Subscribe to Updates
Get the latest creative news from FooBar about art, design and business.
Author: kannadanewsnow57
ಹಾಸನ: ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನ ಸಾವುನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಕ್ಯಾಂಟರ್ ಚಾಲಕ ಭುವನೇಶ್ ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ನ್ಯಾಯಾಧೀಶರ ಮುಂದೆ ಭವನೇಶ್ ನನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ನಾಗಮಂಗಲದ ಬೆಳ್ಳೂರು ಆಸ್ಪತ್ರೆಗೆ ಭುವನೇಶ್ ನನ್ನು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಚಾಲಕ ಮದ್ಯಪಾನ ಮಾಡಿದ್ದಾನೆ ಎಂದು ಪರೀಕ್ಷಿಸಲು ರಕ್ತದ ಮಾದರಿ ಸಂಗ್ರಹಿಸಿದ್ದು, ಇಂದು ಚಾಲಕ ಭುವನೇಶ್ ಬ್ಲಡ್ ರಿಪೋರ್ಟ್ ಬರುವ ಸಾಧ್ಯತೆ ಇದೆ. ಕ್ಯಾಂಟರ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು : ವಿಧಾನಸೌಧದ ಮುಂದೆ ಅನುಮತಿ ಇಲ್ಲದೆ ಸಿನಿಮಾ ಪ್ರಮೋಷನ್ ಮಾಡುತ್ತಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಧಾನಸೌಧದ ಮುಂದೆ `ಹಳೇ ಸನ್ಯಾಸಿ ಕಂಗ್ರಾಜುಲೇಷನ್ಸ್ ಬ್ರದರ್’ ಎಂಬ ಚಿತ್ರದ ಟೈಟಲ್ ಅನ್ನು ಮದ್ಯದ ಬಾಟಲಿ ಮೇಲೆ ಬರೆದು ಪ್ರಮೋಷನ್ ಮಾಡುತ್ತಿದ್ದ ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಸಿನಿಮಾ ಪ್ರಮೋಷನ್ ಹಿನ್ನೆಲೆಯಲ್ಲಿ ಅಪರಿಚಿತರ ವಿರುದ್ಧ ದೂರು ದಾಖಲಾಗಿದೆ.
ಹಾಸನ : ಹಾಸನ ಕ್ಯಾಂಟರ್ ದುರಂತ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಕ್ಯಾಂಟರ್ ಹರಿದು 10 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಇಂದು ಹೆಚ್.ಡಿ.ದೇವೇಗೌಡರು ಭೇಟಿ ನೀಡಿದ್ದು, ಈ ವೇಳೆ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 10 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 10 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ…
ಅತಿಯಾದ ಫೋನ್ ಬಳಕೆಯಿಂದಾಗಿ 20 ವರ್ಷದ ಯುವತಿಯ ಕುತ್ತಿಗೆ 60 ವರ್ಷದ ಮಹಿಳೆಯ ಕುತ್ತಿಗೆಯಂತೆ ಬಾಗಿದ್ದು, ಅವಳನ್ನು ಪರೀಕ್ಷಿಸಿದ ವೈದ್ಯರು. ಇದು ಅತಿಯಾದ ಫೋನ್ ಬಳಕೆಯಿಂದಾಗಿ ಎಂದು ತೀರ್ಮಾನಿಸಿದ್ದಾರೆ. ಪದೇ ಪದೇ ಫೋಣ್ ನೋಡುವ ಯುವತಿಗೆ ಆಗಾಗ್ಗೆ ತಲೆನೋವು ಬರುತ್ತಿತ್ತು. ಜೊತೆಗೆ ಅವಳ ಕುತ್ತಿಗೆ ಬಾಗುತ್ತಿತ್ತು. ವೈದ್ಯರು ತುರ್ತಾಗಿ ಸಿಟಿ ಸ್ಕ್ಯಾನ್ ಮಾಡಿದಾಗ. ಅದು ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿತು. ಅವಳ ಗರ್ಭಕಂಠದ ಬೆನ್ನುಮೂಳೆಯು ತನ್ನ ನೈಸರ್ಗಿಕ ಆಕಾರವನ್ನು ಕಳೆದುಕೊಂಡಿತ್ತು. ಮತ್ತು ಕೆಲವು ಪ್ರದೇಶಗಳಲ್ಲಿ ಕಶೇರುಖಂಡಗಳು ಜಾರಿಬೀಳುವ ಲಕ್ಷಣಗಳನ್ನು ಸಹ ವೈದ್ಯರು ಕಂಡುಕೊಂಡರು. ‘ಟೆಕ್ಸ್ಟ್ ನೆಕ್’ ಎಂದು ಕರೆಯಲ್ಪಡುವ ಅವಳ ಸ್ಥಿತಿಯು ಅಕಾಲಿಕ ಗರ್ಭಕಂಠದ ಕ್ಷೀಣತೆಯ ಮುಂಚಿನ ಎಚ್ಚರಿಕೆ ಸಂಕೇತವಾಗಿದೆ ಎಂದು ಅವರು ಹೇಳಿದರು. ಇದರ ಬಗ್ಗೆ ಮಾತನಾಡುತ್ತಾ, ತೈವಾನೀಸ್ ವೈದ್ಯರು ಅವಳ ಸ್ಥಿತಿ. ಇಂದಿನ ಯುವಜನತೆ ಎದುರಿಸುತ್ತಿರುವ ಸಮಸ್ಯೆಯಾಗಿದೆ. ‘ಅವರು ಪ್ರತಿದಿನ ಗಂಟೆಗಟ್ಟಲೆ ತಮ್ಮ ಫೋನ್ಗಳನ್ನು ನೋಡುತ್ತಾ, ಕಾರ್ಯಕ್ರಮಗಳನ್ನು ನೋಡುತ್ತಾ ಮತ್ತು ಆಟಗಳನ್ನು ಆಡುತ್ತಾ ಕಳೆಯುತ್ತಾರೆ. ಆದರೆ ಅವರ ದೇಹವು ನೋವಿನಿಂದ…
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಘರ್ಷಣೆಯಲ್ಲಿ 19 ಸೈನಿಕರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, 45 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನಿ ಸೇನೆ ಹೇಳಿಕೊಂಡಿದೆ. ಭಯೋತ್ಪಾದಕರ ವಿರುದ್ಧ ಸಂಪೂರ್ಣ ಬಲದಿಂದ ಪ್ರತಿಕ್ರಿಯಿಸುವ ಬಗ್ಗೆ ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಮಾತನಾಡಿದರು. ಸೆಪ್ಟೆಂಬರ್ 10 ರಿಂದ 13 ರವರೆಗೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮೂರು ವಿಭಿನ್ನ ಭಾಗಗಳಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 45 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ರೇಡಿಯೋ ಪಾಕಿಸ್ತಾನ ವರದಿಯ ಪ್ರಕಾರ, ಪ್ರಧಾನಿ ಶಹಬಾಜ್ ಷರೀಫ್ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ಬಾನು ಅವರನ್ನು ಭೇಟಿ ಮಾಡಿ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದರು. ಭಯೋತ್ಪಾದನೆಯ ವಿರುದ್ಧ ಪಾಕಿಸ್ತಾನದ ಅಭಿಯಾನವು ಪೂರ್ಣ ಬಲದಿಂದ ಮುಂದುವರಿಯುತ್ತದೆ ಮತ್ತು ಯಾವುದೇ ರಾಜಿ ಅಥವಾ ಅಸ್ಪಷ್ಟತೆಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪಾಕಿಸ್ತಾನದಲ್ಲಿ ದಾಳಿಗಳಿಗೆ ಕಾರಣವಾದ ಭಯೋತ್ಪಾದಕ ನಾಯಕರು ಮತ್ತು ಮಾಸ್ಟರ್ ಮೈಂಡ್ಗಳು ಅಫ್ಘಾನ್ ಮಣ್ಣಿನಿಂದ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಶಹಬಾಜ್ ಷರೀಫ್ ಆರೋಪಿಸಿದ್ದಾರೆ.…
ನವದೆಹಲಿ : ಡಿಜಿಟಲ್ ಪಾವತಿಗಳನ್ನ ಹೆಚ್ಚು ಸುಲಭವಾಗಿ ಮತ್ತು ವೇಗವಾಗಿ ಮಾಡುವ ಪ್ರಯತ್ನದಲ್ಲಿ, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಬಂಡವಾಳ ಮಾರುಕಟ್ಟೆ ಹೂಡಿಕೆಗಳು, ವಿಮಾ ಕಂತುಗಳು, ಕ್ರೆಡಿಟ್ ಕಾರ್ಡ್ ಬಿಲ್’ಗಳು, ಪ್ರಯಾಣ ಮತ್ತು ಸರ್ಕಾರಿ ಪಾವತಿಗಳಂತಹ ಆಯ್ದ ವ್ಯಾಪಾರಿ ವರ್ಗಗಳಿಗೆ ಈ ಬದಲಾವಣೆ ಅನ್ವಯಿಸುತ್ತದೆ. ಮಾಸಿಕ ಮಿತಿಯನ್ನ ಕ್ಯಾಲೆಂಡರ್ ತಿಂಗಳ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ, ಪ್ರತಿ ವರ್ಗಕ್ಕೂ ವಿಭಿನ್ನ ಮಿತಿಗಳು ಅನ್ವಯವಾಗುತ್ತವೆ. P2P (ವ್ಯಕ್ತಿಯಿಂದ ವ್ಯಕ್ತಿಗೆ) ವರ್ಗಾವಣೆಗಳು ದಿನಕ್ಕೆ 1 ಲಕ್ಷ ರೂ.