Author: kannadanewsnow57

ನವದೆಹಲಿ : ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ಆಟಗಾರ ಯಶ್ ದಯಾಳ್ ಗೆ ಬಿರ್ ರಿಲೀಫ್ ಸಿಕ್ಕಿದ್ದು, ಎಫ್ಐಆರ್ಗೆ ಸಂಬಂಧಿಸಿದಂತೆ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ತಡೆ ನೀಡಿದೆ. ಯಶ್ ದಯಾಳ್ ವಿರುದ್ಧ ಐದು ವರ್ಷಗಳ ಕಾಲ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ತಡೆ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಭಾರತದ ವೇಗಿ ಯಶ್ ದಯಾಳ್ ವಿರುದ್ಧ ಮದುವೆಯ ನೆಪದಲ್ಲಿ ಶೋಷಣೆಯ ದೂರು ದಾಖಲಿಸಲಾಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಾಜಿಯಾಬಾದ್’ನ ಮಹಿಳೆ ಮುಖ್ಯಮಂತ್ರಿಗಳ ಆನ್ಲೈನ್ ದೂರು ಪೋರ್ಟಲ್ ಐಜಿಆರ್ಎಸ್ನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ಗಾಜಿಯಾಬಾದ್’ನ ಇಂದಿರಾಪುರಂನ ವೃತ್ತ ಅಧಿಕಾರಿ (CO) ಅವರಿಂದ ವರದಿ ಕೇಳಿದೆ ಮತ್ತು ಐಜಿಆರ್ಎಸ್ನಲ್ಲಿ ದಾಖಲಾಗಿರುವ ದೂರನ್ನು ಪರಿಹರಿಸಲು ಪೊಲೀಸರಿಗೆ ಜುಲೈ 21 ರವರೆಗೆ ಸಮಯ ನೀಡಲಾಗಿದೆ ಎಂದು ತಿಳಿಸಿವೆ.

Read More

ಮುಂಬೈ : ಹಿರಿಯ ನಟ ಮತ್ತು ದೂರದರ್ಶನ ನಿರ್ಮಾಪಕ ಧೀರಜ್ ಕುಮಾರ್ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನ್ಯುಮೋನಿಯಾದಿಂದ ಬಳಲುತ್ತಿದ್ದ ನಂತರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು. ಈ ವಾರದ ಆರಂಭದಲ್ಲಿ ನಟನನ್ನು ತೀವ್ರ ಉಸಿರಾಟದ ತೊಂದರೆಯಿಂದಾಗಿ ದಾಖಲಿಸಲಾಯಿತು ಮತ್ತು ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಅವರ ಕುಟುಂಬವು ಸುದ್ದಿಯನ್ನು ದೃಢಪಡಿಸಿತು ಭಾರತೀಯ ಸಿನಿಮಾ ಮತ್ತು ದೂರದರ್ಶನದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿರುವ ಕುಮಾರ್ ಇತ್ತೀಚೆಗೆ ನವಿ ಮುಂಬೈನ ಖಾರ್ಘರ್ನಲ್ಲಿರುವ ಇಸ್ಕಾನ್ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಸನಾತನ ಧರ್ಮದ ಬಗ್ಗೆ ತಮ್ಮ ಗೌರವವನ್ನು ವ್ಯಕ್ತಪಡಿಸಿದ್ದರು. “ನಾನು ಇಲ್ಲಿಗೆ ನಮ್ರತೆಯ ಭಾವನೆಯಿಂದ ಬಂದಿದ್ದೇನೆ. ಅವರು ನನ್ನನ್ನು ವಿವಿಐಪಿ ಎಂದು ಕರೆದರೂ, ನಿಜವಾದ ವಿವಿಐಪಿ ದೇವರು ಎಂದು ನಾನು ನಂಬುತ್ತೇನೆ” ಎಂದು ಅವರು ತಮ್ಮ ಆಳವಾದ ಆಧ್ಯಾತ್ಮಿಕ ಸಂಪರ್ಕವನ್ನು ತೋರಿಸಿದರು. ಧೀರಜ್ ಕುಮಾರ್ 1965 ರಲ್ಲಿ ಮನರಂಜನಾ ಉದ್ಯಮದಲ್ಲಿ ತಮ್ಮ…

