Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ.ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು. 1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ…
ಮಂಗಳೂರು: ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೌದು, ಪಾಕಿಸ್ತಾನ, ಅಫ್ಘಾನಿಸ್ತಾನ, ಸೌದಿ ಅರೇಬಿಯಾ ಮೊಬೈಲ್ ಸಂಖ್ಯೆಯಿಂದ ಉರ್ದು ಭಾಷೆಯಲ್ಲಿ ವಾಟ್ಸಾಪ್ ಮೂಲಕ ಆಡಿಯೋ ಮೆಸೇಜ್ ಕಳುಹಿಸಲಾಗಿದೆ. ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ನರಸಿಂಹ ಮಾಣಿ ಅವರಿಗೆ ಬೆದರಿಕೆ ಹಾಕಲಾಗಿದೆ. ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಕೂಡ ಲಿಸ್ಟ್ ನಲ್ಲಿ ಇದೆ. ಚಲನವಲನ ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ, ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.ನಿನ್ನ ಸ್ನೇಹಿತ ರಂಜಿತ್ ಎಂಬುವನನ್ನು ಕ್ರೂರವಾಗಿ ಕೊಲ್ಲುತ್ತೇವೆ. ರಂಜಿತ್ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದಿದ್ದೇವೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ ಎಂದು ಹೇಳಲಾಗಿದೆ. ನಿಮ್ಮನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾಗೆ ಗೊತ್ತಿಲ್ಲ. ನಿನ್ನ ಕೊಂದ…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ.
ಬೆಂಗಳೂರು : ರಾಜ್ಯದಲ್ಲಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಡಿ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳ ಲಾಭಕಡಿವಾಣ ತಲುಪದಂತೆ ಹಾಕಲು ರಾಜ್ಯಾದ್ಯಂತ ಸಮಗ್ರ ತನಿಖೆ ಕೈಗೊಳ್ಳುವ ಚಿಂತನೆ ನಡೆದಿದೆ ಎಂದು ಹೇಳಿದರು. ಮನೆ ಬಾಡಿಗೆ ಹಣ ಪಡೆಯುತ್ತಿರುವವರೂ ಗೃಹಜ್ಯೋತಿ ಯೋಜನೆ ಪಡೆಯುತ್ತಿದ್ದಾರೆ. ತೆರಿಗೆ, ಜಿಎಸ್ ಪಾವತಿಸುವ ಕುಟುಂಬಕ್ಕೂ ಗೃಹಲಕ್ಷ್ಮಿ ಪಾವತಿಯಾಗುತ್ತಿದೆ. ಅನ್ನಭಾಗ್ಯ ಯೋಜನೆಯಲ್ಲಿ ಪಡಿತರ ಕಾರ್ಡಗಳ ವ್ಯತ್ಯಾಸ ಗೊಚರಿಸುತ್ತಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಸಮಗ್ರ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕೊಡುವ 150 ರೂ. ಬದಲು ಆಹಾರ ಕಿಟ್ ನೀಡುವ ಚಿಂತನೆ ನಡೆಸಲಾಗಿದೆ. ಈ ಹಿಂದೆ 5 ಕೆ.ಜಿ ಅಕ್ಕಿ ಜತೆಗೆ 5 ಕೆ.ಜಿ ಪಡಿತರದ 150 ರೂ.…
ಬೆಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ರಾಜ್ಯದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ದಾವಣಗೆರೆ ಉಪನೋಂದಣಾಧಿಕಾರಿಗಳ ಕಚೇರಿ, ರಾಮನಗರ ಉಪನೋಂದಣಾಧಿಕಾರಿಗಳ ಕಚೇರಿ. ಶಿವಮೊಗ್ಗ ಉಪನೋಂದಣಾಧಿಕಾರಿಗಳ ಕಚೇರಿ, ತುಮಕೂರು ಜಿಲ್ಲೆಯ ಕುಣಿಗಲ್ ಉಪನೋಂದಣಾಧಿಕಾರಿಗಳ ಕಚೇರಿ, ಕೋಲಾರ ಉಪನೋಂದಣಾಧಿಕಾರಿಗಳ ಕಚೇರಿ, ಬೆಳಗಾವಿ ಜಿಲ್ಲೆಯ ಮೂಡಲಗಿ ಉಪನೋಂದಣಾಧಿಕಾರಿಗಳ ಕಚೇರಿ, ಬಾಗಲಕೋಟೆ ಜಿಲ್ಲೆಯ ಇಳಕಲ್ ಉಪನೋಂದಣಾಧಿಕಾರಿಗಳ ಕಚೇರಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಉತ್ತರ ಉಪನೋಂದಣಾಧಿಕಾರಿಗಳ ಕಚೇರಿ, ಗದಗ್ ಜಿಲ್ಲೆಯ ಗಜೇಂದ್ರಗಢ ಉಪನೋಂದಣಾಧಿಕಾರಿಗಳ ಕಚೇರಿ, ಕಾರವಾರ/ ಉತ್ತರಕನ್ನಡದ ಕುಮಟಾ ಉಪನೋಂದಣಾಧಿಕಾರಿಗಳ ಕಚೇರಿ, ಹಾವೇರಿ ಉಪನೋಂದಣಾಧಿಕಾರಿಗಳ ಕಚೇರಿ, ವಿಜಯಪುರ ಉಪನೋಂದಣಾಧಿಕಾರಿಗಳ ಕಚೇರಿ, ಚಾಮರಾಜನಗರ…
ಬೆಂಗಳೂರು : 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ…
