Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: 2025-26ನೇ ಸಾಲಿನಲ್ಲಿ ಶಾಲೆಗಳಿಗೆ ನೀಡುವ ಸ್ಥಳೀಯ ರಜೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಿಕ್ಷಣದ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದು, ಅದರಲ್ಲಿ ಮಾನ್ಯ ಶಾಸಕರ ಪತ್ರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಶಾಲೆಗೆ ನೀಡುವ ಸ್ಥಳೀಯ ರಜೆಯು ಶೈಕ್ಷಣಿಕ ವರ್ಷಕ್ಕೆ ನಾಲ್ಕು, ನೀಡಬಹುದಾಗಿದೆ ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ತಿಳಿಸಲಾಗಿದೆ. ಆದರೆ ಸ್ಥಳೀಯ ರಜೆಯ ವರ್ಗೀಕರಣ ಹೇಗೆ ಮಾಡಬೇಕೆಂದು ಸ್ಪಷ್ಟವಾಗಿ ತಿಳಿಸಿರುವುದಿಲ್ಲ. ಇದರರ್ಥವೇನೆಂದರೆ ಸ್ಥಳೀಯ ರಜೆಯನ್ನು ಶೈಕ್ಷಣಿಕ ವರ್ಷದಲ್ಲಿ ತಿಂಗಳಿಗೆ ಎಷ್ಟು ನೀಡಬಹುದು, ಕೆಲವೊಮ್ಮ ಧಾರ್ಮಿಕ ಹಬ್ಬಗಳು ಒಂದೇ ತಿಂಗಳಲ್ಲಿ 2 ಹಬ್ಬಗಳು ಬಂದಲ್ಲಿ, ಉದಾಹರಣೆಗೆ ಹೇಳುವುದಾದರೆ ಈ ತಿಂಗಳಲ್ಲಿ (ಜುಲೈ-25) 08/08/2025 ರಂದು ವರಮಹಾಲಕ್ಷ್ಮೀ & 26/08/2025ರಂದು ಸ್ವರ್ಣಗೌರಿ ವುತ ಹಬ್ಬಗಳಿದ್ದು ಈ ಸಂದರ್ಭದಲ್ಲಿ ತಿಂಗಳಿಗೆ 2 ಸ್ಥಳೀಯ ರಜೆಯನ್ನು ನೀಡಬಹುದೇ ಎಂದು ಸ್ಥಳೀಯ ವರ್ಗೀಕರಣದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಕೋರಿರುತ್ತಾರೆ…
ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೆಸೆಟ್-2025 ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ-28-08-2025 ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 18.09.2015 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19.09.2025, ಪ್ರವೇಶ ಪತ್ರ (Hall Ticketh ಬಿಡುಗಡೆ ದಿನಾಂಕ 24.10.2025 ಪರೀಕ್ಷಾ ದಿನಾಂಕ : 02.11.2025 ಅಭ್ಯರ್ಥಿಗಳು ಕೆಸೆಟ್-2025ಕ್ಕೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು, ಯಾವುದೇ ಇತರ ಮನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಕೆಲ ವೆಬ್ಸೈಟ್ https:/lettininkarnataka.gov.in/kol ಅನ್ನು ಪ್ರವೇಶಿಸುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು…
