Author: kannadanewsnow57

ನವದೆಹಲಿ : ದೆಹಲಿ ಮೀರತ್ ಎಕ್ಸ್‌ಪ್ರೆಸ್‌ ವೇಯಲ್ಲಿ ಕಾರು ಡಿಕ್ಕಿಯಾಗಿ ಟ್ರಾಫಿಕ್ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ವೈರಲ್ ವೀಡಿಯೊದಲ್ಲಿ, ವೇಗವಾಗಿ ಬಂದ ಎರ್ಟಿಗಾ ಕಾರು ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ವಿಪಿನ್ ಕುಮಾರ್ ಎಂಬ ಸಂಚಾರ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಹಲವಾರು ಅಡಿಗಳಷ್ಟು ಮೇಲಕ್ಕೆ ಹಾರಿ ದೂರ ಬೀಳುತ್ತಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗುತ್ತದೆ, ಆದರೆ ಗಂಭೀರ ಅಪಘಾತದಲ್ಲಿ ಉಂಟಾದ ಗಾಯಗಳಿಂದಾಗಿ ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಸಂಚಾರ ಪೊಲೀಸರು ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿರುವುದನ್ನು ತೋರಿಸಲಾಗಿದೆ. ಆ ಹೊತ್ತಿಗೆ ವೇಗವಾಗಿ ಬಂದ ಎರ್ಟಿಗಾ ಕಾರು ಬರುತ್ತಿರುವುದು ಕಂಡುಬರುತ್ತದೆ. ವಿಪಿನ್ ಕುಮಾರ್ ನಿಯಂತ್ರಣ ತಪ್ಪಿದ ಕಾರು ತನ್ನ ಕಡೆಗೆ ಚಲಿಸುತ್ತಿರುವುದನ್ನು ನೋಡಿ ತಕ್ಷಣವೇ ಮುಂಭಾಗದಿಂದ ದೂರ ಸರಿಯಲು ಪ್ರಯತ್ನಿಸುತ್ತಾರೆ, ಆದರೆ ಆಗ ತುಂಬಾ ತಡವಾಗಿರುತ್ತದೆ. ನಿಯಂತ್ರಣ ತಪ್ಪಿದ ಕಾರು ಅವನಿಗೆ ಎಷ್ಟು ಬಲವಾಗಿ ಡಿಕ್ಕಿ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವಂತಹ ಜಗದೀಶ್ ಅಲಿಯಾಸ್ ಜಗ್ಗನನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಮುಖ ಆರೋಪಿ ಆಗಿರುವಂತಹ ಜಗ್ಗ ಕೊಲೆಯಾದ ದಿನವೇ ಭಾರತ ಬಿಟ್ಟು ದುಬೈಗೆ ಪರಾರಿಯಾಗಿದ್ದ. ಇದೀಗ ಸಿಐಡಿ ಅಧಿಕಾರಿಗಳು ಆರೋಪಿ ಜಗ್ಗನನ್ನು ಬಂಧಿಸಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಅಲಿಯಾಸ್ ಜಗ್ಗನಿಗೆ ಸಿಐಡಿ ಪೋಲೀಸರು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದು, ಕೆಲ ದಿನಗಳಿಂದ ಆರೋಪಿಗಾಗಿ ಹುಡುಕಾಟ ನಡೆಸಿದ್ದು, ಇಂದು ಆರೋಪಿ ಜಗ್ಗನನ್ನು ಬಂಧಿಸಲಾಗಿದೆ. ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.…

Read More

ಉಡುಪಿ : ಅನ್ಯಾನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಸುಜಾತ್ ಭಟ್ ಅವರು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ. ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿಯಿಂದ ಸುಜಾತ್ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ವಿವರ ನೀಡುವಂತೆ ಸುಜಾತ್ ಭಟ್ ಗೆ ಎಸ್ ಐಟಿ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಬೆಳ್ತಂಗಡಿಯ ಎಸ್ ಐಟಿ ವಿಚಾರಣೆಗೆ ಆಗಮಿಸಿದ್ದಾರೆ.