Read More

ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂಬರ್ಥದಲ್ಲಿ ಹೇಳಿರುವ ಭವಿಷ್ಯ ಈಗ ಭಾರೀ ಸಂಚಲನ ಮೂಡಿಸಿದೆ. ಆದರೆ ಅದಕ್ಕೆ ಪರಹಾರ ಮಾಡಿಕೊಂಡರೆ ಸರಿಯಾದೀತು ಎಂಬ ಪರಿಹಾರದ ಸಾಧ್ಯತೆಯನ್ನೂ ತಿಳಿಸಿದ್ದಾರೆ. ಯುಗಾದಿ ನಂತರ ಮಳೆ, ಬೆಳೆ ಬಗ್ಗೆ ನಿರ್ಧಾರ ಆಗುತ್ತದೆ. ಸಂಕ್ರಾಂತಿಯಲ್ಲಿ ರಾಜ್ಯಕ್ಕೆ ಮತ್ತು ದೊಡ್ಡ ದೊಡ್ಡ ವ್ಯಾಪಾರಸ್ಥರಿಗೆ ಇಂಥಹ ವ್ಯಾವಹಾರಿಕ ವಿಷಯಗಳು ಬರುತ್ತವೆ. ಹೀಗಾಗಿ ಸಂಕ್ರಾಂತಿವರೆಗೆ ಏನೂ ತೊಂದರೆ ಇಲ್ಲ, ಸಂಕ್ರಾಂತಿ ಫಲವನ್ನು ನೋಡಿ ಹೇಳಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಹಲವು ವಿದ್ಯಾರ್ಥಿವೇತನ ನೀಡುತ್ತಿದ್ದು, ರಾಜ್ಯದಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾದ ವಿವಿಧ ವಿದ್ಯಾರ್ಥಿ ವೇತನ ಯೋಜನೆ ಹಾಗೂ ಅವುಗಳಿಗೆ ಯಾವೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ವಿವಿಧ ವಿದ್ಯಾರ್ಥಿ ವೇತನ, ದಾಖಲೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Read More

ಬೊಬ್ಬಿಲಿ : ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಅದೇ ತರಗತಿಯ ವಿದ್ಯಾರ್ಥಿಯಿಂದ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಬೊಬ್ಬಿಲಿ ಪಟ್ಟಣದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಬೊಬ್ಬಿಲಿಯ ರಾವ್ರಿ ಬೀದಿಯ ಕಾರ್ತಿಕೇಯ (14) ಸ್ಥಳೀಯ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ. ಬೊಬ್ಬಿಲಿ ಮಂಡಲದ ಗುನ್ನತೋಟವಲಸದ ಹುಡುಗ ಕೂಡ ಅದೇ ತರಗತಿಯಲ್ಲಿ ಓದುತ್ತಿದ್ದಾನೆ. ಹಿಂದಿನ ದಿನ ಇಬ್ಬರ ನಡುವೆ ಜಗಳವಾಗಿತ್ತು. ವಾದ ತೀವ್ರಗೊಂಡು ಪರಸ್ಪರ ಸವಾಲು ಹಾಕಿಕೊಂಡರು. “ಶಾಲೆ ಬಿಟ್ಟ ನಂತರ ಕೋಟೆಗೆ ಬಂದರೆ ನಾನು ನೋಡಿಕೊಳ್ಳುತ್ತೇನೆ” ಎಂದು ವಿದ್ಯಾರ್ಥಿ ಕಾರ್ತಿಕೇಯನನ್ನು ಎಚ್ಚರಿಸಿದನು. ಅದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಕಾರ್ತಿಕೇಯ ಉತ್ತರಿಸಿದ. ಸೋಮವಾರ ಸಂಜೆ, ಶಾಲೆ ಮುಗಿದ ನಂತರ, ಅವರಿಬ್ಬರೂ ಮತ್ತು ಇತರ ಕೆಲವು ವಿದ್ಯಾರ್ಥಿಗಳು ಬೊಬ್ಬಿಲಿ ಕೋಟೆಗೆ ಬಂದರು. ವಿದ್ಯಾರ್ಥಿ ತನ್ನ ಸಹ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾರ್ತಿಕೇಯನಿಗೆ ಗುದ್ದಿದನು. ಕೋಟೆಯ ನೌಕರರು ಅವನನ್ನು ಗಮನಿಸಿ ತೀವ್ರವಾಗಿ ಖಂಡಿಸಿದರು. ಎಲ್ಲಾ ವಿದ್ಯಾರ್ಥಿಗಳು ಅಲ್ಲಿಂದ ಹೊರಟುಹೋದರು. ಹಲ್ಲೆಗೊಳಗಾದ ಕಾರ್ತಿಕೇಯ ಹತ್ತು ಅಡಿ ನಡೆದು…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಿನ್ನೆ ನಿಧನರಾದ ಬಹುಭಾಷಾ ತಾರೆ, ಹಿರಿಯ ನಟಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ ಅವರು. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನಾನು ನೋಡಿದ್ದೇನೆ ಎಂದು ಹೇಳಿದ್ದಾರೆ. ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು. ದಿಲೀಪ್…

