಹ ದೊಂದಿಗೆ ಸಂಬಂಧಿಸಿರುತ್ತದೆ.ಇದು ಭಗವಂತನಾದ ಶ್ರೀಕೃಷ್ಣನ ರೂಪವೇ ಆಗಿರುತ್ತದೆ. ಹಲವಾರು ಮನೆಗಳಲ್ಲಿ ತುಳಸಿಯನ್ನು ಪೂಜೆ ಮಾಡುತ್ತಾರೆ. ಒಂದು ವೇಳೆ ತುಳಸಿಯನ್ನು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಕುಟುಂಬದಲ್ಲಿ ಆಗಲಿ ಜೀವನದಲ್ಲಾಗಲಿ ಇದರ ಕೆಟ್ಟ ಪ್ರಭಾವ, ಶುಭ ಪ್ರಭಾವವನ್ನು ನೋಡಬಹುದು.ಕೆಲವರು ತುಳಸಿ ಸಸ್ಯವನ್ನು ಮನೆಯ ಮೇಲೆ ಇಡುತ್ತಾರೆ. ಈ ಕಾರಣದಿಂದ ಅವರ ಜೀವನದಲ್ಲಿ ದೋಷಗಳು ಕೂಡ ಹೆಚ್ಚಾಗುತ್ತದೆ. ವಾಸ್ತುವಿನ ಅನುಸಾರವಾಗಿ ಇದನ್ನು ಶುಭ ಅಲ್ಲ ಎಂದು ಹೇಳುತ್ತಾರೆ. ನಿಮ್ಮ ಕುಂಡಲಿಯಲ್ಲಿ ಬುಧ ಗ್ರಹ ಶುಭ ಸ್ಥಾನದಲ್ಲಿ ಇದಿಯಾ ಅಥವಾ ಅಶುಭ ಸ್ಥಾನದಲ್ಲಿ ಇದಿಯಾ ಎನ್ನುವುದನ್ನು ತಿಳಿಯುವುದು ಕೂಡ ತುಂಬಾ ಮುಖ್ಯವಾಗಿರುತ್ತದೆ. ಕುಂಡಲಿಯಲ್ಲಿ ಬುಧಗ್ರಹದ ಸ್ಥಿತಿ ಸರಿಯಾಗಿ ಇರುವುದಿಲ್ಲವೋ. ಇಂಥವರು ತುಳಸಿ ಸಸ್ಯವನ್ನು ಮನೆಯ ಮೇಲೆ ಇಟ್ಟರೆ. ಇವರ ಜೀವನದಲ್ಲಿ ಕೆಟ್ಟ ಘಟನೆಗಳನ್ನು ನೋಡಬಹುದು ಮತ್ತು…
ದಾವಣಗೆರೆ : ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 28 ರಂದು ದಾವಣಗೆರೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ದ್ದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಗಳನ್ನು ಸಂಪೂರ್ಣ ನಿμÉೀಧಿಸಲಾಗಿದೆ. ಜಗಳೂರು ಕಡೆಯಿಂದ ಬರುವ ಬಸ್ ಗಳು ಜಗಳೂರು ಬಸ್ ನಿಲ್ದಾಣ, ಹದಡಿ ರಸ್ತೆಯಿಂದ ಬರುವ ಖಾಸಗಿ ಬಸ್ ಮಾಗನೂರು ಬಸಪ್ಪ ಮೈದಾನ, ಚಿತ್ರದುರ್ಗದ ಕಡೆಯಿಂದ ಬರುವ ಬಸ್ ಗಳು ಎಪಿಎಂಸಿ ದನದ ಮಾರುಕಟ್ಟೆಯಲ್ಲಿ ನಿಲುಗಡೆ ಮಾಡಿ ಅಲ್ಲಿಂದಲೇ ನಿಲುಗಡೆ ಮಾಡಬೇಕು. ವಾಹನ ಸಂಚಾರ ಮಾರ್ಗಗಳ ಬದಲಾವಣೆ. ಹರಿಹರ ಕಡೆಯಿಂದ ಬರುವ ಎಲ್ಲಾ ಕೆಎಸ್ ಆರ್ ಟಿಸಿ ಬಸ್…