Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೇಕಾದ ದಾಖಲೆ: ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿದ ಮೂರು ಪ್ರತಿಗಳಲ್ಲಿ ಜೆರಾಕ್ಸ್, ಜಾತಿ ಪ್ರಮಾಣ ಮತ್ತು ಕುಟುಂಬದ ವಾರ್ಷಿಕ ಆದಾಯ ಪತ್ರ, ಪ್ರಸಕ್ತ ಸಾಲಿನ ಕುಟುಂಬ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರು ಬಳ್ಳಾರಿ ಇವರು ನೀಡಿರುವ ಆದಾಯ ಪ್ರಮಾಣ ಪತ್ರ) ವಾರ್ಷಿಕ ಆದಾಯ ರೂ.40 ಸಾವಿರ ಒಳಗಡೆ ಇರಬೇಕು. ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸಲ್ಲಿಸಿರಬೇಕು.…
ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ರಾಜ್ಯದ ಎಲ್ಲಾ ಜಿಲ್ಲಾನೋಂದಣಾಧಿಕಾರಿ/ಉಪನೋಂದಣಾಧಿಕಾರಿಗಳ ಕಛೇರಿಗಳನ್ನು ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ ರಾಜ್ಯ ಸರ್ಕಾರ ಅದಿಕೃತ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ:02-09-2024 ರಂದು ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ನಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಆದುದರಿಂದ ನೂತನ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ. ಎನಿವೇರ್ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದಿನಿಂದ ಜಾರಿಗೊಂಡಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ. ಹೀಗಿದೆ ಪ್ರಯೋಜನ ಅನುಕೂಲಕರ ತ್ವರಿತವಾಗಿ ನೋಂದಣಿಗೆ ಅವಕಾಶ ಸುಲಭವಾಗಿ ನಿಮ್ಮ ಕೆಲಸ ಆಗಲಿದೆ ದಕ್ಷತೆಯಿಂದ ಕೂಡಿದೆ ಪಾರದರ್ಶಕತೆಗೆ ಒತ್ತು ನೀಡಲಿದೆ.
ನಾಡಿನಾದ್ಯಂತ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಭಾದ್ರಪದ ಮಾಸದ ಶುಕ್ಲಪಕ್ಷದ ಸಮಯದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ವರ್ಷ 7 ರ ಇಂದು ಗಣೇಶ ಚತುರ್ಥಿ ಬರಲಿದೆ. ದೃಕ್ ಪಂಚಾಂಗದ ಪ್ರಕಾರ, ವಿನಾಯಕ ಚವಿತಿಯನ್ನು ಈ ವರ್ಷ ಸೆಪ್ಟೆಂಬರ್ 7 ರಂದು ಶನಿವಾರ ಆಚರಿಸಲಾಗುತ್ತದೆ. ಗಣೇಶ ಚತುರ್ಥಿಯ ಶುಭ ಸಮಯ ಮತ್ತು ಪೂಜಾ ಸಮಯಗಳನ್ನು ತಿಳಿಯಿರಿ. ಗಣೇಶ ಪೂಜೆ ಮುಹೂರ್ತ – ಸೆಪ್ಟೆಂಬರ್ 7 ರಂದು ಬೆಳಿಗ್ಗೆ 11:03 ರಿಂದ ಮಧ್ಯಾಹ್ನ 1:34 ರವರೆಗೆ, ಚತುರ್ಥಿ ತಿಥಿ ಪ್ರಾರಂಭವಾಗುತ್ತದೆ – ಸೆಪ್ಟೆಂಬರ್ 6, 2024 ರಂದು ಮಧ್ಯಾಹ್ನ 3:01 ಗಂಟೆಗೆ ಚತುರ್ಥಿ ತಿಥಿ ಕೊನೆಗೊಳ್ಳುತ್ತದೆ – ಸೆಪ್ಟೆಂಬರ್ 7, 2024 ರಂದು ಸಂಜೆ 5:37 ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಸಮಯ – ಸೆಪ್ಟೆಂಬರ್ 7, 11:03 ರಿಂದ ಮಧ್ಯಾಹ್ನ 1:34 ರವರೆಗೆ ಬ್ರಹ್ಮ ಮುಹೂರ್ತವು ಮುಂಜಾನೆ 4:31 ರಿಂದ 5:16 ರವರೆಗೆ ಇರುತ್ತದೆ ಸೆಪ್ಟೆಂಬರ್ 17, ಮಂಗಳವಾರ ಗಣೇಶ ನಿಮಜ್ಜನ…