ಬೆಂಗಳೂರು: ಒಂದೆಡೆ ಮಂಗಳೂರಿನಲ್ಲಿ ಕೋಮು ದಳ್ಳುರಿ ಬಿಸಿಯಾಗಿದ್ದರೇ, ಮತ್ತೊಂದೆಡೆ ಅದರ ನಿಯಂತ್ರಣ ಕ್ರಮವಾಗಿ ಕರವಾಳಿ ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಈ ಮೂಲಕ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಉಪ ನಿರೀಕ್ಷಕ ಜನರಲ್ ಆಫ್ ಪೊಲೀಸ್, ಆರ್ಥಿಕ ಅಪರಾಧಗಳು, ಅಪರಾಧ ತನಿಖಾ ಇಲಾಖೆ, ಸಿ. ವಂಶಿ ಕೃಷ್ಣ, ಐಪಿಎಸ್ ಅವರನ್ನು ಏಕಕಾಲೀನ ಆರೋಪದಿಂದ ಮುಕ್ತಗೊಳಿಸಲಾಗಿದೆ. ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ (2009) ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಅಪರಾಧ ತನಿಖಾ ಇಲಾಖೆಯ ಉಪ ನಿರೀಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಳಗಾವಿ ನಗರದ ಉಪ ನಿರೀಕ್ಷಕ…
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ(ಒಸಿ) ಕಡ್ಡಾಯಗೊಳಿಸಿರುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಸಮಸ್ಯೆಯಾಗುತ್ತಿದ್ದು, ಇದಕ್ಕೆ ಶೀಘ್ರವೇ ಪರಿಹಾರ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಮಸ್ಯೆಯಾಗುತ್ತಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ವಿದ್ಯುತ್ ಸಂಪರ್ಕಗಳಿಗೆ ಒಸಿ ಕಡ್ಡಾಯಗೊಳಿಸುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಆಗಿರುವ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕುರಿತು ಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಆಸ್ತಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಹೌದು, ರಾಜ್ಯದಲ್ಲಿ ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ 256 ಸಬ್ ರಿಜಿಸ್ಟ್ರಾರ್ ಕಚೇರಿಗಳು ಸೇವೆ ಸಲ್ಲಿಸುತ್ತಿದ್ದು, ಪ್ರತಿ ಕಚೇರಿಯಲ್ಲಿ ವರ್ಷಕ್ಕೆ ಅಂದಾಜು 20 ರಿಂದ 24 ಲಕ್ಷ ದಸ್ತಾವೇಜುಗಳು ನೋಂದಣಿ ಆಗಲಿದೆ. ಇನ್ನು ಸಬ್ ರಿಜಿಸ್ಟ್ರಾರ್ ಕಚೇರಿ ಸಾಫ್ಟ್ವೇರ್ ಅನ್ನು ಕಾವೇರಿ 2.0 ತಂತ್ರಾಂಶಕ್ಕೆ ಅಪ್ ಗ್ರೇಡ್ ಮಾಡಿ ಅಕ್ರಮ ತಡೆಗೆ ಸುರಕ್ಷಿತ ಕ್ರಮಗಳು, ಆದಾಯ ಸೋರಿಕೆಗೆ ಸಾಕಷ್ಟು ಬದಲಾವಣೆ ತರಲಾಗಿದೆ. ಆಸ್ತಿ ನೋಂದಣಿಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಆಸ್ಟ್ರೇಟ್, ಹೆಸರು ಹೊಂದಾಣಿಕೆ ಆಗಿರುವುದು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ, ಅಷ್ಟೇಟ್ ಮಾಡಿಕೊಂಡು ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ…
ಬೆಂಗಳೂರು : ರಾಜ್ಯ ಸರ್ಕಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು, 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ 34027 ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಮೇಲ್ಮಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ (ಮಾರ್ಚ್-2026) ವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ) ಒಟ್ಟು-40000. ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-03ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ. ಉಲ್ಲೇಖ-03 ರಲ್ಲಿ ಒಟ್ಟು-40000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು, ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ…