Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪ್ರಧಾನಿ ಮೋದಿ ಬರೆದ ಕವಿತೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದೆ. ಅವರ ಕವಿತೆ ಬುಡಕಟ್ಟು ಜನರ ಪರಿಸ್ಥಿತಿ ಮತ್ತು ಹೋರಾಟವನ್ನು ಚಿತ್ರಿಸುತ್ತದೆ. ಅವರು ಈ ಕವಿತೆಯನ್ನು 1983 ರಲ್ಲಿ ಬರೆದರು. ಪ್ರಧಾನಿ ನರೇಂದ್ರ ಮೋದಿ ಈ ಕವಿತೆಯನ್ನು ಬರೆದ ಸನ್ನಿವೇಶವು ತುಂಬಾ ಆಸಕ್ತಿದಾಯಕವಾಗಿದೆ. ನರೇಂದ್ರ ಮೋದಿ ಅವರು ಕೈಬರಹ ಬರೆದಿರುವ ‘ಮಾರುತಿ ಕಿ ಪ್ರಾಣ್ ಪ್ರತಿಷ್ಠಾನ’ ಎಂಬ ಕವಿತೆಯ ಆಯ್ದ ಭಾಗವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಕವಿತೆಯ ಆಯ್ದ ಭಾಗವನ್ನು ಮೋದಿ ಆರ್ಕೈವ್ ಹ್ಯಾಂಡಲ್ ಮುಂದೆ ಎಕ್ಸ್ ನಲ್ಲಿ ಹಂಚಿಕೊಳ್ಳಲಾಗಿದೆ. ಅಲ್ಲಿಂದ ಅದು ವೈರಲ್ ಆಗಲು ಪ್ರಾರಂಭಿಸಿತು. ವೈರಲ್ ಆದ ಪ್ರಧಾನಿ ಮೋದಿ ಬರೆದ ಕವಿತೆ 1983ರಲ್ಲಿ ಆರ್ಎಸ್ಎಸ್ ಸ್ವಯಂಸೇವಕರಾಗಿದ್ದ ಮೋದಿ ಅವರನ್ನು ದಕ್ಷಿಣ ಗುಜರಾತ್ನ ಹನುಮಾನ್ ದೇವಾಲಯದ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿತ್ತು. ಮಾರ್ಗವು ಉದ್ದವಾಗಿತ್ತು ಮತ್ತು ಹಲವಾರು ಕಿಲೋಮೀಟರ್ ಗಳವರೆಗೆ ಯಾವುದೇ ವ್ಯಕ್ತಿ ಗೋಚರಿಸಲಿಲ್ಲ. ಹಳ್ಳಿಗೆ ಹೋಗುವ ದಾರಿಯಲ್ಲಿ, ಸಂಪನ್ಮೂಲಗಳ…
ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ವಾರದಲ್ಲಿ ಐದು ದಿನ ಆಪ್ತರ ಭೇಟಿಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ವಜಾ ಮಾಡಿದೆ. ದೆಹಲಿ ರೋಸ್ ಅವೆನೊಕೋರ್ಟ್ ಗೆ ವಾರದಲ್ಲಿ ಐದು ದಿನ ಆಪ್ತರ ಭೇಟಿಗೆ ಅವಕಾಶ ನೀಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ದೆಹಲಿಯ ರೋಸ್ ಅವೆನ್ಯೊ ಕೊರ್ಟ್ ದೆಹಲಿ ಸಿಎಂ ಕೇಜ್ರಿವಾಲ್ ಗೆ ವಾರದಲ್ಲಿ 2 ದಿನ 2 ಗಂಟೆ ಮಾತ್ರ ಆಪ್ತರ ಭೇಟಿಗೆ ಅವಕಾಶ ನೀಡಿದೆ. ಕೇಜ್ರಿವಾಲ್ ವಾರದಲ್ಲಿ 5 ದಿನ 5 ಗಂಟೆ ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು : ಇಂದು 2024 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಏಪ್ರಿಲ್ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಏಪ್ರಿಲ್ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್ಸೈಟ್ನಲ್ಲಿ ಪ್ರಕಟಿಸಲಿದೆ. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ. ಮರುಮೌಲ್ಯಮಾಪನ 2024 ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಅಧಿಕೃತ ವೆಬ್ಸೈಟ್…
ಬೆಂಗಳೂರು : ದಿನಾಂಕ:01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ ಇಲಾಖೆಯಲ್ಲಿ ರ್ಯನಿರ್ವಹಿಸುತ್ತಿರುವ ಶ್ರೀ/ಶ್ರೀಮತಿ……ದಿನಾಂಕ……. ಪ್ರಪ್ರಥಮವಾಗಿ ಹುದ್ದೆಗೆ ಇಲಾಖೆಯಲ್ಲಿ ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುವ. ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ: ರಂದು ಹೊರಡಿಸಲಾಗಿರುತ್ತದೆ. ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಅರ್ಜಿ ಸಲ್ಲಿಸಬಹುದು. ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ 1. ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ 2. ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ ಪ್ರತಿ 3. ನೇಮಕಾತಿ ಆದೇಶ ದಿನಾಂಕ ಪ್ರತಿ 4. ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ?…
ಜೈಪುರ: ರಾಜಸ್ಥಾನದ ಜೈಪುರದ ದಂಪತಿಗಳು ಮದುವೆಯ ಕಾರ್ಡ್ನಲ್ಲಿ ಪ್ರಧಾನಿ ಮೋದಿಯವರ ಫೋಟೋವನ್ನು ಮುದ್ರಿಸಿದ್ದಾರೆ ಮತ್ತು ‘ಅಬ್ಕಿ ಬಾರ್ 400 ಪಾರ್’ ಎಂಬ ಘೋಷಣೆಯನ್ನು ಬರೆದಿದ್ದಾರೆ. ಈ ಕಾರ್ಡ್ನಲ್ಲಿ ರಾಮ ಮಂದಿರದ ಚಿತ್ರವೂ ಇದೆ. ತಂದೆಯ ಆಜ್ಞೆಯ ಮೇರೆಗೆ, ಮಗ ಮದುವೆ ಕಾರ್ಡ್ ಅನ್ನು ಈ ಶೈಲಿಯಲ್ಲಿ ಮುದ್ರಿಸಲಾಗಿದೆ. ಪ್ರಧಾನಿ ಮೋದಿ ಅವರ ಫೋಟೋ ಮುದ್ರಿಸಲಾಗಿದ್ದು, ಅಬ್ ಕಿ ಬಾರ್ 400 ಪಾರ್ ಎಂದೂ ಬರೆಯಲಾಗಿದೆ. 2018 ರಲ್ಲಿಯೂ ಇಂತಹ ಕಾರ್ಡ್ ಚರ್ಚೆಯ ವಿಷಯವಾಯಿತು. 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಹೆಚ್ಚಿನ ಸಂಖ್ಯೆಯ ಜನರು ಮದುವೆ ಕಾರ್ಡ್ನಲ್ಲಿ ಪ್ರಧಾನಿ ಮೋದಿಯವರ ಫೋಟೋವನ್ನು ಮುದ್ರಿಸಿದ್ದರು ಮತ್ತು ಬಿಜೆಪಿಗೆ ಮತ ಚಲಾಯಿಸುವುದಾಗಿ ಹೇಳಿದ್ದರು. ಮದುವೆಯ ಕಾರ್ಡ್ ಮೂಲಕ ಜನರು ರಫೇಲ್ ಯುದ್ಧ ವಿಮಾನ ಒಪ್ಪಂದ ಮತ್ತು ಸ್ವಚ್ಛ ಭಾರತ ಅಭಿಯಾನವನ್ನು ಬೆಂಬಲಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯ ಮಧ್ಯೆ, ದಕ್ಷಿಣ ಭಾರತದ ರಾಜ್ಯಗಳ ಜನರು ಬಿಜೆಪಿಗೆ ವಿವಾಹ ಕಾರ್ಡ್ಗಳ ಮೂಲಕ ಮತಯಾಚಿಸುತ್ತಿದ್ದಾರೆ. 2024 ರ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಮೂರು ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಥಮ ಹಂತದ ಪರೀಕ್ಷೆಗಳು ಜೂನ್ 7ರಂದು ಬೆಳಗ್ಗೆ 10ರಿಂದ 12ರ ತನಕ ಅಕೌಂಟ್ಸ್ ಲೋಯರ್ (01) ಮತ್ತು ಮಧ್ಯಾಹ್ನ 2ರಿಂದ 4ರ ತನಕ ಜನರಲ್ ಲಾ ವಿಭಾಗ-II (08) ಪರೀಕ್ಷೆ ನಡೆಯಲಿದೆ. ಜೂನ್ 8ರಂದು ಬೆಳಗ್ಗೆ 10ರಿಂದ 12ರ ತನಕ ಅಕೌಂಟ್ಸ್ ಹೈಯರ್-ಪತ್ರಿಕೆ -1 (22/1) ಮತ್ತು ಮಧ್ಯಾಹ್ನ 2ರಿಂದ 4 ಗಂಟೆ ತನಕ ಹೈಯರ್-ಪತ್ರಿಕೆ -2 (22/2) ಪರೀಕ್ಷೆ ಆಯೋಜಿಸಲಾಗಿದೆ. ಜೂನ್ 9ರಂದು ಬೆಳಗ್ಗೆ 10ರಿಂದ 12ರ ತನಕ ಜನರಲ್ ಲಾ ಭಾಗ-I ಪತ್ರಿಕೆ-1 (36/1) ಮತ್ತು ಮಧ್ಯಾಹ್ನ 2ರಿಂದ 4 ಗಂಟೆವರೆಗೆ ಜನರಲ್ ಲಾ ಭಾಗ-I ಪತ್ರಿಕೆ-2 (36/2) ಪರೀಕ್ಷೆ ನಡೆಯಲಿದೆ. ದ್ವಿತೀಯ ಹಂತದ ಪರೀಕ್ಷೆಗಳು ಇನ್ನು ದ್ವಿತೀಯ ಹಂತದ ಪರೀಕ್ಷೆಗಳು ವಿಭಾಗೀಯ ಕೇಂದ್ರಗಳಲ್ಲಿ ಜೂನ್ 11ರಿಂದ 23ರ ತನಕ ಆಯೋಜಿಸಲಾಗಿದೆ. ಬೆಂಗಳೂರು, ಬೆಳಗಾವಿ,…
ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಬೈಕ್ ಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಕಮಲೇಶ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಮಲೇಶ್ ಮೃತಪಟ್ಟಿದ್ದಾರೆ. ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಿರ್ಜಾಪುರ: 2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ ನ ಪ್ರಣಾಳಿಕೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಣ್ಣಿಸಿದ್ದಾರೆ. ಈ ಹೇಳಿಕೆ ಹೊರಬಂದ ನಂತರ ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಹಿರಿಯ ಸಂಸದ ಪ್ರಮೋದ್ ತಿವಾರಿ ಮಾತನಾಡಿ, “ಮೋದಿ ಅವರು ಮುಸ್ಲಿಂ ಲೀಗ್ನೊಂದಿಗೆ ಹಳೆಯ ಸಂಬಂಧವನ್ನು ಹೊಂದಿದ್ದರೆ, ನೀವು ಅವರನ್ನು ನಿಮ್ಮ ತಂದೆಯಂತೆ ನಮಸ್ಕರಿಸುತ್ತಿದ್ದಿರಿ ಎಂದು ಹೇಳಿದರು. https://twitter.com/i/status/1777688830105063930 1940 ರ ದಶಕದಲ್ಲಿ ಬಿಜೆಪಿ ಸಿದ್ಧಾಂತಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಮುಸ್ಲಿಂ ಲೀಗ್ನೊಂದಿಗೆ ಮೈತ್ರಿ ಮಾಡಿಕೊಂಡು ಬಂಗಾಳ ಮತ್ತು ಸಿಂಧ್ನಲ್ಲಿ ಸರ್ಕಾರಗಳನ್ನು ಹೇಗೆ ರಚಿಸಿದರು ಎಂಬುದು ಎಲ್ಲರಿಗೂ ತಿಳಿದಿದೆ. ಬಿಜೆಪಿ ಚುನಾವಣೆಯಲ್ಲಿ ಸೋಲಲು ಪ್ರಾರಂಭಿಸಿದಾಗ, ಅವರು ಹಿಂದೂಗಳು ಮತ್ತು ಮುಸ್ಲಿಮರನ್ನು ನೆನಪಿಸಿಕೊಳ್ಳಲು ಪ್ರಾರಂಭಿಸುತ್ತಾರೆ ಆದರೆ ಅವರು ಇತಿಹಾಸವನ್ನು ಸಹ ನೆನಪಿಟ್ಟುಕೊಳ್ಳಬೇಕು ಎಂದು ಪ್ರಮೋದ್ ತಿವಾರಿ ಹೇಳಿದರು. ಇದಕ್ಕೂ ಮುನ್ನ ಪಿಲಿಭಿತ್ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ,…
ಬೆಂಗಳೂರು : ರಾಜ್ಯಕ್ಕೆ 2,000 ಕೋಟಿ ರೂ. ಬರಪರಿಹಾರ ಬಿಡುಗಡೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿರುವುದು ಸುಳ್ಳು, ರಾಜ್ಯದಲ್ಲಿ ಕೊಡುತ್ತಿರುವ ಅನ್ನಭಾಗ್ಯ, ಮೋದಿ ಅನ್ನಭಾಗ್ಯ, ಕಾಂಗ್ರೆಸ್ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎನ್ನುವ ಆರೋಪದ ನಡುವೆ ಮಾಜಿ ಸಿಎಂ ಹೆ.ಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ ಅವರ ತೋಟಕ್ಕೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಿಡದಿಯ ಸಮೀಪವಿರುವ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇಂದು ಮೈತ್ರಿ ನಾಯಕರಿಂದ ಭೋಜನಾ ಕೂಟ ಆಯೋಜಿಸಲಾಗಿದ್ದು, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಪಕ್ಷದ ಹೆಡ್ಡಾಫೀಸ್ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ Chief Electoral Officer Karnataka ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ…