Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಗೆ ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. ಯೂಟ್ಯೂಬರ್ ಸಮೀರ್ ಗೆ ಆಗಸ್ಟ್ 24 ರಂದು ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ನೀಡಿದ್ದಾರೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ನವದೆಹಲಿ : ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕ್ಯಾನ್ಸರ್ ಗೆ ಔಷಧ ಕಂಡುಹಿಡಿಯುವ ನಿಟ್ಟಿನಲ್ಲಿ ಫ್ಲೋರಿಡಾ ವಿವಿಯು ಮಹತ್ವದ ಸಂಶೋಧನೆಯನ್ನು ನಡೆಸಿದೆ. ಇದುವರೆಗೂ ಎಲ್ಲಾ ರೀತಿಯ ಸಂಶೋಧನೆಗಳು ಕ್ಯಾನ್ಸರ್ ಗಡ್ಡೆಯನ್ನು ನಾಶ ಮಾಡುವ ಉದ್ದೇಶದೊಂದಿಗೆ ನಡೆಸಲಾಗು ತ್ತಿತ್ತು. ಆದರೆ ಫ್ಲೋರಿಡಾ ವಿವಿಯ ವಿಜ್ಞಾನಿಗಳ ತಂಡ ನೇರವಾಗಿ ಟ್ಯೂಮರ್ ನಿಯಂತ್ರಣದ ಬದಲಾಗಿ ಟ್ಯೂಮರ್ ವಿರುದ್ಧ ದೇಹದಲ್ಲಿ ಪ್ರತಿಕಾಯ ಶಕ್ತಿಯನ್ನು ಪ್ರಚೋದಿಸುವ ಮತ್ತು ಟ್ಯೂಮರ್ ಚಿಕಿತ್ಸೆಗೆ ಸ್ಪಂದಿಸುವ ರೀತಿಯಲ್ಲಿ ಉತ್ತೇಜಿಸುವ ಆಧಾರದಲ್ಲಿ ಸಂಶೋಧನೆ ನಡೆಸಿದೆ. ಕೋವಿಡ್ ಲಸಿಕೆಯಲ್ಲಿ ಬಳಸಲಾದ ಎಂಆರ್ ಎನ್ಎ ಪದ್ಧತಿ ಆಧರಿಸಿ ಲಸಿಕೆಯನ್ನು ಇಲಿಗಳ ಮೇಲೆ ಪ್ರಯೋಗಿಸಲಾಗಿದ್ದು, ಈ ವೇಳೆ ಅದು ಕ್ಯಾನ್ಸರ್ ಟ್ಯೂಮರ್ ವಿರುದ್ಧ ದೇಹದ ಪ್ರತಿಕಾಯಗಳು ಹೋರಾಡಲು ಪ್ರಚೋದಿಸಿದ್ದು, ಟ್ಯೂಮರ್ ಗುಣಪಡಿಸಿದ್ದು ಕಂಡುಬಂದಿದೆ.ಈ ಮೂಲಕ ಇದು ಭವಿಷ್ಯದಲ್ಲಿ ಎಲ್ಲಾ ರೀತಿಯ ಕ್ಯಾನ್ಸರ್ ಗೆ ದಿವ್ಯೌಷಧ ಆಗಬಹುದು ಎಂಬ ನಿರೀಕ್ಷೆ ಹುಟ್ಟುಹಾಕಿದೆ.
