Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಜನರು ಬಡಿಗೆಗಳಿಂದ ಬಡಿಯುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಜನರು ಬಡಿಗೆಗಳಿಂದ ಬಡಿಯುತ್ತಾರೆ. ಈ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಗ್ಯಾರಂಟಿ ಬಗ್ಗೆ ಹೇಳಿಕೊಳ್ಳುವುದನ್ನು ಬಿಟ್ಟರೆ ಬೇರೆ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಅಭಿವೃದ್ಧಿಗೆ ಒಂದು ನಯಾಪೈಸೆಯೂ ಬಿಡುಗಡೆ ಆಗಿಲ್ಲ. ಕೇವಲ ಗ್ಯಾರಂಟಿ ಜಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನವದೆಹಲಿ: ಹಲವಾರು ರಾಜ್ಯಗಳು ಶನಿವಾರ ತೀವ್ರ ಶಾಖದ ಅಲೆಯಿಂದ ತತ್ತರಿಸಿದ್ದು, ಅನೇಕ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ನಿಂದ 46 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಛತ್ತೀಸ್ಗಢ, ಜಾರ್ಖಂಡ್, ಒಡಿಶಾ ಮತ್ತು ಗಂಗಾ ಪಶ್ಚಿಮ ಬಂಗಾಳ ರಾಜ್ಯಗಳು ಹೆಚ್ಚು ಬಾಧಿತವಾಗಿವೆ. ಒಡಿಶಾ, ಜಾರ್ಖಂಡ್ ಮತ್ತು ಗಂಗಾ ಪಶ್ಚಿಮ ಬಂಗಾಳದ ಕೆಲವು ಭಾಗಗಳ ಮೇಲೆ ಬಿಸಿಗಾಳಿ ಪರಿಣಾಮ ಬೀರುತ್ತಿದ್ದರೆ, ಮೊದಲನೆಯದು ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಗುಜರಾತ್ನ ಕೆಲವು ಭಾಗಗಳನ್ನು ಸುಟ್ಟುಹಾಕಿದೆ ಎಂದು ಪಿಟಿಐ ವರದಿ ಮಾಡಿದೆ. ಶನಿವಾರ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಏಳರಿಂದ ಎಂಟು ಡಿಗ್ರಿಗಳಷ್ಟು ಹೆಚ್ಚಾಗಿದೆ. ಏಪ್ರಿಲ್ನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಾಲ್ಕರಿಂದ ಎಂಟು ಶಾಖದ ದಿನಗಳನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ಆದರೆ, ಏಪ್ರಿಲ್-ಜೂನ್ ಅವಧಿಯಲ್ಲಿ 10 ರಿಂದ 20 ದಿನಗಳ ಬಿಸಿಗಾಳಿ ನಿರೀಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ. ಮಧ್ಯಪ್ರದೇಶ, ಗುಜರಾತ್, ಒಡಿಶಾ, ಆಂಧ್ರಪ್ರದೇಶ, ಮಧ್ಯ ಮಹಾರಾಷ್ಟ್ರ, ವಿದರ್ಭ, ಮರಾಠವಾಡ, ಬಿಹಾರ ಮತ್ತು…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್ ಹುದ್ದೆ’ಗಳ ನೇಮಕಾತಿಗೆ ಸಂಬಂಧಿಸಿದಂತೆ ‘ಪೂರ್ವಭಾವಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ:ಪಿಎಸ್ ಸಿ 509/ಇ(1)/2023-24, ದಿನಾಂಕ:26-02-2024ರಂದು ಹೊರಡಿಸಿದ್ದು, ಸದರಿ ಅಧಿಸೂಚನೆಗೆ ದಿನಾಂಕ:02-04-2024ರಂದು ಉಲ್ಲೇಖಿತ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:07-07-2024ರಂದು ನಡೆಸಲು ನಿಗದಿಪಡಿಸಲಾಗಿತ್ತು. ಪ್ರಸ್ತುತ ಸದರಿ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಇ.ಪಿ.ಎಫ್.ಓ. ಪರೀಕ್ಷೆ ಇರುವುದರಿಂದ ಹಾಗೂ ಹಲವಾರು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು. ಮುಂದೂಡುವಂತೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:21-07-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.
ಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತುಮಕೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 13 ರಂದು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಡಿ.ಕೆ. ಸುರೇಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದೆ. ಡಿ.ಕೆ. ಸುರೇಶ್ ಕೋತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು ಹಣದ ದಾಹಕ್ಕೆ ಏನು ಬೇಕಾದ್ರೂ ಅವರು ಮಾಡುತ್ತಾರೆ. ಪ್ರಕೃತಿ ಸಂಪತ್ತು ವಿದೇಶಿಗಳಿಗೆ ಮಾರಾಟ ಮಾಡಿ ಹಣ ಮಾಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.
ನವದೆಹಲಿ: ‘ಇನ್ಸುಲಿನ್’ ಎಂಬ ಹೋಮಿಯೋಪತಿ ಔಷಧಿಯನ್ನು ಮಾರಾಟ ಮಾಡುವ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತದ ಔಷಧ ನಿಯಂತ್ರಕ ಆಯುಷ್ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಆರ್ ಟಿಐ ಉತ್ತರದಲ್ಲಿ ತಿಳಿಸಲಾಗಿದೆ. ಆಯುಷ್ ಸಚಿವಾಲಯದ ಔಷಧ ನೀತಿ ವಿಭಾಗದ ಸಲಹೆಗಾರರಿಗೆ ಬರೆದ ಪತ್ರದಲ್ಲಿ, ಡ್ರಗ್ಸ್ ಕಂಟ್ರೋಲರ್ ಜನರಲ್ ಡಾ.ರಾಜೀವ್ ಸಿಂಗ್ ರಾಘವಾಂಶಿನ್, “ವಿಷಯವು ಆಯುಷ್ ಔಷಧ ವ್ಯವಸ್ಥೆಗೆ ಸಂಬಂಧಿಸಿದೆ, ಈ ವಿಷಯವನ್ನು ಪರಿಶೀಲಿಸಲು ಮತ್ತು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆ, 1940 ಮತ್ತು ಅದರ ಅಡಿಯಲ್ಲಿನ ನಿಯಮಗಳ ಅಡಿಯಲ್ಲಿ ರೂಪಿಸಲಾದ ನಿಬಂಧನೆಗಳ ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲು ನಿಮ್ಮನ್ನು ವಿನಂತಿಸಲಾಗಿದೆ” ಎಂದು ಹೇಳಿದ್ದಾರೆ. ರಾಜಸ್ಥಾನದ ಡ್ರಗ್ಸ್ ಕಂಟ್ರೋಲರ್ಗೆ ನಕಲು ಮಾಡಲಾದ ಡಿಸಿಜಿಐ, “ಡ್ರಗ್ಸ್ ನಿಯಮಗಳು 1945 ರ ನಿಯಮ 106 ಎ (ಸಿ) ಪ್ರಕಾರ: ಒಂದೇ ಪದಾರ್ಥವನ್ನು ಹೊಂದಿರುವ ಯಾವುದೇ ಹೋಮಿಯೋಪತಿ ಔಷಧಿಯು ಅದರ ಲೇಬಲ್ನ ಮಾಲೀಕತ್ವದ ಹೆಸರನ್ನು ಹೊಂದಿರಬಾರದು ಎಂದು ಉಲ್ಲೇಖಿಸುವುದು ಸೂಕ್ತವಾಗಿದೆ” ಎಂದು ಹೇಳಿದೆ. ಕೇರಳ ಮೂಲದ ಆರ್ಟಿಐ…
ಬೆಂಗಳೂರು : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದಾಗಿದೆ. ನೋಂದಣಿಯ ಪ್ರಯೋಜನಗಳು: ಸಾಮಾಜಿಕ ಭದ್ರತೆ ಹಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು. ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ ಒಂದು ವರ್ಷದ ಅವಧಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಪ್ರಯೋಜನ ಪಡೆಯಬಹುದು (ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷ ಪರಿಹಾರ) ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ…
