Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಭಾರತ ಚುನಾವಣಾ ಆಯೋಗವು ಸೂಚನೆ ನೀಡಿದ್ದು, ಇಂದು ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಲೋಕಸಭಾ ಚುನಾವಣೆ-2024 ರ ಮತದಾನವು ರಾಜ್ಯದಲ್ಲಿ ದಿನಾಂಕ 26.04.2024 ಹಾಗೂ 07.05.2024 ಗಳಂದು ಎರಡು ಹಂತಗಳಲ್ಲಿ ನಡೆಯಲಿದೆ, ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಭಾರತ ಚುನಾವಣಾ ಆಯೋಗವು ಸೂಚಿಸಿರುತ್ತದೆ. ಅದರಂತೆ, ಜಾಗೃತಿ ಮೂಡಿಸುವ ಸಲುವಾಗಿ, “ನಮ್ಮ ನಡೆ ಮತಗಟ್ಟೆಯ ಕಡೆ” ಎಂಬ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ: 21.04.2024 ಹಾಗೂ ಮೂರನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ: 28.04.2024 ರಂದು ಚುನಾವಣಾ ಧ್ವಜಾರೋಹಣ ಕಾರ್ಯಕ್ರಮವನ್ನು ಬೆಳಿಗ್ಗೆ 08:00 ಗಂಟೆಗೆ…
ನವದೆಹಲಿ :ಸಿಆರ್ ಪಿಸಿಯ ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶವನ್ನು ಕೋರಲು ವಿಚ್ಛೇದಿತ ಸಂಗಾತಿಗೆ ವಿವಾಹದ ಕಟ್ಟುನಿಟ್ಟಾದ ಪುರಾವೆ ಅಗತ್ಯವಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಈ ನಿಟ್ಟಿನಲ್ಲಿ ಅನ್ವಯವಾಗುವ ಪುರಾವೆಗಳ ಮಾನದಂಡವು ಸಂಭವನೀಯತೆಗಳಿಗಿಂತ ಹೆಚ್ಚಾಗಿರುತ್ತದೆ” ಎಂದು ನ್ಯಾಯಮೂರ್ತಿ ಹರ್ಪ್ರೀತ್ ಸಿಂಗ್ ಬ್ರಾರ್ ಪ್ರತಿಪಾದಿಸಿದರು. ಗಂಡ ಮತ್ತು ಹೆಂಡತಿಯಾಗಿ ದೀರ್ಘಕಾಲದ ಸಹಜೀವನವು ಸೆಕ್ಷನ್ 125 ರ ಅಡಿಯಲ್ಲಿ ಪಾಲುದಾರರಿಗೆ ಪರಿಹಾರವನ್ನು ನೀಡುತ್ತದೆ, ಮದುವೆಯನ್ನು ನಡೆಸಲು ಅಗತ್ಯ ಸಮಾರಂಭಗಳನ್ನು ನಿರ್ವಹಿಸುವುದು ಸಾಬೀತಾಗದಿದ್ದರೂ ಸಹ ಜೀವನಾಂಶಕ್ಕೆ ಅರ್ಹ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೌಟುಂಬಿಕ ನ್ಯಾಯಾಲಯವು ಹೊರಡಿಸಿದ ಆದೇಶದ ವಿರುದ್ಧ ಪತಿ ಬಯಸಿದ ಪರಿಶೀಲನಾ ಅರ್ಜಿಯ ಮೇರೆಗೆ ಈ ತೀರ್ಪು ಬಂದಿದೆ, ಇದರ ಮೂಲಕ ಸೆಕ್ಷನ್ 125 ರ ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಪತ್ನಿಗೆ ಮಾಸಿಕ 6,000 ರೂ.ಗಳ ಜೀವನಾಂಶವನ್ನು ನೀಡುವ ಮೊದಲು ಅನುಮತಿಸಲಾಗಿದೆ. ನ್ಯಾಯಪೀಠದ ಮುಂದೆ ಹಾಜರಾದ ಅರ್ಜಿದಾರರ ವಕೀಲರು, ಸೆಕ್ಷನ್ 125 ರ ನಿಬಂಧನೆಗಳನ್ನು ಕಾನೂನುಬದ್ಧವಾಗಿ ಮದುವೆಯಾದ…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ, ಮರು ಎಣಿಕೆಗೆ ಇಂದು ರಾತ್ರಿ 12 ಗಂಟೆವರೆಗೆ ಅವಕಾಶ ನೀಡಲಾಗಿದೆ. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿಸಲ್ಲಿಸಲು ದಿನಾಂಕ:20-04-2024ರಂದು ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು, ಸದರಿ ದಿನಾಂಕವನ್ನು ವಿಸ್ತರಿಸಿ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿಸಲ್ಲಿಸಲು ದಿನಾಂಕ:21-04-2024ರ ಭಾನುವಾರ ರಾತ್ರಿ 12.00 ಗಂಟೆಯವರೆಗೆ ಅವಕಾಶ ನೀಡಲಾಗಿದೆ, ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಿಸಕೊಳ್ಳಬಹುದಾಗಿದೆ.