Read More

ಬೆಂಗಳೂರು : ರೈತರ ಹೋರಾಟಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆನ್ನು ಕೈಬಿಡಲು ಮುಂದಾಗಿದೆ. ಹೌದು, ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು. ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಇದೀಗ…

Read More

ಬೆಂಗಳುರು : ರಾಜ್ಯ ಸರ್ಕಾರವು ಮತ್ತೆ 6 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

Read More

ಹೈದರಾಬಾದ್ :  ಹೈದರಾಬಾದ್ನ ಮಲಕ್ಪೇಟೆಯ ಶಾಲಿವಾಹನ ನಗರದಲ್ಲಿ ನಡೆದ ಗುಂಡಿನ ದಾಳಿಯಿಂದಾಗಿ ಕೋಲಾಹಲ ಉಂಟಾಯಿತು. ಈ ದಾಳಿಯಲ್ಲಿ, ಸಿಪಿಐ ಎಂಎಲ್ ನಾಯಕ ಚಂದು ರಾಥೋಡ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದರು.  ಪ್ರತ್ಯಕ್ಷದರ್ಶಿಗಳ ಪ್ರಕಾರ, ಘಟನೆ ಬೆಳಿಗ್ಗೆ 7:30 ಕ್ಕೆ ನಡೆದಿದೆ. ಬಿಳಿ ಸ್ವಿಫ್ಟ್ ಕಾರಿನಲ್ಲಿ ಬಂದ ಮೂರರಿಂದ ನಾಲ್ಕು ದಾಳಿಕೋರರು ಮೊದಲು ರಾಥೋಡ್ ಅವರ ಮುಖದ ಮೇಲೆ ಮೆಣಸಿನ ಪುಡಿ ಎಸೆದರು, ರಾಥೋಡ್ ಓಡಿಹೋಗಲು ಪ್ರಯತ್ನಿಸಿದಾಗ, ಅವರ ಮೇಲೆ ಹಲವಾರು ಸುತ್ತು ಗುಂಡುಗಳು ಹಾರಿಸಲಾಯಿತು, ಇದರಿಂದಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಆಗ್ನೇಯ ವಲಯ ಡಿಸಿಪಿ ಎಸ್ ಚೈತನ್ಯ ಕುಮಾರ್ ಅವರ ಪ್ರಕಾರ, ಘಟನೆಯ ಹಿಂದೆ ವೈಯಕ್ತಿಕ ದ್ವೇಷವಿದೆ ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ. ಚಂದು ರಾಥೋಡ್ ದೇವರಪುಲಾದ ಮತ್ತೊಬ್ಬ ಸಿಪಿಐ (ಎಂಎಲ್) ನಾಯಕನೊಂದಿಗೆ ದ್ವೇಷ ಹೊಂದಿದ್ದರು. ರಾಥೋಡ್ಗೆ ಈ ಹಿಂದೆಯೂ ಬೆದರಿಕೆಗಳು ಬಂದಿದ್ದವು. ಸಿಪಿಐ ರಾಷ್ಟ್ರೀಯ ನಾಯಕ ಕೆ. ನಾರಾಯಣ್ ಕೂಡ ಇದನ್ನು ವೈಯಕ್ತಿಕ ದ್ವೇಷ ಎಂದು ಬಣ್ಣಿಸಿದ್ದಾರೆ, ಆದರೂ…

Read More

ಬಳ್ಳಾರಿ : ರಾಜ್ಯದಲ್ಲಿ ಹೃದಯಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು ಇದೀಗ ಬಳ್ಳಾರಿಯಲ್ಲಿ ವಿದ್ಯಾರ್ಥಿಯೊಬ್ಬಳು, ಸಾವನ್ನಪ್ಪಿರುವ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾಳಂಗೇರಿಯ ದೀಕ್ಷಾ (12) 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕಿ ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More