Read More

ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು…

Read More

ಜೋಧ್ಪುರ : ವರದಕ್ಷಿಣೆ ಕಿರುಕುಳದಿಂದ ಉಪನ್ಯಾಸಕಿಯೊಬ್ಬಳು ತನ್ನ ಮೂರು ವರ್ಷದ ಮಗಳಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಸಂಜು ಬಿಷ್ಣೋಯ್ ಎಂಬ ಮಹಿಳೆ ತನ್ನ ಪತಿ ಮತ್ತು ಅತ್ತೆ ಮಾವಂದಿರಿಂದ ವರದಕ್ಷಿಣೆಗಾಗಿ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮಗು ಸ್ಥಳದಲ್ಲೇ ಮೃತಪಟ್ಟರೆ, ಸಂಜು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾಳೆ. ಜೋಧಪುರದ ಡಂಗಿಯಾವಾಸ್ ಪೊಲೀಸ್ ಠಾಣೆ ಪ್ರದೇಶದ ಸರ್ನಾಡಾ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ, ಸಂಜು ಮಧ್ಯಾಹ್ನ ಶಾಲೆಯಿಂದ ಹಿಂತಿರುಗಿ, ತನ್ನ ಮತ್ತು ತನ್ನ ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಘಟನೆಯ ವೇಳೆ ಪತಿ ಅಥವಾ ಅತ್ತೆ ಮಾವ ಮನೆಯಲ್ಲಿ ಇರಲಿಲ್ಲ. ಆಕೆ ಬೆಂಕಿ ಹಚ್ಚಿದ ನಂತರ, ಮನೆಯಿಂದ ಹೊಗೆ ಹೊರಬರುತ್ತಿರುವುದನ್ನು ನೆರೆಹೊರೆಯವರು ಗುರುತಿಸಿದರು, ಅವರು ತಕ್ಷಣ ಪೊಲೀಸರಿಗೆ ಮತ್ತು ಕುಟುಂಬಕ್ಕೆ ಮಾಹಿತಿ ನೀಡಿದರು. ಕುಟುಂಬ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದರು ಆದರೆ ಮಗು ಸಾವನ್ನಪ್ಪಿತ್ತು.…

Read More

ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರೋರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.  ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದ್ದಾರೆ. ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. https://twitter.com/DKShivakumar/status/1960084220967375017 ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, ‘ಗುಂಡಿ ಗಮನ’ ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 16 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

Read More

ನವದೆಹಲಿ : ಅವಲಂಬಿತ ವಿವಾಹಿತ ಮಗಳೂ ಸಹ ಅನುಕಂಪದ ನೇಮಕಾತಿಗೆ ಅರ್ಹ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇಲ್ಮನವಿ ಸಲ್ಲಿಸಿದ ಅನುಕಂಪದ ನೇಮಕಾತಿ ಅರ್ಜಿಯನ್ನು ಮರುಪರಿಶೀಲಿಸಿ ಎಂಟು ವಾರಗಳ ಒಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದ್ದು, ಡಿಯೋರಿಯಾ ನಿವಾಸಿ ಚಂದಾ ದೇವಿ ಅವರ ವಿಶೇಷ ಮೇಲ್ಮನವಿಯ ಮೇರೆಗೆ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಮತ್ತು ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ. ಚಂದಾ ದೇವಿಯ ತಂದೆ ಸಂಪೂರ್ಣಾನಂದ ಪಾಂಡೆ ಭಟ್ಪರ್ ರಾಣಿ ತೆಹಸಿಲ್‌ನ ಬಂಕಟಾ ಬ್ಲಾಕ್‌ನ ಗಜಧ್ವ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅವರು 2014 ರಲ್ಲಿ ಸೇವೆಯ ಸಮಯದಲ್ಲಿ ನಿಧನರಾದರು. ಚಂದಾ ದೇವಿ ಅನುಕಂಪದ ಕೋಟಾದಲ್ಲಿ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದರು. ಡಿಸೆಂಬರ್ 2016 ರಲ್ಲಿ, ಜಿಲ್ಲಾ ಮೂಲ ಶಿಕ್ಷಣ ಅಧಿಕಾರಿ, ಅವರು ವಿವಾಹಿತ ಮಗಳು ಮತ್ತು ಆದ್ದರಿಂದ ಸೆಪ್ಟೆಂಬರ್ 4, 2000 ರ ಸರ್ಕಾರಿ ಆದೇಶದ…

Read More

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು… • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ದಿನಾಂಕ: 27-08-2025 ರಿಂದ ಬೆಂಗಳೂರು ನಗರದಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸಲಿದ್ದು, ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟವರಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2023 ಮತ್ತು 2024ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು. ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ, ಮುಂತಾದವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಮುಂಚಿತವಾಗಿ ಏಕ ಗವಾಕ್ಷಿ ವ್ಯವಸ್ಥೆ ((Single window System) ಮೂಲಕ ಪರವಾನಗಿ ಪಡೆದುಕೊಳ್ಳುವಂತೆ ಸೂಚಿಸುವುದು. ಸಾರ್ವಜನಿಕ ರಸ್ತೆ ಹಾಗೂ ಸಾರ್ವಜನಿಕರು ಓಡಾಡುವ ಜಾಗಗಳಲ್ಲಿ ವಾಹನ ಮತ್ತು ಪಾದಚಾರಿಗಳ ಓಡಾಟಕ್ಕೆ ಅಡಚಣೆಯಾಗುವ ರೀತಿಯಲ್ಲಿ ಪೆಂಡಾಲ್, ಚಪ್ಪರ ಹಾಕಿ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲು…

Read More