ನವದೆಹಲಿ: ಉತ್ತರ ಪ್ರದೇಶದ ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನ್ವರ್ ಸರ್ವೇಶ್ ಸಿಂಗ್ ದೀರ್ಘಕಾಲದ ಅನಾರೋಗ್ಯದ ನಂತರ ಶನಿವಾರ ನಿಧನರಾದರು. ಸಿಂಗ್ ಸಂಜೆ ೬.೩೦ ರ ಸುಮಾರಿಗೆ ದೆಹಲಿಯ ಏಮ್ಸ್ ನಲ್ಲಿ ನಿಧನರಾದರು. ವಿಶೇಷವೆಂದರೆ, ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮೊರಾದಾಬಾದ್ ಕ್ಷೇತ್ರದಲ್ಲಿ ಶುಕ್ರವಾರ ಮತದಾನ ನಡೆಯಿತು. ಕುನ್ವರ್ ಸರ್ವೇಶ್ ಕುಮಾರ್ ನಿಧನರಾಗಿದ್ದಾರೆ. ಅವರ ಗಂಟಲಿನಲ್ಲಿ ಸ್ವಲ್ಪ ಸಮಸ್ಯೆ ಇತ್ತು ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಿನ್ನೆ ಅವರು ತಪಾಸಣೆಗಾಗಿ ಏಮ್ಸ್ಗೆ ಹೋಗಿದ್ದರು” ಎಂದು ಯುಪಿ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಚೌಧರಿ ತಿಳಿಸಿದ್ದಾರೆ. ಏತನ್ಮಧ್ಯೆ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ. ಅವರ ಬೆಂಬಲಿಗರು ಮತ್ತು ದುಃಖಿತ ಕುಟುಂಬಕ್ಕೆ ಶಕ್ತಿ ನೀಡುವಂತೆ ಅವರು ಪ್ರಾರ್ಥಿಸಿದರು. ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಸಂಸದ ಕುನ್ವರ್ ಸರ್ವೇಶ್ ಸಿಂಗ್ ಜಿ ಅವರ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಇದು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ದುಃಖಿತ ಕುಟುಂಬದೊಂದಿಗೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್ ಹುದ್ದೆ’ಗಳ ನೇಮಕಾತಿಗೆ ಸಂಬಂಧಿಸಿದಂತೆ ‘ಪೂರ್ವಭಾವಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ:ಪಿಎಸ್ ಸಿ 509/ಇ(1)/2023-24, ದಿನಾಂಕ:26-02-2024ರಂದು ಹೊರಡಿಸಿದ್ದು, ಸದರಿ ಅಧಿಸೂಚನೆಗೆ ದಿನಾಂಕ:02-04-2024ರಂದು ಉಲ್ಲೇಖಿತ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:07-07-2024ರಂದು ನಡೆಸಲು ನಿಗದಿಪಡಿಸಲಾಗಿತ್ತು. ಪ್ರಸ್ತುತ ಸದರಿ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಇ.ಪಿ.ಎಫ್.ಓ. ಪರೀಕ್ಷೆ ಇರುವುದರಿಂದ ಹಾಗೂ ಹಲವಾರು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು. ಮುಂದೂಡುವಂತೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:21-07-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.
ಬೆಂಗಳೂರು : ಬಿಜೆಪಿ ಅಳೆದು ತೂಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದರೂ ಅದರಲ್ಲಿರುವುದು ದೊಡ್ಡದಾದ ಖಾಲಿ ಚೊಂಬು ಮಾತ್ರ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರೇ, ಎದೆ ಮೇಲೆ ಕೈಯಿಟ್ಟು ಆತ್ಮಸಾಕ್ಷಿಗೆ ಕಿವಿಕೊಟ್ಟು ಹೇಳಿ, ನೀವು ನಿಜವಾಗಿ ರೈತರ ಹಿತೈಷಿಗಳಾ? ಹಿತಶತ್ರುಗಳಾ? ರೈತರ ಪಾಲಿನ ಮರಣ ಶಾಸನದಂತಿದ್ದ ಕೃಷಿ ಕ್ಷೇತ್ರದ ಐದು ಕರಾಳ ಕಾಯ್ದೆಗಳನ್ನು ಬಲವಂತವಾಗಿ ಜಾರಿಗೊಳಿಸಲು ಪ್ರಯತ್ನಿಸಿದವರು ಯಾರು? ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಪ್ರತಿಭಟನೆಗಿಳಿದ ರೈತರು ದೆಹಲಿಗೆ ಬರದಂತೆ ರಸ್ತೆ ಮೇಲೆ ಮುಳ್ಳು ನೆಟ್ಟು, ಗುಂಡಿ ತೋಡಿ ಹಿಂದಕ್ಕೆ ಓಡಿಸುವ ಕುಟಿಲ ಕಾರಸ್ತಾನಗಳನ್ನು ಮಾಡಿದ್ದು ಯಾರು? ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಲ್ಲಿ ಸುಮಾರು 700 ಅಮಾಯಕರು ಪೊಲೀಸರ ದೌರ್ಜನ್ಯ, ಸರ್ಕಾರದ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡಾಗ ಕನಿಷ್ಠ ಸಂತಾಪವನ್ನೂ ಸೂಚಿಸದ ನಿಮಗೆ ರೈತರ ಸಮ್ಮಾನ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ನಮ್ಮ ರಾಜ್ಯದಲ್ಲಿ ನೆರೆ ಬಂದಾಗ ಬರಲಿಲ್ಲ, ಬರ ಬಿದ್ದಾಗ ಬರಲಿಲ್ಲ, ಬೆಳೆ ಕಳೆದುಕೊಂಡ ಬರಗಾಲ ಪೀಡಿತ…
ಬೆಂಗಳೂರು : 2023-24ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಮುಕ್ತಾಯದವರೆಗೂ ಪ್ರಸ್ತುತ ಅಮಾನತ್ತುಗೊಂಡಿರುವ ಶಿಕ್ಷಕರುಗಳನ್ನು ಸ್ಥಳ ನಿಯುಕ್ತಿಗೊಳಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ವಿಷಯದನ್ವಯ 2023-24ನೇ ಸಾಲಿನ ಶಿಕ್ಷಕರ ವರ್ಗಾವಣೆ ಕುರಿತಂತೆ ಉಲ್ಲೇಖಿತ ಪತ್ರದಲ್ಲಿ ವಿಸ್ತ್ರತವಾದ ಮಾರ್ಗಸೂಚಿ ಸಹಿತ ವೇಳಾಪಟ್ಟಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆದರೆ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮ 2021ರ ನಿಯಮ 3 (1) (i) (ii)(iii), ಗಳ ಉಲ್ಲಂಘನೆಯ ಆರೋಪದಡಿಯಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು 1957ರ ನಿಯಮ-10 (1)(ಡಿ) ರನ್ವಯ ಕೆಲವು ಶಿಕ್ಷಕರುಗಳನ್ನು ಕರ್ತವ್ಯಲೋಪದ ಆರೋಪದಡಿಯಲ್ಲಿ ಆಯಾ ವ್ಯಾಪ್ತಿಯ ಸಕ್ರಮ ಶಿಸ್ತು ಪ್ರಾಧಿಕಾರಿಗಳು ಅಮಾನತ್ತುಗೊಳಿಸಿರುವ ಪ್ರಕರಣಗಳು ಕಂಡುಬಂದಿರುತ್ತದೆ. ಅಲ್ಲದೇ ಕೆಲವು ಉಪನಿರ್ದೇಶಕರುಗಳು ನಿಯಮಬಾಹಿರವಾಗಿ ವ್ಯತಿರಿಕ್ತ ಬೋಧನಾ ವಿಷಯದ ಹುದ್ದೆಗೆ ಮತ್ತು ವರ್ಗಾವಣಾ ಕಾಯ್ದೆಯ ಸೆಕ್ಷನ್-3 ಇರಡಿಯಲ್ಲಿ ವಿವರಿಸಿರುವಂತೆ ಜಿಲ್ಲೆಯಲ್ಲಿ ಅತೀ ಹೆಚ್ಚು ಖಾಲಿ ಹುದ್ದೆಗಳಿರುವ ತಾಲ್ಲೂಕಿಗೆ ಸ್ಥಳ ನಿಯುಕ್ತಿಗೊಳಿಸದೇ ಆಯಾ ವಲಯದಲ್ಲಿನ ಕಡಿಮೆ ಖಾಲಿ ಹುದ್ದೆಗಳಿರುವ…
ಬೆಂಗಳೂರು : ರಾಜ್ಯಾದ್ಯಂತ ಮುಂದಿನ ೨೪ ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ಸೋಮವಾರವು ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ಆರಂಭದ ಮಳೆಗಾಲದಲ್ಲಿ ಕಂಡುಬರಬಹುದಾದ ಗುಡುಗು-ಸಿಡಿಲು ಹಾನಿಯಿಂದ ಸಂರಕ್ಷಣೆಗೆ ಅಗತ್ಯ ಕ್ರಮ ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಕಂಡುಬರುವ ಮಳೆಗಾಲದ ಆರಂಭದ ಹಂತದಲ್ಲಿ ತೀವ್ರತರದ ಗುಡುಗು-ಸಿಡಿಲು ಕಂಡುಬರುವುದು ಸಾಮಾನ್ಯವಾಗಿದ್ದು, ಜೊತೆಗೆ ಬಿರುಸಾಗಿ ಗಾಳಿ ಸಹಿತ ಮಳೆ ಕಂಡುಬರುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಬಯಲು ಪ್ರದೇಶಗಳಲ್ಲಿ, ಗಿಡಗಳ ಕೆಳಗಡೆ ಅಥವಾ ಕಬ್ಬಿಣದಿಂದ ಕೂಡಿರುವ ಕಟ್ಟಡ ಅಥವಾ ಶೆಡ್ಗಳಲ್ಲಿ ಆಶ್ರಯ ಪಡೆಯದೇ ಸೂಕ್ತ ಸ್ಥಳದಲ್ಲಿ ಇದ್ದು, ಜೀವ ಹಾನಿಯನ್ನು ತಪ್ಪಿಸಲು ಸಾರ್ವಜನಿಕರಲ್ಲಿ ಅವರು ವಿನಂತಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯದ ದೃಷ್ಟಿಯಿಂದ ನೀಡುವ ಸಲಹೆಗಳನ್ನು ಅನುಸರಿಸಿ ವಿಪತ್ತಿನಿಂದ ಪಾರಾಗಲು ಕೈಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೈಗೊಳ್ಳಬೇಕಾದ ಕ್ರಮಗಳು: ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ, ಪಕ್ಕದಲ್ಲಿರುವ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಬೇಕು. ತಗ್ಗು ಪ್ರದೇಶ ಇಲ್ಲದೇ ಬಯಲಿನಲ್ಲಿಯೇ ಇರಬೇಕಾದರೆ…
ಮಂಡ್ಯ : 2024-25 ರ ಬಜೆಟ್ ನಲ್ಲೇ ಮುಂದಿನ ವರ್ಷಕ್ಕೆ ಬೇಕಿರುವ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ-2 ಜನಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ಗ್ಯಾರಂಟಿಗಳು ತಾತ್ಕಾಲಿಕ, ಬಿಜೆಪಿಯದ್ದು ಶಾಶ್ವತ ಎಂದು ಹೇಳಿದ್ದಾರೆ. 2024-25 ರ ಬಜೆಟ್ ನಲ್ಲೇ ಮುಂದಿನ ವರ್ಷಕ್ಕೆ ಬೇಕಿರುವ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದರು. ವಿ.ಸಿ ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಜ್ಞರ ಸಮಿತಿ ರಚಿಸಲಾಗಿದೆ. ವರದಿ ಬಂದ ಕೂಡಲೇ ವಿವಿ ಸ್ಥಾಪನೆ ಆರಂಭಿಸಲಾಗುವುದು. ಕೆ.ಆರ್.ಎಸ್ ಉದ್ಯಾನವನವನ್ನು ವಿಶ್ವ ದರ್ಜೆಗೇರಿಸಲು ಪ್ರಯತ್ನ ಮಾಡಲಾಗುವುದು. ವಿಶ್ವೇಶ್ವರಯ್ಯ ನಾಲೆ ಆಧುನೀಕರಣಕ್ಕೆ ಪ್ರಯತ್ನ ಮಾಡಲಾಗುವುದು. ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಅವಧಿಯಲ್ಲಿ ನೀರಾವರಿ , ಲೋಕೋಪಯೋಗಿ, ಕೆರೆ ತುಂಬಿಸುವ ಕೆಲಸಕ್ಕೆ ಅನುದಾನ ಒದಗಿಸಲಾಗಿದೆ ಹಾಗೂ…