Author: kannadanewsnow57

ಹುಬ್ಬಳ್ಳಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಭುಗಿಲೆದ್ದಿದೆ. ರಾಜ್ಯದ ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯವರೆಗೆ ತೆರಳಿ, ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಚೇರಿ ಬಳಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆದಿದ್ದು, ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದ ಬೆನ್ನಲ್ಲೇ ಪೊಲೀಸರು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Read More

ಬೆಂಗಳೂರು : ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ. https://twitter.com/dineshgrao/status/2001513646212681966?s=20  ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ- ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.

Read More

ಬೆಂಗಳೂರು : ಆಸ್ತಿ ಮಾಲೀಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಮ್ಮ ಮನೆಯಲ್ಲೇ ಕುಳಿತು ಇ – ಖಾತಾವನ್ನು ಪಡೆದುಕೊಳ್ಳಿ. ಸಾರ್ವಜನಿಕ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತವಾಗಿದೆ. ಬೇಕಾದ ದಾಖಲಾತಿಗಳು ಮಾಲೀಕರ ಭಾವಚಿತ್ರ ಮತ್ತು ಆಧಾರ್ ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು) ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ) ಸ್ವತ್ತಿನ ಛಾಯಾಚಿತ್ರ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗುವುದು. www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು. ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು. K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಇ-ಖಾತಾ ಪಡೆಯುವ ಮೂಲಕ…

Read More

ನೋಯ್ಡಾ: ವಿಶ್ವದ ಅತಿ ಎತ್ತರದ ಪ್ರತಿಮೆ – ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು ಮತ್ತು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ನನ್ನ ತಂದೆ ಶ್ರೀ ರಾಮ್ ವಂಜಿ ಸುತಾರ್ ಅವರು ಡಿಸೆಂಬರ್ 17 ರ ಮಧ್ಯರಾತ್ರಿ ನಮ್ಮ ನಿವಾಸದಲ್ಲಿ ನಿಧನರಾದರು ಎಂದು ನಾವು ತೀವ್ರ ದುಃಖದಿಂದ ನಿಮಗೆ ತಿಳಿಸುತ್ತೇವೆ, ”ಎಂದು ಅವರ ಮಗ ಅನಿಲ್ ಸುತಾರ್ ಗುರುವಾರ ಪತ್ರಿಕೆಗಳೊಂದಿಗೆ ಹಂಚಿಕೊಂಡ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ. 1925 ರ ಫೆಬ್ರವರಿ 19 ರಂದು ಇಂದಿನ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ ವಿನಮ್ರ ಕುಟುಂಬದಲ್ಲಿ ಜನಿಸಿದ ಸುತಾರ್ ತಮ್ಮ ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು. ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ ಅಂಡ್ ಆರ್ಕಿಟೆಕ್ಚರ್ನಿಂದ ಚಿನ್ನದ ಪದಕ ವಿಜೇತರಾಗಿರುವ ಅವರು, ಸಾಧನೆಗಳ ದೀರ್ಘ ಪಟ್ಟಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿಯವರ…

Read More

ನೋಯ್ಡಾ: ವಿಶ್ವದ ಅತಿ ಎತ್ತರದ ಪ್ರತಿಮೆ – ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು ಮತ್ತು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ನನ್ನ ತಂದೆ ಶ್ರೀ ರಾಮ್ ವಂಜಿ ಸುತಾರ್ ಅವರು ಡಿಸೆಂಬರ್ 17 ರ ಮಧ್ಯರಾತ್ರಿ ನಮ್ಮ ನಿವಾಸದಲ್ಲಿ ನಿಧನರಾದರು ಎಂದು ನಾವು ತೀವ್ರ ದುಃಖದಿಂದ ನಿಮಗೆ ತಿಳಿಸುತ್ತೇವೆ, ”ಎಂದು ಅವರ ಮಗ ಅನಿಲ್ ಸುತಾರ್ ಗುರುವಾರ ಪತ್ರಿಕೆಗಳೊಂದಿಗೆ ಹಂಚಿಕೊಂಡ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ. 1925 ರ ಫೆಬ್ರವರಿ 19 ರಂದು ಇಂದಿನ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ ವಿನಮ್ರ ಕುಟುಂಬದಲ್ಲಿ ಜನಿಸಿದ ಸುತಾರ್ ತಮ್ಮ ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು. ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ ಅಂಡ್ ಆರ್ಕಿಟೆಕ್ಚರ್ನಿಂದ ಚಿನ್ನದ ಪದಕ ವಿಜೇತರಾಗಿರುವ ಅವರು, ಸಾಧನೆಗಳ ದೀರ್ಘ ಪಟ್ಟಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿಯವರ…

Read More

ಬೆಂಗಳೂರು : 2023ರಲ್ಲಿ 134 ಸ್ಥಾನ ಪಡೆದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂತು. ಅಧಿಕಾರ ವಹಿಸಿಕೊಂಡ ಕೂಡಲೇ ರಾಜ್ಯದ ಜನರಿಗೆ ಭರವಸೆ ನೀಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರು. ಆದರೆ ಇದೀಗ ಈ ಒಂದು ಗ್ಯಾರೆಂಟಿ ಯೋಜನೆಗಳೇ ರಾಜ್ಯ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿವೆ ಎಂದು ಹೇಳಲಾಗುತ್ತಿದೆ. ಹೌದು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಆದ್ರೆ ಇದೇ ಗ್ಯಾರಂಟಿ ಯೋಜನೆಗಳು ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆಯಾ? ಅನ್ನೋ ಪ್ರಶ್ನೆ ಎದ್ದಿದೆ. ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಗೃಹಲಕ್ಷ್ಮಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದಕ್ಕೆ ಪೂರಕವೆಂಬಂತೆ ನಿನ್ನೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ರಾಮನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ರಾಮನಗರದ ಮಾಗಡಿ ಪೊಲೀಸರಿಂದ ಇದೀಗ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ವಿಕಾಸ್ ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಪ್ರೀತಿಯ ನೆನಪಲ್ಲಿ ವಿಕಾಸ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ ನಂತರ ಯುವತಿಯ ಜೊತೆಗೆ ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದಾರೆ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ವಿಕಾಸ್ ಬೆದರಿಕೆ ಹಾಕಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಅಂತ ಬೆದರಿಕೆ ಹಾಕಿದ್ದಾನೆ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾನೆ. ಆನಂತರ ಪ್ರಶಾಂತ್ ಚೇತನ್ ಜೊತೆಗೆ ಸೇರಿಸಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ನೆನ್ನೆ ರಾಮನಗರದ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ, ವಿದ್ಯಾರ್ಥಿನಿಯ ದೂರಿನ ಅನ್ವಯ ಇದೀಗ ಪೊಲೀಸರು ವಿಕಾಸ್ ಪ್ರಶಾಂತ್ ಮತ್ತು…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ರಾಮಗರದಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವರದಿಯಾಗಿದೆ. ರಾಮನಗರದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ವಿಕಾಸ್, ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳಾಗಿದ್ದು, 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ  ಗ್ಯಾಂಗ್ ರೇಪ್ ಎಸಗಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Read More