ಬೆಂಗಳೂರು: ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ. ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡುವುದು ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು…
ನಿಮ್ಮ ಫೋನ್’ನಲ್ಲಿ ಯಾವುದೇ ಬದಲಾವಣೆಗಳನ್ನ ಗಮನಿಸಿದ್ದೀರಾ.? ನೀವು ಕರೆ ಮಾಡಿದಾಗ ದೊಡ್ಡ ಅಕ್ಷರಗಳಲ್ಲಿ ಬರುತ್ತಿದೆಯೇ.? ಮತ್ತು ಕಾಲ್, ವಿಡಿಯೋ ಕಾಲ್, ರೆಕಾರ್ಡ್, ಹೋಲ್ಡ್, ಆಡ್ ಮೈ ಕ್ಯಾಮೆರಾ, ಸ್ಪ್ಯಾಮ್, ಎಲ್ಲಾ ಕರೆಗಳು, ಮಿಸ್ಡ್ ಕಾಲ್’ಗಳಂತಹ ಎಲ್ಲಾ ಡೇಟಾವನ್ನ ಪರದೆಯ ಮೇಲೆ ಪಡೆಯುತ್ತಿದ್ದೀರಾ.? ನೀವು ಇದರ ಬಗ್ಗೆ ಚಿಂತಿತರಾಗಿದ್ದೀರಾ.? ಚಿಂತಿಸಬೇಡಿ, ಇದೆಲ್ಲವೂ ನವೀಕರಣದ ಭಾಗವಾಗಿದೆ ಎಂದು ವಿಶ್ಲೇಷಕರು ಹೇಳುತ್ತಾರೆ. ಈ ಬದಲಾವಣೆಗಳು ವಿಶೇಷವಾಗಿ OnePlus, Realme, Moto ಮತ್ತು Oppo ಫೋನ್’ಗಳಲ್ಲಿ ಗೋಚರಿಸುತ್ತವೆ. ಈ ಬದಲಾವಣೆಗಳು ಬಳಕೆದಾರರ ಅನುಭವವನ್ನು ಮತ್ತಷ್ಟು ಸರಳಗೊಳಿಸುವ ಮತ್ತು ಕರೆ ಮಾಡುವ ಇಂಟರ್ಫೇಸ್ ಸುಧಾರಿಸುವ ಗುರಿಯನ್ನು ಹೊಂದಿವೆ. ಅನೇಕ ಬ್ರ್ಯಾಂಡ್’ಗಳು ಆಪರೇಟಿಂಗ್ ಸಿಸ್ಟಮ್ಗಳು ಮತ್ತು Google ಸ್ಟಾಕ್ ಆಂಡ್ರಾಯ್ಡ್ ಆಧರಿಸಿ ಹೊಸ ವೈಶಿಷ್ಟ್ಯಗಳನ್ನ ಪರಿಚಯಿಸುತ್ತಿವೆ. Realme : Realme UI 3.0 ಮತ್ತು 4.0 ನಂತಹ ಆವೃತ್ತಿಗಳಲ್ಲಿ Google Phone ಅಪ್ಲಿಕೇಶನ್ ಅನ್ನು ಸಂಯೋಜಿಸಿದೆ. ಕೆಲವು ಸರಣಿಗಳು ತಮ್ಮದೇ ಆದ ಡಯಲರ್ಗೆ ಸ್ಪ್ಯಾಮ್ ಪತ್ತೆ ವೈಶಿಷ್ಟ್ಯವನ್ನು ಸೇರಿಸಿವೆ. OnePlus…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆರ್ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ತೇಜಸ್ವಿ ಯಾದವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶುಕ್ರವಾರ ಗಡ್ಚಿರೋಲಿ ಪೊಲೀಸರು ತೇಜಸ್ವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಡ್ಚಿರೋಲಿಯ ಬಿಜೆಪಿ ಶಾಸಕ ಮಿಲಿಂದ್ ನರೋಟೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 196 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸೆಕ್ಷನ್ 356 (ಮಾನನಷ್ಟ), ಸೆಕ್ಷನ್ 352 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಸೆಕ್ಷನ್ 353 (ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಹೇಳಿಕೆಗಳು) ಅಡಿಯಲ್ಲಿ ಯಾದವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನ್ಯೂಯಾರ್ಕ್: ನಯಾಗರಾ ಜಲಪಾತದಿಂದ 54 ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 5 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿ ಬಸ್ನಲ್ಲಿದ್ದ ಐದು ಪ್ರಯಾಣಿಕರು ಶುಕ್ರವಾರ ನ್ಯೂಯಾರ್ಕ್ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ಗಮನ ಬೇರೆಡೆಗೆ ತಿರುಗಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವಾಸಿಗರು ನಯಾಗರಾ ಜಲಪಾತಕ್ಕೆ ಭೇಟಿ ನೀಡಿ ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ ಬಫಲೋದಿಂದ ಪೂರ್ವಕ್ಕೆ 25 ಮೈಲುಗಳು (40 ಕಿಲೋಮೀಟರ್) ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಭಾರತೀಯ, ಚೈನೀಸ್ ಮತ್ತು ಫಿಲಿಪಿನೋ ಮೂಲದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆಪರೇಟರ್ ವಿಚಲಿತರಾದರು, ನಿಯಂತ್ರಣ ಕಳೆದುಕೊಂಡರು, ಅತಿಯಾಗಿ ಸರಿಪಡಿಸಿದರು ಮತ್ತು ಅಲ್ಲಿಗೆ ತಲುಪಿದರು ಎಂದು ನಂಬಲಾಗಿದೆ ಎಂದು ನ್ಯೂಯಾರ್ಕ್ ರಾಜ್ಯ ಪೊಲೀಸ್ ಕಮಾಂಡರ್ ಮೇಜರ್ ಆಂಡ್ರೆ ರೇ ಶುಕ್ರವಾರ ಸಂಜೆ ಸ್ಥಳದಲ್ಲಿ ಹೇಳಿದರು.
ಬೆಂಗಳೂರು: ಕನ್ನಡದ ಸುಪ್ರಸಿದ್ದ ಆಂಕರ್ ಅನುಶ್ರೀ ವೆಡ್ಸ್ ರೋಷನ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್.28ರಂದು ಬೆಂಗಳೂರಲ್ಲಿ ಮದುವೆ ನಡೆಯಲಿದೆ. ಸದ್ಯ ಅನುಶ್ರೀ ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೌದು. ಖ್ಯಾತ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್ ಆಗಿದ್ದು, ಆಗಸ್ಟ್ 28 ರಂದು ಹಸೆಮಣೆ ಏರಲಿದ್ದಾರೆ.ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಮದುವೆ ಕಾರ್ಯಕ್ರಮ ನೆರವೇರಲಿದೆ. ಬೆಳಗ್ಗೆ 10:56 ರ ಶುಭ ಮೂಹೂರ್ತದಲ್ಲಿ ಅನುಶ್ರೀ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಶ್ರೀ ಅವರ ಆಮಂತ್ರಣ ಪತ್ರಿಕೆ ರಿಲೀವ್ ಆಗಿದ್ದು, ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರಕ್ಕೆ ಸಮಯ ಬಂದಿದೆ. ಅನುಶ್ರೀ ವೆಡ್ಸ್ ರೋಷನ್ ಮಹೂರ್ತವು ದಿನಾಂಕ 28-08-2025ರ ಗುರುವಾರ ಬೆಳಗ್ಗೆ 10.56ಕ್ಕೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ಅನುಶ್ರೀ ವೆಡ್ ರೋಷನ್ ಅವರ ಮದುವೆಯು ಆಗಸ್ಟ್.28ರಂದು ಬೆಂಗಳೂರಿನ…
ಪಣಜಿ: ಐದು ವರ್ಷದ ಮಗುವಿನ ಪೋಷಕರು ಒಂದನೇ ತರಗತಿಗೆ ಪ್ರವೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗೋವಾ ಹೈಕೋರ್ಟ್ ವಜಾಗೊಳಿಸಿದೆ. ಗೋವಾ ರಾಜ್ಯ ಸರ್ಕಾರವು ಡಿಸೆಂಬರ್ 13, 2022 ರ NEP, 2020 ಮತ್ತು RTE ಕಾಯ್ದೆ, 2009 ರ ಸುತ್ತೋಲೆಯನ್ನು 2025-26 ರಿಂದ ಜಾರಿಗೆ ತರಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ವಜಾಗೊಳಿಸಲಾಗಿದೆ. NEP ಪ್ರಕಾರ, ಮಗುವು 1 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಲು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಆರು ವರ್ಷಗಳನ್ನು ಪೂರ್ಣಗೊಳಿಸಬೇಕು ಎಂದು ಮಗುವಿನ ತಂದೆ ಹೈಕೋರ್ಟ್ಗೆ ಸಲ್ಲಿಸಿದರು. ಅರ್ಜಿದಾರರ ಮಗನಿಗೆ 5 ವರ್ಷ ಮತ್ತು 11 ತಿಂಗಳು. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ, ಮೊದಲ ತರಗತಿಗೆ ಪ್ರವೇಶಕ್ಕೆ ವಯಸ್ಸಿನ ಮಿತಿ ಆರು ವರ್ಷ ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು. ಆದ್ದರಿಂದ, ಅರ್ಜಿದಾರರ ಮಗನನ್ನು ಕಾನ್ವೆಂಟ್ ಒಂದನೇ ತರಗತಿಗೆ ಸೇರಿಸಲಿಲ್ಲ. ಇದನ್ನು ವಿರೋಧಿಸಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಸರ್ಕಾರಕ್ಕೆ ಈ ವಿಷಯವನ್ನು ಸ್ಪಷ್ಟಪಡಿಸುವಂತೆ ಕೇಳಿತ್ತು. ಅದರ…
ಬೆಂಗಳೂರು : ಇಂದಿನಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯ್ಕ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ಮನೆಗಳ ಆರ್.ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ…
ಬೆಂಗಳೂರು : ರಾಷ್ಟ್ರೀಯ ಮಕ್ಕಳ ಹಕ್ಕುಗಳ ನಿರ್ದೇಶನಾಲಯದಿಂದ ನೂತನ ವಿನ್ಯಾಸದ ಮಕ್ಕಳ ಸಹಾಯವಾಣಿ 1098 ಲೊಗೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಲೋಗೋದಲ್ಲಿ 1098 ಚೈಲ್ಡ್ ಲೈನ್ ಹೆಲ್ಪ್ ಲೈನ್ ಎಂದು ಇಂಗ್ಲೀಷ್ ನಲ್ಲಿ ಬರೆದ, ಅಡಿಯಲ್ಲಿ 24×7 ಮತ್ತು ಮೂಲೆಯಲ್ಲಿ ರಿಸೀವರ್ ಚಿಹ್ನೆ, ಮೇಲ್ಬಾಗದಲ್ಲಿ ಬಾಲಕಿ ಮತ್ತು ಬಾಲಕ ತೋರಿಸುವ ರೇಖಾ ಚಿತ್ರಹೊಂದಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯವು ಮಕ್ಕಳ ಮೇಲೆ ಆಗುವ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯ, ಬಿಕ್ಷಾಟನೆಯಿಂದ ಶೋಷಣೆಗೊಳಗಾದ, ಶಿಕ್ಷಣದಿಂದ ವಂಚಿತರಾದ ಹಾಗೂ ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂಥ ಪ್ರಕರಣವನ್ನು ಕಡಿಮೆ ಮಾಡಲು ಮಕ್ಕಳಿಗಾಗಿ 24 ಗಂಟೆ ಚಾಲನೆಯಲ್ಲಿರುವ 1098 ಸಹಾಯವಾಣಿ ದೇಶಾದ್ಯಂತ 1999 ರಲ್ಲಿ ಸ್ವಯಂ ಸೇವಾ ಸಂಸ್ಥೆಯೊಂದರ ಮೂಲಕ ಪ್ರಾರಂಭಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಸೆಪ್ಟೆಂಬರ್ 01, 2023 ರಿಂದ ಪ್ರಾರಂಭವಾಗಿದ್ದು, ಮಕ್ಕಳ ರಕ್ಷಣೆಗಾಗಿ ಮಕ್ಕಳ ಸಹಾಯವಾಣಿ 1098 ಕಾರ್ಯನಿರ್ವಹಿಸುತ್ತಿದ್ದು ತುರ್ತು ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112…