ವಿವಾಹಿತ ವ್ಯಕ್ತಿಯೊಬ್ಬರು ತನ್ನ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ಸಾವನ್ನಪ್ಪಿದ್ದು, ನ್ಯಾಯಾಲಯವು ಗೆಳತಿಗೆ ಪರಿಹಾರವನ್ನು ಪಾವತಿಸಲು ಆದೇಶಿಸಿದೆ. ಹೌದು, ಚೀನಾದಲ್ಲಿ ನಡೆದ ಆಘಾತಕಾರಿ ಪ್ರಕರಣವೊಂದು ಮಹಿಳೆಯೊಬ್ಬರು ತನ್ನ ದಿವಂಗತ ಪ್ರೇಮಿಯ ಕುಟುಂಬಕ್ಕೆ ಪರಿಹಾರವನ್ನು ಪಾವತಿಸಲು ಆದೇಶಿಸಿದೆ. 66 ವರ್ಷದ ವಿವಾಹಿತ ವ್ಯಕ್ತಿ, ತನ್ನ ಗೆಳತಿಯೊಂದಿಗೆ ಸಮಯ ಕಳೆಯುತ್ತಿದ್ದಾಗ ಹೋಟೆಲ್ ಕೋಣೆಯಲ್ಲಿ ನಿಧನರಾದರು. ಈ ಘಟನೆ ಜುಲೈ 14, 2024 ರಂದು ಗುವಾಂಗ್ಕ್ಸಿ ಜುವಾಂಗ್ ಸ್ವಾಯತ್ತ ಪ್ರದೇಶದಲ್ಲಿರುವ ಪಿಂಗ್ನಾನ್ ಕೌಂಟಿಯಲ್ಲಿ ಸಂಭವಿಸಿದೆ. ಝೌ ಎಂಬ ಉಪನಾಮದಿಂದ ಮಾತ್ರ ಗುರುತಿಸಲ್ಪಟ್ಟ ಮೃತ ವ್ಯಕ್ತಿ ದೀರ್ಘಕಾಲದಿಂದ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಮತ್ತು ಈ ಹಿಂದೆ ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಸ್ಥಳೀಯ ಮಾಧ್ಯಮಗಳ ಪ್ರಕಾರ, ಝೌ ತನ್ನ ಗೆಳತಿಯೊಂದಿಗೆ ಹೋಟೆಲ್ಗೆ ಭೇಟಿ ನೀಡಿದ್ದರು, ಅವರನ್ನು ಝುವಾಂಗ್ ಎಂಬ ಉಪನಾಮದಿಂದ ಗುರುತಿಸಲಾಗಿದೆ. ಇಬ್ಬರೂ ನಿದ್ರಿಸುವ ಮೊದಲು ಆತ್ಮೀಯ ಸಂಬಂಧದಲ್ಲಿ ತೊಡಗಿದ್ದರು ಎಂದು ವರದಿಯಾಗಿದೆ. ಗಂಟೆಗಳ ನಂತರ, ಝುವಾಂಗ್ ಎಚ್ಚರವಾದಾಗ, ಝೌ ಮೃತಪಟ್ಟಿರುವುದು ಗಮನಿಸಿದ್ದಾರೆ. ಝೌ ಅವರ ಪತ್ನಿ ಮತ್ತು ಮಗ…
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು… •ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ…
ಅಮೆರಿಕದಲ್ಲಿ ನ್ಯೂ ವರ್ಲ್ಡ್ ಸ್ಕ್ರೂವರ್ಮ್ (ಮಾಂಸ ತಿನ್ನುವ ಪರಾವಲಂಬಿ) ರೋಗದ ಮೊದಲ ಪ್ರಕರಣ ವರದಿಯಾಗಿದೆ. ಅಮೆರಿಕ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆ ಭಾನುವಾರ ಈ ಬಗ್ಗೆ ಮಾಹಿತಿ ನೀಡಿದೆ. ಮೇರಿಲ್ಯಾಂಡ್ ಆರೋಗ್ಯ ಇಲಾಖೆ ಮತ್ತು ಯುಎಸ್ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಈ ಪ್ರಕರಣವನ್ನು ತನಿಖೆ ಮಾಡಿವೆ ಎಂದು HHS ವಕ್ತಾರ ಆಂಡ್ರ್ಯೂ ಜಿ. ನಿಕ್ಸನ್ ರಾಯಿಟರ್ಸ್ಗೆ ಇಮೇಲ್ನಲ್ಲಿ ತಿಳಿಸಿದ್ದಾರೆ, ಇದನ್ನು ಆಗಸ್ಟ್ 4 ರಂದು ಸಿಡಿಸಿ ನ್ಯೂ ವರ್ಲ್ಡ್ ಸ್ಕ್ರೂವರ್ಮ್ ಎಂದು ದೃಢಪಡಿಸಿದೆ. ಈ ಪ್ರಕರಣವು ಎಲ್ ಸಾಲ್ವಡಾರ್ ಪ್ರವಾಸದಿಂದ ಹಿಂದಿರುಗಿದ ವ್ಯಕ್ತಿಗೆ ಸಂಬಂಧಿಸಿದೆ ಎಂದು ಅವರು ಹೇಳಿದರು. ಈ ಸುದ್ದಿಯು ಜಾನುವಾರು ಸಾಕಣೆದಾರರು, ಮಾಂಸ ಉತ್ಪಾದಕರು ಮತ್ತು ವ್ಯಾಪಾರಿಗಳ ಕಳವಳವನ್ನು ಹೆಚ್ಚಿಸಿದೆ, ಏಕೆಂದರೆ ಸ್ಕ್ರೂವರ್ಮ್ ಮಧ್ಯ ಅಮೆರಿಕ ಮತ್ತು ದಕ್ಷಿಣ ಮೆಕ್ಸಿಕೊದಿಂದ ಉತ್ತರಕ್ಕೆ ಚಲಿಸುತ್ತಿದೆ. ಸರ್ಕಾರವು ಇದರ ಬಗ್ಗೆ ಎಚ್ಚರದಿಂದಿದೆ. ಸ್ಕ್ರೂವರ್ಮ್ ಏಕಾಏಕಿ ಟೆಕ್ಸಾಸ್ನಲ್ಲಿ $ 1.8 ಬಿಲಿಯನ್ ನಷ್ಟವನ್ನು ಉಂಟುಮಾಡಬಹುದು ಎಂದು USDA ಅಂದಾಜಿಸಿದೆ.…
ಬೆಂಗಳೂರು : ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವುದು, ಸಾಗಿಸುವುದು, ಮಾರಾಟ ಮತ್ತು ವಿಸರ್ಜಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ. ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ…
ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ತಿಮ್ಲಾಪುರದ ಶೈಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಸತತ ಎರಡನೇ ದಿನವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ನಿನ್ನೆ ಸಮೀರ್ ನನ್ನು ಐದು ಗಂಟೆಗಳ ಕಾಲ ವಿಚಾರಣೆಯನ್ನು ಪೊಲೀಸರು ನಡೆಸಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಿದ್ದಾನೆ. ನಿನ್ನೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ವಿಚಾರಣೆ ನಡೆಸಲಾಯಿತು. ಬೆಳ್ತಂಗಡಿ ಪಿಎಸ್ಐ ಸುಬ್ಬಾಪುರ್ ಮಠ್ ಅವರಿಂದ ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.
ನವದೆಹಲಿ : ಅಂಗವಿಕಲರ ಬಗ್ಗೆ ಅಸಂವೇದನಾಶೀಲ ಹಾಸ್ಯ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಪ್ರಸಿದ್ಧ ಸ್ಟ್ಯಾಂಡ್-ಅಪ್ ಹಾಸ್ಯನಟ ಸಮಯ್ ರೈನಾ ಅವರಿಗೆ ಛೀಮಾರಿ ಹಾಕಿದೆ. ಸಮಯ್ ರೈನಾ ಅವರು ನ್ಯಾಯಾಲಯದಲ್ಲಿ ಮಾತ್ರವಲ್ಲದೆ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಎಸ್ಎಂಎ ಕ್ಯೂರ್ ಫೌಂಡೇಶನ್ ಸಲ್ಲಿಸಿದ ಅರ್ಜಿಯನ್ನು ಆಲಿಸುವಾಗ ಈ ಹೇಳಿಕೆ ನೀಡಿದೆ. ಅರ್ಜಿಯಲ್ಲಿ, ಹಾಸ್ಯನಟರಾದ ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮರ್ಜಿತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರು ಅಂಗವಿಕಲರನ್ನು ಗೇಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನ್ಯಾಯಾಲಯವು ಹಾಸ್ಯನಟರಿಗೆ, ‘ನೀವು ನ್ಯಾಯಾಲಯದಲ್ಲಿ ನೀಡಿದ ಕ್ಷಮೆಯಾಚನೆಯನ್ನು, ನಿಮ್ಮ ಸಾಮಾಜಿಕ ಮಾಧ್ಯಮದಲ್ಲಿಯೂ ನೀಡಿ’ ಎಂದು ಹೇಳಿತು.
ನವದೆಹಲಿ : ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ 2025 ಅಂಗೀಕಾರವಾದ ನಂತರ ಬಿಸಿಸಿಐ ಮತ್ತು ಡ್ರೀಮ್ 11 ತಮ್ಮ ಸಂಬಂಧವನ್ನು ಸ್ಥಗಿತಗೊಳಿಸುತ್ತಿವೆ. ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ. ಬಿಸಿಸಿಐ ಮತ್ತು ಡ್ರೀಮ್ 11 ತಮ್ಮ ಸಂಬಂಧವನ್ನು ಸ್ಥಗಿತಗೊಳಿಸುತ್ತಿವೆ. ಭವಿಷ್ಯದಲ್ಲಿ ಅಂತಹ ಯಾವುದೇ ಸಂಸ್ಥೆಗಳೊಂದಿಗೆ ಬಿಸಿಸಿಐ ತೊಡಗಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಚಿತ್ ಸೈಕಿಯಾ ತಿಳಿಸಿದ್ದಾರೆ. https://twitter.com/ANI/status/1959848080041271357?ref_src=twsrc%5Egoogle%7Ctwcamp%5Eserp%7Ctwgr%5Etweet














