Author: kannadanewsnow57

ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅನ್ಯಕೋಮಿನ ಯುವಕ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಶಾಸಕ ಯತ್ನಾಳ್ ವಿರುದ್ಧ ಹುಸೇನಿ ಎಂಬುದ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋದಲ್ಲಿ ಆಜಾನ್ ಕುರಿತು ಅಧಿವೇಶನದಲ್ಲಿ ಶಾಸಕ ಯತ್ನಾಳ್ ಮಾತನಾಡಿದ್ದನ್ನು ಪ್ರಸ್ತಾಪಿಸಿದ್ದಾನೆ. ಯತ್ನಾಳ್ ಹೇಳಿಕೆ ಖಂಡಿಸಿ ನೀನು ಬೂಟು ನೆಕ್ಕಿದ ವಂಶಸ್ಥ ಹೇಳಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಮುಸಲಾಪುರದಲ್ಲಿ ಶಾಸಕ ಯತ್ನಾಳ್ ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ವಿಡಿಯೋ ಹರಿಬಿಟ್ಟಿರುವ ಹುಸೇನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಗಿರಿ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ, ಈ ಯೋಜನೆಗೆ ಅರ್ಹರಾಗಿರುವ ಜನರಿಗೆ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ನೀಡಲಾಗುತ್ತದೆ. ಈ ಯೋಜನೆಗೆ ಸೇರಿದ ನಂತರ, ನಿಮ್ಮ ಆಯುಷ್ಮಾನ್ ಕಾರ್ಡ್ ಅನ್ನು ಮೊದಲು ತಯಾರಿಸಲಾಗುತ್ತದೆ ಏಕೆಂದರೆ ಇದು ನೀವು ಉಚಿತ ಚಿಕಿತ್ಸೆಯನ್ನು ಪಡೆಯುವ ಕಾರ್ಡ್ ಆಗಿದೆ, ಆದರೆ ನಿಮ್ಮ ನಗರದ ಯಾವ ಆಸ್ಪತ್ರೆಯಲ್ಲಿ ಈ ಆಯುಷ್ಮಾನ್ ಕಾರ್ಡ್‌ನೊಂದಿಗೆ ನಿಮ್ಮ ಉಚಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ತಿಳಿಯಬೇಕಾ? ಹಾಗಿದ್ರೆ ಮುಂದೆ ಓದಿ… ನೀವು ಆಯುಷ್ಮಾನ್ ಕಾರ್ಡ್ ಪಡೆದರೆ, ಈ ಯೋಜನೆಯಡಿಯಲ್ಲಿ, ನೀವು ಈ ಕಾರ್ಡ್ ಮೂಲಕ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತೀರಿ. ಆಯುಷ್ಮಾನ್ ಕಾರ್ಡ್ ಹೊಂದಿರುವವರು ವಾರ್ಷಿಕವಾಗಿ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಕಾರ್ಡ್ ಹೊಂದಿರುವವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಸರ್ಕಾರವು ಪ್ರತಿ ಹಣಕಾಸು ವರ್ಷದಲ್ಲಿ ಆಯುಷ್ಮಾನ್ ಕಾರ್ಡ್‌ನಲ್ಲಿ ಈ ಮಿತಿಯನ್ನು ನಿಗದಿಪಡಿಸುತ್ತದೆ ಮತ್ತು ಕಾರ್ಡ್ ಹೊಂದಿರುವವರು ಇದನ್ನು ಉಚಿತ ಚಿಕಿತ್ಸೆಗಾಗಿ ಬಳಸಬಹುದು. ಈ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು…

Read More

ಬೆಂಗಳೂರು : ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ವಯಸ್ಸಾದವರಿಗೆ ಬಯೋಮೆಟ್ರಿಕ್ ನೀಡಲು ತೊಂದರೆ ಉಂಟಾದಲ್ಲಿ ಐರೀಸ್ ಸ್ಕ್ಯಾನರ್ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್ ಹಾಗೂ ಐರೀಸ್ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1958831730716287194

