Author: kannadanewsnow57

ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಎಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಸುರಕ್ಷಾ ಕ್ರಮಗಳ ಬಗ್ಗೆ ಜಿ.ಪಂ. ಸಿಇಓ ಸುತ್ತೋಲೆ ಹೊರಡಿಸಿದ್ದಾರೆ. ನಿಲಯ ಮೇಲ್ವಿಚಾರಕರು ವಿದ್ಯಾರ್ಥಿನಿಲಯಗಳಲ್ಲಿ ಅಳವಡಿಸಿರುವ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಸಿ.ಸಿ.ಟಿವಿ ಕ್ಯಾಮಾರ ಕೆಟ್ಟು ಹೋದ ಸಂದರ್ಭದಲ್ಲಿ ತಕ್ಷಣವೇ ದುರಸ್ತಿ ಮಾಡಿಸಿ ಚಾಲ್ತಿಯಲ್ಲಿರುವಂತೆ ನೋಡಿ ಕೊಳ್ಳಬೇಕು. ಪ್ರತಿ ತಿಂಗಳು ಸಿ.ಸಿ.ಟಿವಿ ವೀಡಿಯೋ ದೃಶ್ಯಗಳನ್ನು ಸಿ.ಡಿ. ಅಥವಾ ಪೆನ್ಡ್ರೈ ವ್ನಓಲ್ಲಿ ಸಂಗ್ರಹಿಸಿಡಬೇಕು. ವಿದ್ಯಾರ್ಥಿನಿಲಯದ ದ್ವಾರದಲ್ಲಿ ಸಿಬ್ಬಂದಿ ಹಾಗೂ ರಿಜಿಸ್ಟರ್ ಇರಿಸಿ, ವಿದ್ಯಾರ್ಥಿಗಳು ಹೊರಗೆ ತೆರಳುವ ಹಾಗೂ ಒಳಗೆ ಬರುವ ಮುನ್ನ ಹೆಸರು, ಹೊಗುವ ಸಮಯ, ಸ್ಥಳ ಮತ್ತು ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕು. ವಿದ್ಯಾರ್ಥಿಗಳು ರಜೆ ಕೋರಿದ್ದಲ್ಲಿ ಪೋಷಕರಿಗೆ ಅಥವಾ ಪತ್ರದ ಮೂಲಕ ಖಾತರಿಪಡಿಸಿಕೊಂಡ ನಂತರವೇ ವಿದ್ಯಾರ್ಥಿಗಳಿಂದ ರಜೆ ಅರ್ಜಿ ಪಡೆದು ಮಂಜೂರು ಮಾಡಬೇಕು. ವಿದ್ಯಾರ್ಥಿನಿಯರು ರಜೆ ಮೇಲೆ ತೆರಳಿದ ಸಂದರ್ಭದಲ್ಲಿ ಪೋಷಕರ ಮೋಬೈಲ್ ಸಂಖ್ಯೆಗೆ ವಿಡಿಯೋ ಕರೆ ಮಾಡಿ ಸುರಕ್ಷಿತವಾಗಿ…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ನಾಡ ಕಛೇರಿಯ 44 ಸೇವೆಗಳು ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಕರೆಮಾಡಿ. ಪಂಚಮಿತ್ರ ಸಹಾಯವಾಣಿ- ಸದಾ ನಿಮ್ಮೊಂದಿಗೆ. ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಈಗ ನಾಡಕಚೇರಿ ಸೇವೆಗಳು ಲಭ್ಯ, ಜಾತಿ ಮತ್ತು ಆದಾಯ ಪ್ರಮಾಣಕ್ಕೆ ಅಲೆದಾಡುವ ಅಗತ್ಯವಿಲ್ಲ, ನಾಡಕಚೇರಿಯ 44 ಸೇವೆಗಳು ಬಾಪೂಜಿ ಸೇವಾಕೇಂದ್ರಗಳಲ್ಲಿ ಸಿಗಲಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಬಾಪೂಜಿ ಸೇವಾ ಕೇಂದ್ರಗಳಲ್ಇ 85 ಸೇವೆಗಳು ಲಭ್ಯವಿವೆ.

