Subscribe to Updates
Get the latest creative news from FooBar about art, design and business.
Author: kannadanewsnow57
ಕೊಪ್ಪಳ : ವಿದ್ಯುತ್ ಕಂಬ, ಟ್ರಾನ್ಸಫಾರ್ಮರ್ ಸೇರಿದಂತೆ ಇತರೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ ನಮ್ಮ ಇಲಾಖೆಯ ಅಧಿಕಾರಿಗಳು ಆಯಾ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತಂದು ಕೆಲಸ ಮಾಡಬೇಕು ಮತ್ತು ತಮ್ಮ ಯಾವುದೇ ಸಮಸ್ಯೆಗಳಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಆಯಾ ಭಾಗದ ಸಮಸ್ಯೆಗಳು ತಮಗಿಂತ ಜನಪ್ರತಿನಿಧಿಗಳಿಗೆ ಚೆನ್ನಾಗಿ ಗೊತ್ತಿರುತ್ತವೆ. ಅವರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಅಧಿಕಾರಿಗಳು ಪಿಲ್ಡಿಗೆ ಹೋಗಿ ಕೆಲಸ ಮಾಡಬೇಕು. ಅಕ್ರಮ ಸಕ್ರಮ, ಶೀಘ್ರ ಸಂಪರ್ಕ ಯೋಜನೆ ಸಣ್ಣ ಮತ್ತು ದೊಡ್ಡ ರೈತರಿಗೆ ನೀಡುವ ಸಹಾಯ ಸೌಲಭ್ಯಗಳನ್ನು ಅವರಿಗೆ ತಿಳಿಸಬೇಕು. ಈ ಸಭೆ ಕಾಟಾಚಾರಕ್ಕೆ ಆಗದೆ ಇದರಿಂದ ಜನರಿಗೆ…
ವಿಜಯಪುರ : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 600 ಪಿಎಸ್ ಐ, 4,500 ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಶೀಘ್ರವೇ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 4500 ಕಾನ್ಸ್ಟೇಬಲ್ ಮತ್ತು 600 ಪಿಎಸ್ಐ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಲಾಗುವುದು, ಉದ್ಯೋಗ ಆಕಾಂಕ್ಷಿಗಳ ಅನುಕೂಲಕ್ಕಾಗಿ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸುಮಾರು 15 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಆರ್ಥಿಕ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಒಪ್ಪಿಗೆ ಸಿಕ್ಕಿದ್ದು, ಚಳಿಗಾಲದ ಅಧಿವೇಶನದ ಬಳಿಕ 600 ಪಿಎಸ್ ಐ, 4500 ಕಾನ್ಸ್ಟೇಬಲ್ ಗಳ ಹುದ್ದೆ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. 5 ವರ್ಷದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ತುಂಬುವ ಪ್ರಯತ್ನ ನಡೆಯುತ್ತಿದೆ.…
ದೇಶದಲ್ಲಿ ಪೋಲಿಯೋ ರೋಗವು ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೊ ವೈರಸ್ ವಿರುದ್ಧ ರಕ್ಷಿಸಲು ಡಿ.21 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ನೀಡಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು, ಕ್ಷೇತ್ರ ಮಟ್ಟದ ಮೇಲ್ವಿಚಾರಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ರೀತಿಯಲ್ಲಿ ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು. 2011 ರ ಜ.13 ರಂದು ಭಾರತದಲ್ಲಿ ಪೋಲಿಯೋ ಕೊನೆಯ ಪ್ರಕರಣ ವರದಿಯಾದ ನಂತರ ಇಲ್ಲಿಯವರೆಗೆ ನಿರಂತರ…
ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಆದ್ಯತಾ ಪಡಿತರ ಚೀಟಿಗಳನ್ನು (PHH) ಹೊಂದಿರುವ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ ನಿಯಮಾನುಸಾರ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1)(2) ಮತ್ತು (3) ರಲ್ಲಿನ ಆದೇಶಗಳಲ್ಲಿ ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ಆದ್ಯತೇತರ ಕುಟುಂಬಗಳನ್ನು ಗುರುತಿಸಲು ಹೊರಗಿಡುವ ಮಾನದಂಡಗಳನ್ನು (Exclusion criteria) ಹೊರಡಿಸಲಾಗಿದೆ. ಸದರಿ ಮಾನದಂಡಗಳಲ್ಲಿ ಸ್ಪಷ್ಟಿಕರಿಸಿರುವಂತೆ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದ್ದು, ಪ್ರಸ್ತುತ ಕೇಂದ್ರ ಸರ್ಕಾರವು ಎನ್ಎಫ್ಎಸ್ಎ ಮಿತಿಯನ್ನು 4,01,93,000ಕ್ಕೆ ನಿಗಧಿಪಡಿಸಿದೆ. ಆದಾಗ್ಯೂ ದಿನಾಂಕ:25.08.2025ಕ್ಕೆ ಇರುವಂತೆ ರಾಜ್ಯದಲ್ಲಿ ಒಟ್ಟು 4,54,00,838 ಪಡಿತರ ಫಲಾನುಭವಿಗಳಿದ್ದು ಕೇಂದ್ರ ಸರ್ಕಾರವು ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಫಲಾನುಭವಿಗಳಿರುತ್ತಾರೆ. ಮೇಲೆ ಓದಲಾದ ಕ್ರಮ ಸಂಖ್ಯೆ (4)ರಲ್ಲಿನ ಆರ್ಥಿಕ ಇಲಾಖೆಯ ದಿನಾಂಕ:16.09.2023 ರ ಹಿಂಬರಹದಲ್ಲಿ ಈ ಕೆಳಕಂಡಂತೆ ಅಭಿಪ್ರಾಯಿಸಲಾಗಿದೆ. “ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಹಣಕಾಸು ಇಲಾಖೆಯು ಅಸ್ತಿತ್ವದಲ್ಲಿರುವ 2.96 PHH ಅರ್ಜಿಗಳನ್ನು ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು…
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಈಗಾಗಲೇ 3.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದವುಗಳನ್ನು ಸಕ್ರಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ತಾವೇ ಮೂಲ ಸೌಕರ್ಯ ಕಲ್ಪಿಸಿಕೊಳ್ಳುವವರ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುತ್ತಿದೆ,” ಎಂದರು. “ವಿದ್ಯುತ್…
ನವದೆಹಲಿ : ರಿಸರ್ವ್ ಬ್ಯಾಂಕ್ ಪ್ರತಿ ತಿಂಗಳು ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಪ್ರತಿದಿನ ಬ್ಯಾಂಕಿಗೆ ಹೋಗಿ ವಹಿವಾಟು ನಡೆಸುವವರಿಗೆ, ಬ್ಯಾಂಕ್ ಗಳಿಗೆ ಯಾವ ದಿನಗಳಲ್ಲಿ ರಜೆ ಇದೆ ಎಂಬುದನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಬಹಳ ಮುಖ್ಯ. ಮುಂಬರುವ ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್ಗಳಿಗೆ ಬಹಳಷ್ಟು ರಜೆ ಇರುತ್ತದೆ. ಆರ್ ಬಿಐ ಕ್ಯಾಲೆಂಡರ್ ಪ್ರಕಾರ.. ದೇಶದ ವಿವಿಧ ಭಾಗಗಳಲ್ಲಿ ಬ್ಯಾಂಕ್ ಗಳಿಗೆ ಒಟ್ಟು 18 ಬ್ಯಾಂಕ್ ರಜಾದಿನಗಳಿವೆ. ಇದರಲ್ಲಿ ನಾಲ್ಕು ಭಾನುವಾರಗಳು ಮತ್ತು ಎರಡು ಶನಿವಾರಗಳು ಸೇರಿವೆ. ಈ ಡಿಸೆಂಬರ್ ನಲ್ಲಿ ಕ್ರಿಸ್ ಮಸ್ ಗೆ ಸಾಮಾನ್ಯ ರಜೆ ಇರುತ್ತದೆ. ಇತರ ದಿನಗಳಲ್ಲಿ ವಿವಿಧ ಪ್ರಾದೇಶಿಕ ರಜಾದಿನಗಳೂ ಇವೆ. ಆದಾಗ್ಯೂ, ಈ ಬ್ಯಾಂಕ್ ರಜಾದಿನಗಳು ಎಲ್ಲಾ ರಾಜ್ಯಗಳಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಗಮನಿಸಿ. ಅವು ಆಯಾ ರಾಜ್ಯಗಳ ಹಬ್ಬಗಳು ಮತ್ತು ಇತರ ಕಾರ್ಯಕ್ರಮಗಳನ್ನು ಅವಲಂಬಿಸಿರುತ್ತದೆ. ಡಿಸೆಂಬರ್ನಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿ: ಡಿಸೆಂಬರ್ 1, ಸೋಮವಾರ: ರಾಜ್ಯತ್ವ ದಿನ (ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ನಲ್ಲಿ ರಜಾದಿನ) ಡಿಸೆಂಬರ್…
