Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯದನ್ವಯ, 2024-25ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು ಬಗ್ಗೆ ಉಲ್ಲೇಖ-1 ರಲ್ಲಿ ಮಾರ್ಗಸೂಚಿ ಸಹಿತ ವೇಳಾಪಟ್ಟಿಯನ್ನು ಅಧಿಸೂಚಿಸಲಾಗಿತ್ತು. ಆದರೆ ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂಡೂಡಲು ಉಲ್ಲೇಖಿತ-2 ರಲ್ಲಿ ನಿರ್ದೇಶಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು ಇವರು ಮನವಿ ಸಲ್ಲಿಸಿರುತ್ತಾರೆ, ಸದರಿ ಮನವಿಯನ್ನು ಪರಿಶೀಲಿಸಿ ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಈಗಾಗಲೇ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಈ…
ಬೆಂಗಳೂರು : 2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ/ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (1) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2021 ನ್ನು ಹಾಗೂ ಉಲ್ಲೇಖ (2 & 3)ರಲ್ಲಿ ಸದರಿ ನಿಯಮಗಳ ಕೆಲವೊಂದು ಅಂಶಗಳಿಗೆ ತಿದ್ದುಪಡಿಯನ್ನು ಮಾಡಿ ಅಧಿಸೂಚಿಸಲಾಗಿದೆ. ಸದರಿ ವರ್ಗಾವಣೆ ನಿಯಮಗಳ ನಿಯಮ 8 ರಲ್ಲಿ ಸಾರ್ವಜನಿಕ ಹಿತದೃಷ್ಟಿಯ ಕಡ್ಡಾಯ ವರ್ಗಾವಣೆ ಹಾಗೂ ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆಗಳನ್ನು ಪ್ರತಿ ಕ್ಯಾಲೆಂಡರ್ ವರ್ಷದ ಮೇ ಮತ್ತು ಜುಲೈ ಮಾಹೆಯ ನಡುವೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಮೇಲ್ಕಂಡ ನಿಯಮದನ್ವಯ ಮಂಜೂರಾದ ಬೋಧಕರ…
ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಕಾರ್ಪಸ್ ಹಣ 110 ಕೋಟಿಗಳನ್ನು ನಿಶ್ಚಿತ ಠೇವಣಿಯಲ್ಲಿಡುವ ಮುಖಾಂತರ ಬರುವ ಬಡ್ಡಿ ಹಣದಲ್ಲಿ ರಾಜ್ಯದಲ್ಲಿ ಗಂಭೀರ ಹಾಗೂ ಅತೀ ವಿರಳ ರೋಗಗಳಿಂದ ನಿರಂತರವಾಗಿ ಬಳಲುತ್ತಿರುವ ಬಡ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಿ, ಅದರ ವೆಚ್ಚವನ್ನು ಭರಿಸಿ, ರೋಗಿಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದೆ. ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಎಸ್.ಡಿ.ಎಸ್.ಟಿ.ಬಿ. ಆಸ್ಪತ್ರೆ, ನೆಫ್ರೋ ಯೂರಾಲಜಿ ಸಂಸ್ಥೆ, ಪಿ.ಎಂ.ಎಸ್.ಎಸ್.ವೈ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಮಿಂಟೋ ಪ್ರಾದೇಶಿಕ ಕಣ್ಣಿನ ಆಸ್ಪತ್ರೆ, ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್ಸ್ ಅಂಡ್ ಆರ್ಗನ್ ಟ್ರಾನ್ಸ್ಪ್ಲಾಂಟ್ ಸಂಸ್ಥೆಗಳು ಸದರಿ ಅನುದಾನವನ್ನು ಬಳಕೆ ಮಾಡಿಕೊಂಡಿರುತ್ತವೆ. ಅಲ್ಲದೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾಣಿ ವಿಲಾಸ ಆಸ್ಪತ್ರೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಸತತವಾಗಿ ಮಳೆ ಇರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಮೇ 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ…
