Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ಅವರು ಘರ್ ವಾಪ್ಸಿಯಾಗುವುದು ನಿಶ್ಚಿತವಾಗಿದ್ದು, ಇಂದು ಪದಾಧಿಕಾರಿಗಳು, ಬೆಂಬಗಲಿರೊಂದಿಗೆ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ಇಂದು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಈ ಸಂಬಂಧ ತಮ್ಮ ನಿವಾಸದಲ್ಲಿ ಸಭೆ ನಡೆಸಿದಂತ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಶಾಸಕ ಜನಾರ್ಧನರೆಡ್ಡಿ ಅವರು, ಬಿಜೆಪಿ ಪಕ್ಷದೊಂದಿಗೆ ಕೆ ಆರ್ ಪಿ ಪಿ ಪಕ್ಷ ವಿಲೀನಕ್ಕೆ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಹೀಗಾಗಿ ಸೋಮವಾರ ಬಿಜೆಪಿ ಪಕ್ಷದೊಂದಿಗೆ ಕೆ ಆರ್ ಪಿಪಿ ಪಕ್ಷವನ್ನು ವೀಲನಗೊಳಿಸೋದಾಗಿ ತಿಳಿಸಿದರು. ಸೋಮವಾರ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸುವುದರ ಜೊತೆಗೆ, ಪದಾಧಿಕಾರಿಗಳು, ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ತಾವು ಸೇರ್ಪಡೆಯಾಗಲಿದ್ದೇನೆ. ಬೆಳಿಗ್ಗೆ 10 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರೋದಾಗಿ ತಿಳಿಸಿದರು.
ಬೆಂಗಳೂರು : ಮಾರ್ಚ್ 25 ರಿಂದ 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕ ಪರೀಕ್ಷೆ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದಿನಾಂಕ: 25.03.2024 ರಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಗಳಿರುವ ದಿನಾಂಕ:25.03.2024 ರ ಸೋಮವಾರ ಮತ್ತು 27.03.2024 ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ : 26.03.2024 ರ ಮಂಗಳವಾರ ಮತ್ತು 28.03.2024 ರ ಗುರುವಾರದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ.
ನವದೆಹಲಿ : ಮಾರ್ಚ್ 25 ರ ಇಂದು ದೇಶಾದ್ಯಂತ ಹೋಳಿ ಆಚರಿಸಲಾಗುತ್ತಿದೆ. ಈ ಸಮಯದಲ್ಲಿ ನೂರು ವರ್ಷಗಳ ನಂತರ, ಹೋಳಿಯಲ್ಲಿ ಚಂದ್ರ ಗ್ರಹಣ ಸಂಭವಿಸಲಿದೆ. ಭಾರತದಲ್ಲಿ ಚಂದ್ರಗ್ರಹಣ ಗೋಚರಿಸದ ಕಾರಣ ಇದು ಯಾವುದೇ ಪರಿಣಾಮ ಬೀರುವುದಿಲ್ಲ. 2024 ರ ಮೊದಲ ಚಂದ್ರಗ್ರಹಣವು ಇಂದು ಸಂಭವಿಸಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಇಂದು ಹೋಳಿ ಹಬ್ಬ ಬಂದಿರುವುದರಿಂದ ಅದರ ಮಹತ್ವವನ್ನು ಹೆಚ್ಚಿಸುತ್ತದೆ. ಗ್ರಹಣವು ಮಾರ್ಚ್ 25 ರಂದು ಬೆಳಗ್ಗೆ 10:24 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 3:01 ಕ್ಕೆ ಕೊನೆಗೊಳ್ಳಲಿದೆ. ಅಮೆರಿಕ, ಜಪಾನ್, ರಷ್ಯಾ, ಐರ್ಲೆಂಡ್, ಇಂಗ್ಲೆಂಡ್, ಸ್ಪೇನ್, ಪೋರ್ಚುಗಲ್, ಇಟಲಿ, ಜರ್ಮನಿ, ಫ್ರಾನ್ಸ್, ಹಾಲೆಂಡ್, ಬೆಲ್ಜಿಯಂ, ದಕ್ಷಿಣ ನಾರ್ವೆ ಮತ್ತು ಸ್ವಿಟ್ಜರ್ಲೆಂಡ್ನಲ್ಲಿ ಈ ಚಂದ್ರಗ್ರಹಣ ಗೋಚರಿಸಲಿದೆ. ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಈಗಾಗಲೇ ಹೇಳಿದಂತೆ, 2024 ರಲ್ಲಿ ನಾಲ್ಕು ಗ್ರಹಣಗಳು ಸಂಭವಿಸಲಿವೆ. ಮೊದಲ ಚಂದ್ರಗ್ರಹಣ ಮಾರ್ಚ್ 25 ರ ಸೋಮವಾರ ಸಂಭವಿಸಲಿದೆ. ಎರಡನೇ ಚಂದ್ರಗ್ರಹಣ ಸೆಪ್ಟೆಂಬರ್ 18 ರ ಬುಧವಾರ ಸಂಭವಿಸಲಿದ್ದು, ಮೊದಲ ಸೂರ್ಯಗ್ರಹಣವು ಏಪ್ರಿಲ್…
ಆರೋಗ್ಯ ಎನ್ನುವುದು ಎಲ್ಲರಿಗೂ ಮುಖ್ಯವಾಗಿರುತ್ತದೆ. ದೇಹ ಸುಸ್ಥಿತಿಯಲ್ಲಿದ್ದರೆ ಮಾತ್ರ ದಿನನಿತ್ಯದ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಸಾಧ್ಯ. ಅದು ಮಕ್ಕಳ ವಿಷಯದಲ್ಲಿಯೂ ಅನ್ವಯವಾಗುತ್ತದೆ. ಈಗಂತೂ ಸಾಂಕ್ರಾಮಿಕ ಕಾಯಿಲೆಗಳಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳುವದು ತುಸು ಕಷ್ಟದ ಕೆಲಸವೇ ಸರಿ. ಇತ್ತೀಚೆಗೆ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಆದರೂ ಆತಂಕ ಮಾತ್ರ ಕಡಿಮೆಯಾಗಿಲ್ಲ. ಕಚೇರಿಗಳು ಆನ್ಲೈನ್ ಕೆಲಸಕ್ಕೆ ಅಂತ್ಯ ಹಾಡಿ ಆಫೀಸ್ಗೆ ಉದ್ಯೋಗಿಗಳನ್ನು ಕರೆಸಿಕೊಳ್ಳುತ್ತಿದೆ. ಅದೇ ರೀತಿ ಶಾಲೆಗಳೂ ಕೂಡ ಮಕ್ಕಳಿಗೆ ಆನ್ಲೈನ್ ಬದಲಿಗೆ ಭೌತಿಕವಾಗಿ ಪಾಠಮಾಡಲು ಆರಂಭಿಸಿವೆ. ಆದರೆ ಸಮಸ್ಯೆ ಎಂದರೆ ಶಾಲೆಗೆ ಹೋಗುವ ಮಕ್ಕಳು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುವುದು. ಅದಕ್ಕೆ ಹಲವು ಕಾರಣಗಳಿದೆ. ಆಹಾರ, ಜೀವನ ಶೈಲಿ ಒಂದು ರೀತಿಯಲ್ಲಿ ಕಾರಣವಾದರೆ ಮಕ್ಕಳು ಇರುವ ವಾತಾವರಣ ಕೂಡ ಆರೋಗ್ಯ ಹಾಳಾಗಲು ಕಾರಣವಾಗುತ್ತದೆ. ಇದನ್ನು ಹೊರತುಪಡಿಸಿ ಇನ್ನೂಂದಿಷ್ಟು ಕಾರಣಗಳಿಂದ ಮಕ್ಕಳು ಆಗಾಗ ಹುಷಾರಿಲ್ಲದಂತೆ ಆಗುತ್ತಾರೆ. ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಶಾಲೆಗೆ ಹೋಗುವ ಗಡಿಬಿಡಿಯಲ್ಲಿ ಸರಿಯಾಗಿ ಆಹಾರ ತಿನ್ನದೇ ಇರುವುದು, ಪೌಷ್ಟಿಕಾಂಶಗಳ ಕೊರತೆ…
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 111 ಅಭ್ಯರ್ಥಿಗಳ ಹೆಸರುಗಳಿವೆ. ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಟಿಕೆಟ್ ನೀಡಿದ್ದು, ಅರುಣ್ ಗೋವಿಲ್ ಅವರನ್ನು ಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಈ ಬಾರಿ ಪಿಲಿಭಿತ್ ನಿಂದ ಹಾಲಿ ಸಂಸದ ವರುಣ್ ಗಾಂಧಿ ಅವರ ಟಿಕೆಟ್ ಅನ್ನು ಪಕ್ಷ ಕಡಿತಗೊಳಿಸಿದೆ. ಗಾಜಿಯಾಬಾದ್ ಕ್ಷೇತ್ರದಿಂದ ವರುಣ್ ಗಾಂಧಿ ಬದಲಿಗೆ ಜಿತಿನ್ ಪ್ರಸಾದ್ ಮತ್ತು ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್ ಬದಲಿಗೆ ಅತುಲ್ ಗರ್ಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಜನರಲ್ ವಿ.