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದೆ. ಹೌದು, ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ.ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ರೂ ಈವರೆಗೆ ಹಣ ಬಾರದಿದ್ದರೆ ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಆಗದೇ ಇದ್ರೆ, ಇಲ್ಲಾ ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಕೂಡಲೇ ಈ ಕೆಲಸವನ್ನು ಮಾಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ದೋಷಗಳಿದ್ದಲ್ಲಿ, ಕೂಡಲೇ ಬ್ಯಾಂಕ್ನಲ್ಲಿ ಹೊಸದಾಗಿ ಖಾತೆಯನ್ನು ತೆರೆಯುವ ಮೂಲಕ ಆ ಬ್ಯಾಂಕ್…
ನವದೆಹಲಿ: ರಾಜಸ್ಥಾನದ ಅಕ್ಲೇರಾ ಪ್ರದೇಶದ ಬಳಿ ಎನ್ಎಚ್ -52 ರಲ್ಲಿ ಭೀಕರ ರಸ್ತೆ ಅಪಘಾತ ವರದಿಯಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಮಾಹಿತಿಯ ಪ್ರಕಾರ, ಮಾರುತಿ ವ್ಯಾನ್ ಮತ್ತು ಟ್ರಾಲಿ ತೀವ್ರವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಮಧ್ಯಪ್ರದೇಶದಿಂದ ಮದುವೆ ಸಮಾರಂಭದಿಂದ ತಮ್ಮ ಮನೆಗೆ ಮರಳುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೃತರೆಲ್ಲರ ಶವಗಳನ್ನು ರಾಜಸ್ಥಾನದ ಬಾಗ್ರಿ ಸಮುದಾಯದ ಡುಂಗರಗಾಂವ್ ಮೂಲದವರು ಎಂದು ಹೇಳಲಾಗಿದ್ದು, ಅಕ್ಲೇರಾ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಅಕ್ಲೇರಾ ಪೊಲೀಸರು ಸ್ಥಳಕ್ಕೆ ತಲುಪಿದ್ದು, ತನಿಖೆ ನಡೆಯುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಪ್ಲಾಸ್ಟಿಕ್ ಗೋದಾಮು ಧಗ ಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಪೇಟೆಯ ಸೇತುರಾವ್ ಸ್ಟ್ರೀಟ್ ಕಟ್ಟಡದಲ್ಲಿ ತಡರಾತ್ರಿ ೩ ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಬಾಲಾಜಿ ಪ್ಲ್ಯಾಸ್ಟಿಕ್ ಬಿಲ್ಡಿಂಗ್ ನ ೩ ನೇ ಅಂತಸ್ತಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಪೇಪರ್ ಪ್ಲೇಟ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಮತ್ತೊಂದು ಜಾಹೀರಾತು ಪ್ರಕಟಿಸಿದೆ. ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ರೂ.ತೆರಿಗೆಯಲ್ಲಿ ಮರಳಿ ಸಿಗುವುದು ಕೇವಲ 13 ರೂ. ಮಾತ್ರ ಎಂದು ಆರೋಪಿಸಿದೆ. ಇಂದಿನ ದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿರುವ ರಾಜ್ಯ ಕಾಂಗ್ರೆಸ್, ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ ₹100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ ₹13 ಮಾತ್ರ. ಈ ಅನ್ಯಾಯ ಎಲ್ಲಿಯವರೆಗೆ ? ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ. ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕರೆ ನೀಡಿದೆ. ಡಬಲ್ ಇಂಜಿನ್ ಸರ್ಕಾರವಿದ್ದಾಗಲೂ ಭದ್ರ ಮೇಲ್ದಂಡೆ ಯೋಜನೆಯಲ್ಲಿ ಒಂದೇ ಒಂದು ಹೆಜ್ಜೆಯ ಪ್ರಗತಿಯಾಗಲಿಲ್ಲ, ಮೂಗಿಗೆ ತುಪ್ಪ ಸವರುವಂತೆ ಬಜೆಟ್ ನಲ್ಲಿ 5,300 ಕೋಟಿ ರೂಪಾಯಿಗಳನ್ನು ಘೋಷಿಸಿ ನಂತರ ಬಿಡುಗಡೆ ಮಾಡದೆ ಕನ್ನಡಿಗರಿಗೆ ಚೊಂಬು ನೀಡಿದೆ BJPChombuSarkara. ಬಿಜೆಪಿ ಕೊಟ್ಟ ಚೊಂಬನ್ನು ಕನ್ನಡಿಗರು ಮರಳಿ ಬಿಜೆಪಿಗೆ ನೀಡಬೇಕಿದೆ.…