ಗಳಲ್ಲಿ ಬದಲಾಗದೆ ಉಳಿಯುತ್ತವೆ. ಇನ್ನು ಮುಂದೆ, UPI ಮೂಲಕ 24 ಗಂಟೆಗಳ ಒಳಗೆ 10 ಲಕ್ಷ ರೂ. ವರೆಗಿನ ವಹಿವಾಟುಗಳನ್ನ ಮಾಡಬಹುದು. ವಿಶೇಷವಾಗಿ ತೆರಿಗೆ ಪಾವತಿ ಮತ್ತು ಇತರ ಹಣಕಾಸು ಸೇವೆಗಳಿಗೆ ಸಂಬಂಧಿಸಿದ ವರ್ಗಗಳಿಗೆ ಈ ಬದಲಾವಣೆ ಮಾಡಲಾಗಿದೆ. ಈ ಹೊಸ ವ್ಯವಸ್ಥೆಯು ಸೆಪ್ಟೆಂಬರ್ 15, 2025ರಿಂದ ಜಾರಿಗೆ ಬರಲಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕವನ್ನ ಗಮನದಲ್ಲಿಟ್ಟುಕೊಂಡು NPCI…
ಮೊದಲು ಬಂದ ಸಂದೇಶಗಳಿಗೂ ಈಗ ಬರುತ್ತಿರುವ ಸಂದೇಶಗಳಿಗೂ ದೊಡ್ಡ ವ್ಯತ್ಯಾಸವಿದೆ ಎಂದು ನೀವು ಗಮನಿಸಿದ್ದೀರಾ? ಹೌದು.. ಸೈಬರ್ ಅಪರಾಧಗಳು ಮೊದಲಿಗಿಂತ ಹೆಚ್ಚಾಗಿವೆ ಎಂದು ತಿಳಿದಿದೆ, ಸರಿಯೇ? ಈ ಸೈಬರ್ ಅಪರಾಧಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಭಾಗವಾಗಿ, ಕೆಲವು ವ್ಯವಹಾರ ಸಂಬಂಧಿತ ಕಂಪನಿಗಳು ಮಾಡಿದ ಜಾಹೀರಾತುಗಳು, ಸರ್ಕಾರದಿಂದ ಬಂದ ಸಂದೇಶಗಳು ಮತ್ತು ಇತರ ಅಗತ್ಯಗಳ ಆಧಾರದ ಮೇಲೆ SMS ಬರುತ್ತಿದೆ. ಆದಾಗ್ಯೂ, ಇವುಗಳಲ್ಲಿ ಯಾವುದು ನಿಜ..? ಯಾವುದು ಸುಳ್ಳು..? ನಿರ್ಧರಿಸುವುದು ತುಂಬಾ ಕಷ್ಟ. ಮತ್ತು ಸಂದೇಶಗಳನ್ನು ಪರಿಶೀಲಿಸಲು ನಾವು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು.. ಇತ್ತೀಚಿನ ದಿನಗಳಲ್ಲಿ ನಮ್ಮ ಮೊಬೈಲ್ ಫೋನ್ಗೆ ಬರುತ್ತಿರುವ SMS ವಿಳಾಸದ ಕೊನೆಯಲ್ಲಿ S, G, T, P ನಂತಹ ಅಕ್ಷರಗಳನ್ನು ನೀವು ಗಮನಿಸಿದ್ದೀರಾ? ಅವು ಏಕೆ ಇವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇಲ್ಲ.. ವಾಸ್ತವವಾಗಿ, ಸೈಬರ್ ಅಪರಾಧಗಳನ್ನು ತಡೆಗಟ್ಟಲು, SMS ಕಳುಹಿಸುವ ಕಂಪನಿಗಳು ಮೊದಲು TRAI DLT ವ್ಯವಸ್ಥೆಯ ಮೂಲಕ ನೋಂದಾಯಿಸಿಕೊಳ್ಳಬೇಕು.…
2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟರಿಯೊಂದಿಗೆ ರೂ.20/- ಗಳ ಛಾಪಾ ಕಾಗದ, ಬ್ಯಾಂಕ್ ಪಾಸ್ ಬುಕ್, ಆರ್.ಟಿ.ಜಿ.ಎಸ್. ಪತ್ರಗಳನ್ನು ಸಲ್ಲಿಸಬೇಕು. ಎಫ್ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ರೈತರು ಈಗಾಗಲೇ ಎಫ್ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್ಐಡಿಗೆ ಜೋಡಣೆ ಮಾಡಿಕೊಳ್ಳಬೇಕು. ಆಸಕ್ತ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಒಳನಾಡಿನಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ,ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೊಣಕನಹಳ್ಳಿ ಗ್ರಾಮದಲ್ಲಿ ಶಿವು (32), ಮಕ್ಕಳಾದ ಚಂದ್ರಕಲಾ (11), ಉದಯ್ ಸೂರ್ಯ (7) ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು, ಪತಿಯನ್ನು ಕೊಂದ ಬಳಿಕ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,ಪರಿಶೀಲನೆ ನಡೆಸಿದ್ದಾರೆ. ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…