ಕೆ.ಸಿಂಗ್ ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದರು. ಉತ್ತರ ಪ್ರದೇಶದ 13 ಲೋಕಸಭಾ ಕ್ಷೇತ್ರಗಳು, ಆಂಧ್ರಪ್ರದೇಶದ 6, ಬಿಹಾರದ 17, ಗೋವಾದ 1, ಗುಜರಾತ್ ನ 6, ಹರಿಯಾಣದ 4, ಹಿಮಾಚಲ ಪ್ರದೇಶದ 2, ಜಾರ್ಖಂಡ್ ನ 3, ಕರ್ನಾಟಕ…
ಬೆಂಗಳೂರು : ರಾಜ್ಯಾದ್ಯಂತ ಮಾ.25 ರ ಇಂದಿನಿಂದ ಏ.06 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಈ ಆದೇಶವು ಎಸ್ಎಸ್ಎಲ್ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಕ.ರಾ.ರ.ಸಾ.ನಿಗಮವು, ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024…
ಬೆಂಗಳೂರು : ಮಾರ್ಚ್ 25 ರ ಇಂದಿನಿಂದ ಎಸ್ ಎಸ್ ಎಲ್ ಸಿ (SSLC Exam) ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್ 6 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಒಂದೇ ಪಾಳಿಯಲ್ಲಿ ನಡೆಯಲಿವೆ. ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆಗೆ 8.9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 4.5 ಲಕ್ಷ ವಿದ್ಯಾರ್ಥಿಗಳು ಮತ್ತು 4.3 ಲಕ್ಷ ವಿದ್ಯಾರ್ಥಿನಿಯರು ಎಂದು ಕರ್ನಾಟಕ ಶಾಲಾ ಮಂಡಳಿ ತಿಳಿಸಿದೆ. ಪರೀಕ್ಷೆಯ ಎಲ್ಲಾ ದಿನಗಳಲ್ಲಿ ಮೂಲ ಕರ್ನಾಟಕ ಎಸ್ಎಸ್ಎಲ್ಸಿ ಪ್ರವೇಶ ಪತ್ರ 2024 ಅನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯಬೇಕು. ಕರ್ನಾಟಕ ಎಸ್ಎಸ್ಎಲ್ಸಿ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದ್ದು, ಇದರಿಂದ ಶಾಲೆಗಳು ವಿದ್ಯಾರ್ಥಿಗಳ ವಿವರಗಳನ್ನು sslc.karnataka.gov.in ಅಥವಾ kseab.karnataka.gov.in ಪರಿಶೀಲಿಸಬಹುದು. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ…
ತೂಕವನ್ನು ಸುಲಭ ರೀತಿಯಲ್ಲಿ ಕಡಿಮೆ ಮಾಡಿಕೊಳ್ಳಲು ಸರಳವಾದ ಉಪಾಯವೆಂದರೆ ಅದು, ತಾಜಾ ರಸಭರಿತ ಹಣ್ಣುಗಳನ್ನು ಸೇವನೆ ಮಾಡುವುದು. ಬೇಸಿಗೆ ಕಾಲವು ಹಣ್ಣುಗಳನ್ನು ಅಥವಾ ಹಣ್ಣಿನ ರಸವನ್ನು ಯಥೇಚ್ಚವಾಗಿ ಸೇವನೆ ಮಾಡಲು ಪ್ರೇರೇಪಿಸುತ್ತದೆ. ಬೇಸಿಗೆ ಕಾಲದಲ್ಲಿ ವೈವಿಧ್ಯಮಯವಾದ ಹಣ್ಣುಗಳು ಮಾರುಕಟ್ಟೆಯಲ್ಲಿ ದೊರೆಯುತ್ತವೆ. ನಾರಿನಂಶ ಹೆಚ್ಚಾಗಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ತೂಕ ಇಳಿಕೆ ಮಾಡಿಕೊಳ್ಳಲು ಸುಲಭವಾದ ದಾರಿಯಾಗಿದೆ. ಏಕೆಂದರೆ ಇಂತಹ ಹಣ್ಣುಗಳು ಪದೇ ಪದೇ ಹಸಿವಾಗುವುದನ್ನು ತಪ್ಪಿಸುವುದರ ಜೊತೆಗೆ ಕ್ಯಾಲೋರಿ ಭರಿತವಾದ ಆಹಾರವನ್ನು ತಿನ್ನುವುದನ್ನು ನಿಯಂತ್ರಿಸುತ್ತದೆ. ಒಟ್ಟಾರೆ ಈ ಕೆಳಗಿನ ಹಣ್ಣುಗಳು ನಿಮ್ಮ ತೂಕ ಇಳಿಕೆಗೆ ಸಹಾಯಕಾರಿಯಾಗಿದೆ. ಕೆಂಪು ಬಣ್ಣದ ರಸಭರಿತ ಕಲ್ಲಂಗಡಿ ಹಣ್ಣು ಬೇಸಿಗೆಯ ದಾಹವನ್ನು ತಣಿಸುತ್ತದೆ. ಈ ಋತುಮಾನದಲ್ಲಿ ಹೆಚ್ಚಾಗಿ ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಕಲ್ಲಂಗಡಿಯನ್ನು ‘ಬೇಸಿಗೆಯ ಹಣ್ಣು’ ಎಂದೇ ಕರೆಯಲಾಗುತ್ತದೆ. ಇದು ದೇಹವನ್ನು ರಿಫ್ರೆಶ್ಗೊಳಿಸುವುದು ಮಾತ್ರವಲ್ಲದೆ, ತಂಪಾಗಿಸುತ್ತದೆ. ಕಲ್ಲಂಗಡಿಯಲ್ಲಿ ಫೈಬರ್, ವಿಟಮಿನ್ ಸಿ, ವಿಟಮಿನ್ ಎ, ಮೆಗ್ನೀಸಿಯಮ್, ಪೊಟ್ಯಾಶಿಯಮ್ ಮತ್ತು ಆಂಟಿಆಕ್ಸಿಡೆಂಟ್, ಲೈಕೋಪೀನ್ಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಸುಮಾರು…
ವಾತಾವರಣವು ತಂಪಾಗಿರುವಾಗ ನಾಲಿಗೆ ರುಚಿಕರವಾದ ಹಾಗೂ ಬಿಸಿಬಿಸಿಯಾದ ಖಾದ್ಯವನ್ನು ಸವಿಯಲು ಬಯಸುವುದು. ಅದರಲ್ಲೂ ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟಕ್ಕೆ ರುಚಿಕರವಾದ ಮತ್ತು ಬಿಸಿಯಾದ ಅನ್ನ ರಸಮ್ ವಿಶೇಷ ತೃಪ್ತಿ ಭಾವನೆ ನೀಡುತ್ತವೆ. ಮಳೆಗಾಲದ ಈ ಚಳಿಗೆ ನಿಮ್ಮ ಆರೋಗ್ಯವನ್ನು ಬೆಚ್ಚಗಿಡಲು ನಿಂಬು ಮತ್ತು ಶುಂಠಿ ಮಿಶ್ರಿತ ರಸಮ್ ಸಹಾಯ ಮಾಡುವುದು.ಹುಳಿ, ಸಿಹಿ ಮತ್ತು ಖಾರದ ಮಿಶ್ರಣದಲ್ಲಿ ತಯಾರಿಸಲಾಗುವ ಈ ರಸಮ್ ಅನ್ನು ಅನ್ನದ ಜೊತೆ ಸವಿಯಬಹುದು. ಇಲ್ಲವೇ ನೀವು ಬಯಸುವುದಾದರೆ ಬಿಸಿಬಿಸಿ ಇರುವಾಗ ಕಷಯಾಯದ ರೂಪದಲ್ಲಿಯೂ ಕುಡಿಯಬಹುದು. ಗಂಟಲ ಕೆರತ ಅಥವಾ ಶೀತದ ಸಮಸ್ಯೆ ಇದ್ದರೆ ಒಳ್ಳೆಯ ಉಪಶಮನ ದೊರೆಯುವುದು. ಸುಲಭ ಹಾಗೂ ಸರಳ ವಿಧಾನದಲ್ಲಿ ಹೇಗೆ ತಯಾರಿಸುವುದು ಎನ್ನುವುದನ್ನು ಇಲ್ಲಿ ನೋಡಿ.. ಪ್ರಮುಖ ಸಾಮಗ್ರಿ 2 ಕಪ್ ಮಸೂರ್ ದಾಲ್ 2 ಚಮಚ ತುಪ್ಪ ಅಗತ್ಯಕ್ಕೆ ತಕ್ಕಷ್ಟು ಸಾಸಿವೆ 1 ಚಮಚ ಜೀರಿಗೆ 1 ಚಮಚ ಕರಿಮೆಣಸು 1 – ನಿಂಬೆಹಣ್ಣು 1 – ಟೊಮೆಟೋ 3 ಇಂಚುಗಳು…
ಬೆಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದಿನಾಂಕ: 25.03.2024 ರಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಗಳಿರುವ ದಿನಾಂಕ:25.03.2024 ರ ಸೋಮವಾರ ಮತ್ತು 27.03.2024 ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ:26.03.2024 ರ ಮಂಗಳವಾರ ಮತ್ತು 28.03.2024 ರ ಗುರುವಾರದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ.