Author: kannadanewsnow57

ಬೆಂಗಳೂರು : ರ್ಯಾಗಿಂಗ್, ಡ್ರಗ್ಸ್ ಸೇವನೆ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಮಹತ್ವದ ಆದೇಶ ಹೊರಡಿಸಿದೆ. ಹೌದು, ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲ ಪದವಿ, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರಾಗಿಂಗ್ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿಇದರ ನಿಯಂತ್ರಣಕ್ಕೆ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಇನ್ನು ಈಗಾಗಲೇ ಸಿಸಿಟಿವಿ ಅಳವಡಿಕೆ ಆಗಿರುವ ಕಾಲೇಜುಗಳಲ್ಲಿ ಅವುಗಳ ಕಾರ್ಯನಿರ್ವ ಹಿಸುತ್ತಿರುವ ವಿವರಗಳನ್ನು ಜು.21ರೊಳಗೆ ಮಾಹಿತಿ ಒದಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿನ ಎಲ್ಲ ಕಡೆ 1200 ಚದರಡಿ ನಿವೇಶನಗಳಲ್ಲಿ ಇರುವ ಮೂರು ಅಂತಸ್ತಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದಕ್ಕೆ ವಿನಾಯಿತಿ ನೀಡಲು ನಗರಾಭಿವೃದ್ಧಿ ಇಲಾಖೆ ತೀರ್ಮಾನಿಸಿದೆ. ಕಟ್ಟಡ ನಿರ್ಮಾಣ ಪ್ರಮಾಣ ಪತ್ರ, ಸ್ವಾಧಿನಾನುಭವ ಪ್ರಮಾಣ ಪತ್ರ ಇಲ್ಲದ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಕಲ್ಪಿಸದಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ಲಕ್ಷಾಂತರ ಕಟ್ಟಡ ಮಾಲೀಕರು ತೊಂದರೆಗೆ ಸಿಲುಕಿದ್ದಾರೆ. ಅವರ ನೆರವಿಗೆ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ. ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ (ಜಿಬಿಎ)– 2024, ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 (ಕೆಎಂಸಿ ಕಾಯ್ದೆ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಾದರಿ ಕಟ್ಟಡ ಬೈ–ಲಾಗಳನ್ನು ತಿದ್ದುಪಡಿ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. 1200 ಚದರಡಿ ವಿಸ್ತೀರ್ಣದ ನಿವೇಶನದಲ್ಲಿ ನೆಲ ಅಂತಸ್ತು + ಎರಡು ಅಂತಸ್ತು ಅಥವಾ ಸ್ಟಿಲ್ಟ್‌ + ಮೂರು ಅಂತಸ್ತಿನವರೆಗಿನ…

Read More

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಗೆರೆಯಲ್ಲಿ ನವಜಾತ ಶಿಶುವಿಗೆ ಹೃದಯಾ ಘಾತವಾಗಿದ್ದು, ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿಶು ಆರೋಗ್ಯವಾಗಿದೆ.  ರಾಜ್ಯದಲ್ಲಿ ಹೃದಯಾಘಾತದಿಂದ ನಿನ್ನೆ ಒಂದೇ ದಿನ 5 ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ 26ರ ಯುವತಿ, ಸವಣೂರಲ್ಲಿ 25ರ ಯುವಕ ಸೇರಿ ನಿನ್ನೆ 5 ಜನ ಹೃದಯಾ ಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದ 26 ವರ್ಷದ ಮಹಿಳೆ ಮಂಜುಳಾ ಹೂಗಾರ(26) ಹೃದಯಾಘಾತದಿಂದಬುಧವಾರಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (37), ಮಂಡ್ಯದ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು ಮೀಸಿ (63) ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಆರಂಭ ದಿನಾಂಕ: ಜುಲೈ 08, 2025 ಕೊನೆಯ ದಿನಾಂಕ: ಜುಲೈ 31, 2025 (ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ) ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ *…

Read More

ಬೆಂಗಳೂರು: ಛಾಪಾ ಕಾಗದ (ಇ-ಸ್ಟಾಂಪಿಂಗ್) ಬದಲಿಗೆ ಡಿಜಿಟಲ್ ಇ-ಸ್ಟ್ಯಾಂಪಿಂಗ್ ವಿತರಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ 2025ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.  ರಾಜ್ಯ ಸರ್ಕಾರ ಇ-ಸ್ಟ್ಯಾಂಪಿಂಗ್ ವ್ಯವಸ್ಥೆಯಲ್ಲಿನ ದೋಷ ಸರಿಪಡಿಸಲು ಮತ್ತು ವಂಚನೆಗಳನ್ನು ತಡೆಯಲು ಸ್ಟಾಂಪ್ (ತಿದ್ದುಪಡಿ) ವಿಧೇಯಕ 2025 ಜಾರಿಗೆ ತಂದಿದೆ. ಈ ಹಿಂದೆ ಇ-ಸ್ಟಾಂಪಿಂಗ್ ಛಾಪಾ ಕಾಗದಗಳನ್ನು ಬಳಸಲಾಗುತ್ತಿತ್ತು, ಆದರೆ ಇನ್ನು ಮುಂದೆ ಡಿಜಿಟಲ್ ಇ-ಸ್ಟಾಂಪಿಂಗ್ ವ್ಯವಸ್ಥೆ ಬಳಸಬಹುದಾಗಿದೆ. ಬ್ಯಾಂಕ್ ಚಲನ್ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ. ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟಾಂಪ್ ಶುಲ್ಕ ಪಾವತಿಸಲು ನೂತನ ವಿಧೇಯಕ ಅವಕಾಶ ಕಲ್ಪಿಸಿದೆ. ವಿದ್ಯುನ್ಮಾನ ವಿಧಾನಗಳ ಮೂಲಕ ಸ್ಟ್ಯಾಂಪ್ ಶುಲ್ಕ ಪಾವತಿಸಲು ನೂತನ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿಧಾನಸಭೆಯಲ್ಲಿ ಈ ವಿಧಯಕವನ್ನು ಮಂಡಿಸಿ ಮಾರ್ಚ್ 19ರಂದು ಒಪ್ಪಿಗೆ ಪಡೆದುಕೊಳ್ಳಲಾಗಿತ್ತು. ಇದೀಗ ರಾಜ್ಯಪಾಲರ ಅನುಮೋದನೆಯೊಂದಿಗೆ ಕಾನೂನು ರೂಪ ಪಡೆದುಕೊಂಡಿದೆ. ಕರ್ನಾಟಕ ಸ್ಟ್ಯಾಂಪ್ ಅಧಿನಿಯಮ, 1957 (1957 ರ…

Read More

ರಾಜ್ಯಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನ ಬೇಗೆ ಕಡಿಮೆಯಾಗಿದೆ. ಈ ಬಾರಿ ನಿರೀಕ್ಷೆಗಿಂತ ಮೊದಲೇ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇಸಿಗೆಯಿಂದ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತೆ ಕಂಡರೂ, ಮಳೆಗಾಲದಲ್ಲಿ ಅನೇಕ ರೋಗಗಳು ಹರಡುವ ಸಾಧ್ಯತೆ ಹೆಚ್ಚು. ಅದರಲ್ಲೂ ಡೆಂಗ್ಯೂ ಹರಡುವಿಕೆ ಹೆಚ್ಚು. ಈ ಸಮಯದಲ್ಲಿ ಡೆಂಗ್ಯೂ ಹರಡಲು ಕಾರಣಗಳು, ಅದನ್ನು ಹೇಗೆ ತಡೆಗಟ್ಟುವುದು ಮತ್ತು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ನೋಡೋಣ. ಡೆಂಗ್ಯೂ ಹರಡಲು ಕಾರಣಗಳು… ಡೆಂಗ್ಯೂ ಸೊಳ್ಳೆಗಳಿಂದ ಹರಡುವ ಒಂದು ವೈರಸ್ ಕಾಯಿಲೆ. ಮಳೆಗಾಲದಲ್ಲಿ ಇದರ ಹರಡುವಿಕೆ ಹೆಚ್ಚು ಎಂದು ತಜ್ಞರು ಹೇಳುತ್ತಾರೆ. ಮಳೆಯಿಂದಾಗಿ, ಹೂವಿನ ಕುಂಡಗಳು, ಹಳ್ಳಗಳು ಮತ್ತು ಕಸದ ತೊಟ್ಟಿಗಳಲ್ಲಿ ನೀರು ಸಂಗ್ರಹವಾಗುತ್ತದೆ. ಅವುಗಳ ಜೊತೆಗೆ, ಒಳಚರಂಡಿ ಮತ್ತು ಶುಚಿತ್ವವನ್ನು ಕಾಪಾಡಿಕೊಳ್ಳದ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಗಳು ಬೇಗನೆ ಹರಡುತ್ತವೆ. ಅವು ವೇಗವಾಗಿ ಸಂತಾನೋತ್ಪತ್ತಿ ಮಾಡುತ್ತವೆ ಮತ್ತು ಆರ್ದ್ರ ವಾತಾವರಣದಲ್ಲಿ ಹೆಚ್ಚು ಕಾಲ ಬದುಕುತ್ತವೆ. ಇದರಿಂದ ಡೆಂಗ್ಯೂ ಹರಡುವಿಕೆ ಹೆಚ್ಚಾಗುತ್ತದೆ. ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು.. ಮನೆಯ…

Read More

ಇಂದಿನ ಕಾಲದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಇರುವ ಅರ್ಧದಷ್ಟು ಜನರಿಗೆ ರೀಲ್ಗಳ ಜ್ವರವಿದ್ದು, ಈ ಜ್ವರ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ ಅವರು ಎಲ್ಲೇ ಹೋದ್ರೂ ರೀಲ್ಸ್ ಮಾಡುತ್ತಾರೆ.ಕೆಲವರು ಸಾರ್ವಜನಿಕ ಸ್ಥಳಗಳಿಗೆ ಹೋಗಿ ರೀಲ್ಗಳನ್ನು ಮಾಡುತ್ತಿದ್ದಾರೆ, ಆದರೆ ಕೆಲವರು ಅಪಾಯಕಾರಿ ಸ್ಟಂಟ್ಗಳನ್ನು ಮಾಡುತ್ತಾ ರೀಲ್ಗಳನ್ನು ಮಾಡುತ್ತಿದ್ದಾರೆ. ಅನೇಕ ಜನರು ಪರ್ವತಗಳಿಗೆ ಹೋಗಿ ಅಪಾಯಕಾರಿ ಸ್ಥಳಗಳಲ್ಲಿ ನಿಂತು ರೀಲ್ಗಳನ್ನು ಮಾಡುತ್ತಾರೆ, ಆದ್ದರಿಂದ ಈಗ ಕೆಲವರು ದೇವಸ್ಥಾನಕ್ಕೂ ಹೋಗಿ ರೀಲ್ಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಅಂತಹ ಒಂದು ವೀಡಿಯೊ ಇದೀಗ ವೈರಲ್ ಆಗುತ್ತಿದೆ, ಅದನ್ನು ನೋಡಿದ ನಂತರ ನೀವು ಸಹ ಕೋಪಗೊಳ್ಳುತ್ತೀರಿ. ನಂತರ ವೀಡಿಯೊದ ಬಗ್ಗೆ ಹೇಳೋಣ. ನೀವು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರೆ, ಇತ್ತೀಚಿನ ದಿನಗಳಲ್ಲಿ ಜನರು ‘ತಡ್ಪಾವೋಗೆ, ತಡ್ಪಾ ಲೋ’ ಎಂಬ ಹಳೆಯ ಹಾಡಿನ ಬಹಳಷ್ಟು ರೀಲ್ಗಳನ್ನು ಮಾಡುತ್ತಿದ್ದಾರೆ ಎಂದು ನಿಮಗೆ ತಿಳಿಯುತ್ತದೆ. ಈ ಹಾಡಿನಲ್ಲಿ ನೀವು ಹಲವು ರೀತಿಯ ರೀಲ್ಗಳನ್ನು ನೋಡಿರಬೇಕು, ಆದರೆ ಈಗ ಈ ರೀಲ್ ರೋಗವು ದೇವಾಲಯದೊಳಗೆ ತಲುಪಿದೆ. ಈ ವಿಡಿಯೋದಲ್ಲಿ,…

Read More

ಬೆಂಗಳೂರು: ಕೋವಿಡ್ ಉಸಿರಾಟದ ತೊಂದರೆಯನ್ನು ಉಂಟುಮಾಡಿದ್ದಲ್ಲದೆ, ರೋಗಿಗಳ ಮೇಲೆ ನರವೈಜ್ಞಾನಿಕ ಪರಿಣಾಮವನ್ನೂ ಬೀರಿರಬಹುದು ಎಂದು ನಿಮ್ಹಾನ್ಸ್ನ ಇತ್ತೀಚಿನ ಅಧ್ಯಯನವೊಂದು ತಿಳಿಸಿದೆ. 2020 ರ ಮಾರ್ಚ್ನಿಂದ ಸೆಪ್ಟೆಂಬರ್ವರೆಗಿನ ಕೋವಿಡ್ ಸಮಯದಲ್ಲಿ 3,200 ರೋಗಿಗಳು ಭಾಗವಹಿಸಿದ್ದ ಈ ಅಧ್ಯಯನದಲ್ಲಿ, 120 ಕೋವಿಡ್ ರೋಗಿಗಳು ಮೌಲ್ಯಮಾಪನ ಮಾಡಿದಾಗ ನರವೈಜ್ಞಾನಿಕ ಅಸ್ವಸ್ಥತೆಗಳನ್ನು ವರದಿ ಮಾಡಿದ್ದಾರೆ ಎಂದು ಸೂಚಿಸಲಾಗಿದೆ. ವರದಿಯಾದ ನರವೈಜ್ಞಾನಿಕ ಪರಿಸ್ಥಿತಿಗಳಲ್ಲಿ 43 ಪಾರ್ಶ್ವವಾಯು ಪ್ರಕರಣಗಳು, 23 ಎನ್ಸೆಫಲೋಪತಿ (ಮೆದುಳಿನ ರಚನೆ ಅಥವಾ ಕಾರ್ಯದ ಮೇಲೆ ಪರಿಣಾಮ ಬೀರುವ ಕಾಯಿಲೆ), 5 ಮೆನಿಂಗೊಎನ್ಸೆಫಾಲಿಟಿಸ್ (ಮೆದುಳು ಮತ್ತು ಮೆದುಳು ಮತ್ತು ಬೆನ್ನುಹುರಿಯ ಸುತ್ತಲಿನ ಪೊರೆಗಳ ಉರಿಯೂತ), 5 ರೋಗಗ್ರಸ್ತವಾಗುವಿಕೆಗಳು, 7 ತಲೆನೋವು ಮತ್ತು 10 ಗುಯಿಲಿನ್-ಬಾರ್ ಸಿಂಡ್ರೋಮ್ (ನರಗಳ ಉರಿಯೂತಕ್ಕೆ ಕಾರಣವಾಗುವ ಅಪರೂಪದ ಸ್ವಯಂ ನಿರೋಧಕ ಸ್ಥಿತಿ) ಪ್ರಕರಣಗಳು ಸೇರಿವೆ. ಉಳಿದ 20 ರೋಗಿಗಳು ಮೊದಲೇ ಅಸ್ತಿತ್ವದಲ್ಲಿರುವ ನರವೈಜ್ಞಾನಿಕ ಕಾಯಿಲೆಗಳನ್ನು ಹೊಂದಿದ್ದರು ಮತ್ತು ಅವರ ನರವೈಜ್ಞಾನಿಕ ಸ್ಥಿತಿಗಳ ಹದಗೆಡುತ್ತಿರುವ ಲಕ್ಷಣಗಳನ್ನು ತೋರಿಸಿದರು. ಅಧ್ಯಯನದಲ್ಲಿ, ನಿಮ್ಹಾನ್ಸ್ನ ನರವಿಜ್ಞಾನ ಪ್ರಾಧ್ಯಾಪಕಿ ಸಂಶೋಧಕಿ…