ರಾತ್ರಿ ಹೊತ್ತು ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲವೇ ಹಾಗಿದ್ರೆ ಈ ನಿಯಮಗಳನ್ನು ಪಾಲಿಸಿದ್ರೆ ಜಸ್ಟ್ 10 ನಿಮಿಷದಲ್ಲಿ ನೀವು ನಿದ್ದೆ ಜಾರುತ್ತೀರಿ. ಈ ವಿಧಾನವು ಕೇವಲ “ನಿದ್ರಿಸುವುದು” ಮಾತ್ರವಲ್ಲ, ನಿಮ್ಮ ದೇಹ ಮತ್ತು ಮನಸ್ಸನ್ನು ಕ್ರಮೇಣ ಸಿದ್ಧಪಡಿಸುವುದು, ಪ್ರಚೋದನೆಗಳನ್ನು ಕಡಿಮೆ ಮಾಡುವುದು ಮತ್ತು ಮಾನಸಿಕವಾಗಿ ವಿಶ್ರಾಂತಿ ಪಡೆಯುವುದು. ಈ ವಿಧಾನದ ಪ್ರತಿಯೊಂದು ಭಾಗವು ನಿದ್ರೆಯ ನೈರ್ಮಲ್ಯಕ್ಕೆ ಸಂಬಂಧಿಸಿದ ಪುರಾವೆ ಆಧಾರಿತ ಅಭ್ಯಾಸಗಳಿಗೆ ನಿಕಟ ಸಂಬಂಧ ಹೊಂದಿದೆ: 10 ಗಂಟೆಗಳ ಮೊದಲು: ಕೆಫೀನ್ ನಿಲ್ಲಿಸಿ ನಿಯಮ: ಮಲಗುವ ಸಮಯಕ್ಕೆ ಕನಿಷ್ಠ 10 ಗಂಟೆಗಳ ಮೊದಲು ನೀವು ಕೆಫೀನ್ (ಚಹಾ/ಕಾಫಿ) ಸೇವಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ವಿಜ್ಞಾನ: 2023 ರ ಮೆಟಾ-ವಿಶ್ಲೇಷಣೆಯ ಪ್ರಕಾರ, ಕೆಫೀನ್ ಸೇವನೆಯು ಒಟ್ಟು ನಿದ್ರೆಯ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ನಿದ್ರೆಯ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ಮಲಗುವ ಸಮಯಕ್ಕೆ 8.8 ಗಂಟೆಗಳ ಮೊದಲು ಕೆಫೀನ್ ಅನ್ನು ತಪ್ಪಿಸಬೇಕು ಎಂದು ಸಂಶೋಧನೆ ಸೂಚಿಸುತ್ತದೆ. 3 ಗಂಟೆಗಳ ಮೊದಲು: ಭಾರೀ ಊಟ ಅಥವಾ ಮದ್ಯಪಾನ…
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಲು ಜೋರಾಗಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕುರ್ಚಿಗಾಗಿ ಜಟಪಟಿ ನಡೆಸುತ್ತಿದ್ದರೆ ಮತ್ತೊಂದು ಕಡೆ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ ಸದ್ಯ ರಾಜ್ಯದಲ್ಲಿ ಬದಲಾವಣೆಯ ಚರ್ಚೆ ಇಲ್ಲವೇ ಇಲ್ಲ. ಹೈಕಮಾಂಡ್ ಈ ವಿಚಾರವಾಗಿ ಎಲ್ಲವನ್ನು ನಿರ್ಧಾರ ಮಾಡುತ್ತೆ. ಇನ್ನು ನಿನ್ನೆ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು, ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಡಿಸಿಎಂ ಡಿಕೆಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತೆ ಅವರು ಮೊದಲಿನಿಂದಲೂ ಕ್ಲೈಮ್ ಮಾಡಿದ್ದಾರೆ.ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಅವಕಾಶ ಕೊಟ್ಟಿದೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ ಆ ವಿಚಾರವಾಗಿ ಬಂದಾಗ ಅದರ…
BREAKING : ದೇಶದಲ್ಲಿ ಮತ್ತೊಂದು ಭೀಕರ ಅಪಘಾತ : ಮದುವೆಗೆ ಹೋಗಿ ಬರುತ್ತಿದ್ದ ಕಾರು ಕಾಲುವೆಗೆ ಬಿದ್ದು 5 ಮಂದಿ ಸಾವು.!
