Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ಪ್ರಸ್ತಾವನೆ ಬಗ್ಗೆ ಎಫ್ ಕೆ ಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ 1 ರೂಪಾಯಿ ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆಗೆ ಸಾವರ್ಜನಿಕರು, ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು (1 ಟ್ರಿಪ್): ರೈಲು ಸಂಖ್ಯೆ 06249 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ.ಮತ್ತೆ ಮರಳುವಾಗ, ರೈಲು ಸಂಖ್ಯೆ 06250 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 1, 2025 ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು 16 ಬೋಗಿಗಳನ್ನು (10 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ…
ಇತ್ತೀಚಿನ ದಿನಗಳಲ್ಲಿ ಅಕ್ರಮ ಸಂಬಂಧಗಳ ಘಟನೆಗಳು ತೀವ್ರವಾಗಿ ಹೆಚ್ಚುತ್ತಿವೆ. ತನ್ನ ಗಂಡನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವತಿಯನ್ನು ಮಹಿಳೆಯೊಬ್ಬರು ಹೊಡೆದಿದ್ದಾಳೆ. ಈ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ (ಡಿ) ನರಸಿಪಟ್ಟಣದ ಪುರಸಭೆ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.ತನ್ನ ಗಂಡನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕಾಗಿ ಯುವತಿಯೊಬ್ಬಳನ್ನು ಹೆಂಡತಿ ಥಳಿಸಿದ್ದಾಳೆ. ಯುವತಿ ತನ್ನ ಗಂಡನಿಂದ ದೂರವಿರಲು ಎಷ್ಟೇ ಹೇಳಿದರೂ ಕೇಳಲಿಲ್ಲ. ಸುತ್ತಮುತ್ತಲಿನ ಜನರು ಅವಳನ್ನು ತಡೆದರೂ, ಅವಳು ಕೇಳದೆ ಯುವತಿ ಮೇಲೆ ಹಲ್ಲೆ ಮಾಡಿದಳು. ಇದಕ್ಕೆ ಸಂಬಂಧಿಸಿದ ವೀಡಿಯೊ ವೈರಲ್ ಆಗುತ್ತಿದೆ. https://twitter.com/ChotaNewsApp/status/1967077215079985311?ref_src=twsrc%5Etfw%7Ctwcamp%5Etweetembed%7Ctwterm%5E1967077215079985311%7Ctwgr%5Ed425d99039a9d02d2a2106b594be31b38c2f4dc3%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%3Fmode%3Dpwalangchange%3Dtrue
ಬೆಂಗಳೂರು : : ಭಾರತದ 3ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ: ಹುದ್ದೆಗಳ ಸಂಖ್ಯೆ ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )- 800 ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)- 500 ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)- 125 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.09.2025 ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಣಕ್ಕೆ ಸಂಬಂಧಿಸಿದ ಆಸೆಗಳನ್ನು ಈಡೇರಿಸಲು ಕುಲದೇವತೆಯ ಪೂಜೆ. ಈ ಜಗತ್ತಿನಲ್ಲಿ ಹಣವು ಅತ್ಯಂತ ಮುಖ್ಯವಾದ ವಿಷಯ. ಜನರು ಮನಸ್ಸನ್ನು ನೋಡುವುದಕ್ಕಿಂತ ಹಣವನ್ನು ಹೆಚ್ಚು ನೋಡುತ್ತಾರೆ ಮತ್ತು ಅದಕ್ಕೆ ತಕ್ಕಂತೆ ಮೌಲ್ಯ ಮತ್ತು ಗೌರವವನ್ನು ನೀಡುತ್ತಾರೆ. ಆ ಅರ್ಥದಲ್ಲಿ, ಹಣವು ಬಹಳ ಮಹತ್ವದ್ದಾಗಿದೆ. ನಾವು ಯಾವುದೇ ಕ್ರಮ ತೆಗೆದುಕೊಂಡರೂ, ಆ ಕ್ರಿಯೆಯ ಹಿಂದೆ ಹಣ ಯಾವಾಗಲೂ ಇರುತ್ತದೆ. ಅಂತಹ ಹಣವನ್ನು ಪಡೆಯಲು, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಹಣಕ್ಕೆ ಸಂಬಂಧಿಸಿದ ಆಸೆಗಳನ್ನು ಪೂರೈಸಲು, ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ಕುಟುಂಬ ದೇವತೆಯ ದೇವಾಲಯದಲ್ಲಿ ಮಾಡಬೇಕಾದ ಸರಳ ದೀಪ ಪೂಜೆಯನ್ನು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…