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಯಲ್ಲಿ ನಡೆಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಅವರಿಗೆ ಕಲಬುರಗಿ ಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಸೆಪ್ಟೆಂಬರ್ 17 ರ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಕುರಿತು ರಾಜ್ಯ ಸರ್ಕಾರವು ಸೂಚನಾ ಪತ್ರ ಹೊರಡಿಸಿದ್ದು, ದಿನಾಂಕ 17-09-2024 ರ ಮಂಗಳವಾರ ಸಂಜೆ 4 ಗಂಟೆಗೆ 2024 ನೇ ಸಾಲಿನ 19 ನೇ ಸಚಿವ ಸಂಪುಟ ಸಭೆಯನ್ನು ಕಲಬುರಗಿಯ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣ, ಮಿನಿ ವಿಧಾನಸೌಧದಲ್ಲಿ ಕರೆಯಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇನ್ ಸ್ಟಾಗ್ರಾಮ್ ನಲ್ಲಿ ಜನರಿಗೆ ಗಿಫ್ಟ್ ಕೊಡುತ್ತಿದ್ದ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆ ಬೇರೆ ದೇಶಗಳಿಗೆ ಹೋಗಿ ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದವರಿಗೆ ಐಫೋನ್ ಗಿಫ್ಟ್ ಕೊಡುತ್ತಿದ್ದ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಡು ರಸ್ತೆಯಲ್ಲಿ ಜನರ ಗುಂಪು ಸೇರಿಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿರುವ ಜೊತೆಗೆ ಯಾವುದೇ ಅನುಮತಿ ಪಡೆಯದೇ ಜನರನ್ನು ಗುಂಪು ಸೇರಿಸಿದ ಹಿನ್ನೆಲೆಯಲ್ಲಿ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನವದೆಹಲಿ : ಭಾರತೀಯರು ಇಡೀ ವಿಶ್ವದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ಇತ್ತೀಚೆಗೆ ಟೈಮ್ ಮ್ಯಾಗಜೀನ್ ವಿಶ್ವದ ಟಾಪ್ 100 ಪ್ರಸಿದ್ಧ ಮತ್ತು ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತೀಯರೂ ಸ್ಥಾನ ಪಡೆದಿದ್ದಾರೆ. ಈ ಬಾರಿ ಟೈಮ್ ಮ್ಯಾಗಜೀನ್ ಟಾಪ್ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಬಾಲಿವುಡ್ ನಟ ಅನಿಲ್ ಕಪೂರ್ ಅವರನ್ನು ಕೂಡ ಸೇರಿಸಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ನೀಡಿದ ಮಹತ್ವದ ಕೊಡುಗೆಗಾಗಿ ಅನಿಲ್ ಕಪೂರ್ ಅವರಿಗೆ ಈ ಗೌರವ ನೀಡಲಾಗಿದೆ. ಭಾರತದ ಹಿರಿಯ ನಾಯಕ ಮತ್ತು ರೈಲ್ವೇ ಸಚಿವ ಅಶ್ವನಿ ವೈಷ್ಣವ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರ ಹೆಸರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ಅನಿಲ್ ಕಪೂರ್ ಕೃತಕ ಬುದ್ಧಿಮತ್ತೆ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಗೆಲುವು ಸಾಧಿಸಿದ ನಂತರ ಅವರು ಬೆಳಕಿಗೆ ಬಂದಿದ್ದಾರೆ. ನಟ ತನ್ನ ವ್ಯಕ್ತಿತ್ವದ ಹಕ್ಕುಗಳ ದುರುಪಯೋಗಕ್ಕಾಗಿ ಸಾಮಾಜಿಕ ಮಾಧ್ಯಮ ಭದ್ರತೆಗೆ ಒತ್ತಾಯಿಸಿ…
ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ ಎಫ್ ಅಧಿಕಾರಿ ಅಬ್ದುಲ್ ಅಜೀಜ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೆಟ್ರೋಲ್, ಡಿಸೇಲ್ ಪ್ರತಿ ಲೀಟರ್ ಗೆ 5-6 ರೂ. ಇಳಿಸುವ ಸಾಧ್ಯತೆ ಇದೆ. ಕಚ್ಚಾ ತೈಲ ಬೆಲೆ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಇಂಧನ ಬೆಲೆಗಳನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ತೈಲ ಬೆಲೆಗಳು ಜನವರಿಯಿಂದ ತಮ್ಮ ಕನಿಷ್ಠ ಮಟ್ಟಕ್ಕೆ ಕುಸಿದಿವೆ, ತೈಲ ಮಾರುಕಟ್ಟೆ ಕಂಪನಿಗಳ (OMCs) ಲಾಭದಾಯಕತೆಯನ್ನು ಸುಧಾರಿಸುತ್ತದೆ, ಇದು ಗ್ರಾಹಕರಿಗೆ ಪರಿಹಾರವನ್ನು ನೀಡುತ್ತದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯೂ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆಗೆ ಕಾರಣ ಎನ್ನಲಾಗಿದೆ.
ವಾಷಿಂಗ್ಟನ್ : ಈ ವರ್ಷದ ಕೊನೆಯಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳು ನಡೆಯಲಿವೆ. ಆದಾಗ್ಯೂ, ಅವರ ಅಧಿಕಾರಾವಧಿಯನ್ನು ಕೊನೆಗೊಳಿಸುವ ಮೊದಲೇ, ಅಧ್ಯಕ್ಷ ಜೋ ಬಿಡೆನ್ಗೆ ಹೊಸ ಉದ್ವಿಗ್ನತೆ ಹೊರಹೊಮ್ಮಿದೆ. ವಾಸ್ತವವಾಗಿ, ಜೋ ಬಿಡೆನ್ ಅವರ ಮಗ ಹಂಟರ್ ಬಿಡೆನ್ ಜೈಲು ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕ್ರಿಮಿನಲ್ ವಿಚಾರಣೆಯನ್ನು ತಪ್ಪಿಸಲು ಹಂಟರ್ ಬಿಡೆನ್ ಫೆಡರಲ್ ತೆರಿಗೆ ಆರೋಪಗಳಿಗೆ ತಪ್ಪೊಪ್ಪಿಕೊಂಡಿದ್ದಾನೆ. ಈಗ ಹಂಟರ್ ಜೈಲಿಗೆ ಹೋಗುವ ಭೀತಿಯಲ್ಲಿದ್ದಾನೆ. ವಾಸ್ತವವಾಗಿ, US ನ್ಯಾಯಾಂಗ ಇಲಾಖೆಯು ಹಂಟರ್ ಬಿಡೆನ್ ವಿರುದ್ಧ ಪ್ರಕರಣವನ್ನು ದಾಖಲಿಸಿದೆ, ಇದರಲ್ಲಿ ಅವರು 14 ಲಕ್ಷ US ಡಾಲರ್ ತೆರಿಗೆಯನ್ನು ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಒಂಬತ್ತು ಆರೋಪಗಳನ್ನು ನ್ಯಾಯಾಧೀಶರು ಓದಿದ ತಕ್ಷಣ, ಹಂಟರ್ ಬಿಡೆನ್ ಅವರು ತಪ್ಪಿತಸ್ಥರೆಂದು ಒಪ್ಪಿಕೊಂಡರು. ಈ ಆರೋಪಗಳ ಅಡಿಯಲ್ಲಿ 17 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಫೆಡರಲ್ ಶಿಕ್ಷೆಯ ಮಾರ್ಗಸೂಚಿಗಳು ತುಂಬಾ ಹಗುರವಾದ ವಾಕ್ಯಗಳನ್ನು ಒದಗಿಸುತ್ತವೆ. ಡಿಸೆಂಬರ್ 16 ರಂದು ತೆರಿಗೆ ಸಂಬಂಧಿತ…
ಬೆಂಗಳೂರು : ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ. ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ.. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ ಎಂದು ಸಚಿವ…