ಲಖಿಂಪುರ : ದೇಶದಲ್ಲಿ ದಿನದಿಂದ ದಿನಕ್ಕೆ ಅಪಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವೇಗವಾಗಿ ಬಂದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಧಾಖೇರ್ವಾ-ಗಿರ್ಜಾಪುರಿ ಹೆದ್ದಾರಿಯಲ್ಲಿರುವ ಶಾರದಾ ಕಾಲುವೆಗೆ ಉರುಳಿದೆ. ಕಾರಿನಲ್ಲಿದ್ದ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಕಾರನ್ನು ಚಲಾಯಿಸುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರ ಪ್ರಕಾರ, ಮೃತರು ಮತ್ತು ಗಾಯಗೊಂಡವರೆಲ್ಲರೂ ಒಂದೇ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದರು. ತಡರಾತ್ರಿ ಅಪಘಾತ ಸಂಭವಿಸಿದೆ. ಕತ್ತಲೆ ಮತ್ತು ಅತಿ ವೇಗದಿಂದಾಗಿ, ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡು ನೇರವಾಗಿ ಕಾಲುವೆಗೆ ಉರುಳಿದೆ. ಕಾಲುವೆಯಲ್ಲಿ ನೀರಿನ ಮಟ್ಟ ತುಂಬಾ ಹೆಚ್ಚಾಗಿದ್ದು, ಕಾರು ಸಂಪೂರ್ಣವಾಗಿ ಮುಳುಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ಭಾರತದಾದ್ಯಂತ ಗೂಗಲ್ ಮೀಟ್ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಪರದಾಟ ನಡೆಸಿದ್ದಾರೆ. ಗೂಗಲ್ ಮೀಟ್ ಬುಧವಾರ ಭಾರತದಲ್ಲಿ ಅನೇಕ ಬಳಕೆದಾರರಿಗೆ ಭಾಗಶಃ ನಿಲುಗಡೆಯನ್ನು ಅನುಭವಿಸಿತು, ಹಲವಾರು ಜನರು ನಿಗದಿತ ಸಭೆಗಳಿಗೆ ಸೇರಲು ಸಾಧ್ಯವಾಗಲಿಲ್ಲ ಎಂದು ವರದಿ ಮಾಡಿದ್ದಾರೆ. ಡೌನ್ಡಿಟೆಕ್ಟರ್ನ ಅಂಕಿಅಂಶಗಳ ಪ್ರಕಾರ, ನಿರ್ದಿಷ್ಟವಾಗಿ ಸೇರುವ ಸಮಸ್ಯೆಗಳಿಗೆ ಸಂಬಂಧಿಸಿದ ದೂರುಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಇದು ಭಾರತದಾದ್ಯಂತ ಗಮನಾರ್ಹ ಸಂಖ್ಯೆಯ ಬಳಕೆದಾರರ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸುತ್ತದೆ. ವಿವಿಧ ದೇಶಗಳಲ್ಲಿ ಇತ್ತೀಚಿನ ವಾರಗಳಲ್ಲಿ ಇದೇ ರೀತಿಯ ಗೂಗಲ್ ಮೀಟ್ ಅಡೆತಡೆಗಳು ಖಾಲಿ ಲೋಡಿಂಗ್ ಪರದೆಗಳು, ಅಂತ್ಯವಿಲ್ಲದೆ ಸ್ಪಿನ್ನಿಂಗ್ ಜಾಯಿನ್ ಬಟನ್ ಗಳು ಮತ್ತು ಸಾವಿರಾರು ಬಳಕೆದಾರರಿಗೆ ಅಸಾಧಾರಣವಾಗಿ ನಿಧಾನವಾದ ಇಂಟರ್ಫೇಸ್ ಲೋಡಿಂಗ್ ಗೆ ಕಾರಣವಾಗಿವೆ. ಸ್ಟೇಟಸ್ ಗೇಟರ್ ನಂತಹ ಸ್ವತಂತ್ರ ಸೇವಾ ಟ್ರ್ಯಾಕರ್ ಗಳು ಪ್ರಸ್ತುತ ಗೂಗಲ್ ಮೀಟ್ ಅನ್ನು ಹೆಚ್ಚಾಗಿ ಕಾರ್ಯನಿರ್ವಹಿಸುತ್ತವೆ ಎಂದು ತೋರಿಸುತ್ತವೆ, ಆದರೆ ಅವರ ಲಾಗ್ ಗಳು ಬಳಕೆದಾರರು ಪ್ಲಾಟ್ ಫಾರ್ಮ್ ಗೆ ಲೋಡ್…














