Subscribe to Updates
Get the latest creative news from FooBar about art, design and business.
Author: kannadanewsnow57
ಧಾರವಾಡ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು, ಅಸಂಘಟಿತ ಕಾರ್ಮಿಕರಾದ ಹಮಾಲರು, ಚಿಂದಿ ಆಯುವವರು, ಮನೆಗೆಲಸದವರು, ಟೈಲರ್, ಮೆಕ್ಯಾನಿಕ್, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ ಒಟ್ಟು 11 ವರ್ಗಗಳನ್ನು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಆದೇಶಿಸಿದೆ. ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೆÇೀಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ, ಸಭಾ ಭವನ, ಟೆಂಟ್, ಪೆಂಡಾಲ್ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರು, ಅಸಂಘಟಿತ ವಿಕಲಚೇತನ ಕಾರ್ಮಿಕ ಅಲೆಮಾರಿ ಪಂಗಡ ಒಳಗೊಂಡಂತೆ ಒಟ್ಟು 23 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ನೋಂದಾಯಿಸಿ, ಸ್ಮಾರ್ಟ್ ಕಾರ್ಡ್ ವಿತರಿಸಲು ಅನುಮತಿಸಿದೆ. ಅರ್ಹತೆಗಳು: ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆಯಡಿ ಫಲಾನುಭವಿಗಳಾಗಲು, ಕಾರ್ಮಿಕರು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸುವುದಾಗಿ ಘೋಷಿಸಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಫೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. https://twitter.com/KarnatakaVarthe/status/1894273171932762592 ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಬೆಂಬಲ ಬೆಲೆ ಎಷ್ಟು? ಹೈಬ್ರಿಡ್ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3371 ಮಾಲ್ದಂಡಿ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3421 ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ 20 ಕ್ವಿಂಟಾಲ್ ಪ್ರತಿ ರೈತರಿಂದ ಖರೀದಿ ಪ್ರಮಾಣ 150 ಕ್ವಿಂಟಾಲ್ ಮಾರಾಟ ಹೇಗೆ.? ಬಿಳಿಜೋಳ ಬೆಳಗಾರರು ಪ್ರೂಟ್ಸ್ ಐಡಿಯೊಂದಿಗೆ…
ಬೆಂಗಳೂರು: ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1894310215874744673 ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ…
ಪ್ರಯಾಗ್ ರಾಜ್ : ಇಂದು ಫೆಬ್ರವರಿ 26, 2025 ಪ್ರಯಾಗ್ರಾಜ್ ಮಹಾಕುಂಭದ ಕೊನೆಯ ದಿನ, ಮಹಾಶಿವರಾತ್ರಿಯ ಸಂದರ್ಭದಲ್ಲಿ ಕೊನೆಯ ಸ್ನಾನದೊಂದಿಗೆ ಮುಗಿಯಲಿದೆ. ಇಲ್ಲಿಯವರೆಗೆ, 64 ಕೋಟಿ ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ಕಾರ್ಯಕ್ರಮವು ಇಂದು ಮುಕ್ತಾಯಗೊಳ್ಳುವುದರೊಂದಿಗೆ ಈಗಲೂ ಭಾರಿ ಜನಸಂದಣಿ ಸೇರುತ್ತಿದೆ. ಇಲ್ಲಿಯವರೆಗೆ 64 ಕೋಟಿ ಭಕ್ತರು ಪ್ರಯಾಗ್ನಲ್ಲಿ ಸ್ನಾನ ಮಾಡಿದ್ದಾರೆ. ವಾರಾಂತ್ಯದ ನಂತರವೂ ಭಕ್ತರ ಸಂಖ್ಯೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ. ಮಂಗಳವಾರ ಸಂಜೆಯಿಂದ, ಅಂಕಿಅಂಶಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಜನಸಂದಣಿಯನ್ನು ನೋಡಿದ ಆಡಳಿತವು ಸಂಚಾರವನ್ನು ನಿಯಂತ್ರಿಸಲು ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಿನ್ನೆ ಸಂಜೆ 4 ಗಂಟೆಯಿಂದ ಜಾರಿಗೆ ಬರಲಿರುವ ವಾಹನ ರಹಿತ ವಲಯವನ್ನು ಮತ್ತೊಮ್ಮೆ ಘೋಷಿಸಬೇಕಾಯಿತು. ಸಂಗಮದಿಂದ 10 ಕಿ.ಮೀ ದೂರದಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಅಕ್ಷಯ್ ಕುಮಾರ್, ಕತ್ರಿನಾ ಕೈಫ್ ಮತ್ತು ರವೀನಾ ಟಂಡನ್ ಮತ್ತು ಅವರ ಮಗಳು ರಾಶಾ ತಡಾನಿ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಭವ್ಯ…
ಮಹಾ ಶಿವರಾತ್ರಿ ಶಿವ ಭಕ್ತರಿಗೆ ಬಹಳ ವಿಶೇಷವಾದ ದಿನ. ಫೆಬ್ರವರಿ 26 ರ ಇಂದು ಆಚರಿಸಲಾಗುವ ಮಹಾ ಶಿವರಾತ್ರಿಯ ದಿನಾಂಕವು ಪೂಜೆಯನ್ನು ಮಾಡಲು ಸೂಕ್ತ ಸಮಯ. ಉಪವಾಸ ಮಾಡುವುದು ಹೇಗೆ ಮತ್ತು ಮಹಾ ಶಿವರಾತ್ರಿಯ ಮಹತ್ವವನ್ನು ತಿಳಿಯಿರಿ. ಈ ವರ್ಷ (2025) ಮಹಾಶಿವರಾತ್ರಿ ಫೆಬ್ರವರಿ 26 ರ ಬುಧವಾರದಂದು ಬರುತ್ತದೆ. ಚತುರ್ದಶಿ ತಿಥಿ ಆ ದಿನ ಬೆಳಿಗ್ಗೆ 11:08 ಕ್ಕೆ ಪ್ರಾರಂಭವಾಗಿ ಫೆಬ್ರವರಿ 27 ರಂದು ಬೆಳಿಗ್ಗೆ 8:54 ಕ್ಕೆ ಕೊನೆಗೊಳ್ಳುತ್ತದೆ. ೨೬ನೇ ತಾರೀಖಿನಂದು ಉಪವಾಸ ಮಾಡಿ ಜಾಗರಣೆ ಮತ್ತು ಲಿಂಗ ದ್ಭವವನ್ನು ವೀಕ್ಷಿಸಿದ ಭಕ್ತರು 27ನೇ ತಾರೀಖಿನಂದು ಬೆಳಿಗ್ಗೆ 6:48 ರಿಂದ 8.54 ರ ಒಳಗೆ ತಮ್ಮ ಉಪವಾಸವನ್ನು ಕೊನೆಗೊಳಿಸಬೇಕೆಂದು ವಿದ್ವಾಂಸರು ಹೇಳುತ್ತಾರೆ. ಆ ದಿನ (ಫೆಬ್ರವರಿ 26), ಶಿವ ಭಕ್ತರು ದಿನವಿಡೀ ಉಪವಾಸ ಮಾಡುತ್ತಾರೆ, ಜಾಗರಣೆ ಮಾಡುತ್ತಾರೆ ಮತ್ತು ಶಿವನ ಹೆಸರನ್ನು ಜಪಿಸುತ್ತಾರೆ. ಶಿವನಿಗೆ ಅಭಿಷೇಕ ಮಾಡುವುದರ ಜೊತೆಗೆ, ಬಿಲ್ವಾರ್ಚನೆ ಮತ್ತು ರುದ್ರಾಭಿಷೇಕವನ್ನು ಮಾಡಲಾಗುತ್ತದೆ. ಮಹಾ ಶಿವರಾತ್ರಿ 2025…
ಬೆಳಗಾವಿ : ಬೆಳಗಾವಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಪುಂಡರು ಹಲ್ಲೆ ಖಂಡಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾತನಾಡಿದ ಪ್ರವೀಣ್ ಶೆಟ್ಟಿ, ಬೆಳಗಾವಿ ನಮ್ಮದು. ನಮ್ಮ ಕರ್ನಾಟಕದಲ್ಲಿಯೇ ಮರಾಠಿ ಪುಂಡರು, ಎಂಇಎಸ್ ನವರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ತರ್ ಮೇಲೆ ಹಲ್ಲೆ ನಡೆಸಿ, ಮರಾಠಿ ಮಾತನಾಡುವಂತೆ, ಮಹಾರಾಷ್ಟ್ರದ ಪರ ಘೋಷಣೆ ಕೂಗುವ ಹೇಳುತ್ತಿರುವುದು ಉದ್ಧಟತನ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಯಾಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು. ವಿಪಕ್ಷದವರು ಸಲಹೆ ನೀಡಿದರೆ ಚರ್ಚೆ ಮಾಡುವುದಾಗಿ ಈ ವೇಳೆ ಹೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂಪ್ರೇರಿತವಾಗಿ ಅನೇಕ ಜನ ಗ್ಯಾರಂಟಿ ಯೋಜನೆಗಳನ್ನು ಬಿಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು ಸೇರಿದಂತೆ ಬಹಳಷ್ಟು ಜನ ಬಿಟ್ಟಿದ್ದಾರೆ. ಅದನ್ನು ಮುಂದುವರಿದು ಬಡವರಿಗಾಗಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ಕೊಟ್ಟಿದ್ದಾರೆ ಎಂದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆಯ ಬಗ್ಗೆ ಚರ್ಚೆ ಮಾಡಬೇಕು. ನಂತರ ಏನೆಂಬುದು ಗೊತ್ತಾಗಲಿದೆ. ಸಾಧಕ-ಬಾಧಕಗಳನ್ನು ಚರ್ಚಿಸಬೇಕು. ಚುನಾವಣೆ ಸಂದರ್ಭದಲ್ಲಿ ಬರೀ ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಎಂದು ಹೇಳಿರಲಿಲ್ಲ. ಚರ್ಚೆ ಮಾಡಿದ ಮೇಲೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ?…
ಬೆಂಗಳೂರು : ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್ (GAFX) 2025 ಶೃಂಗಸಭೆ ಬೆಳಕು ಚೆಲ್ಲಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಶ್ವದ ನಂ#1 ಎವಿಜಿಸಿ ಕೇಂದ್ರವಾಗಿ ಹಾಗೂ ಮಾಧ್ಯಮ ಮತ್ತು ಮನರಂಜನೆಯ ಕ್ಷೇತ್ರದಲ್ಲಿ ಭಾರತದ ಜಾಗತಿಕ ನಾಯಕತ್ವದ ಹಿಂದಿನ ಚಾಲಕಶಕ್ತಿಯಾಗಿ ಬೆಂಗಳೂರಿನ ಸ್ಥಾನವನ್ನು ಭದ್ರವಾಗಿಸುತ್ತ ಮಹತ್ವದ ಹೆಜ್ಜೆಯಾಗಿದೆ. 20,000ಕ್ಕೂ ಹೆಚ್ಚು ಮಂದಿಯ ನಿರೀಕ್ಷಿತ ಹಾಜರಿಯೊಂದಿಗೆ ಹಿಂದಿನ ಶೃಂಗಸಭೆಯ ಎರಡರಷ್ಟು ಈ ವರ್ಷದ ಶೃಂಗದಲ್ಲಿ ಎವಿಜಿಸಿ-ಎಕ್ಸ್ಆರ್ (AVGC-XR) ಪರಿಸರ ವ್ಯವಸ್ಥೆಯಲ್ಲಿನ ಸೃಷ್ಟಿಕರ್ತರು, ಸ್ಟುಡಿಯೋಗಳು ಮತ್ತು ಉತ್ಸಾಹಿಗಳು ಪಾಲ್ಗೊಳ್ಳಲಿದ್ದು ಇದು ಅತ್ಯಂತ ಪ್ರಭಾವಶಾಲಿಯಾದ ಮೇಳವಾಗಲಿದೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದರು. ಗೆಫೆಕ್ಸ್ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಇಲಾಖೆ ಆಯೋಜಿಸಿರುವ ಭಾರತದ ಪ್ರಧಾನ ಎವಿಜಿಸಿ-ಎಕ್ಸ್ಆರ್ (AVGC-XR) ಸಮ್ಮೇಳನವು (Animation, Visual Effects, Gaming,…
ಬೆಂಗಳೂರು : ರಾಜ್ಯದ 7 ಕೌಶಲ್ಯ ತರಬೇತಿ ಕೇಂದ್ರಗಳು ತಲೆ ಎತ್ತಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್, ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಫೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಬೆಂಬಲ ಬೆಲೆ ಎಷ್ಟು? ಹೈಬ್ರಿಡ್ ಜೋಳ ರೂ.3,371/- (ಪ್ರತಿ ಕ್ವಿಂಟಾಲ್ ಗೆ) ಮಾಲ್ದಂಡಿ ಜೋಳ ರೂ.3,421/- (ಪ್ರತಿ ಕ್ವಿಂಟಾಲ್ಗೆ) ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ : 20 ಕ್ವಿಂಟಾಲ್ ಪ್ರತಿ ರೈತರಿಂದ ಖರೀದಿ ಪ್ರಮಾಣ : 150 ಕ್ವಿಂಟಾಲ್ ಮಾರಾಟ ಹೇಗೆ? ಫೂಟ್ಸ್ ಐ.ಡಿ. ಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿ. ಅಧಾರ್ ಜೋಡಣೆಯಾದ ಎನ್.ಸಿ.ಪಿ.ಐ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿಪಡಿಸಿ.…