Read More

ಭವಿಷ್ಯ ನಿಧಿ (PF) ಅನ್ನು ಉದ್ಯೋಗಿ ಮತ್ತು ಉದ್ಯೋಗದಾತರಿಂದ ಮಾಸಿಕ ಕೊಡುಗೆಗಳ ಮೂಲಕ ನಿರ್ಮಿಸಲಾಗಿದೆ. ಸರ್ಕಾರಿ ಬೆಂಬಲಿತ ದೀರ್ಘಾವಧಿಯ ಉಳಿತಾಯ ಯೋಜನೆಯಾಗಿರುವುದರಿಂದ, ಇದು ವಾರ್ಷಿಕ ಬಡ್ಡಿಯನ್ನು ಗಳಿಸುತ್ತದೆ, ಅದು ಕಾಲಾನಂತರದಲ್ಲಿ ಗಮನಾರ್ಹ ಕಾರ್ಪಸ್ ಆಗಿ ಸಂಯೋಜಿಸಲ್ಪಡುತ್ತದೆ. ಅನಾರೋಗ್ಯ ಅಥವಾ ಉದ್ಯೋಗ ನಷ್ಟದಂತಹ ತುರ್ತು ಸಂದರ್ಭಗಳಲ್ಲಿ ಇದು ಆರ್ಥಿಕ ಸುರಕ್ಷತಾ ಜಾಲವಾಗಿಯೂ ಕಾರ್ಯನಿರ್ವಹಿಸುತ್ತದೆ. ನಿಮ್ಮ PF ಬ್ಯಾಲೆನ್ಸ್ ಅನ್ನು ಪರಿಶೀಲಿಸಲು ನೀವು ಇನ್ನು ಮುಂದೆ EPFO ವೆಬ್ಸೈಟ್ ತೆರೆಯುವ ಅಗತ್ಯವಿಲ್ಲ ಅಥವಾ ಯಾವುದೇ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡುವ ಅಗತ್ಯವಿಲ್ಲ. ಈ ಪರ್ಯಾಯ ವಿಧಾನಗಳು ಸರಳ, ತ್ವರಿತ ಮತ್ತು ಸಂಪೂರ್ಣವಾಗಿ ಉಚಿತವಾಗಿದ್ದು, ಸರ್ವರ್ ಡೌನ್ಟೈಮ್ ಸಮಯದಲ್ಲಿ ಅವುಗಳನ್ನು ಸೂಕ್ತವಾಗಿಸುತ್ತದೆ. SMS ಮೂಲಕ ನಿಮ್ಮ PF ಬ್ಯಾಲೆನ್ಸ್ ಅನ್ನು ಪರಿಶೀಲಿಸಲು, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 7738299899 ಗೆ “EPFOHO UAN HIN” ಸ್ವರೂಪದಲ್ಲಿ ಸಂದೇಶವನ್ನು ಕಳುಹಿಸಿ. ಇಲ್ಲಿ, “UAN” ನಿಮ್ಮ ಸಾರ್ವತ್ರಿಕ ಖಾತೆ ಸಂಖ್ಯೆ, ಮತ್ತು “HIN” ಭಾಷೆಯನ್ನು ಸೂಚಿಸುತ್ತದೆ. SMS ಸೇವೆಯು…

Read More

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಆರಂಭ ದಿನಾಂಕ: ಜುಲೈ 08, 2025 ಕೊನೆಯ ದಿನಾಂಕ: ಜುಲೈ 31, 2025 (ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ) ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ *…

Read More