Read More

ಬೆಂಗಳೂರು : ಯೂಟ್ಯೂಬರ್ ಸಮೀರ್ ಎಂ.ಡಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಬೆಂಗಳೂರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೌದು, ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಲ್ಲಹಳ್ಳಿ ನಿವಾಸಕ್ಕೆ ದೌಡಾಯಿಸಿದ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಮನೆಯಲ್ಲಿರುವಾಗಲೇ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಾರೆಂಟ್ ಪಡೆದು ಪೊಲೀಸರು ದಾಳಿಗೆ ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ನವದೆಹಲಿ : 33 ಜೀವರಕ್ಷಕ ಔಷಧಗಳು ಮತ್ತು ಔಷಧಿಗಳ ಮೇಲಿನ GST 12% ರಿಂದ ಶೂನ್ಯಕ್ಕೆ ಇಳಿದಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಕೃಷಿ ಸರಕುಗಳಾದ ಟ್ರ್ಯಾಕ್ಟರ್‌ಗಳು, ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಯಂತ್ರಗಳು, ಕೊಯ್ಲು ಅಥವಾ ಒಕ್ಕಣೆ ಯಂತ್ರಗಳು, ಹುಲ್ಲು ಅಥವಾ ಮೇವು ಬೇಲರ್‌ಗಳು, ಗೊಬ್ಬರ ಯಂತ್ರಗಳು ಇತ್ಯಾದಿಗಳು 12 ರಿಂದ 5% ಕ್ಕೆ ಇಳಿಯುತ್ತಿವೆ” ಎಂದು ಅವರು ಹೇಳುತ್ತಾರೆ. 12 ನಿರ್ದಿಷ್ಟ ಜೈವಿಕ ಕೀಟನಾಶಕಗಳ ಮೇಲಿನ GST 12% ರಿಂದ 5% ಕ್ಕೆ ಇಳಿಯುತ್ತಿದೆ. ಅಲ್ಲದೆ, 12 ರಿಂದ 5 ಕ್ಕೆ ನೈಸರ್ಗಿಕ ಮೆಂಥಾಲ್… ಮತ್ತೆ, 12 ರಿಂದ 5 ಕ್ಕೆ, ಕರಕುಶಲ ವಸ್ತುಗಳು ಮತ್ತು ಕಾರ್ಮಿಕ-ತೀವ್ರ ವಲಯಗಳು. ಅವು ಯಾವುವು? ಕರಕುಶಲ ವಸ್ತುಗಳು, ಅಮೃತಶಿಲೆ, ಟ್ರಾವರ್ಟೈನ್ ಬ್ಲಾಕ್‌ಗಳು, ಗ್ರಾನೈಟ್ ಬ್ಲಾಕ್‌ಗಳು ಮತ್ತು ಮಧ್ಯಂತರ ಚರ್ಮದ ಸರಕುಗಳು. ಸಿಮೆಂಟ್ ಮೇಲಿನ GST 28% ರಿಂದ 18% ಕ್ಕೆ ಇಳಿದಿದೆ. 33 ಜೀnirm ವರಕ್ಷಕ…

Read More

ಬೆಂಗಳೂರು : ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://sevasindhu.karnataka.gov.in ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ): ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50.ರಷ್ಟು ಸಹಾಯಧನ ಅಥವಾ ಗರಿಷ್ಟ 1.25 ಲಕ್ಷ ರೂ., ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಘಟಕ ವೆಚ್ಚದ ಶೇ70.ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ., ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ…

Read More

ಬೆಂಗಳೂರು : ಸೌಜನ್ಯ ಪ್ರಕರಣ ಮೇಲ್ಮನವಿಗೆ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆ ಮಾಡಿದೆ. ಈಗ ಸುಪ್ರೀಂ ಕೋರ್ಟಿನ ವೆಚ್ಚ ಭರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿದ್ದಾರೆ. ಪ್ರಕರಣ ಮೇಲ್ಮನವಿಗೆ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ಧರ್ಮಸ್ಥಳಕ್ಕೆ ಬಿಜೆಪಿ ಮಾಡಿದ ಯಾತ್ರೆ ರಾಜಕೀಯ ಪ್ರೇರಿತ. ನಿಜವಾಗಿ ಅದು ಧರ್ಮಸ್ಥಳ ಚಲೋ ಅಲ್ಲ, “ರಾಜಕೀಯ ನಾಟಕ”ದಂತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

Read More

ಬೆಂಗಳೂರು : 70 ಸಾವಿರ ರೂ.ಲಂಚ ಪಡೆಯುತ್ತಿರುವಾಗಲೇ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಂಬರೀಶ್ ಎಂಬುವರ 70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಕಡೆಯವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್ ಐ ಜಗದೇವಿ. 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಪಿಎಸ್ ಐ ಜಗದೇವಿ. ಈ ಹಿಂದೆ 5 ಸಾವಿರ ರೂ. ನೀಡಿದ್ದು, ಇಂದು 70 ಸಾವಿರ ರೂ. ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಸ್ ಐ ಜಗದೇವಿ ಪರ ಲಂಚ ಸ್ವೀಕರಿಸುತ್ತಿದ್ದ ಪಿಸಿ ಅಂಬರೀಶ್ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಪಿಎಸ್ ಐ ಜಗದೇವಿ, ಪಿಸಿ ಮಂಜುನಾಥ್ ಪರಾರಿಯಾಗಿದ್ದಾರೆ. ಪಿಸಿ ಅಂಬರೀಶ್ ನನ್ನು ವಶಕ್ಕೆ…