Read More

ಧಾರವಾಡ : ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಡಳಿತಕ್ಕೆ ಪ್ರಾಥಮಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ಈ ವರದಿ ಸಲ್ಲಿಸಿ, ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.  ಅವರು ಇಂದು (ಆ.23) ಬೆಳಿಗ್ಗೆ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಆಗಿರುವ ಮನೆ ಹಾನಿ, ಬೆಳೆಹಾನಿ,  ತಡಹಾಳ  ಸೇತುವೆ ಹಾನಿ ಪರಿಶೀಲಿಸಿ, ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಉಪವಿಭಾಗಾಧಿಕಾರಿ, ತಹಶೀಲ್ದಾರರು, ಕೃಷಿ ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ಕಳೆದ 4 ದಿನಗಳಿಂದ ಬೆಳಹಾನಿಯ ಸಮಿಕ್ಷೆಯನ್ನು ತಂಡಗಳನ್ನು…

Read More

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ವೇಗವಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಈ ಸಮಸ್ಯೆ ಎಷ್ಟು ಅಪಾಯಕಾರಿ ಎಂದರೆ ಅದು ವ್ಯಕ್ತಿಯ ಜೀವವನ್ನೇ ಬಲಿ ತೆಗೆದುಕೊಳ್ಳುತ್ತದೆ. ಬ್ರೈನ್ ಸ್ಟ್ರೋಕ್ ಎಂದರೇನು? ಮೆದುಳಿನ ಯಾವುದೇ ಭಾಗದಲ್ಲಿ ರಕ್ತದ ಹರಿವು ನಿಂತಾಗ ಅಥವಾ ಛಿದ್ರವಾಗಿ ರಕ್ತಸ್ರಾವ ಪ್ರಾರಂಭವಾದಾಗ ಬ್ರೈನ್ ಸ್ಟ್ರೋಕ್ ಸಂಭವಿಸುತ್ತದೆ. ಇದರಿಂದಾಗಿ, ಆ ಭಾಗದ ಮೆದುಳಿನ ಕೋಶಗಳು ಆಮ್ಲಜನಕ ಮತ್ತು ಪೋಷಣೆಯ ಕೊರತೆಯಿಂದಾಗಿ ಕೆಲವೇ ನಿಮಿಷಗಳಲ್ಲಿ ಸಾಯಲು ಪ್ರಾರಂಭಿಸುತ್ತವೆ. ಪಾರ್ಶ್ವವಾಯು ಮೆದುಳಿನ ಯಾವುದೇ ಭಾಗಕ್ಕೆ ಗಂಭೀರ ಹಾನಿಯನ್ನುಂಟುಮಾಡಬಹುದು. ಭಾರತದಲ್ಲಿ ಪ್ರತಿ 40 ಸೆಕೆಂಡುಗಳಿಗೆ ಒಂದು ಪಾರ್ಶ್ವವಾಯು ಪ್ರಕರಣ ಭಾರತದಲ್ಲಿ ಪಾರ್ಶ್ವವಾಯುವಿನ ಹೊರೆ ತುಂಬಾ ಹೆಚ್ಚಾಗಿದೆ. WHO ಮತ್ತು ಲ್ಯಾನ್ಸೆಟ್ ನರವಿಜ್ಞಾನದ ಇತ್ತೀಚಿನ ವರದಿಗಳ ಪ್ರಕಾರ, WHO ಪ್ರಕಾರ, ಪ್ರತಿ ವರ್ಷ 1.5 ಕೋಟಿ ಜನರು ಪಾರ್ಶ್ವವಾಯುವಿಗೆ ಒಳಗಾಗುತ್ತಾರೆ ಮತ್ತು ಈ ಪೈಕಿ ಸುಮಾರು 50 ಲಕ್ಷ ಜನರು ಸಾಯುತ್ತಾರೆ. ಪ್ರತಿ 40 ಸೆಕೆಂಡುಗಳಿಗೊಮ್ಮೆ ಹೊಸ ಪ್ರಕರಣ ವರದಿಯಾಗುತ್ತದೆ. ಭಾರತದಲ್ಲಿ ಅಧಿಕ ರಕ್ತದೊತ್ತಡವೇ…

Read More

ಗುರುವಿನ ಅನುಗ್ರಹದಿಂದ ಕೋಟೇಶ್ವರ ಯೋಗ ಬರುತ್ತದೆ. ನಮ್ಮ ಜೀವನದಲ್ಲಿ ಆಗಬಹುದಾದ ಎಲ್ಲಾ ಒಳ್ಳೆಯ ವಿಷಯಗಳಿಗೆ ಗುರು ಭಗವಾನ್ ಕಾರಣ. ಗುರುವನ್ನು ನೋಡುವುದು ಕೋಟ್ಯಂತರ ಪ್ರಯೋಜನಗಳು ಎಂದು ಹೇಳಲಾಗುತ್ತದೆ. ಅಂತಹ ಗುರು ಭಗವಾನನ ಅನುಗ್ರಹವನ್ನು ಪಡೆಯಲು ಹಲವು ವಿಭಿನ್ನ ಪೂಜಾ ವಿಧಾನಗಳು ಮತ್ತು ಪರಿಹಾರಗಳು ಇದ್ದರೂ, ಅವುಗಳನ್ನು ಮಾಡಲು ಉತ್ತಮವಾದ ದಿನ ಯಾವುದಾದರೂ ಇದೆಯೇ? ಹಾಗೆ ನೋಡಿದರೆ, ಪ್ರತಿ ಗುರುವಾರವನ್ನು ಗುರು ಭಗವಾನರ ದಿನವೆಂದು ಪರಿಗಣಿಸಲಾಗುತ್ತದೆ. ಗುರುವಿನ ನಕ್ಷತ್ರ, ಪುಷ ಮತ್ತು ಗುರುವಾರ ಒಟ್ಟಿಗೆ ಬರುವ ದಿನವನ್ನು ನಾವು ಗುರು ಪುಷ್ಯ ಯೋಗ ಎಂದು ಕರೆಯುತ್ತೇವೆ. ಅಂತಹ ದಿನವು ಆಗಸ್ಟ್ 21 ರಂದು ಬರುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಆ ದಿನ ನಾವು ಮಾಡಬೇಕಾದ ಸರಳ ಪರಿಹಾರಗಳನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ. https://twitter.com/CMofKarnataka/status/1959146545909276959 ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಲು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟವು ಅನುಮೋದಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿಯ ಬಗ್ಗೆ ಸದನಕ್ಕೆ ಮಾಹಿತಿ ನೀಡಿದರು. ಇನ್ನು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಈ ಹಿಂದೆ ಶೇ.75 ರಷ್ಟು ಅನುದಾನ ಕೇಂದ್ರ ಭರಿಸಿದರೆ, ಶೇ.25ರಷ್ಟನ್ನು ಮಾತ್ರ ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೇಂದ್ರದ ಪಾಲು ಶೇ.40 ರಿಂದ 42ರಷ್ಟು ಮಾತ್ರ ಬರುತ್ತಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದು ಹೇಳಿದ್ದಾರೆ.

Read More

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಜಾಮೀನ ಸಿಕ್ಕ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ ಅವರು, ನಮ್ಮ ಹೋರಾಟ ಮುಂದುವರೆಯಲಿದೆ, ಸಹಕಾರ ನೀಡಿದ ವಕೀಲರಿಗೆ ಅಭಿನಂದನೆ ಸಲ್ಲಿಸುವೆ. ಅನಾಮಿಕ ಬಂಧನ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Read More

ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್ಸಿಂ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್ಸಿ  ಗ್ರೂಪ್-ಸಿ, RRB ಮತ್ತು ಎಸ್ಎ ಸ್ಸಿಬ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  https://sevasindhu.karnataka.gov.in/…/DepartmentServices   ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್ಲೈ:ನ್ನuಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು https://dom.karnataka.gov.in  ನಲ್ಲಿ ಲಭ್ಯವಿದೆ. -ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ: ಯುಪಿಎಸ್ಸಿಮ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್ಸಿಾ ಗ್ರೂಪ್-“ಸಿ” ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಟ 35 ವರ್ಷಗಳು ಮತ್ತು ಆರ್ಆೆರ್ಬಿ್ ಮತ್ತು ಎಸ್ಎ್ಸ್ಸಿದ ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಟ 30 ವರ್ಷಗಳು ಮೀರಿರಬಾರದು.…

Read More

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Read More