ನವದೆಹಲಿ : ನೀವು ಎಟಿಎಂನಿಂದ ಹಣವನ್ನು ಹಿಂಪಡೆಯುತ್ತಿದ್ದರೆ, ಉಳಿತಾಯ ಖಾತೆಯಲ್ಲಿ ಹಣವನ್ನು ಇರಿಸಿದರೆ ಅಥವಾ ಯುಪಿಐ ಮೂಲಕ ವಹಿವಾಟು ನಡೆಸಿದರೆ – ಈ ಮಾಹಿತಿಯು ನಿಮಗೆ ಬಹಳ ಮುಖ್ಯ. ಜೂನ್ 1, 2025 ರಿಂದ, ಭಾರತದಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬು ಮತ್ತು ಬ್ಯಾಂಕಿಂಗ್ ಹವ್ಯಾಸಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ಈ ಹೊಸ ನಿಯಮಗಳು ಮತ್ತು ಅವುಗಳ ಪರಿಹಾರಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ. ಎಟಿಎಂನಿಂದ ಹಣ ಹಿಂಪಡೆಯುವುದು ದುಬಾರಿಯಾಗಬಹುದು. ಈಗ ನೀವು ಪ್ರತಿ ತಿಂಗಳು ನಿಗದಿತ ಸಂಖ್ಯೆಯ ಉಚಿತ ವಹಿವಾಟುಗಳನ್ನು ಮಾತ್ರ ಮಾಡಲು ಸಾಧ್ಯವಾಗುತ್ತದೆ. ಇದರ ನಂತರ ನೀವು ಪ್ರತಿ ಬಾರಿ ಹಣವನ್ನು ಹಿಂಪಡೆಯುವಾಗ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಉದಾಹರಣೆಗೆ, SBI ನಲ್ಲಿ ನೀವು ಕೇವಲ 5 ಉಚಿತ ವಹಿವಾಟುಗಳನ್ನು ಮಾತ್ರ ಪಡೆಯುತ್ತೀರಿ – ಇದರ ನಂತರ ಪ್ರತಿ ಹಿಂಪಡೆಯುವಿಕೆಗೆ ₹ 21 ಕಡಿತಗೊಳಿಸಲಾಗುತ್ತದೆ. ಐಸಿಐಸಿಐ ಮತ್ತು ಎಚ್ಡಿಎಫ್ಸಿಯಂತಹ ಖಾಸಗಿ ಬ್ಯಾಂಕುಗಳಲ್ಲಿ ಈ ಮಿತಿಯನ್ನು…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸದ್ದು, ಈ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಿರಲಿದೆ. ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೂ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,…
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದು, ಮಕ್ಕಳಿಗೆ ಮೊದಲ 5 ವರ್ಷದ ಶಿಕ್ಷಣವನ್ನು ಮಾತೃಭಾಷೆಯಲ್ಲೇ ಬೋಧಿಸುವಂತೆ ತನ್ನ ವ್ಯಾಪ್ತಿಯ ಶಾಲೆಗಳಿಗೆ ಸೂಚಿಸಿದೆ. ಹೌದು, ಈ ಕುರಿತು ಅದು ದೇಶವ್ಯಾಪಿ ಇರುವ 30000 ಶಾಲೆಗಳಿಗೆ ಮಾಹಿತಿ ರವಾನಿಸಿದ್ದು, ಅದಕ್ಕೆ ಅಗತ್ಯ ಸಿದ್ಧತೆಗಳನ್ನೂ ನಡೆಸಿದೆ. ಇದರ ಪ್ರಕಾರ, ಪೂರ್ವ ಪ್ರಾಥಮಿಕದಿಂದ (ಪ್ರೀಕೆಜೆ, ಎಲ್ಕೆಜಿ, ಯುಕೆಜಿ) 2ನೇ ತರಗತಿಯವರೆಗೆ ಕನ್ನಡ ಸೇರಿದಂತೆ ಆಯಾ ಮಾತೃ ಭಾಷೆಯಲ್ಲಿ ಮಕ್ಕಳಿಗೆ ಬೋಧಿಸಲಾಗುವುದು. ಈ ನಿರ್ಧಾರದಿಂದ ಮಾತೃಭಾಷೆ ಬಳಕೆಗೆ ಉತ್ತೇಜನ ಸಿಗುವುದಲ್ಲದೆ, ಮಕ್ಕಳಿಗೆ ವಿಷಯಗಳನ್ನು ಪರಿಣಾಮಕಾರಿಯಾಗಿ ಅರ್ಥ ಮಾಡಿಕೊಳ್ಳಲೂ ಸಹಕಾರಿಯಾಗುತ್ತದೆ. ಆರಂಭಿಕ ಭಾಷಾ ಶಿಕ್ಷಣವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಪ್ರಮುಖ ಕ್ರಮದಲ್ಲಿ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಎಲ್ಲಾ ಸಂಯೋಜಿತ ಶಾಲೆಗಳಿಗೆ 2025-26 ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಲ್ಲಿ (ಎನ್ಸಿಎಫ್ -2023) ವಿವರಿಸಿದ ಭಾಷಾ…
ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (3)ರ ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಕಂಡಿಕೆ-109ರ ಘೋಷಣೆಯನ್ನು ಮುಂದುವರೆದ…
ಬೆಂಗಳೂರು: ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು, ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಸಲ್ಲಿಸಲು ಕೋರಿರುತ್ತಾರೆ ಎಂದಿದ್ದಾರೆ. ಪ್ರಸ್ತುತ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ಜೇಷ್ಠತಾ ಪಟ್ಟಿಯನ್ನು ವಿಭಾಗವಾರು ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಸಂಬಂಧ ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-2 ರವರ ರಾಜ್ಯ ಮಟ್ಟದ ಒಂದೇ ಜೇಷ್ಠತಾ…