Read More

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ವಿಭಾಗಗಳ ಸೇವೆಯನ್ನು ವಿಸ್ತರಿಸುವ ದೃಷ್ಟಿಯಿಂದ ಈ ಕೆಳಕಂಡ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಇನ್ನು ಮುಂದೆ ಲಭ್ಯವಾಗುತ್ತಿವೆ ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸೆ (Pediatric) ಮೂತ್ರರೋಗ ಶಸ್ತ್ರ ಚಿಕಿತ್ಸೆ, ಕಿಡ್ನಿ ಖಾಯಿಲೆ (nephrology) ಸೇವೆಗಳು ದಿನಾಂಕ: 04/09/2025 ರಿಂದ ಕಾರ್ಯರಂಭಗೊಳ್ಳಲಿದ್ದು, ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ. ನರರೋಗ ವಿಭಾಗವು ಸೋಮವಾರ, ಬುದುವಾರ, ಶುಕ್ರವಾರದಂದು ನರರೋಗ ಶಸ್ತ್ರಚಿಕಿತ್ಸಾ ಸೇವೆಯು ಮಂಗಳವಾರ, ಗುರುವಾರ, ಶನಿವಾರದಂದು ಹೋರರೋಗಿಗಳ ಸೇವೆ ಲಭ್ಯವಿರುತ್ತದೆ. ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಮಗುವೊಂದು ಸಾವನ್ನಪ್ಪಿದೆ. ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೇಪಾಳ ಮೂಲದ ದಂಪತಿಯ 18 ತಿಂಗಳ ಮಗು ಅನು ಮೃತಪಟ್ಟಿದೆ. ಮೃತಪಟ್ಟ ಅನು ಪುಷ್ಕರ್ ಕುಮಾರ್-ಜ್ಯೋತಿ ಕುಮಾರಿ ದಂಪತಿಯ ಪುತ್ರಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮಗು ಮೃತಪಟ್ಟಿದೆ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್ಮೆಂಟ್ ನಲ್ಲಿ 10*10 ಅಳತೆಯ ರೂಂನಲ್ಲಿ ವಾಸವಾಗಿದ್ದರು. ಮಗುವನ್ನು ಮನೆಯಲ್ಲಿ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ. ಹೈ ಗ್ರೌಂಡ್ಸ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ತನ್ನ ಉತ್ತಮ ಬೆಳವಣಿಗೆಯನ್ನು ಮುಂದುವರೆಸಿದೆ, ಜುಲೈ 2025 ರಲ್ಲಿ 46,187 ಹೊಸ ಮೊಬೈಲ್ ಚಂದಾದಾರರನ್ನು ಸೇರಿಸಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್) ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ, ಜಿಯೋ ಸ್ಥಿರ ವೈರ್ಲೆಸ್ ಆಕ್ಸೆಸ್ (ಎಫ್‌ಡಬ್ಲ್ಯೂಎ) ನಲ್ಲಿ ತನ್ನ ನಾಯಕತ್ವವನ್ನು ಬಲಪಡಿಸುತ್ತಿದೆ. ಜಿಯೋ ಏರ್‌ಫೈಬರ್ ಸೇವೆಯು ಸ್ಪಷ್ಟ ಮಾರುಕಟ್ಟೆ ನಾಯಕನಾಗಿ ಹೊರಹೊಮ್ಮುತ್ತಿದೆ. ರಾಜ್ಯದಲ್ಲಿ ಸಕ್ರಿಯ ಜಿಯೋ ಏರ್‌ಫೈಬರ್ ಬಳಕೆದಾರರ ಸಂಖ್ಯೆ ಜುಲೈನಲ್ಲಿ 3,51,817 ಕ್ಕೆ ಏರಿದೆ. ಇದು 2025 ರ ಜೂನ್‌ನಲ್ಲಿ 3,39,981 ರಷ್ಟಿತ್ತು. ಭಾರ್ತಿ ಏರ್ಟೆಲ್ 1,74,477 ಎಫ್‌ಡಬ್ಲ್ಯೂಎ ಚಂದಾದಾರರನ್ನು ಹೊಂದಿದೆ. ಜುಲೈ 2025 ರಲ್ಲಿ ರಾಷ್ಟ್ರವ್ಯಾಪಿ ಸಕ್ರಿಯ ಚಂದಾದಾರರ ಸೇರ್ಪಡೆಯನ್ನು ಹೊಂದಿರುವ ಏಕೈಕ ಟೆಲಿಕಾಂ ಆಪರೇಟರ್ ಜಿಯೋ ಆಗಿದ್ದು, 4,82,954 ಲಕ್ಷಕ್ಕೂ ಹೆಚ್ಚು ಸಕ್ರಿಯ ಬಳಕೆದಾರರು ಸೇರ್ಪಡೆ ಆಗಿದ್ದಾರೆ. ಇದು ಸತತ ಎರಡನೇ ತಿಂಗಳು 50 ಲಕ್ಷಕ್ಕೂ ಹೆಚ್ಚು ವಿಎಲ್ಆರ್ (ವಿಸಿಟರ್ ಲೊಕೇಶನ್ ರಿಜಿಸ್ಟರ್) ಸೇರ್ಪಡೆಯನ್ನು ಸೂಚಿಸುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ,…

Read More