ಬೆಂಗಳೂರು : ಇತ್ತೀಚಿಗೆ ಮೈಸೂರಲ್ಲಿ ಸ್ನಾನಕ್ಕೆ ಎಂದು ಗೀಸರ್ ಆನ್ ಮಾಡಿದ್ದಾಗ ಗೀಸರ್ ಅನೀಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ ಬೆಂಗಳೂರಲ್ಲಿ ಇತ್ತೀಚೆಗಷ್ಟೇ ಸ್ನಾನ ಮಾಡುವುದಕ್ಕೆ ಬಾತ್ ರೂಮ್ ಗೆ ಹೋದ ತಾಯಿ ಮಗು ಗ್ಯಾಸ್ ಗೀಸರ್ ನಿಂದಾಗಿ ಸಾವನ್ನಪ್ಪಿದ್ದರು. ಇದೆ ರೀತಿ ಇನ್ನು ಹಲವಾರು ದುರಂತಗಳು ನಡೆದಿದ್ದವು. ಆದರೆ ಗೀಸರ್ ಬಳಸೋಕು ಮುನ್ನ ಅದನ್ನು ಯಾವ ರೀತಿ ಬಳಸಬೇಕು? ಯಾವ ಮುನ್ನೆಚರಿಕೆ ವಹಿಸಬೇಕು ಅನ್ನೋದನ್ನ ತಿಳಿಯೋಣ. ಮೊದಲಿಗೆ ಗೀಸರ್ ಬಗ್ಗೆ ಮಾಹಿತಿ ತಿಳಿದುಕೊಂಡರೆ ಬಹಳ ಒಳ್ಳೆಯದು ಮನೆಯ ಬಾತ್ ರೂಮ್ ನಲ್ಲಿ ಗೀಸರ್ ಅನ್ನು ಫಿಕ್ಸ್ ಮಾಡುವ ಸಂದರ್ಭದಲ್ಲಿ, ಪರಿಣಿತರೊಂದಿಗೆ ಅಥವಾ ಎಲೆಕ್ಟ್ರೀಷಿಯನ್ ಜೊತೆಗೆ ಈ ಗೀಸರ್ ಗೆ ಸಂಬಂಧ ಪಟ್ಟ ಮಾಹಿತಿಯನ್ನು ಸರಿಯಾಗಿ ಕೇಳಿ ತಿಳಿದುಕೊಳ್ಳಿ.ಗೀಸರ್ ಸೆಟ್ಟಿಂಗ್ ಮಾಡುವ ಕನೆಕ್ಷನ್ ನಲ್ಲಿ ಆಚೆ ಈಚೆ ಆಗಿದ್ದರೆ ಅಥವಾ ಗ್ಯಾಸ್ ಲೀಕೇಜ್ ಆಗಿದ್ದರೆ ಏನೆಲ್ಲಾ ಮುನ್ನಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಬಾತ್ ರೂಮ್ ನಲ್ಲಿ ಕಿಟಕಿ ಅಥವಾ…

Read More

ಬೆಂಗಳೂರು : ಗ್ರಾಮ ಪಂಚಾಯಿತಿಯು ಗ್ರಾಮ ಮಟ್ಟದ ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಗ್ರಾಮಸ್ಥರಿಂದ ಚುನಾಯಿತರಾದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ. ಈ ಸಂಸ್ಥೆಯು ಗ್ರಾಮಗಳ ಅಭಿವೃದ್ಧಿ, ಮೂಲಸೌಕರ್ಯಗಳ ನಿರ್ವಹಣೆ (ರಸ್ತೆ, ನೀರು, ದೀಪ), ತೆರಿಗೆ ವಸೂಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿಯಂತಹ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ. ಗ್ರಾಮ ಪಂಚಾಯಿತಿಯಿಂದ ಈ ಕೆಳಕಂಡ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸಬಹುದಾಗಿದೆ. 1. ಗ್ರಾಮ ಪಂಚಾಯಿತಿಗೆ ಬಿಡುಗಡೆಯಾದ ಅನುದಾನದ ವಿವರಗಳು. 2. ಗ್ರಾಮ ಪಂಚಾಯತ್ ವೆಚ್ಚ 3. ಗ್ರಾಮ ಪಂಚಾಯತಿ ಡಿ.ಸಿ.ಬಿ. ತನ್ನ ವಿವರಗಳು (ಬೇಡಿಕ, ವಸೂಲಿ ಮತ್ತು ಬಾಕಿ) 4. ಮನೆ ಖಾತೆ ಉದ್ಯತ ಭಾಗ, ಡಿಮ್ಯಾಂಡ್ ಉದ್ಯತ ಭಾಗ, ಲೈಸೆನ್ಸ್, ಮೂಟೇಶನ್ ಇತ್ಯಾದಿ ಪತ್ರಗಳು 5. ಗ್ರಾಮ ಪಂಚಾಯತಿ ಜಮಾ ಮತ್ತು ಖರ್ಚಿನ ವಿವರಗಳು (ನಮೂನೆ-9ರಲ್ಲಿ) 6. ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ಹಾಗೂ ಸ್ನಾಯಿ ಸಮಿತಿಗಳ ನಡವಳಿಗಳು 7. ಗ್ರಾಮ ಪಂಚಾಯತಿ ಸಭಾ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮಗಳು 8. ಗ್ರಾಮ ಸಭೆ ನಡವಳಿಗಳ ಮೇಲೆ ತೆಗೆದುಕೊಂಡ…

Read More