ಅಮೆರಿಕದ ನ್ಯೂಯಾರ್ಕ್ನ ಲಾಂಗ್ ಐಲ್ಯಾಂಡ್ನಲ್ಲಿರುವ ಸನ್ರೈಸ್ ಹೆದ್ದಾರಿಯಲ್ಲಿ ನಡೆದ ಘಟನೆಯ ಆಘಾತಕಾರಿ ವೀಡಿಯೊ ವೈರಲ್ ಆಗುತ್ತಿದೆ. ಇತ್ತೀಚೆಗೆ, ಈ ಹೆದ್ದಾರಿಯಲ್ಲಿ ಒಂದು ಕಾರು ಗಾಳಿಯಲ್ಲಿ ಹಾರಿಹೋಯಿತು. ಅದು ಗಾಳಿಯಲ್ಲಿ ಹಾರಿ, ರಸ್ತೆಯ ಗೆರೆಗಳನ್ನು ದಾಟಿತು. ಈ ಆಘಾತಕಾರಿ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸೆಪ್ಟೆಂಬರ್ 3 ರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಲಾಂಗ್ ಐಲ್ಯಾಂಡ್ನ ಸನ್ರೈಸ್ ಹೆದ್ದಾರಿಯಲ್ಲಿ ಸಾಕಷ್ಟು ಸಂಚಾರ ಇದ್ದಾಗ ಅಪಘಾತ ಸಂಭವಿಸಿದೆ. ವೀಡಿಯೊದಲ್ಲಿ, ರಸ್ತೆ ದಾಟುವಾಗ ಕಾರು ಗಾಳಿಯಲ್ಲಿ ಹಾರುತ್ತಿರುವುದನ್ನು ಕಾಣಬಹುದು. ಈ ಘಟನೆಗೆ ಕಾರಣ ಚಾಲಕನಿಗೆ ಹೃದಯಾಘಾತ ಎಂದು ಹೇಳಲಾಗುತ್ತದೆ, ಇದರಿಂದಾಗಿ ಚಾಲಕ ಕಾರಿನ ಸಮತೋಲನವನ್ನು ಕಳೆದುಕೊಂಡನು, ಇದರಿಂದಾಗಿ ಕಾರು ಗಾಳಿಯಲ್ಲಿ ಹಾರಿ ಸನ್ರೈಸ್ ಹೆದ್ದಾರಿಯ ಆರು ಪಥಗಳನ್ನು ದಾಟಿ, ಇನ್ನೊಂದು ಬದಿಗೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದು ಗಮನಾರ್ಹ. ಬೇರೆ ಯಾವುದೇ…
ದಕ್ಷಿಣ ಕನ್ನಡ : ಧರ್ಮಸ್ಥಳ ಪ್ರಕರಣದಲ್ಲಿ ದಾಳಿ ತಪ್ಪಿಸೋ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಾಗಿದೆ. ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೌಜನ್ಯಳನ್ನು ಆಕೆಯ ಮಾವ ವಿಠ್ಠಲಗೌಡನೇ ಕೊಂದಿದ್ದಾನೆಂದು ಸ್ನೇಹಮತಿ ಕೃಷ್ಣ ಆರೋಪಿಸಿದ್ದರು. ಈಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಹಾಸನ: ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನ ಸಾವುನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಕ್ಯಾಂಟರ್ ಚಾಲಕ ಭುವನೇಶ್ ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ನ್ಯಾಯಾಧೀಶರ ಮುಂದೆ ಭವನೇಶ್ ನನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ನಾಗಮಂಗಲದ ಬೆಳ್ಳೂರು ಆಸ್ಪತ್ರೆಗೆ ಭುವನೇಶ್ ನನ್ನು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಚಾಲಕ ಮದ್ಯಪಾನ ಮಾಡಿದ್ದಾನೆ ಎಂದು ಪರೀಕ್ಷಿಸಲು ರಕ್ತದ ಮಾದರಿ ಸಂಗ್ರಹಿಸಿದ್ದು, ಇಂದು ಚಾಲಕ ಭುವನೇಶ್ ಬ್ಲಡ್ ರಿಪೋರ್ಟ್ ಬರುವ ಸಾಧ್ಯತೆ ಇದೆ. ಕ್ಯಾಂಟರ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು : ವಿಧಾನಸೌಧದ ಮುಂದೆ ಅನುಮತಿ ಇಲ್ಲದೆ ಸಿನಿಮಾ ಪ್ರಮೋಷನ್ ಮಾಡುತ್ತಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಧಾನಸೌಧದ ಮುಂದೆ `ಹಳೇ ಸನ್ಯಾಸಿ ಕಂಗ್ರಾಜುಲೇಷನ್ಸ್ ಬ್ರದರ್’ ಎಂಬ ಚಿತ್ರದ ಟೈಟಲ್ ಅನ್ನು ಮದ್ಯದ ಬಾಟಲಿ ಮೇಲೆ ಬರೆದು ಪ್ರಮೋಷನ್ ಮಾಡುತ್ತಿದ್ದ ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಸಿನಿಮಾ ಪ್ರಮೋಷನ್ ಹಿನ್ನೆಲೆಯಲ್ಲಿ ಅಪರಿಚಿತರ ವಿರುದ್ಧ ದೂರು ದಾಖಲಾಗಿದೆ.
ಹಾಸನ : ಹಾಸನ ಕ್ಯಾಂಟರ್ ದುರಂತ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಕ್ಯಾಂಟರ್ ಹರಿದು 10 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಇಂದು ಹೆಚ್.ಡಿ.ದೇವೇಗೌಡರು ಭೇಟಿ ನೀಡಿದ್ದು, ಈ ವೇಳೆ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 10 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 10 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ…









